Advertisement

Category: ದಿನದ ಪುಸ್ತಕ

ಬಾಳ ನೌಕೆಯ ತಲ್ಲಣಗಳಿಗೆ ಬೆಳಕಿನ ದೀಪ: ಅನುಸೂಯ ಯತೀಶ್ ಬರಹ

ಕವಿ ಇಲ್ಲಿನ ಕವಿತೆಗಳನ್ನು ದೀರ್ಘವಾಗಿ ಬೆಳೆಸುತ್ತಾ ಹೋಗಿದ್ದಾರೆ ಎನ್ನುವುದಕ್ಕಿಂತ ಕವಿಯ ಧ್ಯಾನಸ್ಥ ಸ್ಥಿತಿ ಕವಿಯ ಪ್ರಜ್ಞಾಪೂರ್ವಕತೆಯನ್ನು ಮೀರಿ ಕವಿತೆಗಳನ್ನು ವಿಸ್ತಾರಗೊಳಿಸಿದೆ. ಸುಮಾರು ಮೂರು ಪುಟಗಳವರೆಗೂ ಚಾಚಿಕೊಂಡಿರುವ ಕವಿತೆಗಳ ಭಾವದೊನಲು ಎಲ್ಲೂ ಏಕತಾನತೆಗೆ ಎಡತಾಕುವುದಿಲ್ಲ. ತಾಜಾತನದ ರೂಪಕಗಳು, ಪ್ರತಿಮೆಗಳು ಕವಿತೆಗಳಿಗೆ ಗಟ್ಟಿತನ ತುಂಬಿ ಆಪ್ತತೆ ಕಾಯ್ದುಕೊಂಡಿವೆ. ಓದಿನ ಪ್ರೀತಿ ಗುಕ್ಕಿಗೂ ಬೇರೆ ಬೇರೆಯದೆ ಅರ್ಥ ಧ್ವನಿಸುವ ಕವಿತೆಗಳು ಚಿರಾಯುವಾಗಲು ಪ್ರಯತ್ನಿಸುತ್ತವೆ.
ಜಿ.ಆರ್. ರೇವಣಸಿದ್ದಪ್ಪನವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನದ ಕುರಿತು ಅನುಸೂಯ ಯತೀಶ್‌ ಬರಹ

Read More

ಇರುವುದೆಲ್ಲವ ಹೇಳಿಬಿಡು…: ಸುಶೀಲಾ ಡೋಣೂರ ಕಾದಂಬರಿಯ ಪುಟಗಳು

‘ಈ ಮಾತು ಚರ್ಚೆಗೆ ಬರದೆ ಹೋಗಿದ್ರ ನಾನು ಈ ಸುಳ್ಳು ಹೇಳಬಹುದಿತ್ತು ಪೂಣ, ಈಗ ಎಲ್ಲಾನೂ ಒಪ್ಗೊಂಡ ಮ್ಯಾಲ ಮತ್ತ ಅದೇ ಸುಳ್ಳನ್ನ ಆರಂಭದಿಂದ ಹೇಳು ಅಂದ್ರ ಹೇಳಾಕ ಆಗೂದಿಲ್ಲ. ಏನು ಶಿಕ್ಷೆ ಕೊಡ್ತೀಯೊ ಕೊಡು. ನಾ ನಿನ್ನ ಪ್ರೀತಿಸ್ತೀನಿ ಅನ್ನೂದು ಖರೆ, ಅದೇ ಅಂತಿಮ. ನೀ ಸಿಕ್ರೂ ಸರಿ, ಸಿಗಲಿಲ್ಲ ಅಂದ್ರೂ ಸರಿ. ಜೀವನಪೂರ್ತಿ ನಿನ್ನ ನೆನಪಿನ್ಯಾಗ ಸಾಗಿಸುವಷ್ಟು ಸುಂದರ ಕ್ಷಣಗಳನ್ನ ಕಳದೀನಿ ನಿನ್ನ ಜೋಡಿ, ಅವೇ ಸಾಕು’.
ಪತ್ರಕರ್ತೆ ಸುಶೀಲಾ ಡೋಣೂರ ಹೊಸ ಕಾದಂಬರಿ “ಪೀಜಿ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಚಪ್ಪಲಿ ಅಂಗಡಿಯಲ್ಲಿ ಕ್ಯಾಲೆಂಡರ್: ರಘುಪತಿ ತಾಮ್ಹನ್‌ಕರ್ ಅನುಭವ ಕಥನ

ಮೈಸೂರಿನ ರಘುಪತಿ ತಾಮ್ಹನ್‌ಕರ್ ಅವರ ಮೊದಲ ಕೃತಿ ‘ನೋಟಿನ ನಂಟು’ ಇದೇ ಭಾನುವಾರ ಅಂದರೆ ಜುಲೈ 7ರಂದು ಮೈಸೂರಿನ ಎಂಜಿನಿಯರುಗಳ ಸಂಸ್ಥೆಯಲ್ಲಿ ಬಿಡುಗಡೆಯಾಗಲಿದೆ. ಗಣೇಶ ಅಮೀನಗಡ ಅವರು ತಮ್ಮ ಕವಿತಾ ಪ್ರಕಾಶನದ ಮೂಲಕ ಇದನ್ನು ಪ್ರಕಟಿಸಿದ್ದಾರೆ. ಎಪ್ಪತ್ತು ವರ್ಷದ ರಘುಪತಿ ಅವರು ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಮ್ಯಾನೇಜರ್. ಅವರು ತಮ್ಮ ಅನುಭವಗಳನ್ನು ಕಟ್ಟಿಕೊಟ್ಟ ಕೃತಿಯ ಒಂದು ಅಧ್ಯಾಯ ನಿಮ್ಮ ಓದಿಗಾಗಿ

Read More

ಆಧುನಿಕ ವಿಕಾರಕ್ಕೊಂದು ಕನ್ನಡಿ: ಕಾವ್ಯಾ ಕಡಮೆ ಕಥಾ ಸಂಕಲನಕ್ಕೆ ಶ್ರೀಧರ ಬಳಗಾರ ಮುನ್ನುಡಿ

ತೊಟ್ಟು ಕ್ರಾಂತಿ ಸಂಕಲನದ ಕಥೆಗಳಲ್ಲಿ ಕೆಲವು ಪ್ರದೇಶದ ಕನ್ನಡದ ಉಪಭಾಷೆಗಳ ಪ್ರಯೋಗವಾಗಿದೆ. ಪಾತ್ರಗಳ ಮಾತಿನ ಭಿನ್ನ ಶೈಲಿಯಲ್ಲಿ ಆಕಾರ ಪಡೆಯುವ ಕಥೆಗೆ ಹಲವು ಧ್ವನಿಗಳಿವೆ. ಭಾಷೆಯ ಮೂಲಕ ಕಥೆಯ ನಿರೂಪಣೆಯಲ್ಲ; ಭಾಷೆಯೇ ಕಥೆಯಾಗುವುದು; ಭಾಷೆ ಕಥೆಯಾಗುವುದೆಂದರೆ ಮನುಷ್ಯರಾಗುವುದು; ಭಾಷೆಯೇ ಮನುಷ್ಯರೊಡಗೂಡಿ ವಿಷಯವಾಗುವುದು ಇಲ್ಲಿ ಸಾಧ್ಯವಾಗಿದೆ; ಆದ್ದರಿಂದ ಪಾತ್ರ-ಪರಿಸರದ ಹಾಸುಹೊಕ್ಕಿನ ನೇಯ್ಗೆ ಈ ಕಥೆಗಳ ಯಶಸ್ಸಿಗೆ ಕಾರಣಗಳಲ್ಲೊಂದು.
ಕಾವ್ಯಾ ಕಡಮೆ ಕಥಾ ಸಂಕಲನ “ತೊಟ್ಟು ಕ್ರಾಂತಿ”ಗೆ ಕತೆಗಾರ ಶ್ರೀಧರ ಬಳಗಾರ ಬರೆದ ಮುನ್ನುಡಿ ನಿಮ್ಮ ಓದಿಗೆ

Read More

ನಡು ಮಧ್ಯಾಹ್ನದ ಕಣ್ಣಿನ ಕಾವ್ಯ…: ವಿ.ಚಂದ್ರಶೇಖರ ನಂಗಲಿ ಬರಹ

‘ಅಡುಗೆಯಾಟದ ಹುಡುಗಿ’ ಬಾಲ್ಯದ ಅಡುಗೆಯಾಟವೇ ಕ್ರಮೇಣ ಆ ಹುಡುಗಿಯ ಜೀವನಶೈಲಿಯಾಗಿ ಬದಲಾಗುವ ಮತ್ತು ವ್ಯಕ್ತಿತ್ವ ವಿಕಸನದ ಅವಕಾಶಗಳು ಮುಚ್ಚಿಹೋಗುವ ಬಗೆಯೊಂದು ಅನಾವರಣಗೊಳ್ಳುತ್ತಾ , ಕಡೆಗೆ ಅಮ್ಮನಿಂದ ಮಗಳಿಗೆ ಹಸ್ತಾಂತರವಾಗುವ “ಚುಚ್ಚುಗ”ವು ಬರಿಯ ಅಡುಗೆಯ ಆಯುಧವಾಗಿ ಉಳಿಯದೆ, ಹೆಣ್ಣಿನ ಪಾಲಿಗೆ ಪುರುಷ ಪ್ರಧಾನ ಸಮಾಜದ “ಚುಚ್ಚುಗ”ವಾಗುವ ರೂಪಕ ಆಗಿಬಿಡುತ್ತದೆ.
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕುರಿತು ಡಾ. ವಿ.ಚಂದ್ರಶೇಖರ ನಂಗಲಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ