Advertisement

Category: ದಿನದ ಪುಸ್ತಕ

ಚಿತ್ರಜಗದೊಳಗೊಂದು ಮಿಂಚಿನ ಸಂಚಾರ-ನಮ್ಮ ಶಂಕರ

ಜನಸಾಮಾನ್ಯರು ಇಂದಿಗೂ ನಿಗೂಢವೆಂದು ಭಾವಿಸುವ ಶಂಕರ್ ನಾಗ್ ಸಾವಿನ ಸುತ್ತ ಹುಟ್ಟಿಕೊಂಡ ಅನೂಹ್ಯ ಪ್ರಶ್ನೆಗಳಿಗೆ ವಿವಿಧ ದೃಷ್ಟಿಕೋನಗಳ ಮೂಲಕ ಉತ್ತರಿಸಲು ಪ್ರಯತ್ನಿಸಿದ್ದಾರೆ. ವರುಷಗಳಿಗನುಗುಣವಾಗಿ ಜೋಡಿಸಲ್ಪಟ್ಟ ಶಂಕರ್ ನಾಗ್ ಚಿತ್ರಗಳು, ಅವುಗಳ ಹಿಂದಿರುವ ಕಹಾನಿ, ಪ್ರಮುಖ ಹಾಡುಗಳು, ಅನಂತ್ ನಾಗ್, ರಮೇಶ್ ಭಟ್ ಆದಿಯಾಗಿ ವಿವಿಧ ನಟರೊಂದಿಗಿನ ಕೆಲಸಗಳು ಹಾಗೂ ಬಾಂಧವ್ಯ ಹೀಗೆ ಅನೇಕ ಮಾಹಿತಿಗಳು ದಾಖಲಾಗಿರುವ ಪರಿಯೇ ಈ ಪುಸ್ತಕದ ಹೈಲೈಟು.
ಸತೀಶ ಬಳೆಗಾರ ಬರೆದ ‘ಶಂಕರ ನಾಗ್ The Legend’ ಕೃತಿಯ ಕುರಿತು ರಾಮ್‌ ಪ್ರಕಾಶ್‌ ರೈ ಬರಹ

Read More

ಮಿಲ್ಟ್ರಿ ಟ್ರಂಕೊಳಗಿನ ಕಥೆಗಳು….

ಇಲ್ಲಿ ಅಧಿಕಾರ ಕೇಂದ್ರವಿರುವ ದಕ್ಷಿಣದ ಕರ್ನಾಟಕದ ಎದುರು, ಉತ್ತರ ಕರ್ನಾಟಕ ವಿಶಿಷ್ಟವಾದ ಭಾಷೆಯನ್ನಾಗಲಿ ಅನುಭವವನ್ನಾಗಲಿ ವೈಭವೀಕರಿಸುವುದಿಲ್ಲ, ಇಲ್ಲವೇ ಕೀಳೀಕರಿಸುವುದಿಲ್ಲ. ತನ್ನ ಪಾಲಿಗೆ ಕನ್ನಡ ನಾಡಿನ ಬದುಕೆಲ್ಲ ಒಂದೇ ಎಂಬ ಸಮದರ್ಶಿಯಾದ ದೃಷ್ಟಿಕೋನವು ಇಲ್ಲಿ ಕೆಲಸಮಾಡುತ್ತದೆ. ಹೀಗಾಗಿ ಇಲ್ಲಿನ ಸ್ಮೃತಿಚಿತ್ರಗಳು ರೋಚಕವಾದ ಅನುಭವವನ್ನು ಮಂಡಿಸಿ ಓದುಗರನ್ನು ರಂಜಿಸುವುದಕ್ಕೆ ಉತ್ಸುಕವಾಗುವುದಿಲ್ಲ. ಎಲ್ಲ ಭಾಗದ ಜೀವನದಲ್ಲಿರುವ ವಿಷಾದಕರ ದುರಂತಗಳನ್ನು ದಾಖಲಿಸುತ್ತವೆ. ಜನರ ಹಸಿವು ಬಡತನ ದುಡಿಮೆ ಹೋರಾಟ ಜೀವಂತಿಕೆಗಳನ್ನು ತಾಳ್ಮೆಯಿಂದ ಘನತೆಯಿಂದ ಕಾಣಿಸುತ್ತವೆ.
ಡಾ. ಲಕ್ಷ್ಮಣ ವಿ.ಎ. ಬರಹಗಳ ಸಂಕಲನ “ಮಿಲ್ಟ್ರಿ ಟ್ರಂಕು”ಕ್ಕೆ ರಹಮತ್‌ ತರೀಕೆರೆ ಬರೆದ ಮುನ್ನುಡಿ

Read More

ಮನುಷ್ಯ ಲೋಕದ ಸಂಕಟಗಳು ಕಥೆಗಳಾದ ಪರಿ

ಇಲ್ಲಿನ ಕಥೆಗಳಲ್ಲಿ ಬರುವ ‘ಪರಸು, ತೇಜು ಮತ್ತು ಸಂಜು ಪಾತ್ರಗಳು ಒಂದು ಹೊಸ ನೆಲೆಗಟ್ಟಿನಲ್ಲಿ ನಿಲ್ಲುತ್ತವೆ. ಇವರೆಲ್ಲಾ ಬದುಕಿನ ಹೊಸ ಸಮಸ್ಯೆಯೊಂದರ ಪ್ರತಿರೂಪದಂತೆ ನಿಲ್ಲುತ್ತಾರೆ. ಮುಗಿಲ ದುಃಖ ಮತ್ತು ಹುಚ್ಚು ಕಥೆಗಳು ತುಂಬಾ ಭಾವನಾತ್ಮಕವಾಗಿವೆ. ನಿಮ್ಮ ಮನೆಯ ಪಕ್ಕದವರ ಕಥೆಯಷ್ಟೆ ಆಪ್ತವಾಗಿ ಬಂದಿದೆ. ಆಧುನಿಕ ಕಾಲದ ಅನಾಥ ಬದುಕನ್ನು ಈ ಎರಡು ಕಥೆಗಳು ತೆರೆದಿಡುತ್ತವೆ.
ಸದಾಶಿವ ಸೊರಟೂರು ಅವರ ಅರ್ಧ ಮಳೆ ಅರ್ಧ ಬಿಸಿಲು ಕಥಾ ಸಂಕಲನದ ಕುರಿತು ರಾಘವೇಂದ್ರ ಈ. ಹೊರಬೈಲು ಬರಹ

Read More

“ಅಕ್ಷಯ ಕಾವ್ಯ”ಕ್ಕೆ ಒಂದು ಪ್ರವೇಶಿಕೆ

“ನೋಡಿ ಅವ ಎದ್ದೇ ಬಿಟ್ಟ. ನಾನಿನ್ನು ಕೂತಿರಲು ಸಾಧ್ಯವೇ ಇಲ್ಲ” ಎಂಬ ಸಾಲು ಅಥವಾ ಧ್ವನಿಯು ಏನೆಂದರಿಯದೆ ಏಕೆಂದರಿಯದೆ ಕಚ್ಚಾಡುವ ಮಂದಿಯ ತವಕ, ತಲ್ಲಣ ಮತ್ತು ದಮನಕಾರಿ ಮನೋವೃತ್ತಿಯನ್ನು ಬಯಲಿಗೆಳೆಯುತ್ತದೆ. ಈ ಕಾವ್ಯಕ್ಕೆ ಮನುಷ್ಯರ ಮನಸ್ಸಿನ ಮೂಲ ರಾಗ ಭಾವಗಳ ಕುರಿತು ವಿವಿಧ ನೆಲೆಗಳಲ್ಲಿ ಚಿಂತನೆಗೊಳಪಡಿಸುವ ಧ್ವನಿ ಪ್ರಾಪ್ತವಾಗಿದೆ. ಇಂಗ್ಲೆಂಡಿನಿಂದ ತಂದ ಮಿರಮಿರ ಮಿಂಚುವ ಸ್ವಚ್ಛ ಬೂಟುಗಳು ಊರಿನ ಕೊಳೆತ ಸಸ್ಯಾವಳಿಯ, ನೊಣ ಹಾರುವ ಗಲೀಜು ಬೀದಿಗೆ ಹೊಂದಲಾರದ ಪರಿಸ್ಥಿತಿಯು ಹಳ್ಳಿ ನಗರಗಳ ನಡುವಿನ ಬಿರುಕನ್ನು ಒಂದೇ ಮಾತಿನಲ್ಲಿ ವಿವರಿಸುತ್ತದೆ.
ಕೆ.ವಿ. ತಿರುಮಲೇಶರ ‘ಅಕ್ಷಯ ಕಾವ್ಯ’ ಕೃತಿಯ ಕುರಿತು ಡಾ. ಸುಭಾಷ್‌ ಪಟ್ಟಾಜೆ ಬರಹ

Read More

ಕಲ್ಪನೆ ವಾಸ್ತವಗಳ ಸಂಕ್ರಮಣದಲ್ಲಿ ಅರಿವಿನ ಅನಾವರಣ

ಇಲ್ಲಿ ಲೇಖಕ ಗಣೇಶಯ್ಯನವರು ತಮ್ಮ ವಿಶಿಷ್ಟ ಶೈಲಿಯ ಬರವಣಿಗೆಯಿಂದ ನಮ್ಮನ್ನು ಇಂತಹ ಪುಟ್ಟ ಕೀಟಗಳ ಸಂಸಾರ, ಸಮುದಾಯದೊಳು ಕರೆದೋಯ್ದು ನಾವೂ ಅವುಗಳಲ್ಲಿ ‘ಒಬ್ಬರು’ ಎಂಬ ಭಾವನೆಯನ್ನು ಬಿತ್ತಿ, ಅವುಗಳ ಜೀವನದ ಭಾಗವಾಗಿಸಿ, ಜಂಜಾಟದ ಜೋಕಾಲಿಯಲ್ಲಿ ನಮ್ಮನ್ನ ಜೀಕಿಸುತ್ತಾ ಅಲ್ಲಿನ ಅಚ್ಚರಿಗಳ ‘ಅರ್ಥ’ ಮಾಡಿಸುತ್ತಾರೆ, ವಾಸ್ತವದ ಅರಿವು ಮೂಡಿಸುತ್ತಾರೆ. ಒಂದು ರೀತಿಯಲ್ಲಿ ವಿಸ್ಮಯಕರ ವಿಷಯದ ವಿವರಗಳನ್ನು ಕಲ್ಪನೆಯ ಚಿತ್ರ ಮಂದಿರದಲ್ಲಿ ಕತೆಯ ಮೂಲಕ ಅನಾವರಣಗೊಳಿಸಿದಂತೆ.
ಡಾ. ಕೆ.ಎನ್. ಗಣೇಶಯ್ಯ ಬರೆದ “ಹಾತೆ-ಜತೆ-ಕತೆ” ಕೃತಿಯ ಕುರಿತು ವಿಶ್ವ ದೊಡ್ಡಬಳ್ಳಾಪುರ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ