Advertisement

Category: ದಿನದ ಪುಸ್ತಕ

ಹುಣಸೇ ಚಿಗುರು ಮತ್ತು ಸ್ತ್ರೀತ್ವ…: ದಯಾ ಗಂಗನಘಟ್ಟ ಮುನ್ನುಡಿ

ಪಿತೃ ಹಿತಾಸಕ್ತ ನಿಲುವುಗಳ ಅರಿವಿರುವ ಕತೆಗಾರ್ತಿ ಪ್ರಜ್ಞಾಪೂರ್ವಕವಾಗಿಯೇ ಅದನ್ನ ತಮ್ಮ ಕತೆಯಲ್ಲಿ ಕಟ್ಟುತ್ತಾರೆ. ಹಾಗಾಗಿಯೇ ಹೆಣ್ಣಿನ ಸಹಜ ಸತ್ವದ ಹುಡುಕಾಟವನ್ನ ಇವರ ಸ್ತ್ರೀ ಪಾತ್ರಗಳಲ್ಲಿ ಬೆದಕಬಹುದು. ಸ್ತ್ರೀತ್ವದ ನಿಲುವಿನ ಬಗ್ಗೆ ಇವರಿಗೊಂದು ಸ್ಪಷ್ಟ ನಿಲುವಿದೆ. ಅದರೊಳಗೊಂದು ಅವರದ್ದೇ ಆದ ಏಸ್ತೆಟಿಕ್ ಇದೆ. ಹೆಣ್ಣಿನ ಅಗತ್ಯ ಮತ್ತು ಆದ್ಯತೆಗಳನ್ನು ಮರು ಪ್ರಶ್ನಿಸಿಕೊಳ್ಳಬೇಕಾದ ಒತ್ತಡ ಕನ್ನಡದ ನವ್ಯ ಸಾಹಿತ್ಯದ ಕೊಡುಗೆಯಾಗಿತ್ತು. ಅದರ ಪರಿಧಿಯನ್ನು ದಾಟಿದ ಈ ಕಾಲಘಟ್ಟದಲ್ಲಿ ಇವರ ಕಥೆಗಳು ಹೆಣ್ಣಿಗೆ ಗಂಡಿನಿಂದ ಏನು ಬೇಕಾಗಿದೆ ಎಂಬ ಪ್ರಶ್ನೆಯನ್ನೂ ಸೂಕ್ಷ್ಮವಾಗಿ ಎತ್ತಿ ಉತ್ತರವನ್ನೂ ಮಿಂಚುವಂತೆ ಮಾಡುತ್ತವೆ.
ದೀಪದ ಮಲ್ಲಿ ಕಥಾಸಂಕಲನ “ಹುಣಸೇ ಚಿಗುರು”ಗೆ ಕತೆಗಾರ್ತಿ ದಯಾ ಗಂಗನಘಟ್ಟ ಬರೆದ ಮುನ್ನುಡಿ

Read More

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು ನನಗೆ ಕಾಣಿಸುತ್ತಿದೆ. ಸ್ಥಳೀಯ ಮಟ್ಟದಲ್ಲಿ ರೈತರು ಸಂಘಟಿತರಾದರೆ, ಸ್ಥಳೀಯ ಸಂಪನ್ಮೂಲವನ್ನೇ ಆದಷ್ಟೂ ಬಳಸಬೇಕೆಂಬ ಪ್ರೇರಣೆ ಅವರಲ್ಲಿ ಮೂಡಿತೆಂದರೆ, ಪ್ರಕೃತಿಯ ವಿನಿಮಯ ಪದ್ಧತಿಗಳನ್ನೂ ನಿಯಮಗಳನ್ನು ಗೌರವಿಸಿದಂತಾಗುತ್ತದೆ.
ಮಲ್ಲಿಕಾರ್ಜುನ ಹೊಸಪಾಳ್ಯ ಸಂಪಾದಿಸಿದ ವಿಜಯನಗರ ಜಿಲ್ಲೆಯ ಕೃಷಿ ಕಥನಗಳ “ಹಸಿರು ಮಾತುಕತೆ” ಕೃತಿಗೆ ನಾಗೇಶ ಹೆಗಡೆಯವರು ಬರೆದ ಮಾತುಗಳು

Read More

ಬಾಳ ನೌಕೆಯ ತಲ್ಲಣಗಳಿಗೆ ಬೆಳಕಿನ ದೀಪ: ಅನುಸೂಯ ಯತೀಶ್ ಬರಹ

ಕವಿ ಇಲ್ಲಿನ ಕವಿತೆಗಳನ್ನು ದೀರ್ಘವಾಗಿ ಬೆಳೆಸುತ್ತಾ ಹೋಗಿದ್ದಾರೆ ಎನ್ನುವುದಕ್ಕಿಂತ ಕವಿಯ ಧ್ಯಾನಸ್ಥ ಸ್ಥಿತಿ ಕವಿಯ ಪ್ರಜ್ಞಾಪೂರ್ವಕತೆಯನ್ನು ಮೀರಿ ಕವಿತೆಗಳನ್ನು ವಿಸ್ತಾರಗೊಳಿಸಿದೆ. ಸುಮಾರು ಮೂರು ಪುಟಗಳವರೆಗೂ ಚಾಚಿಕೊಂಡಿರುವ ಕವಿತೆಗಳ ಭಾವದೊನಲು ಎಲ್ಲೂ ಏಕತಾನತೆಗೆ ಎಡತಾಕುವುದಿಲ್ಲ. ತಾಜಾತನದ ರೂಪಕಗಳು, ಪ್ರತಿಮೆಗಳು ಕವಿತೆಗಳಿಗೆ ಗಟ್ಟಿತನ ತುಂಬಿ ಆಪ್ತತೆ ಕಾಯ್ದುಕೊಂಡಿವೆ. ಓದಿನ ಪ್ರೀತಿ ಗುಕ್ಕಿಗೂ ಬೇರೆ ಬೇರೆಯದೆ ಅರ್ಥ ಧ್ವನಿಸುವ ಕವಿತೆಗಳು ಚಿರಾಯುವಾಗಲು ಪ್ರಯತ್ನಿಸುತ್ತವೆ.
ಜಿ.ಆರ್. ರೇವಣಸಿದ್ದಪ್ಪನವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನದ ಕುರಿತು ಅನುಸೂಯ ಯತೀಶ್‌ ಬರಹ

Read More

ಇರುವುದೆಲ್ಲವ ಹೇಳಿಬಿಡು…: ಸುಶೀಲಾ ಡೋಣೂರ ಕಾದಂಬರಿಯ ಪುಟಗಳು

‘ಈ ಮಾತು ಚರ್ಚೆಗೆ ಬರದೆ ಹೋಗಿದ್ರ ನಾನು ಈ ಸುಳ್ಳು ಹೇಳಬಹುದಿತ್ತು ಪೂಣ, ಈಗ ಎಲ್ಲಾನೂ ಒಪ್ಗೊಂಡ ಮ್ಯಾಲ ಮತ್ತ ಅದೇ ಸುಳ್ಳನ್ನ ಆರಂಭದಿಂದ ಹೇಳು ಅಂದ್ರ ಹೇಳಾಕ ಆಗೂದಿಲ್ಲ. ಏನು ಶಿಕ್ಷೆ ಕೊಡ್ತೀಯೊ ಕೊಡು. ನಾ ನಿನ್ನ ಪ್ರೀತಿಸ್ತೀನಿ ಅನ್ನೂದು ಖರೆ, ಅದೇ ಅಂತಿಮ. ನೀ ಸಿಕ್ರೂ ಸರಿ, ಸಿಗಲಿಲ್ಲ ಅಂದ್ರೂ ಸರಿ. ಜೀವನಪೂರ್ತಿ ನಿನ್ನ ನೆನಪಿನ್ಯಾಗ ಸಾಗಿಸುವಷ್ಟು ಸುಂದರ ಕ್ಷಣಗಳನ್ನ ಕಳದೀನಿ ನಿನ್ನ ಜೋಡಿ, ಅವೇ ಸಾಕು’.
ಪತ್ರಕರ್ತೆ ಸುಶೀಲಾ ಡೋಣೂರ ಹೊಸ ಕಾದಂಬರಿ “ಪೀಜಿ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಚಪ್ಪಲಿ ಅಂಗಡಿಯಲ್ಲಿ ಕ್ಯಾಲೆಂಡರ್: ರಘುಪತಿ ತಾಮ್ಹನ್‌ಕರ್ ಅನುಭವ ಕಥನ

ಮೈಸೂರಿನ ರಘುಪತಿ ತಾಮ್ಹನ್‌ಕರ್ ಅವರ ಮೊದಲ ಕೃತಿ ‘ನೋಟಿನ ನಂಟು’ ಇದೇ ಭಾನುವಾರ ಅಂದರೆ ಜುಲೈ 7ರಂದು ಮೈಸೂರಿನ ಎಂಜಿನಿಯರುಗಳ ಸಂಸ್ಥೆಯಲ್ಲಿ ಬಿಡುಗಡೆಯಾಗಲಿದೆ. ಗಣೇಶ ಅಮೀನಗಡ ಅವರು ತಮ್ಮ ಕವಿತಾ ಪ್ರಕಾಶನದ ಮೂಲಕ ಇದನ್ನು ಪ್ರಕಟಿಸಿದ್ದಾರೆ. ಎಪ್ಪತ್ತು ವರ್ಷದ ರಘುಪತಿ ಅವರು ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಮ್ಯಾನೇಜರ್. ಅವರು ತಮ್ಮ ಅನುಭವಗಳನ್ನು ಕಟ್ಟಿಕೊಟ್ಟ ಕೃತಿಯ ಒಂದು ಅಧ್ಯಾಯ ನಿಮ್ಮ ಓದಿಗಾಗಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ