Advertisement

Category: ದಿನದ ಪುಸ್ತಕ

ಪರಿಸರದ ಪಾಠಕ್ಕೆ ಇದೇ ಸೂಕ್ತ ತಾಣ!

ಪ್ರಕೃತಿಯ ಮೊದಲ ಪಾಠಗಳನ್ನು ನಾನು ಕಲಿತದ್ದು ಆ ಹಕ್ಕಲಿನಲ್ಲಿ ಎಂದು ಹೇಳಿದರೆ ತಪ್ಪಾಗದು. ಹಾಗೆ ನೋಡಿದರೆ, ನಮ್ಮ ಹಳ್ಳಿಯ ಮನೆಯ ಪರಿಸರವೇ ಒಂದು ಒಳ್ಳೆಯ ಪಾಠಶಾಲೆ. ಮನೆ ಎದುರು ಗದ್ದೆ, ಮನೆ ಸುತ್ತಲೂ ಮರಗಳು, ಮನೆಯ ಛಾವಣಿಯ ಮೇಲೆ ಚಾಚಿಕೊಂಡ ಭಾರೀ ಗಾತ್ರದ ಹಲಸಿನ ಮರ, ಇಪ್ಪತ್ತು ಅಡಿ ದೂರದಲ್ಲಿರುವ ಬೃಹತ್ ಗಾತ್ರದ ಎರಡು ತಾಳೆ ಮರಗಳ ಒಣಗಿದ ಎಲೆಗಳು ಮಾಡುವ ಬರಬರ ಸದ್ದು, ಅಂಗಳದ ಅಂಚಿನ ಹೂಗಿಡಗಳು, ಬಳ್ಳಿಗಳು, ದಾಸವಾಳ, ಬೆಟ್ಟ ತಾವರೆ – ಪಟ್ಟಿ ಮಾಡುತ್ತಾ ಹೋದರೆ ಬೇಗನೆ ಮುಗಿಯದು. ಜತೆಗೆ ನಾವು ಶಾಲೆಗೆ ಹೋಗುತ್ತಿದ್ದ ದಾರಿಯೂ ಇನ್ನೊಂದು ಪಾಠಶಾಲೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ಶಶಿಧರ ಹಾಲಾಡಿಯವರ “ನಾ ಸೆರೆಹಿಡಿದ ಕನ್ಯಾಸ್ತ್ರೀ” ಪ್ರಬಂಧ ಸಂಕಲನದ ಒಂದು ಬರಹ ನಿಮ್ಮ ಓದಿಗೆ

Read More

ಹಳ್ಳಿಯ ಅಂತರಾತ್ಮದ ಆರ್ದ್ರ ಕಥನ

ಇಡೀ ಕಥೆಗಳ ಅಂತರಾಳದಲ್ಲಿ ವಿಷಾದದ ದನಿಯೊಂದು ಲಘು ಹಾಸ್ಯದ ಲೇಪನದೊಂದಿಗೆ ಅನಾವರಣಗೊಂಡಿದೆ. ಯಾವುದೇ ʻಇಸಂʼನಿಂದ ಮುಕ್ತಗೊಂಡಂತೆ ಕಾಣುವ ಇಲ್ಲಿನ ಲೋಕದಲ್ಲಿ ಮನಕುಲದ ಒಳಿತು ಹಾಗೂ ಜೀವಪರ ತುಡಿತವೇ ಮೇಲುಗೈಯ್ಯಾಗಿದೆ. ಈ ಸಂಕಲನದ ಬಹು ಮುಖ್ಯ ಸಂಗತಿ ಅಂದರೆ, ಇದುಅಪ್ಪಟ ಪ್ರಾದೇಶಿಕ ಸೊಗಡಿನಿಂದ ಲಕಲಕಿಸುತ್ತದೆ. ಅಂತೆಯೇ ಯಾವುದೇ ಮಡಿವಂತಿಕೆಯ ಸೋಗಿಲ್ಲದೆ ಪ್ರಾಮಾಣಿಕವಾಗಿ ಅನಿಸಿದ್ದನ್ನು ನೇರವಾಗಿ ಹೇಳುತ್ತದೆ.
ಮಂಜಯ್ಯ ದೇವರಮನಿ ಕಥಾ ಸಂಕಲನ “ದೇವರ ಹೊಲ”ಕ್ಕೆ ಎಸ್. ಗಂಗಾಧರಯ್ಯ ಬರೆದ ಮುನ್ನುಡಿ

Read More

ದೈನಿಕತೆಯಲ್ಲೆ ದೈವಿಕತೆ..

ಕಾಯ್ಕಿಣಿಯವರ ಕಾವ್ಯಗಳಲ್ಲಿ ದಂತಗೋಪುರದ ವಾಸಿ, ವಿಲಾಸಿ, ಪ್ರವಾಸಿಗರು ಕಾಣಸಿಗಲಾರರು; ಏಕೆಂದರೆ, ನಮ್ಮ-ನಿಮ್ಮ ನಡುವೆ, ಆಚೆ-ಈಚೆ, ಕಣ್ಣಿಗೆ ಬಿದ್ದರೂ ಬೀಳದಂತಿರುವ, ಅಥವಾ ನಾವು ನೋಡಿದರೂ ನೋಡದಂತೆ ಮುಂದೆ ಸಾಗುವುದಕ್ಕೆ ಯಾವ ಆಕ್ಷೇಪಣೆಯನ್ನೂ ಮಾಡದ- ಕಷ್ಟವೋ-ಕಾರ‍್ಪಣ್ಯವೋ ಎಲ್ಲಕ್ಕೂ ಎದೆಗೊಡುತ್ತ ಕಾಲ್ಪನಿಕ ರೇಖೆಗಳನ್ನು ಧಿಕ್ಕರಿಸುತ್ತ, ಅಲ್ಲಗಳೆಯುತ್ತ, ತಮ್ಮದೇ ಜೀವನಚಿತ್ರವ ಮೂಡಿಸುವ ಜೀವಭಂಡಾರಿಗಳು- ಕಾಯ್ಕಿಣಿಯವರ ಕಾವ್ಯಪ್ರಪಂಚವನ್ನು ನಿರಾಯಾಸ, ನಿರಪೇಕ್ಷ್ಯವಾಗಿ ಧರಿಸುತ್ತಾರೆ; ಭರಿಸುತ್ತಾರೆ.
ಜಯಂತ ಕಾಯ್ಕಿಣಿಯವರ “ವಿಚಿತ್ರಸೇನನ ವೈಖರಿ” ಕವನ ಸಂಕಲನದ ಕುರಿತು ಗೀತಾ ಹೆಗಡೆ ಬರಹ

Read More

ಇದ್ದಂತೆ ಇರುವ ಪದ್ಯಸದ್ಯ

ಕವಿತೆ ಪ್ರಣಾಳಿಕೆಯೋ ವಾಗ್ವಾದವೋ ಉತ್ತರವೋ ಪ್ರತಿಭಟನೆಯೋ ಆಗಿ ಮೆರೆಯುತ್ತಿರುವ ದಿನಗಳಲ್ಲಿ ರಾಜು ಹೆಗಡೆ ಬರೆಯುತ್ತಿರುವ ಪದ್ಯಗಳಿಗೆ ವಿಶಿಷ್ಟವಾದ ಸ್ಥಾನವಿದೆ ಎಂದು ಹೇಳಲು ಅಂಜಿಕೆಯಾಗುತ್ತದೆ. ನಮ್ಮ ಕಾವ್ಯದ ಓದನ್ನು ರಾಜಕೀಯ ನಿಲುವು, ಸೈದ್ಧಾಂತಿಕತೆ ಮತ್ತು ಸಾಮಾಜಿಕನಿಲುವುಗಳು ನಿರ್ಧರಿಸುವ ಕಾಲ ಇದು. ಶುದ್ಧಕವಿತೆ ಎಂಬ ಮಾತನ್ನು ಗೇಲಿ ಮಾಡಲಾಗುತ್ತದೆ ಮತ್ತು ಶುದ್ಧ ಸಾಹಿತ್ಯವನ್ನು ಅಪರಾಧವೆಂಬಂತೆ ನೋಡಲಾಗುತ್ತಿದೆ. ಯಾವುದಾದರೊಂದು ರಾಜಕೀಯ ಪಕ್ಷದ ಅಘೋಷಿತ ಗೊತ್ತುವಳಿಯಂಥ ಸಾಲುಗಳನ್ನು ಪದ್ಯಗಳೆಂದು ಕರೆಯಲಾಗುತ್ತಿದೆ.
ರಾಜು ಹೆಗಡೆ ಕವನ ಸಂಕಲನ “ಕಣ್ಣಿನಲಿ ನಿಂತ ಗಾಳಿ” ಗೆ ಜೋಗಿ ಬರೆದ ಮುನ್ನುಡಿ

Read More

ಹೊಸ ಕಾಲವು ಕೊಟ್ಟ ದಿಟ್ಟತೆಯ ಕವಿತೆಗಳಿವೆಯಿಲ್ಲಿ!

ಆಶಾ ತೀರಾ ವಾಚ್ಯವಾಗಿಸಿ ಯಾವುದನ್ನೂ ಹೇಳುವುದಿಲ್ಲ. ಬಹುಶಃ ಬಂಡಾಯ, ದಲಿತ, ಸ್ತ್ರೀವಾದದ ಘೋಷಣಾ ಸಾಹಿತ್ಯ ಮುಗಿದಂತೆ ಕಾಣುತ್ತಿದೆ. ಆ ಎಲ್ಲ ಚಳುವಳಿಗಳು ಕನ್ನಡದ ಒಟ್ಟೂ ಸಮಾಜದ ಮೇಲೆ, ಸಾಹಿತ್ಯದ ಮೇಲೆ ಉಂಟುಮಾಡಿದ ಅದ್ಭುತ ಚಾಲನಾ ಪ್ರಭಾವವನ್ನು ಅರ್ಥೈಸಿಕೊಂಡು, ಮನದಲ್ಲೂ ಇಟ್ಟುಕೊಂಡು, ಅದೇ ಕಾಲಕ್ಕೆ ಘೋಷಣೆಯ ಕಾಲ್ತೊಡಕುಗಳನ್ನೂ ಕಳಚಿ ಬರೆಯುವ ಹೊಸ ಯುವ ಸಮೂಹವೊಂದು ಕನ್ನಡದಲ್ಲಿ ತಯಾರಾಗಿದೆ. ನಿರ್ವಿವಾದವಾಗಿ ಆಶಾ ಕೂಡಾ ಆ ಪಡೆಯ ಉತ್ತಮ ಸದಸ್ಯೆ.
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕೃತಿಗೆ ಲಲಿತಾ ಸಿದ್ಧಬಸವಯ್ಯ ಬರೆದ ಮುನ್ನುಡಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ