Advertisement

Category: ದಿನದ ಪುಸ್ತಕ

ನಗರ ಜೀವನದ ಬಿಕ್ಕಟ್ಟಿನ ಕತೆಗಳು…

ಮಧ್ಯಮ ವರ್ಗದ ಜನ ಚೀಟಿ ವ್ಯವಹಾರದಲ್ಲಿ ಮೋಸ ಹೋಗುವುದನ್ನು ಚಿತ್ರಿಸುವ ಕತೆ ‘ಹರಿಚಿತ್ತ’ ಆಂಧ್ರದಿಂದ ವಲಸೆ ಬಂದ ದಲಿತ ಪೆದ್ದ ಪೆಂಚಾಲಯ್ಯ, ಎಂತೆಂಥವೋ ಕೆಲಸ ಮಾಡುತ್ತಾ, ಹೋರಾಡುತ್ತಾ, ಮಗ ಪೆಂಚಾಲಯ್ಯ ನನ್ನು ಪೊಲೀಸ್ ಕೆಲಸಕ್ಕೆ ಸೇರಿಸುತ್ತಾನೆ. ರಾಜಕೀಯ ಗಲಾಟೆಯಲ್ಲಿ ಸಿಕ್ಕಿ ಹೊಡೆತ ತಿಂದು ಬಿದ್ದಾಗ, ಗಲಾಟೆ ನಿಯಂತ್ರಿಸಲು ಮಗ ಪೊಲೀಸ್ ಪೆಂಚಾಲಯ್ಯ ಬರ್ತಾನೆ. ಗಲಾಟೆಗೆ ಬಲಿಯಾಗುವವರು ಇಂತಹ ಅಮಾಯಕರೇ.. ಕೆಳ ಮಧ್ಯಮವರ್ಗದವರಿಗೆ ‘ಯಾರೂ ಕಾಯುವವರಿಲ್ಲ..’ ಎಂಬ ಸ್ಥಿತಿ.
ವಸಂತಕುಮಾರ್ ಕಲ್ಯಾಣಿ ಅವರ ಕಥಾಸಂಕಲನ “ಪರ್ಯಾಪ್ತ”ಕ್ಕೆ ಜಿಎಸ್ ಸುಶೀಲಾದೇವಿ ಆರ್ ರಾವ್ ಬರೆದ ಮುನ್ನುಡಿ

Read More

ನೊಂದವರ ಬಾಳಿಗೆ ಮುಲಾಮಾಗುವ ಟೀಚರ್

ಶಾಲಿನಿಗೆ ರುಸ್ತುಂ ಪಪ್ಪಾ ಏಕೆ ನನ್ನ ಎಲ್ಲಾ ಖರ್ಚುಗಳನ್ನು ನೋಡಿಕೊಳ್ಳುತ್ತಾನೆ? ನನ್ನ ಬಗ್ಗೆ ಯಾಕೆ ಕಾಳಜಿ ತಗೊಳ್ತಾನೆ ಅನ್ನೋದು ಅವಳಿಗೆ ಯಕ್ಷ ಪ್ರಶ್ನೆಯಾಗಿತ್ತು. ತನ್ನ ಸಾಕು ತಾಯಿ ಮತ್ತು ಅವಳ ಚಿಕ್ಕಮ್ಮ ಒಂದು ದಿನ ಮಾತಾಡಿದ ಮಾತುಗಳನ್ನು ಕೇಳಿ ಕರಳು ಕತ್ತರಿಸಿದಂತಾಗಿ ರುಸ್ತುಂ ಪಪ್ಪಾನ ಕುರಿತು ಸತ್ಯದ ಅರಿವಾಗುತ್ತದೆ. ಬನದ ಹುಣ್ಣಿಮೆಗೆ ಸವದತ್ತಿ ಎಲ್ಲಮ್ಮನ ಗುಡ್ಡಕ್ಕೆ ಹೋದಾಗ ದೇವಿಯ ಪ್ರಸಾದವೆಂಬಂತೆ ರುಸ್ತುಂ ಅವರ ಕೈಗೆ ಬಂದ ಈ ಹಸುಗೂಸೆ ಈ ಶಾಲಿನಿ.
ವೈ.ಜಿ. ಭಗವತಿ ಬರೆದ ಮಕ್ಕಳ ಕಾದಂಬರಿ “ಮಕ್ಕಳು ಓದಿದ ಟೀಚರ್ ಡೈರಿ”ಕೃತಿಯ ಕುರಿತು ನಾಗರಾಜ್‌ ಎಂ. ಹುಡೇದ್‌ ಬರಹ

Read More

ಕಥಾ ಬೇಸಾಯವನ್ನು ಬದುವಿನಲ್ಲಿ ನಿಂತು ನೋಡಿ

ಉಳುಮೆ ಅನುಭವದ್ದು. ಒಂದು ಸಾಲಿನ ಉಳುಮೆ ಸಾಕೋ, ಎರಡುಸಾಲು ಹೊಡೆಯಬೇಕೋ, ಮೂರುಸಾಲು ಆಗಬೇಕೋ ಎಂಬುದು ಉಳುಮೆಗಾರನ ವಿವೇಚನೆಯದು. ಹಾಗೆಯೇ ಬಲಸುತ್ತು, ಎಡಸುತ್ತು ಉಳುಮೆಯ ವಿಚಾರವೂ ಸಹ. ಬದುವಿನ ಉಬ್ಬಂಚು ತಗ್ಗಬೇಕಾದರೆ ಎಡಸುತ್ತಿನ ಉಳುಮೆಗೆ ನೇಗಿಲು ಹಿಡಿಯಬೇಕು. ಎದೆಯ ಹೊಲದಲ್ಲಿ ಹುಟ್ಟುವ ಕಥೆ ಬೆಳೆದು ಬೆಳೆಯಾಗವುದು ಇಂತಹ ಹದಗಳಲ್ಲಿಯೇ. ಹೊಲದ ವಿಸ್ತಾರವಿದ್ದಂತೆ ಕಥೆಯ ವಿಸ್ತಾರವೂ ಇರುತ್ತದೆ. ವಿಸ್ತಾರ ದೊಡ್ಡದಿದ್ದರೂ ಉಳುಮೆಯಾದಷ್ಟು ನೆಲದಲ್ಲಷ್ಟೇ ಬೆಳೆ. ಸದಾಶಿವ ಸೊರಟೂರು ಕಥಾಸಂಕಲನ “ಅರ್ಧ ಬಿಸಿಲು ಅರ್ಧ ಮಳೆ”ಗೆ ಸ. ರಘುನಾಥ ಬರೆದ ಮುನ್ನುಡಿ

Read More

ತುಂಟ ಪೊಕ್ಕಣ್ಣ & ಕಡುಮಡಿಯ ಅಜ್ಜಿ

ಈ ಪೊಕ್ಕಣ್ಣ ಶತ ತುಂಟ, ಕಣ್ಣಲ್ಲೇ ಅವನ ತುಂಟತನ ಇಣಕುತ್ತಿತ್ತು. ಒಂದು ಕಿವಿ ನೆಟ್ಟಗೆ ಮಾಡಿ, ಮತ್ತೊಂದನ್ನು ಮಡಿಸಿದ ಅಂದರೆ ಅವನೇನೋ ತರಲೆ ಮಾಡುತ್ತಾನೆಂದು ನಮಗೆ ಖಾತ್ರಿಯಾಗಿತ್ತು. ಮಟ ಮಟ ಮಧ್ಯಾಹ್ನ ಎಣ್ಣೆ ಪಳಚಿಕೊಂಡು ಹಂಡೆತುಂಬಾ ಬೀಸಿನೀರನ್ನು ಸ್ನಾನ ಮಾಡಿ, ಒದ್ದೆ ಸೀರೆಯನ್ನುಟ್ಟು ಬರುವ ಅಜ್ಜಿಗೆ ಅಡ್ಡಲಾಗಿಯೇ ಮಲಗುತ್ತಿದ್ದ ಪೊಕ್ಕಣ್ಣ. ಅವನು ಮಲಗಬಾರದೆಂದು ಕೊಡಪಾನಗಟ್ಟಲೆ ನೀರು ಹೊಯ್ದಿಟ್ಟು ಸ್ನಾನಕ್ಕೆ ಹೋಗುತ್ತಿದ್ದರು. ಆದರೂ ಕಾಲು ಒರೆಸುವ ಗೋಣಿಚೀಲವನ್ನೆಳೆದುಕೊಂಡು ಬೇಕಂತಲೇ ಬಚ್ಚಲಮನೆ ಬುಡದಿ ಮಲಗಿ ಸತಾಯಿಸುತ್ತಿದ್ದ ಅಂವ.
ಶುಭಶ್ರೀ ಭಟ್ಟ ಲಲಿತ ಪ್ರಬಂಧಗಳ ಸಂಕಲನ “ಹಿಂದಿನ ನಿಲ್ದಾಣ” ದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ತಿಪಟೂರು ಸೀಮೆಯ ಘಮಲು

ಕೇವಲ ನಿರೂಪಕಿ ಆಗದೆ ಕತೆಗಳ ಒಳಗಿನಿಂದ ಬಂದು ಮಾತನಾಡುವ ಕತೆಗಾರ್ತಿಗೆ ಆ ಕಾರಣಕ್ಕೆ ಒಂದು ರೀತಿಯ ಸಹಜ ಯಜಮಾನಿಕೆ ಪ್ರಾಪ್ತವಾಗಿದೆ. ಭಾರತದ ಮಹಾವ್ಯಾಖ್ಯಾನಗಳನ್ನು ನೀಡಿದ ವಾಲ್ಮೀಕಿ ವ್ಯಾಸರು ಕತೆಯ ಒಳಗಿನವರು. ತಾವೂ ತಮ್ಮ ಕತೆಯಲ್ಲಿ ಪಾತ್ರಧಾರಿಗಳು ಅಥವಾ ತಮ್ಮಿಂದಲೇ ಕತೆಗಳನ್ನು ಆರಂಭಿಸಿದವರು. ಕತೆಗಾರಿಕೆಗೆ ಇದೊಂದು ಅತ್ಯುತ್ತಮ ಮಾದರಿ. ತಾನೇ ಊರಾಡಿ ಎತ್ತಿಕೊಂಡು ಬಂದ ಕತೆಗಳಂತಿರುವ ಸಮೂಹ ಪ್ರಜ್ಞೆ ಈ ಕತೆಗಳ ಸತ್ವ. ಕತೆಗಳು ಸಮೂಹದ ಸ್ವತ್ತು. ಸಮೂಹ ಕೊಡುತ್ತಿರುವ ಸಮಸ್ತ ಬೈಗುಳಗಳಾದಿಯಾಗಿ ಯಾವುದನ್ನೂ ಸೋಸದೆ ಇಡಿಯಾಗಿ ನಮಗೆ ತಲುಪಿಸಲಾಗಿದೆ.
ದಯಾ ಗಂಗನಘಟ್ಟ ಕಥಾ ಸಂಕಲನ “ಉಪ್ಪುಚ್ಚಿ ಮುಳ್ಳು”ಗೆ ನಟರಾಜ್‌ ಬೂದಾಳು ಬರೆದ ಮುನ್ನುಡಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ