Advertisement

Category: ದಿನದ ಪುಸ್ತಕ

ಪಾಗಾರದಲ್ಲೊಂದು ಸೃಜನಾತ್ಮಕ ಕಲಾಕೃತಿ

ಆಯಾ ಕಾಲಕ್ಕನುಗುಣವಾಗಿ ಲೇಖಕಿ ಸೂಕ್ಷ್ಮ ಕುಸುರಿಯ ನೇಯ್ಗೆಯಿಂದ ಕಲಾತ್ಮಕವಾಗಿ ನಿರ್ಮಿಸಿರುವ ಪರಿ ಓದುಗರನ್ನು ಕೈಯ್ಯಲ್ಲಿ ಹಿಡಿದ ಪುಸ್ತಕ ಕೆಳಗಿಡದಂತೆ ಸೆಳೆಯುತ್ತದೆ. ಕಾದಂಬರಿಯ ಘಟನೆಗಳ ಕಾಲಮಾನ, ಅದಕ್ಕನುಗುಣವಾಗಿ ಒಂದೊಂದೂ ಪಾತ್ರಗಳಲ್ಲಿ ಲೇಖಕಿ ಪರಕಾಯ ಪ್ರವೇಶ ಮಾಡಿದಂತೆ ಕಡೆದಿಟ್ಟ ಪಾತ್ರ ಚಿತ್ರಣವು ಓದುಗರ ಮನೋ ಭೂಮಿಕೆಯಲ್ಲೂ ಜೀವಂತವಾಗಿ ನೆಲೆಸಿ ಭಾವನೆಗಳೊಂದಿಗೆ ಸ್ಪಂದಿಸುತ್ತವೆ. ಮಳೆಗಾಲದಲ್ಲಿ ಪಾಚಿ ಕಟ್ಟಿಕೊಳ್ಳುವ ಮನೆಯ ಸುತ್ತಲಿನ ಕಲ್ಲಿನ ಪಾಗರವನ್ನು ಲೇಖಕಿ ಒಂದು ರೂಪಕದಂತೆ ಬಳಸಿಕೊಂಡಿದ್ದು ಕಾದಂಬರಿಯಲ್ಲಿ ಪಾಗಾರದ ಪ್ರಸ್ತಾಪ, ಅದರ ಪಾಚಿ ಕೂಡ ಅಷ್ಟೇ ಕಲಾತ್ಮಕವಾಗಿ ಮೂಡಿ ಬಂದಿದೆ.
ಮಿತ್ರಾ ವೆಂಕಟ್ರಾಜ ಅವರ ʻಪಾಚಿಗಟ್ಟಿದ ಪಾಗಾರʼ ಕಾದಂಬರಿಯ ಕುರಿತು, ಲೇಖಕಿ ಕೆ.ಆರ್.ಉಮಾದೇವಿ ಉರಾಳ ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ

Read More

ನಾನಿನ್ನು ಹೋಗಿಬರಲೇ.. ‌

ಸುಚಿತಾ ದಿಙ್ಮೂಢಳಾದಳು. ತನಗೆ ಹೀಗೆ ವರ್ತಿಸುವುದು ಸಾಧ್ಯವಿತ್ತೇ? ತನ್ನೊಳಗೆ ಹೊತ್ತಿ ಉರಿದ ವಿಷಯವನ್ನು ತನ್ನ ಮಗಳು ನಿರಾಕರಿಸುತ್ತಿರುವುದು ತಮಗೆ ಸಹಿಸುವುದು ಸಾಧ್ಯವಿತ್ತೇ? ಅದರ ಬಗೆಗೆ ಇಷ್ಟೊಂದು ನಿರ್ವಿಕಾರವಾಗಿರುವದು ಸಾಧ್ಯವಿತ್ತೇ? ಇದು ದಾದಾನ ನಿರ್ವಿಕಾರವೇ ಅಥವಾ ಇದೇ ಜೀವನದ ಬಗೆಗಿರುವ ಸಮತೋಲವೇ? ಅಮ್ಮನ ಸಾವಿನ ಬಳಿಕ ಅವರು ಬಂದು ತಲುಪಿದರು, ಆಗವಳು ಭೇಟಿಯಾದಾಗ ಅವರೇನೂ ವ್ಯಕ್ತ ಮಾಡಿರಲಿಲ್ಲ. ಅವಳು ಮಲಗಿದ್ದಾಗ ಮಾತ್ರ ಹೊದಿಕೆಯನ್ನು ಸರಿಪಡಿಸಿದರು. ಹಣೆಯ ಮೇಲಿನ ತಲೆಗೂದಲನ್ನು ಸರಿಪಡಿಸಿ, ಎಲ್ಲರ ಎದುರಿಗೆ ಕೂದಲಲ್ಲಿ ಬೆರಳಾಡಿಸಿದರು…
ಚಂದ್ರಕಾಂತ ಪೋಕಳೆ ಅನುವಾದಿಸಿದ ಆಶಾ ಬಗೆಯವರ ಮರಾಠಿ ಕಾದಂಬರಿ “ಸೇತು” ಇಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಗಡಂಗು ಹೋಗಿ ಶರಾಬು ಬಂತೂ….

ತಮ್ಮ ಹೊಸ ಗಡಂಗನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಯಾದವ ಶೆಟ್ಟರ ಎರಡು ಪ್ರಯತ್ನಗಳು ಇತಿಹಾಸದಲ್ಲಿ ದಾಖಲಾಗತಕ್ಕವೇ ಆಗಿವೆ. ಅವುಗಳಲ್ಲಿ ಮೊದಲನೆಯದು, ಒಂದು ನಿಗದಿತ ದಿನ ತಮ್ಮ ಗಡಂಗಿಗೆ ಯಾರೇ ಬಂದರೂ ಶರಾಬು ಕುಡಿಯುವವರಿಗೆ ಅವರು ಕುಡಿಯುವಷ್ಟು ಶರಾಬನ್ನು ಉಚಿತವಾಗಿ ಕೊಡಲಾಗುವುದೆಂದು ಯಾದವ ಶೆಟ್ಟಿಯವರು ಘೋಷಿಸಿದ್ದು. ಅದೊಂದು ಸ್ಮರಣೀಯ ಮದ್ಯಪಾನೋತ್ಸವವಾಗಿತ್ತು. ಶರಾಬು ಸಮಾರಾಧನೆಯ ದಿನ ಬೆಳಗಿನಿಂದಲೇ ಶರಾಬು ಅಂಗಡಿಗೆ ನುಗ್ಗಲಾರಂಭಿಸಿದ ಊರಿನ ಶರಾಬು ಪ್ರಿಯರು ಬಹಳ ಬೇಗನೇ ‘ಟೈಟ್’ ಆದರು (ಮತ್ತೇರಿಸಿಕೊಂಡರು). ಆಮೇಲೆ ಪರಸ್ಪರ ಬೈದಾಡುತ್ತಾ, ದೂಡಿಕೊಳ್ಳುತ್ತಾ, ಬಡಿದಾಡುತ್ತಾ ಮನಸ್ಸಿನಲ್ಲಿದ್ದ ಕಲ್ಮಶಗಳನ್ನೆಲ್ಲ ಹೊರಗೆ ಹಾಕುತ್ತಾ ಮೆರೆದಾಡಿದರು.
ಬಿ. ಜನಾರ್ದನ ಭಟ್ ಹೊಸ ಕಾದಂಬರಿ “ಗಮ್ಯ”ದಿಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಮೀನು ಕುಡಿದ ಕಡಲಿನ ವಿಷಯ

ಲೋಕವನ್ನು ಕವಿತೆಯ ಮೂಲಕ ಅಸಾಮಾನ್ಯವಾಗಿ ಮರು ರೂಪಿಸುವ ಸೂರ್ಯಕೀರ್ತಿಯವರು, ಅದೇ ಹೊತ್ತಲ್ಲಿ ಸಾಂಪ್ರದಾಯಕ ಸಂಕೇತಗಳನ್ನು ನಿರ್ದಯವಾಗಿ ನಾಶಗೊಳಿಸುತ್ತಾರೆ. ಅವರು ಕಾಣುವ ಹಸಿವಿನ ಅನ್ನದ ಮುಂದೆ ಶಿವನ ಧ್ಯಾನ, ಮುದ್ರಿಕೆ, ನಾಥ ಪಟ್ಟಗಳೂ ಶೂನ್ಯವಾಗುತ್ತವೆ. ದೈವ ಕಲ್ಪನೆಯೇ ವ್ಯರ್ಥವಾಗುತ್ತದೆ. ಗಾಂಧಿಯ ಕನ್ನಡಕವು ಕೂಡಾ ಪಾಚಿಗಟ್ಟಿದ ಕಣ್ಣುಗಳಲ್ಲಿ ಮರೆಯಾಗುತ್ತದೆ. ಬಾಗಿಲ ಸಂದುಗೊಂದುಗಳಲ್ಲಿ ಚಂದ್ರಮತಿಯರು ನಡುಗುತ್ತಾರೆ, ಜನ್ನನ ಸುನಂದೆ, ಅಮೃತಮತಿಯರು ಪಿಸುಗುಡುತ್ತಾ ನರಳುತ್ತಾರೆ.
ಸೂರ್ಯಕೀರ್ತಿ ಬರೆದ “ಮೀನು ಕುಡಿದ ಕಡಲು” ಕವನ ಸಂಕಲನಕ್ಕೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮಾತುಗಳು

Read More

‘ಮುಖ್ಯಮಂತ್ರಿ’ಯ ಬದುಕಿನ ಪುಟಗಳು….

ಆಗ ಮುಖ್ಯಮಂತ್ರಿ ಪಾತ್ರದ ಕುರಿತು ಚರ್ಚೆ ಶುರುವಾಗಿ, ರಾಜಾರಾಂ ಅವರನ್ನು ಮುಖ್ಯಮಂತ್ರಿ ಪಾತ್ರ ಮಾಡಲು ಒತ್ತಾಯಿಸಿದಾಗ ಅವರು ಒಪ್ಪಲಿಲ್ಲ. ಬೇರೆ ತಂಡಗಳ ಪ್ರಮುಖ ಕಲಾವಿದರ ಕುರಿತು ಚರ್ಚಿಸಿದರೂ ಪ್ರಯೋಜನವಾಗಲಿಲ್ಲ. ಅಂತಿಮವಾಗಿ ನನ್ನ ತಲೆಗೇ ಬಂತು. ನಾಟಕ ಕೆಟ್ಟರೂ ಚಿಂತೆಯಿಲ್ಲ, ಪ್ರದರ್ಶನ ನಿಲ್ಲಿಸುವುದು ಬೇಡವೆಂದಾಯಿತು. ಭಂಡ ಧೈರ್ಯ ನನಗಿದ್ದುದರಿಂದ ಒಪ್ಪಿದೆ. ಆದರೆ ನಿರ್ದೇಶನಕ್ಕೆ ಒಪ್ಪಲಿಲ್ಲ. ರಾಜಾರಾಂ ಅವರು ಇಬ್ಬರೂ ಸೇರಿ ನಿರ್ದೇಶಿಸೋಣವೆಂದರೂ ಬೇಡವೆಂದೆ. ಎಂಟತ್ತು ದಿನಗಳಲ್ಲಿ ನಾಟಕ ಪ್ರದರ್ಶನ ಇರುವುದರಿಂದ ನಾನು ಒಪ್ಪಲಿಲ್ಲ. ಆದರೆ ಕರಾರೊಂದು ಹಾಕಿದೆ.
ನಟ ಮುಖ್ಯಮಂತ್ರಿ ಚಂದ್ರು ಬರೆದ “ರಂಗವನದ ಚಂದ್ರತಾರೆ” ಆತ್ಮಕಥನದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ