Advertisement

Category: ದಿನದ ಪುಸ್ತಕ

ಮಾನವೀಯ ಮೌಲ್ಯಗಳ ಪ್ರಯೋಗಶೀಲ ಕಾವ್ಯ: ಪ್ರಶಾಂತ್ ಬೆಳತೂರು

ಕತ್ತಲ ಸಾಮ್ರಾಜ್ಯದಲ್ಲಿ ಹುಟ್ಟಿನ ಜಾಡು ಹಿಡಿದು ಕತೆ ಹೇಳುವ ಮೆಟ್ಟಿನ ಕತೆ ಬರೀ ಕತೆಯಾಗದೆ ಕಾವ್ಯವಾಗುವ ಪರಿಯೇ ಒಂದು ವೈಶಿಷ್ಟ್ಯಪೂರ್ಣ. ತನ್ನ ಕತ್ತಲ ಸಾಮ್ರಾಜ್ಯದ ಕತೆಯನ್ನು ದೇಶಕ್ಕೆ, ಪ್ರಪಂಚಕ್ಕೆ, ಇಡೀ ಭೂಮಂಡಲಕ್ಕೆ ವಿಸ್ತರಿಸಿ ಹೇಳುತ್ತೇನೆನ್ನುವ ಅದರ ತುಡಿತ ಎಲ್ಲರನ್ನೂ ಒಳಗೊಳ್ಳುವ ಸಾಂಸ್ಕೃತಿಕ ಪ್ರಕ್ರಿಯೆಯೂ ಆಗಿದೆ. ಈ ನಿಟ್ಟಿನಲ್ಲಿ ಕವಿಗೆ ತನ್ನ ಕಾವ್ಯದ ಉದ್ದೇಶಗಳ ಕುರಿತು ಸ್ಪಷ್ಟತೆ ಇದೆ. ಈ ದಿಶೆಯಲ್ಲಿ ಇದೊಂದು ಅಪಾರವಾದ ಮಾನವೀಯ ಮೌಲ್ಯಗಳ ತಾಯ್ತನ ತುಡಿತದ ಪ್ರಯೋಗಶೀಲ ಕಾವ್ಯ ಅನ್ನಬಹುದು. ಈ ಅಂಶ ಕಾವ್ಯದ ಉದ್ದಕ್ಕೂ ಓದುಗನನ್ನು ಮನಮುಟ್ಟುತ್ತದೆ.
ಎಂ. ಜವರಾಜ್‌ ಕಥನ ಕಾವ್ಯ “ಮೆಟ್ಟು ಹೇಳಿದ ಕಥಾ ಪ್ರಸಂಗ”ದ ಕುರಿತು ಪ್ರಶಾಂತ್‌ ಬೆಳತೂರು ಬರಹ

Read More

ಕಾಗೆ ಕಾರುಣ್ಯದ ಕಣ್ಣು: ಬರಗೂರು ರಾಮಚಂದ್ರಪ್ಪ ಕೃತಿಯ ಒಂದು ಬರಹ

ಇನ್ನೊಂದು ವಿಷಯವನ್ನೂ ಇಲ್ಲಿ ಹೇಳಬೇಕು. ಚಿತ್ರೀಕರಣಕ್ಕೆಂದು ನಾನು ಆಯ್ಕೆ ಮಾಡಿಕೊಂಡ ಸ್ಥಳಗಳು ಸಾಂಪ್ರದಾಯಿಕ ರಮಣೀಯ ಸ್ಥಳಗಳಲ್ಲ. ಅಂದರೆ ಹಸಿರು, ನದಿ ತೀರ ಇತ್ಯಾದಿಗಳಿಂದ ಕೂಡಿದ ಸ್ಥಳಗಳಲ್ಲ. ಬಯಲು ಸೀಮೆಯ ಬೆಟ್ಟ, ಗುಡ್ಡ, ಹಸಿರಿಲ್ಲದೆ ಒಣಗಿದ ಪರಿಸರಗಳನ್ನು ಆಯ್ಕೆ ಮಾಡಿಕೊಂಡೆ. ಪ್ರಕೃತಿಯಲ್ಲಿರುವ ಸಮಸ್ತವೂ ಮುಖ್ಯವೆಂಬ ತಾತ್ವಿಕತೆ ನನ್ನದು. ನನ್ನ ಸಿನಿಮಾ ಕತೆಗಳು ಬಹುಪಾಲು ನಮ್ಮ ತುಮಕೂರು ಜಿಲ್ಲೆಯ ಸಿರಾ, ಮಧುಗಿರಿ, ಪಾವಗಡ, ದೇವರಾಯನ ದುರ್ಗ, ಚಿತ್ರದುರ್ಗ – ಇವೇ ಮುಂತಾದ ವಲಯಗಳಿಗೆ ಹೊಂದುತ್ತಿದ್ದ ವಸ್ತುವನ್ನು ಒಳಗೊಂಡಿದ್ದವು.
ಬರಗೂರು ರಾಮಚಂದ್ರಪ್ಪ ಅವರ “ಕಾಗೆ ಕಾರುಣ್ಯದ ಕಣ್ಣು” ಆಯ್ದ ಅನುಭವಗಳ ಕಥನದ ಒಂದು ಬರಹ ನಿಮ್ಮ ಓದಿಗೆ

Read More

ನಮ್ಮೊಳಗೂ ಒಂದು “ಬೌಲ್” ಇದೆಯೇ?: ಬಿ.ಕೆ. ಸುಮತಿ ಬರಹ

ಮನುಷ್ಯ ಬದುಕಿನ ಎಲ್ಲ ಹೋರಾಟಗಳನ್ನೂ ಆರಂಭದ ಬಿಕು ಮತ್ತು ಮಾಲಿಂಗನ ಯುದ್ಧದಲ್ಲಿಯೇ ಕಾಣಬಹುದು. ಆ ಯುದ್ಧ ಒಂದು ಚಿತ್ರಮಾಲಿಕೆಯ ಹಾಗಿದೆ. ವಸ್ತುವನ್ನು ಅಪ್ಪಿಕೊಳ್ಳುವುದು, ಬಿಟ್ಟು ಕೊಡಲು ಹೆಣಗಾಡುವುದು, ಕಿತ್ತುಕೊಳ್ಳುವುದು, ಇದೇ ಅಲ್ಲವೇ ನಮ್ಮ ಹೋರಾಟ? ಶಬ್ದ ನಿಶ್ಶಬ್ದದ ಹೋರಾಟ. ಕೊಟ್ಟು ಬಿಟ್ಟಿದ್ದರೆ ಏನಾಗುತ್ತಿತ್ತು? ಮಾಲಿಂಗನಿಗೆ ಅದನ್ನು ಪಡೆಯುವ ಅರ್ಹತೆ ಇತ್ತೇ? ಬಿಕು ಆನಂದನ ಅಗಲಿಕೆಯಿಂದ ವಿಚಲಿತನಾಗಿ ಬಳಲಿ ನಿತ್ರಾಣನಾಗುವುದು ಏಕೆ? ಬಿಕುವಿನ ಆರೈಕೆಯಲ್ಲಿ ಅರಳಿದ ಸುಮಲತೆ ಆತನನ್ನು ಬಿಟ್ಟು ಹೊರಡಲು ಮನಸ್ಸು ಮಾಡಿದ್ದಾದರೂ ಹೇಗೆ?
ಡಾ. ಎಂ.ಎಸ್.‌ ಮೂರ್ತಿಯವರ “ಬೌಲ್‌” ಕಾದಂಬರಿಯ ಕುರಿತು ಬಿ.ಕೆ. ಸುಮತಿ ಬರಹ

Read More

ಮುಳ್ಳಿನ ಮೇಲಿನ ಹೂವು: ವೇದಾ ಮನೋಹರ ಜೀವನ ಪಯಣದ ಕತೆ

ಈ ಹೋರಾಟಗಳಲ್ಲೆಲ್ಲಿಯೂ ನನಗೆ ಪಶ್ಚಾತ್ತಾಪವಿರಲಿಲ್ಲ. ಹಾಗೆ ನೋಡಿದರೆ ಇದು ನಾನೇ ಆಯ್ದುಕೊಂಡ ಬದುಕು. ನನ್ನ ಬದುಕನ್ನು ಅಪ್ಪ ಅಮ್ಮನ ಮಡಿಲಿಗೆ ಹಾಕಲಿಲ್ಲ. ಪ್ರೇಮಿಸಿ ಮದುವೆಯಾಗಿ ನನ್ನ ಹಾದಿಯನ್ನು ನಾನೇ ಕಂಡುಕೊಂಡೆ. ಮನೋಹರ್ ಅವರನ್ನು ಮದುವೆಯಾದ ಮೇಲೂ ಸಂಪೂರ್ಣವಾಗಿ ಅವರನ್ನು ಅವಲಂಬಿಸಕೂಡದು ಎಂಬ ತತ್ವ ನನ್ನದಿತ್ತು. ಅದಕ್ಕೆ ನೀರೆರೆದವರು ಮನೋಹರ್. ಅದೀಗ ಫಲ ಕೊಟ್ಟಿದೆ. ಯಾಕೆಂದರೆ ನಮ್ಮನ್ನು ನಾವು ನಂಬಿ ಮುನ್ನಡೆದಾಗ ಮಾತ್ರ ನಮಗೆ ಯಶಸ್ಸು ಸಿದ್ಧ ಎಂಬ ತತ್ವದಡಿ ಬದುಕಿದವಳು ನಾನು.
ಭಾರತಿ ಹೆಗಡೆ ನಿರೂಪಣೆಯ ವೇದಾ ಮನೋಹರ ಜೀವನ ಪಯಣದ ಕೃತಿ “ಪಂಚಮವೇದ”ದ ಒಂದು ಅಧ್ಯಾಯ ನಿಮ್ಮ ಓದಿಗೆ

Read More

“ಜಿನ್ನ್‌ ಮತ್ತು ಪರ್ಷಿಯನ್‌ ಕ್ಯಾಟ್‌” ಕಥೆಗಳು….

ಈ ಕಥೆಗಳ ಗಮನ ಸೆಳೆಯುವ ಇನ್ನೂ ಕೆಲವು ಅಂಶಗಳೆಂದರೆ, ನಾಟಕೀಯತೆ, ಕಥಾವರಣದಲ್ಲಿ ಬಿಚ್ಚಿಕೊಳ್ಳುವ ಒಂದು ಬಗೆಯ ನಿಗೂಢತೆ ಮತ್ತು ಜನಪ್ರಿಯ ಕಥನ ಪರಂಪರೆಯಿಂದ ಪಡೆದ ಪ್ರಭಾವ. ಬೆಳೆಯುತ್ತಿರುವ ಲೇಖಕನೊಬ್ಬನಿಗೆ ಯಾವ ಅಂಶವೂ ವರ್ಜ್ಯವಲ್ಲ. ಮಾತ್ರವಲ್ಲ, ತನ್ನ ಕಥನ ಸಾಮರ್ಥ್ಯವನ್ನು ಕಂಡುಕೊಳ್ಳಲು ನಡೆಸುವ ಪ್ರಯೋಗ ಕೂಡ ಮುಖ್ಯ. ಮುನವ್ವರ್ ಅಂತಹ ಕಂಡುಕೊಳ್ಳುವಿಕೆಯ ಪ್ರಯತ್ನದಲ್ಲಿದ್ದಾರೆ.
ಮುನವ್ವರ್‌ ಜೋಗಿಬೆಟ್ಟು ಕಥಾಸಂಕಲನ”ಜಿನ್ನ್‌ ಮತ್ತು ಪರ್ಷಿಯನ್‌ ಕ್ಯಾಟ್‌”ಗೆ ಕೇಶವ ಮಳಗಿ ಬರೆದ ಪ್ರವೇಶಿಕೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ