ವ್ಯಾಸರಾವ್ ನಿಂಜೂರ್ ಆತ್ಮಕಥನದ ಪುಟಗಳು
ಕೊಡವೂರಿನಲ್ಲಿ ಎಂಟನೆಯ ದರ್ಜೆ ತೇರ್ಗಡೆಯಾದ ಬಳಿಕ, ನನ್ನ ಅಣ್ಣ ರಾಮಚಂದ್ರ ಕಲಿಯುತ್ತಿದ್ದ ಮಲ್ಪೆಯ ಫಿಶರೀಸ್ ಹೈಸ್ಕೂಲಿಗೆ ಸೇರಿಕೊಳ್ಳುವುದು ಎಂದು ಮನೆಮಂದಿಯ ಲೆಕ್ಕಾಚಾರವಿತ್ತು. ಅಲ್ಲಿ ಫೀಸಿನಲ್ಲೂ ರಿಯಾಯಿತಿ ಪಡೆಯುವ ಸಂಭವವಿತ್ತು. ಆದರೆ ಅಪ್ಪಯ್ಯನ ತರ್ಕವೇ ಬೇರೆ. `ದೂರ ನಡೆದುಕೊಂಡು ಹೋದರೆ ವಿದ್ಯೆ ತಲೆಗೆ ಹತ್ತುತ್ತದೆ. ಆದ್ದರಿಂದ ಕಲ್ಯಾಣಪುರದ ಮಿಲಾಗ್ರಿಸ್ ಹೈಸ್ಕೂಲೇ ಸಮ’ ಎಂದುಬಿಟ್ಟರು. ಅವರ ಮಾತಿಗೆ ಅಪೀಲೇ ಇಲ್ಲ. ಬರಿಗಾಲಲ್ಲಿ ಕಲ್ಬಂಡೆ, ಅರ್ಕಾಳಬೆಟ್ಟು, ನೇಜಾರು ಮಾರ್ಗವಾಗಿ ಕಲ್ಯಾಣಪುರ ಮುಟ್ಟಲು ಕನಿಷ್ಠ ಒಂದು ಗಂಟೆಯಾದರೂ ಬೇಕು.
ವ್ಯಾಸರಾವ್ ನಿಂಜೂರ್ ಅವರ ಆತ್ಮಕಥನ “ಎಳೆದ ತೇರು” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ