ಕನ್ನಡಿಯ ಮುಂದೆ ಆವರಣ ಕಳಚಿಕೊಳ್ಳುತ್ತ…..
ಸೈದ್ಧಾಂತಿಕ ಹಠಮಾರಿತನವು ಚೌಕಟ್ಟುಗಳನ್ನು ನಿರ್ಮಿಸುತ್ತದೆ. ಆ ಚೌಕಟ್ಟಿನಾಚೆ ಯೋಚಿಸುವ ಸಹನೆಯನ್ನೇ ಅದು ಕಳೆದುಕೊಳ್ಳುತ್ತದೆ. ತನ್ನ ಚೌಕಟ್ಟಿಗೆ ಒಗ್ಗದವರನ್ನು ಅದು ‘ಅನ್ಯ’ವಾಗಿಸುತ್ತ ಆ ‘ಅನ್ಯ’ವನ್ನು ದ್ವೇಷಿಸುತ್ತ ನಡೆಯುತ್ತದೆ. ಬಲಪಂಥ, ಎಡಪಂಥಗಳೆಂಬ ಚೌಕಟ್ಟುಗಳೂ ಹಾಗೆಯೇ ಕಾಣಿಸುತ್ತಿವೆ. ಅನೇಕರು ಬರಹಗಾರರನ್ನು ನಿರ್ದೇಶಿಸುವ ಪರಿ ಹೇಗಿದೆಯೆಂದರೆ, “ನೀವು ಆ ಚೌಕಟ್ಟಿನಲ್ಲಾದರೂ ಕುಳಿತುಕೊಳ್ಳಿ, ಈ ಚೌಕಟ್ಟಿನಲ್ಲಾದರೂ ಕುಳಿತುಕೊಳ್ಳಿ. ಸರಿಯಾಗಿ ನೀವದಕ್ಕೆ ಫಿಟ್ ಆಗದಿದ್ದರೆ ನಿಮ್ಮ ರೆಕ್ಕೆಗಳನ್ನು ಕತ್ತರಿಸಿಕೊಳ್ಳಿ. ಚೌಕಟ್ಟಿಗೆ ತಕ್ಕಂತೆ ಮುದುರಿಕೊಳ್ಳಿ. ಆದರೆ ಚೌಕಟ್ಟು ಮಾತ್ರ ಅಲುಗಾಡಬಾರದು!” ಮನುಷ್ಯರಿಗಿಂತ ಚೌಕಟ್ಟುಗಳೇ ಮುಖ್ಯವಾಗುವ ವಿಪರ್ಯಾಸವಿದು.
ಇಂದು ಬಿಡುಗಡೆಯಾಗಲಿರುವ ಡಾ. ಗೀತಾ ವಸಂತ ಅವರ “ಅವಳ ಅರಿವು” ಅಂಕಣ ಬರಹಗಳ ಸಂಕಲನದ ಒಂದು ಲೇಖನ ನಿಮ್ಮ ಓದಿಗೆ