Advertisement

Category: ದಿನದ ಪುಸ್ತಕ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ ಬಚಾವಾಗಿ ಪ್ರೈಮರಿ ಕೊಂಡವನ್ನು ಹಾದು, ಮಿಡ್ಲಿಸ್ಕೂಲ್ ಎಂಬ ಉನ್ನತ ಶಿಕ್ಷಣಕ್ಕೆ ತಿಪಟೂರಿಗೆ ಹೋದದ್ದು, ಊರಿನ ಪುರಾತನ ಬೇರುಗಳನ್ನು ಕಿತ್ತುಕೊಂಡು ಹಾಸ್ಟೆಲ್‌ನಲ್ಲಿ ನೆಲೆಗೊಂಡದ್ದು, ಚಿಕ್ಕಪ್ಪನ ಮತ್ತು ಕುಂದೂರು ತಿಮ್ಮಯ್ಯನವರ ಒತ್ತಾಸೆ ನಿನಗೆ ಸಿಕ್ಕಿದ್ದು ನಿನ್ನಂತ ದಲಿತ ಹುಡುಗರ ಜೀವನದಲ್ಲಿಯ ಬಹುದೊಡ್ಡ ತಿರುವು ಎಂದು ನನಗೆ ಅನಿಸುತ್ತದೆ.
ಗುರುಪ್ರಸಾದ್‌ ಕಂಟಲಗೆರೆ ಅವರ “ಟ್ರಂಕು ತಟ್ಟೆ” ಹಾಸ್ಟೆಲ್‌ ಅನುಭವ ಕಥನದ ಕುರಿತು ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ ಬರಹ

Read More

ಸಫಲತೆಯ ಸಂದೇಶದ ಕವಿತೆಗಳು: ತೇಜ ಎಸ್. ಬಿ. ಬರಹ

ಅಕ್ಕ, ಜೋಗತಿ ಮಂಜಮ್ಮ, ಪದವಿ, ಅವ್ವ, ಮಗು, ಸಮಾನಳು ಮುಂತಾದ ಕವಿತೆಗಳು ಜೀವ-ಭಾವ ತುಂಬಿ ಮಹಿಳೆಯರ ಜೀವನದ ಬಗ್ಗೆ ಚಿತ್ರಿಸಿವೆ. ಮುಂತಾಗಿ ನನಗಾರು ಸಾಟಿ, ತಮಟೆ, ಕಣ್ಣಾಮುಚ್ಚೆ ಕಾಡೆ ‘ಗೋಡೆ’ ಬೆಂಗಳೂರಿನ ಮಗ ಸಂಭಾಷಣೆಯೇ ಇಲ್ಲದಂತೆ ಕಾಡುವುದಂತೂ ಸಹಜ. ಪುಸ್ತಕ ಓದಲು ಹೆಚ್ಚೇನು ಸಮಯ ತೆಗೆದುಕೊಳ್ಳಲಿಲ್ಲ, ಆದರೆ ಅವು ನಮ್ಮಲ್ಲಿ ಹುಟ್ಟುಹಾಕಿದ ಪ್ರಶ್ನೆಗಳನ್ನು, ಭಾವಗಳನ್ನು ಜೀರ್ಣಿಸಿಕೊಳ್ಳಲು ಬಹಳ ಸಮಯ ಬೇಕಾಯಿತು…
ವಿಕ್ರಮ್‌ ಬಿ.ಕೆ. ಕವನ ಸಂಕಲನ “ನಾವಿಬ್ಬರೇ ಗುಬ್ಬಿ” ಕುರಿತು ತೇಜ ಎಸ್. ಬಿ. ಬರಹ

Read More

ಹಂಗಿಲ್ಲದ ಹಾದಿಯಲ್ಲಿ…

ಇಲ್ಲಿಯೂ ಅವನ ಮತ್ತು ಅವಳ ನಡುವಿನ ಪ್ರೀತಿ, ಪ್ರೇಮ, ವಿರಹ ಇವೆ. ಪ್ರೀತಿಯ ಆಳ-ಅಗಲ, ವಿರಹದ ಸುಡುವ ಯಾತನೆ ಮತ್ತೆ ಮತ್ತೆ ಚಿತ್ರಿತವಾಗಿದೆ. ಹಾಗೆಯೇ ಇವರಿಬ್ಬರ ಸುತ್ತ ಇರುವ ಲೋಕವೂ ಇದೆ; ಭೂತ, ವರ್ತಮಾನಗಳೂ ಇವೆ. ಸುಮಿತ್‌ ಇವುಗಳನ್ನು ಈಗಾಗಲೇ ಬಳಕೆಯಾಗಿರುವ ಮಾತುಗಳಲ್ಲಿ, ಪ್ರತಿಮೆ ರೂಪಕಗಳಲ್ಲಿ ಚಿತ್ರಿಸುತ್ತ ಕಾವ್ಯವನ್ನು ಸವೆದ ದಾರಿಯಲ್ಲಿ ನಡೆಸುವುದಿಲ್ಲ. ಪ್ರತಿ ಹೆಜ್ಜೆಯನ್ನು ಇಡುವಾಗಲೂ ಹೊಸ ರೀತಿಯಲ್ಲಿ, ಹೊಸ ದಾರಿಯಲ್ಲಿ ನಡೆಯಲು ಸಾಧ್ಯವೇ ಎಂದು ನೋಡುತ್ತಾರೆ.
ಸುಮಿತ್‌ ಮೇತ್ರಿ ಕವನ ಸಂಕಲನ “ಈ ಕಣ್ಣುಗಳಿಗೆ ಸದಾ ನೀರಡಿಕೆ” ಕುರಿತು ಜಿ.ಪಿ. ಬಸವರಾಜು ಬರಹ

Read More

ಆನಂದದ ಹುಡುಕಾಟದಲ್ಲಿ…: ಡಾ. ಎ.ಎನ್. ನಾಗರಾಜ್ ಅನುಭವ ಕಥನ

ಗಾಂಧೀಜಿಯವರು ದೂರದಲ್ಲಿದ್ದುಕೊಂಡು ಎಲ್ಲರನ್ನೂ ಹುರಿದುಂಬಿಸುತ್ತಿದ್ದರು, ಅವರಲ್ಲಿ ಪ್ರೀತಿಯನ್ನು ಉಕ್ಕಿಸಿಬಿಡುತ್ತಿದ್ದರು ಎನ್ನುವುದಕ್ಕೆ ಉದಾಹರಣೆಯಾಗಿ ನನ್ನ ತಾಯಿಯ ಮೇಲೆ ಅವರು ಪ್ರಭಾವ ಬೀರಿದ್ದು ಹೀಗೆ. ಗಾಂಧೀಜಿ ಮೈಸೂರಿಗೆ ನಾನು 2 ಅಥವಾ 3 ವರ್ಷದವನಾಗಿದ್ದಾಗ ಬಂದಿದ್ದರಂತೆ. ನಾವೆಲ್ಲ ಅವರನ್ನು ನೋಡುವುದಕ್ಕೆ ಹೋಗಿದ್ದೆವಂತೆ. ಗಾಂಧೀಜಿಯವರು ಎಲ್ಲರಿಂದಲೂ ಹಣ ಸಹಾಯ ಕೋರಿದರಂತೆ. ಏನೂ ಓದಿಲ್ಲದ ಮುಗ್ಧ ಜಯಮ್ಮ ಅವರಿಗೆ ತಕ್ಷಣ ತನ್ನ ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ತೆಗೆದು ಕೊಟ್ಟಳಂತೆ.
ಡಾ. ಎ.ಎನ್. ನಾಗರಾಜ್ ಅನುಭವ ಕಥನ “ಆನಂದದ ಹುಡುಕಾಟದಲ್ಲಿ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಧರೆಗೆ ಮೆರುಗು ತಂದು ನಕ್ಷತ್ರಗಳಾದವರು

ಶಾರ್ಟ್‌ ಹ್ಯಾಂಡ್ ಬರಹದಲ್ಲಿ ವಿಸ್ತಾರ ಸ್ವರೂಪವನ್ನು ಹೇಗೆ ಸಂಕೇತರೂಪದಲ್ಲಿ ಚಿಕ್ಕದಾಗಿ ದಾಖಲಿಸಿಕೊಳ್ಳುತ್ತಾರೋ ಹಾಗೆಯೇ ಇಲ್ಲಿ ವೀರೇಶರು ನಿಜ ಸಾಧಕರ ವ್ಯಕ್ತಿತ್ವ ಮತ್ತು ಸಾಧನೆಯನ್ನು ಕೆಲವೇ ಸಾಲುಗಳಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಿ ಗೆದ್ದಿದ್ದಾರೆ. ಓದುಗರಿಗೆ ಬೇಸರವಾಗದಿರಲೆಂದು ಪ್ರಾಸ ಬಳಕೆಗೆ ಒತ್ತು ನೀಡಿರುವ ವೀರೇಶರು ತಮ್ಮ ಕವನಗಳನ್ನು ಶಾಲಾ ಮಕ್ಕಳೂ ಸಂತಸದಿಂದ ಕಲಿತು ಹಾಡಲು ಅನುಕೂಲವಾಗುವಂತಾಗಿಸಿರುವುದು ಅವರ ಹೆಗ್ಗಳಿಕೆ.
ವೀರೇಶ ಬ. ಕುರಿ ಸೋಂಪೂರ ಬರೆದ ‘ಧರೆಗೆ ಮೆರುಗು ತಂದವರು’ ಕವನ ಸಂಕಲನದ ಕುರಿತು ಪ.ನಾ. ಹಳ್ಳಿ ಹರೀಶ್‌ ಕುಮಾರ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ