Advertisement

Category: ದಿನದ ಪುಸ್ತಕ

“ಹಸ್ತಿನಾವತಿ”: ಇದು ಭಾರತದ ಕಥೆ….

ಆ ಚುನಾವಣೆಯಲ್ಲಿ ಸಂಜಯ್ ಸರ್ಕಾರ್ ಸ್ಪರ್ಧಿಸಿದ್ದರೆ ಬಹುಮತದಿಂದ ಗೆದ್ದು ಬರುತ್ತಿದ್ದರು. ಅವರು ಆ ಕೆಲಸ ಮಾಡಲಿಲ್ಲ. ನ್ಯಾಷನಲ್ ಪಾರ್ಟಿಯೇ ಮತ್ತೆ ಅಧಿಕಾರಕ್ಕೆ ಬರುವತನಕ ಕಾದರು. ನಂತರ ಸರ್ಕಾರದ ಲೋಪಗಳನ್ನು ಎತ್ತಿ ತೋರಿದರು. ನ್ಯಾಷನಲ್ ಪಾರ್ಟಿಯ ಸರ್ಕಾರಕ್ಕೆ ಒಂದು ವರ್ಷವಾಗುತ್ತಿದ್ದಂತೆ, ಸಂಜಯ್ ಸರ್ಕಾರ್ ತಮ್ಮ ಹೊಸ ಪಕ್ಷವನ್ನು ಹುಟ್ಟುಹಾಕಿದರು. ಅದಕ್ಕೆ ಮಾತೃಭೂಮಿ ಎಂದು ಹೆಸರಿಟ್ಟರು. ಸಂಜಯ್ ಸರ್ಕಾರ್ ಜತೆ ಹೋರಾಟದ ಉದ್ದಕ್ಕೂ ಜತೆಗಿದ್ದ ಚಿದಾನಂದ ಪಾಂಡೆಯನ್ನು ಪಕ್ಷದ ಅಧ್ಯಕ್ಷರೆಂದು ಘೋಷಿಸಿದರು.
ನೆನ್ನೆಯಷ್ಟೇ ಬಿಡುಗಡೆಯಾದ ಜೋಗಿಯವರ ಕಾದಂಬರಿ “ಹಸ್ತಿನಾವತಿ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಚಿತ್ರಜಗದೊಳಗೊಂದು ಮಿಂಚಿನ ಸಂಚಾರ-ನಮ್ಮ ಶಂಕರ

ಜನಸಾಮಾನ್ಯರು ಇಂದಿಗೂ ನಿಗೂಢವೆಂದು ಭಾವಿಸುವ ಶಂಕರ್ ನಾಗ್ ಸಾವಿನ ಸುತ್ತ ಹುಟ್ಟಿಕೊಂಡ ಅನೂಹ್ಯ ಪ್ರಶ್ನೆಗಳಿಗೆ ವಿವಿಧ ದೃಷ್ಟಿಕೋನಗಳ ಮೂಲಕ ಉತ್ತರಿಸಲು ಪ್ರಯತ್ನಿಸಿದ್ದಾರೆ. ವರುಷಗಳಿಗನುಗುಣವಾಗಿ ಜೋಡಿಸಲ್ಪಟ್ಟ ಶಂಕರ್ ನಾಗ್ ಚಿತ್ರಗಳು, ಅವುಗಳ ಹಿಂದಿರುವ ಕಹಾನಿ, ಪ್ರಮುಖ ಹಾಡುಗಳು, ಅನಂತ್ ನಾಗ್, ರಮೇಶ್ ಭಟ್ ಆದಿಯಾಗಿ ವಿವಿಧ ನಟರೊಂದಿಗಿನ ಕೆಲಸಗಳು ಹಾಗೂ ಬಾಂಧವ್ಯ ಹೀಗೆ ಅನೇಕ ಮಾಹಿತಿಗಳು ದಾಖಲಾಗಿರುವ ಪರಿಯೇ ಈ ಪುಸ್ತಕದ ಹೈಲೈಟು.
ಸತೀಶ ಬಳೆಗಾರ ಬರೆದ ‘ಶಂಕರ ನಾಗ್ The Legend’ ಕೃತಿಯ ಕುರಿತು ರಾಮ್‌ ಪ್ರಕಾಶ್‌ ರೈ ಬರಹ

Read More

ಮಿಲ್ಟ್ರಿ ಟ್ರಂಕೊಳಗಿನ ಕಥೆಗಳು….

ಇಲ್ಲಿ ಅಧಿಕಾರ ಕೇಂದ್ರವಿರುವ ದಕ್ಷಿಣದ ಕರ್ನಾಟಕದ ಎದುರು, ಉತ್ತರ ಕರ್ನಾಟಕ ವಿಶಿಷ್ಟವಾದ ಭಾಷೆಯನ್ನಾಗಲಿ ಅನುಭವವನ್ನಾಗಲಿ ವೈಭವೀಕರಿಸುವುದಿಲ್ಲ, ಇಲ್ಲವೇ ಕೀಳೀಕರಿಸುವುದಿಲ್ಲ. ತನ್ನ ಪಾಲಿಗೆ ಕನ್ನಡ ನಾಡಿನ ಬದುಕೆಲ್ಲ ಒಂದೇ ಎಂಬ ಸಮದರ್ಶಿಯಾದ ದೃಷ್ಟಿಕೋನವು ಇಲ್ಲಿ ಕೆಲಸಮಾಡುತ್ತದೆ. ಹೀಗಾಗಿ ಇಲ್ಲಿನ ಸ್ಮೃತಿಚಿತ್ರಗಳು ರೋಚಕವಾದ ಅನುಭವವನ್ನು ಮಂಡಿಸಿ ಓದುಗರನ್ನು ರಂಜಿಸುವುದಕ್ಕೆ ಉತ್ಸುಕವಾಗುವುದಿಲ್ಲ. ಎಲ್ಲ ಭಾಗದ ಜೀವನದಲ್ಲಿರುವ ವಿಷಾದಕರ ದುರಂತಗಳನ್ನು ದಾಖಲಿಸುತ್ತವೆ. ಜನರ ಹಸಿವು ಬಡತನ ದುಡಿಮೆ ಹೋರಾಟ ಜೀವಂತಿಕೆಗಳನ್ನು ತಾಳ್ಮೆಯಿಂದ ಘನತೆಯಿಂದ ಕಾಣಿಸುತ್ತವೆ.
ಡಾ. ಲಕ್ಷ್ಮಣ ವಿ.ಎ. ಬರಹಗಳ ಸಂಕಲನ “ಮಿಲ್ಟ್ರಿ ಟ್ರಂಕು”ಕ್ಕೆ ರಹಮತ್‌ ತರೀಕೆರೆ ಬರೆದ ಮುನ್ನುಡಿ

Read More

ಮನುಷ್ಯ ಲೋಕದ ಸಂಕಟಗಳು ಕಥೆಗಳಾದ ಪರಿ

ಇಲ್ಲಿನ ಕಥೆಗಳಲ್ಲಿ ಬರುವ ‘ಪರಸು, ತೇಜು ಮತ್ತು ಸಂಜು ಪಾತ್ರಗಳು ಒಂದು ಹೊಸ ನೆಲೆಗಟ್ಟಿನಲ್ಲಿ ನಿಲ್ಲುತ್ತವೆ. ಇವರೆಲ್ಲಾ ಬದುಕಿನ ಹೊಸ ಸಮಸ್ಯೆಯೊಂದರ ಪ್ರತಿರೂಪದಂತೆ ನಿಲ್ಲುತ್ತಾರೆ. ಮುಗಿಲ ದುಃಖ ಮತ್ತು ಹುಚ್ಚು ಕಥೆಗಳು ತುಂಬಾ ಭಾವನಾತ್ಮಕವಾಗಿವೆ. ನಿಮ್ಮ ಮನೆಯ ಪಕ್ಕದವರ ಕಥೆಯಷ್ಟೆ ಆಪ್ತವಾಗಿ ಬಂದಿದೆ. ಆಧುನಿಕ ಕಾಲದ ಅನಾಥ ಬದುಕನ್ನು ಈ ಎರಡು ಕಥೆಗಳು ತೆರೆದಿಡುತ್ತವೆ.
ಸದಾಶಿವ ಸೊರಟೂರು ಅವರ ಅರ್ಧ ಮಳೆ ಅರ್ಧ ಬಿಸಿಲು ಕಥಾ ಸಂಕಲನದ ಕುರಿತು ರಾಘವೇಂದ್ರ ಈ. ಹೊರಬೈಲು ಬರಹ

Read More

“ಅಕ್ಷಯ ಕಾವ್ಯ”ಕ್ಕೆ ಒಂದು ಪ್ರವೇಶಿಕೆ

“ನೋಡಿ ಅವ ಎದ್ದೇ ಬಿಟ್ಟ. ನಾನಿನ್ನು ಕೂತಿರಲು ಸಾಧ್ಯವೇ ಇಲ್ಲ” ಎಂಬ ಸಾಲು ಅಥವಾ ಧ್ವನಿಯು ಏನೆಂದರಿಯದೆ ಏಕೆಂದರಿಯದೆ ಕಚ್ಚಾಡುವ ಮಂದಿಯ ತವಕ, ತಲ್ಲಣ ಮತ್ತು ದಮನಕಾರಿ ಮನೋವೃತ್ತಿಯನ್ನು ಬಯಲಿಗೆಳೆಯುತ್ತದೆ. ಈ ಕಾವ್ಯಕ್ಕೆ ಮನುಷ್ಯರ ಮನಸ್ಸಿನ ಮೂಲ ರಾಗ ಭಾವಗಳ ಕುರಿತು ವಿವಿಧ ನೆಲೆಗಳಲ್ಲಿ ಚಿಂತನೆಗೊಳಪಡಿಸುವ ಧ್ವನಿ ಪ್ರಾಪ್ತವಾಗಿದೆ. ಇಂಗ್ಲೆಂಡಿನಿಂದ ತಂದ ಮಿರಮಿರ ಮಿಂಚುವ ಸ್ವಚ್ಛ ಬೂಟುಗಳು ಊರಿನ ಕೊಳೆತ ಸಸ್ಯಾವಳಿಯ, ನೊಣ ಹಾರುವ ಗಲೀಜು ಬೀದಿಗೆ ಹೊಂದಲಾರದ ಪರಿಸ್ಥಿತಿಯು ಹಳ್ಳಿ ನಗರಗಳ ನಡುವಿನ ಬಿರುಕನ್ನು ಒಂದೇ ಮಾತಿನಲ್ಲಿ ವಿವರಿಸುತ್ತದೆ.
ಕೆ.ವಿ. ತಿರುಮಲೇಶರ ‘ಅಕ್ಷಯ ಕಾವ್ಯ’ ಕೃತಿಯ ಕುರಿತು ಡಾ. ಸುಭಾಷ್‌ ಪಟ್ಟಾಜೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ