Advertisement

Category: ದಿನದ ಪುಸ್ತಕ

ಮುಸ್ಲಿಮರ ಆತಂಕ ಮತ್ತು ಅನಿಶ್ಚಿತ ಭವಿಷ್ಯ

ಗಜಾಲಾ ವಹಾಬ್ ಬರೆದ ಈ ಪುಸ್ತಕದಲ್ಲಿ ಚಿಂತನಶೀಲ ಬರಹಗಳಿವೆ.  ಇಸ್ಲಾಮಿನ ಧಾರ್ಮಿಕ ರಚನೆ-ನೀತಿನಿಯಮಗಳ ಇತಿಹಾಸವನ್ನು ಆಳವಾಗಿ ಶೋಧಿಸುತ್ತ ಪ್ರವಾದಿಯವರ ಮರಣಾನಂತರ ಖಲೀಫರ ಕಾಲದಿಂದ ಧಾರ್ಮಿಕ ಏಕಸ್ವಾಮ್ಯಕ್ಕಾಗಿ   ಶಿಯಾ ಸುನ್ನಿಗಳ ನಡುವಿನ ಮತಬೇಧಗಳು, ಕುಲೀನ ಆಶ್ರಫ್, ಸೈಯದ್ ಮತ್ತು ಪಠಾಣರ ನಡುವಿನ ಶ್ರೇಣೀಕರಣಗಳು ಮುಸ್ಲಿಮ್ ಸಮಾಜವನ್ನು ಒಳಗಿನಿಂದಲೇ ಹೇಗೆ ಶಿಥಿಲಗೊಳಿಸಿದವು ಎಂದು ದಾಖಲಿಸುತ್ತಾರೆ. ಡಾ. ಎಸ್. ಸಿರಾಜ್ ಅಹ್ಮದ್‍ ಲೇಖನ ಇಲ್ಲಿದೆ. 

Read More

ದೇವಕಿ ಜೈನ್ ಆತ್ಮಕತೆಯ ಕೆಲವು ಪುಟಗಳು

ಮೈಸೂರು ನಾಗರಿಕ ಸೇವೆಯ ಪ್ರೊಬೇಷನರಿ ಕಲಿಕೆಯಲಿದ್ದಾಗ, ಅಪ್ಪ ಕುದುರೆ ಸವಾರಿ ಕಲಿತಿದ್ದರು. ಈ ಕತೆಯನ್ನು ಹೇಳುತ್ತ ಹೇಳುತ್ತ ಅಮ್ಮ ನಗುತ್ತಿದ್ದಳು. ‘ನೋಡು, ನಾನು ಅವರನ್ನು ಮೊದಲು ಹರಿವಾಣದಲ್ಲಿ ತುಂಬಿದ್ದ ನೀರಿನಲ್ಲಿ ನೋಡಿದ್ದೆ’. ಸಾಮಾನ್ಯವಾಗಿ ಆ ಕಾಲದಲ್ಲಿ ಸಾಂಪ್ರದಾಯಿಕ ಮದುವೆಗಳಲ್ಲಿ ಸಂಬಂಧಗಳು ಮಧುರವಾಗಿರುವುದು ಅಪರೂಪ. ಆದರೆ ನನ್ನ ಅಪ್ಪ ಅಮ್ಮನ ಸಂಬಂಧ ಬಹಳ ಮಧುರವಾಗಿ ಆರಂಭವಾಗಿ, ಅವರ ಬದುಕಿನುದ್ದಕ್ಕೂ ಮಧುರವಾಗಿಯೇ ಸಾಗಿತು. ದೇವಕಿ ಜೈನ್ ಅವರ ಆತ್ಮಕತೆ ‘ದ ಬ್ರಾಸ್ ನೋಟ್‍ ಬುಕ್’ ಅನ್ನು ಕೋಡಿಬೆಟ್ಟು ರಾಜಲಕ್ಷ್ಮಿ ‘ಹಿತ್ತಾಳೆ ಬಣ್ಣದ ಪುಸ್ತಕ’ ಎಂಬ ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದು, ಆ ಪುಸ್ತಕದ ಕೆಲವು ಪುಟಗಳು ಇಲ್ಲಿವೆ.

Read More

ಆನೆಗಳ ಮನೋಲೋಕವನ್ನು ಸೆರೆಹಿಡಿಯುವ ವಿಸ್ಮಯಗಳು

ಈ ಕೃತಿಯಲ್ಲಿ’ರಾಜನ ಸಿಟ್ಟಿಗೆ ಪಟ್ಟದಾನೆಗಳು ಬಲಿ’ ಎಂಬ ಬರಹವಂತೂ ನನ್ನನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟಿತು.  ಪಾಕಿಸ್ತಾನದ ಮೃಗಾಲಯವೊಂದರಲ್ಲಿದ್ದ ಆನೆಯನ್ನು ಆನ್ಲೈನ್ ಅಭಿಯಾನ ಮಾಡಿ ಬಿಡಿಸಿದ್ದು,  ನಂತರ ಬಿಡುಗಡೆಗೊಂಡ ಕಾವಾನನ್ ಅನ್ನುವ ಆನೆ ಕಾಂಬೋಡಿಯಾದ ಆನೆಗಳ ಜೊತೆಗೆ ಸೊಂಡಿಲು ತಾಗಿಸಿ ಹರ್ಷ ವ್ಯಕ್ತಪಡಿಸಿದ್ದು ಇವೆಲ್ಲವೂ ಭಾವುಕ ಆನೆಗಳ ಮನೋಲೋಕವನ್ನೆ ಪರಿಚಯಿಸುತ್ತವೆ.   ಆನೆಗಳೇ ಮನುಷ್ಯರನ್ನು ಹೆಚ್ಚಾಗಿ ಹಚ್ಚಿಕೊಳ್ಳುತ್ತವೆ. 
ಐತಿಚಂಡ ರಮೇಶ್ ಉತ್ತಪ್ಪರ ‘ಆನೆ ಲೋಕದ ವಿಸ್ಮಯ’ ಕೃತಿಯ ಕುರಿತು ಸುಮಾವೀಣಾ ಬರಹ

Read More

ಪೂರ್ವಕ್ಕೆ ಒಂದು ಅಪೂರ್ವ ಪಯಣ

ನಿಡಿತವಾದ ಕತೆಯ ಹಂದರವಿರುವ ಈ ಕೃತಿಯು ಒಂದು ತಾತ್ವಿಕ ಪ್ರಬಂಧದ ಹಾಗೆಯೆ ಇದೆ. ಅದು ಎತ್ತುವ ಬಹುಮುಖ್ಯ ಪ್ರಶ್ನೆಗಳು ಚರಿತ್ರೆ, ಬರಹ, ಆತ್ಮ ಜಿಜ್ಞಾಸೆ ಇವುಗಳಿಗೆ ಸಂಬಂಧಪಟ್ಟಿವೆ. ಸಂಘ, ಪಯಣ ಇವೆಲ್ಲವು ನಾವು ಕಟ್ಟಿಕೊಳ್ಳುವ ರಚನೆಗಳಲ್ಲವೆ? ಎಲ್ಲರಿಗೂ ಸ್ವಂತದ ಉದ್ದೇಶವಿರುವುದಾದರೆ ಪಯಣಕ್ಕೆ ಇರುವ ಉದ್ದೇಶವೇನು? ಸಂಘವೆಂದರೆ ಏನು? ಕಟ್ಟಳೆಗಳು ಹೇಗೆ ರಚನೆಯಾಗುತ್ತವೆ? ನಿರೂಪಕನು ಸಂಘದ ನಿಯಮಗಳನ್ನು ಮುರಿದರೂ ಅವನಿಗೆ ಶಿಕ್ಷೆ ಇಲ್ಲ. ಅವನು ಹೇಳಲು ಹೊರಟಿರುವ ಕತೆಗೆ ಎಷ್ಟೊಂದು ಎಳೆಗಳಿವೆಯಲ್ಲ?
ಕೆ. ಪ್ರಭಾಕರನ್‌ ಅನುವಾದಿಸಿದ ಜರ್ಮನಿಯ ಹರ್ಮನ್‌ ಹೇಸ್‌ ಬರೆದ ಕಾದಂಬರಿ ‘ಪೂರ್ವದೆಡೆಗಿನ ಪಯಣ’ ಕೃತಿಗೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

ಶಿಶಿರ ಮಾಸದಲ್ಲಿ ಕವಿತೆಯ ಓದು

ನೆರೂಡನ ಪ್ರಸಿದ್ಧ ಮಾತುಗಳು ಇಲ್ಲಿ ನೆನಪಾಗುತ್ತಿವೆ ‘ವಾಸ್ತವವಾದಿಯಲ್ಲದ ಕವಿ ಸತ್ತಿರುತ್ತಾನೆ. ಕೇವಲ ವಾಸ್ತವವಾದಿಯಾದ ಕವಿಯೂ ಸತ್ತಿರುತ್ತಾನೆ. ಕೇವಲ ವಿಚಾರ ಮಾತ್ರವೇ ಆಗಿರುವ ಕವಿಯನ್ನು ಮೂರ್ಖರು ಮಾತ್ರ ಅರ್ಥಮಾಡಿಕೊಳ್ಳುತ್ತಾರೆ! ಇದೂ ಕೂಡ ವಿಷಾದದ ಸಂಗತಿ’. ಡಾ. ಅರುಂಧತಿ ಅವರ ಕವಿತೆಗಳೂ ಇಂತಹ ತೊಡಕುಗಳನ್ನು ದಾಟಿ, ಜಟಿಲತೆ, ಆರ್ಭಟ, ರೊಚ್ಚು ಹಾಗೂ ಪ್ರತೀಕಾರದ ಸೋಂಕಿಲ್ಲದೆ, ಸರಳತೆಯಲ್ಲಿ ಅರಳಿವೆ. ಇಲ್ಲಿ ‘ಸರಳತೆ’ ಎಂದರೆ ಸರಳೀಕರಿಸಿದ್ದು ಎನ್ನುವ ಅರ್ಥದಲ್ಲಿ ಅಲ್ಲ! ಅನುಕಂಪ-ಕ್ರೌರ್ಯ, ನಂಬಿಕೆ-ದ್ರೋಹ ಇವುಗಳೆಲ್ಲದರ ಸಂಘರ್ಷ.
ಡಾ. ಅರುಂಧತಿಯವರ ಚೊಚ್ಚಲ ಕವನ ಸಂಕಲನ ‘ಜೀವ ಜಾಲದ ಸಗ್ಗ’ಕ್ಕೆ ಜಿ ವಿ ಆನಂದಮೂರ್ತಿ ಬರೆದ ಮುನ್ನುಡಿನೆರೂಡನ ಪ್ರಸಿದ್ಧ ಮಾತುಗಳು ಇಲ್ಲಿ ನೆನಪಾಗುತ್ತಿವೆ ‘ವಾಸ್ತವವಾದಿಯಲ್ಲದ ಕವಿ ಸತ್ತಿರುತ್ತಾನೆ. ಕೇವಲ ವಾಸ್ತವವಾದಿಯಾದ ಕವಿಯೂ ಸತ್ತಿರುತ್ತಾನೆ. ಕೇವಲ ವಿಚಾರ ಮಾತ್ರವೇ ಆಗಿರುವ ಕವಿಯನ್ನು ಮೂರ್ಖರು ಮಾತ್ರ ಅರ್ಥಮಾಡಿಕೊಳ್ಳುತ್ತಾರೆ! ಇದೂ ಕೂಡ ವಿಷಾದದ ಸಂಗತಿ’. ಡಾ. ಅರುಂಧತಿ ಅವರ ಕವಿತೆಗಳೂ ಇಂತಹ ತೊಡಕುಗಳನ್ನು ದಾಟಿ, ಜಟಿಲತೆ, ಆರ್ಭಟ, ರೊಚ್ಚು ಹಾಗೂ ಪ್ರತೀಕಾರದ ಸೋಂಕಿಲ್ಲದೆ, ಸರಳತೆಯಲ್ಲಿ ಅರಳಿವೆ. ಇಲ್ಲಿ ‘ಸರಳತೆ’ ಎಂದರೆ ಸರಳೀಕರಿಸಿದ್ದು ಎನ್ನುವ ಅರ್ಥದಲ್ಲಿ ಅಲ್ಲ! ಅನುಕಂಪ-ಕ್ರೌರ್ಯ, ನಂಬಿಕೆ-ದ್ರೋಹ ಇವುಗಳೆಲ್ಲದರ ಸಂಘರ್ಷ.
ಡಾ. ಅರುಂಧತಿಯವರ ಚೊಚ್ಚಲ ಕವನ ಸಂಕಲನ ‘ಜೀವಜಾಲದ ಸಗ್ಗ’ಕ್ಕೆ ಜಿ ವಿ ಆನಂದಮೂರ್ತಿ ಬರೆದ ಮುನ್ನುಡಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ