Advertisement

Category: ದಿನದ ಪುಸ್ತಕ

ಕವಿತೆಯೂ ಉಪ್ಪು ನೀರಲ್ಲಿ ಹಾಕಿದ ಮಾವಿನ ಮಿಡಿ ಹೃದಯ

ಸದ್ಯ ಬಹಳ ದಿನಗಳಿಂದ ನನ್ನ ಅಂತರಂಗಕ್ಕೆ ಸುರಿದುಕೊಂಡ ಕವಿತಾ ಅವರ ಕವಿತೆಗಳು ಕೊಟ್ಟ ಸಂವೇದನೆಗಳಿಗೆ ಇಲ್ಲಿ ಶಬ್ದ ರೂಪ ಕೊಡಲು ಕೂತಿದ್ದೇನೆ. ಕಳೆದ ಮೂವತ್ತು ವರ್ಷಗಳಿಂದ ಕೇವಲ ಕವಿತೆಗಳನ್ನೆ ನಚ್ಚಿಕೊಂಡು ಕೂತ ನನಗೆ ಚೆನ್ನಾಗಿ ಬರೆವ ಹೊಸಬರ ಪದ್ಯಗಳು ಅವು ಪಠ್ಯವಾಗೇ ಕಾಣಿಸುತ್ತದೆ. ಗೋಚರಿಸದ ಲೋಕವೊಂದು ನನಗೆ ನೀಡಬಹುದಾದ ಅಸೀಮ ಅನುಭವಗಳಿಗೆ ಕಾಯುತ್ತಲೇ ಓದುತ್ತೇನೆ. ಕವಿತಾ ಹೆಗಡೆ ಅವರ ಇಲ್ಲಿನ ರಚನೆಗಳು ನನಗೆ ಹೊಸ ಪಠ್ಯವಾಗೇ ಅನುಭವಕ್ಕೆ ಬಂದವು.
ಕವಿತಾ ಹೆಗಡೆ ಅಭಯಂ ಅವರ “ಮಂಜಿನ ಮನೆ ಹೊಕ್ಕ ಮನ” ಕವನ ಸಂಕಲನಕ್ಕೆ ವಾಸುದೇವ ನಾಡಿಗ್‌ ಬರೆದ ಮುನ್ನುಡಿ

Read More

ಕಡಲು ನೋಡಲು ಹೋದವಳ ನವಿರು ಭಾವಗಳು

ಮರುದಿನ ಬೆಳಗಾದರೂ ಆ ಚೀತ್ಕಾರ ನನ್ನ ಕಿವಿಯಲ್ಲಿ ಇನ್ನೂ‌ ಮೊರೆದಂತಾಗುತ್ತಿತ್ತು, ಜಿಎಸ್ಎಸ್ ಅವರ ಕಾಣದ ಕಡಲಿನಂತೆ. ಕಾಲು ಸಾವಕಾಶವಾಗಿ ಆ ರೂಮಿನತ್ತ ಚಲಿಸಿದವು. ಮೆಲ್ಲನೆ ಬಾಗಿಲು ಬಡಿದು ಒಳ ಸರಿದೆ. ಒಂದು ಬದಿಗೆ ಸರಿದು ಮಲಗಿದ್ದ ಅಜ್ಜಿ ಸದ್ದಿಗೆ ಬೆಚ್ಚಿ ಬಿದ್ದವರಂತೆ ತಿರುಗಲು ಪ್ರಯತ್ನಿಸಿದರು, ವಿಚಿತ್ರ ವಾಸನೆಗೆ ಹೊಟ್ಟೆ ತೊಳಸಿದಂತಾಯಿತು. ತುಂಬಾ ಕಷ್ಟದಿಂದ ವಾಂತಿಯಾಗದಂತೆ ತಡೆದುಕೊಂಡೆ. ಒಂದು ಅಪನಂಬಿಕೆಯ ಎಳೆಯನ್ನು ಮಾತಲ್ಲಿಟ್ಟುಕೊಂಡೇ ಅಜ್ಜಿ ಮೇಜಿನ‌ ಮೇಲಿದ್ದ ಮುಸಂಬಿ ಕಡೆ ಕೈ ತೋರಿಸಿ “ಅದರ ಸಿಪ್ಪೆ ಬಿಡಿಸಿ ಕೊಡುತ್ತೀಯಾ?” ಕೇಳಿದರು.
ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ

Read More

ಸ್ತ್ರೀ ಸಂವೇದನೆಯ ಸರಳ ನಿರೂಪಣೆ

ಮಹಾಭಾರತದ ಪ್ರಮುಖ ಪಾತ್ರವಾದ ಗಾಂಧಾರಿಯ ದುಗುಡ, ಯಾತನೆ, ಮನದ ಅಂತರಂಗವನ್ನು ಸುಂದರವಾಗಿ ಅಭಿವ್ಯಕ್ತಿಸುವ ಅದ್ಭುತ ಪುಸ್ತಕವನ್ನು ಹೊರತರುತ್ತಿದ್ದಾರೆ. ಪುರಾಣಪ್ರಿಯರಾದವರಿಗೆ “ಗಾಂಧಾರಿ “ಎಂಬ ಆ ವಿಶಿಷ್ಟ ಭೂಮಿಕೆಯನ್ನು ಲೇಖಕಿ ದಿವ್ಯಾ ಹೇಗೆ ಪ್ರಸ್ತುತಪಡಿಸಿರಬಹುದು ಎಂಬ ಕುತೂಹಲವಿದೆ. ಅವರ ಕುತೂಹಲಕ್ಕೆ ತಣ್ಣೀರೆರಚದೇ ಅದ್ಭುತವಾಗಿ “ಮಿಂಚದ ಮಿಂಚು ” ಮೂಡಿ ಬಂದಿದೆ. ಸಾಮಾನ್ಯವಾಗಿ ಗಾಂಧಾರಿ ಮಹಾಭಾರತದಲ್ಲಿ ದುರಂತ ನಾಯಕಿಯಾಗಿ, ನಿಸ್ಸಹಾಯಕ ಮತ್ತು ಹತಾಶ ವ್ಯಕ್ತಿತ್ವದವಳಾಗಿ ಕಾಣಸಿಗುತ್ತಾಳೆ. ಅದನ್ನು ದಿವ್ಯಾ ತೆರಿದಿರಿಸಿದ ಬಗೆ ಅನನ್ಯ. ದಿವ್ಯಾಶ್ರೀಧರ್  ರಾವ್ ಅವರ ಹೊಸ ಕಿರುಕಾದಂಬರಿಗೆ ಜಗದೀಶ್ ಶೆಟ್ಟಿ ಬರೆದ ಮುನ್ನುಡಿ ಇಲ್ಲಿದೆ.

Read More

ಮಣ್ಣಿಗೆ ಮರಳಿದ ನೆಮ್ಮದಿ ವೀರರು

ಚೀನಾದಲ್ಲಿ ಬಿಂಗ್ ಲಾಂಗ್ ಹುಡುಕುತ್ತಾ ಕ್ಷಿಯಾಂಗ್ಟನ್ ತಲುಪಿದ್ದೆ. ಆದರೆ ಅದು ಬಿಂಗ್‌ಲಾಂಗ್ ಮಾರಾಟದ ಪ್ರದೇಶ ಮಾತ್ರವಾಗಿತ್ತು. ಯಾರನ್ನು ಕೇಳಿದರೂ ‘ಅಡಿಕೆ ಬೆಳೆಯುವ ಪ್ರದೇಶ ಹೈನಾನ್; ಹೆಚ್ಚಿನ ಮಾಹಿತಿಗೆ ನೀವು ಅಲ್ಲಿಗೇ ಹೋಗಬೇಕು’ ಎನ್ನುತ್ತಿದ್ದರು. ಹಾಗಾಗಿ ಚೀನಾದಲ್ಲಿ ಅಡಿಕೆಯ ಮಾಹಿತಿ ಸಂಗ್ರಹದ ಸಾಹಸ ಅರ್ಧದಲ್ಲಿಯೇ ನಿಂತಿತ್ತು. ಪರಿಸ್ಥಿತಿ ಹೀಗಿದ್ದಾಗ ಅಚಾನಕ್ಕಾಗಿ ಸಿಕ್ಕ ಅವಕಾಶವನ್ನು ತಪ್ಪಿಸಿಕೊಳ್ಳುವುದಿದೆಯೇ?
ಬಾಲಚಂದ್ರ ಸಾಯಿಮನೆ ಬಿಂಗ್‌ಲಾಂಗ್‌ ಮತ್ತು ಲಂಬನಾಗ್‌’ ಕೃಷಿ ಪ್ರವಾಸ ಕಥನಗಳ ಪುಸ್ತಕದ ಒಂದು ಲೇಖನ ನಿಮ್ಮ ಓದಿಗೆ

Read More

ಸರಳ ವಡ್ಡಾರಧನೆ ಎಂಬೊಂದು ಕೈದೀವಿಗೆ

ವಡ್ಡಾರಾಧನೆಯಲ್ಲಿ ಬರುವ ಜನಜೀವನ, ಜಾತಿವ್ಯವಸ್ಥೆ, ಸಮಾಜದಲ್ಲಿ ಸ್ತ್ರೀಯರ ಸ್ಥಾನಮಾನ, ಗ್ರಾಮ ಮತ್ತು ಪಟ್ಟಣದ ವರ್ಣನೆ, ತಿಂಡಿತಿನಿಸುಗಳು, ಬಹು ಮಹಡಿ ಕಟ್ಟಡದ ಬೀದಿಗಳು, ವೇಶ್ಯೆಯರ ಬೀದಿಯವರ್ಣನೆ, ಅಂಗಡಿ ಮುಂಗಟ್ಟುಗಳು ಇವೆಲ್ಲಾ ಆ ಕಾಲದ ಒಂದು ವ್ಯವಸ್ಥೆಯನ್ನು ಕಣ್ಣಿಗೆ ಕಟ್ಟುವಂತೆ ವರ್ಣಿಸುತ್ತವೆ. ಇವುಗಳನ್ನೆಲ್ಲಾ ಅನುವಾದಿಸಿರುವಲ್ಲಿ ಮೂಲದ ಶಬ್ಧದ ಮಿತಿಯನ್ನು ದಾಟದಿರುವದನ್ನು ಕಾಣಬಹುದಾಗಿದೆ. ಡಾ. ಕಬ್ಬಿನಾಲೆ ವಸಂತ ಭಾರದ್ವಾಜರು ಇಲ್ಲಿ ಭಾಷೆಯನ್ನು ದುಡಿಸಿಕೊಳ್ಳುವ ರೀತಿ ಮನೋಜ್ಞವಾಗಿದೆ ಎನ್ನುತ್ತ ಸರಳ ವಡ್ಡಾರಧನೆ ಕುರಿತ ಅನಿಸಿಕೆಯನ್ನು ನಾರಾಯಣ ಯಾಜಿ ಅವರು ಇಲ್ಲಿ ಪ್ರಸ್ತುತಪಡಿಸಿದ್ದಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ