Advertisement

Category: ದಿನದ ಪುಸ್ತಕ

ಒಂದೊಂದು ತಲೆಗೂ ಒಂದೊಂದು ಬೆಲೆ

ಈವರೆಗೂ ಅವರು ಇಂಟರ್‍ವ್ಯೂ ಪ್ಯಾನಲ್‍ಗಳಲ್ಲಿ ಕುಳಿತು ಸಂದರ್ಶನ ತೆಗೆದು ಕೊಂಡವರೇ ಹೊರತು ಸಂದರ್ಶನ ಕೊಟ್ಟವರಲ್ಲ. ಅದೂ, ಹೆಚ್ಚಾಗಿ ಇಂಜಿನಿಯರಿಂಗ್ ಡಿಪಾರ್ಟಮೆಂಟ್‍ನ ಕೊನೆಯ ಹಂತದ ಇಂಟರ್‍ವ್ಯೂಗಳಿಗೆ ಎಚ್ ಆರ್ ಪ್ರತಿನಿಧಿಸುವ ಪ್ಯಾನಲ್‍ನ ಸದಸ್ಯರಾಗಿ. ಇಂಜಿನಿಯರಿಂಗ್ ಡಿಪಾರ್ಟಮೆಂಟ್‍ನ ಸೀನಿಯರ್ ಮ್ಯಾನೇಜರ್‍ಗಳು ತಮ್ಮ ಸುದೀರ್ಘ ಪ್ರಶ್ನೋತ್ತರಗಳನ್ನು ಮುಗಿಸಿದ ಮೇಲೆ ತಮ್ಮ ಸರದಿಬಂದಾಗ ಒಂದೆರಡು ಎಚ್‍ಆರ್ ಪ್ರಶ್ನೆಗಳನ್ನು ಕೇಳಿ, “ದ ಕ್ಯಾಂಡಿಡೇಟ್ ಹ್ಯಾಸ್ ರೀಸನಬಲ್ ಕಮ್ಯುನಿಕೇಶನ್ ಸ್ಕಿಲ್ಸ್”
ಎಂ.ಆರ್. ದತ್ತಾತ್ರಿ ಅವರ “ಒಂದೊಂದು ತಲೆಗೂ ಒಂದೊಂದು ಬೆಲೆ” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಡುಂಡಿರಾಜ್ ಪುಸ್ತಕದ ಹನಿಗಳ ಕಂಪು

‘ಹನಿಗವನ ಅಂದರೇನು? ಹಿಡಿಯಲ್ಲಿ ಇಡಿ
ಅದರ ದೇಹ ಚಿಕ್ಕದು, ಆತ್ಮ ಕಿಡಿನುಡಿ’ ಎಂಬ ಸಾಲುಗಳಂತೆ  ಸಾಮಾನ್ಯವಾಗಿ ಹನಿಗವನಗಳು ಹೆಚ್ಚಾಗಿ ಏಳು ಅಥವಾ ಎಂಟು ಸಾಲುಗಳನ್ನು ಮೀರುವುದಿಲ್ಲ. ಅದಕ್ಕಿಂತ ಉದ್ದವಾದ ಕವನಗಳನ್ನು ಹನಿಗವನ ಗಳೆಂದು ಕರೆದರೆ ತಪ್ಪಾಗುತ್ತದೆ. ಏಕೆಂದರೆ ಹನಿಗವನಗಳ ಪ್ರಧಾನ ಲಕ್ಷಣವೆ ಸಂಕ್ಷಿಪ್ತತೆ. ಗ್ರೀಕ್ ಮತ್ತು ಲ್ಯಾಟಿನ್ ಭಾಷೆಯಿಂದ ಇಂಗ್ಲಿಷ್‍ಗೆ ಬಂದ ಕಿರುಗವನದ ಒಂದು ಶೈಲಿ ಎಪಿಗ್ರಾಂ. ಇದು ಕನ್ನಡದ ಹನಿಗವನವನ್ನು ಹೋಲುತ್ತದೆ.  ಏನೇ ಆಗಲಿ, ಆಕಾರ ಸಾಧ್ಯವಾದಷ್ಟು ಚಿಕ್ಕದಾಗಿರುವುದು ಮುಖ್ಯ. ಚುಟುಕು ಕವಿ ಡುಂಡಿರಾಜ್‌ ಬರೆದ “ಹನಿಗವನ; ಏನು? ಏಕೆ? ಹೇಗೆ?” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಎ.ಎನ್.‌ ಪ್ರಸನ್ನ “ಅಲೆಗಳು” ಕಾದಂಬರಿಗೆ ಎಂ. ಎಸ್ . ಆಶಾದೇವಿ ಮುನ್ನುಡಿ

ಇಲ್ಲಿಂದ ಮುಂದಿನ ಗೋವಿಂದಪ್ಪನವರ ಸಂಬಂಧವು ವಿಸ್ತಾರಗೊಳ್ಳುತ್ತಾ ಹೋಗುತ್ತದೆ. ಅದಕ್ಕೆ ಈ ಸಂಬಂಧ ಎಷ್ಟು ಕಾರಣ ಎನ್ನುವುದು ಕಾದಂಬರಿಯಲ್ಲಿ ಎಲ್ಲೂ ಪ್ರಸ್ತಾಪವಾಗುವುದಿಲ್ಲ. ಆದರೆ, ವೈದ್ಯರ ಹತ್ತಿರ ಹೋದ ಗೋವಿಂದಪ್ಪನವರಿಗೆ ಇನ್ನಿರುವುದು ಎರಡೋ ಮೂರೋ ವರ್ಷವೋ ಎನ್ನುವುದು ತಿಳಿದಾದ ಮೇಲೆ, ಗೋವಿಂದಪ್ಪನವರು ಬಲುಬೇಗ ಅದನ್ನು ಸತ್ಯವಾಗಿ ಒಪ್ಪಿಕೊಂಡದ್ದೇ ಹಕ್ಕಿಯಂತೆ ಹಗುರವಾಗುತ್ತಾ ಹೋಗುವುದು ಮಾತ್ರ ನಮ್ಮಲ್ಲಿ ಬೆರಗನ್ನೂ ಸಂತೋಷವನ್ನೂ ಉಂಟುಮಾಡುತ್ತದೆ. ಸಾವನ್ನು ಘನತೆಯಿಂದ ಒಪ್ಪುವುದು ಹುಲುಮಾನವರಿಗೆ ಅಸಾಧ್ಯ ಎನ್ನುವ ನಮ್ಮ ರೂಢಿಗತ ನಂಬಿಕೆಯನ್ನೇ ಗೋವಿಂದಪ್ಪ ತಿರುವುಮುರುವು ಮಾಡುತ್ತಾರೆ.
ಎ.ಎನ್. ಪ್ರಸನ್ನ ಹೊಸ ಕಾದಂಬರಿ “ಅಲೆಗಳು” ಗೆ ಎಂ.ಎಸ್. ಆಶಾದೇವಿ ಬರೆದ ಮುನ್ನುಡಿ

Read More

ಎಂಬತ್ತರ ದಶಕದ ಮಹತ್ವದ ಸಾಹಿತ್ಯ

ವಿಮರ್ಶಾ ಕ್ಷೇತ್ರದಲ್ಲಿ ಕಣ್ಣನ್ನು ಸೆಳೆಯುವಂತಹ ಬೆಳವಣಿಗೆ ಆಗಿದೆ. ಸೃಜನಶೀಲ ಸಾಹಿತ್ಯದ ಹಿಂದೆಯೂ ಪ್ರಜ್ಞಾಪೂರ್ವಕ ಚಿಂತನೆ ಇರುವುದು ಅನಿವಾರ್ಯವಾದ ಯುಗದಲ್ಲಿ ಸಾಹಿತ್ಯ ವಿಮರ್ಶೆ ಬೆಳೆದಷ್ಟೂ ಸೃಜನಶೀಲ ಸಾಹಿತ್ಯಕ್ಕೂ ಲಾಭ. ಜಿ.ಎಚ್. ನಾಯಕ, ಕೆ.ವಿ. ನಾರಾಯಣ, ಎಚ್.ಎಸ್. ರಾಘವೇಂದ್ರರಾವ್, ರಾಜೇಂದ್ರ ಚನ್ನಿ, ಡಿ.ಆರ್. ನಾಗರಾಜ ಮೊದಲಾದವರ ವಿಮರ್ಶೆಯ ಬರಹಗಳನ್ನು ಓದಿದಾಗ ವಿಮರ್ಶೆಯ ಉಪಕರಣಗಳು ಎಷ್ಟು ಸೂಕ್ಷ್ಮವಾಗಿವೆ ಎನ್ನುವುದು ಸಂತೋಷವನ್ನುಂಟು ಮಾಡುತ್ತದೆ. ಹಲವೊಮ್ಮೆ ಈ ವಿಶ್ಲೇಷಣೆಯಲ್ಲಿ ಬೌದ್ಧಿಕ ಅಂಶ ತಾನೇತಾನಾಗಿ, ರಸಾ ಸ್ವಾದನೆ ಹಿಂದುಳಿಯುತ್ತಿದೆಯೋ ಎಂದು ಆತಂಕವಾಗುತ್ತದೆ.
ಪ್ರೊ. ಎಲ್.ಎಸ್. ಶೇಷಗಿರಿರಾವ್ ಬರೆದ “ಆಧುನಿಕ ಕನ್ನಡ ಸಾಹಿತ್ಯ” ಕೃತಿಯಿಂದ ಒಂದು ಲೇಖನ ನಿಮ್ಮ ಓದಿಗೆ

Read More

ಎಂದಿಗೂ ಸಲ್ಲುವ ಕನಸಿನ ನೆಲೆ-ಹಿನ್ನೆಲೆ

ಈ ಕಾದಂಬರಿಯಲ್ಲಿ ಯೋಧ, ರಾಜನೀತಿಜ್ಞ, ನಟ-ವಿಟ, ವಿಪ್ರ, ವರ್ತಕ, ಶ್ರಮಿಕ, ಶ್ರಮಣ, ಗೃಹಸ್ಥ-ಗೃಹಿಣಿ ಎಲ್ಲರಲ್ಲಿಯೂ ತಮ್ಮ-ತಮ್ಮ ನೆಲೆ, ನಿಲವು, ಬೆಳಸು-ಕನಸುಗಳೆಲ್ಲದಕ್ಕೆ ಹಿಮ್ಮೇಳವಾದ ಧರ್ಮ, ಸಂಸ್ಕೃತಿ, ಕಲೆಗಳನ್ನು ಒಂದು ಸೂರಿನಡಿ ಕಾಯ್ದಿಡುವ ರಾಷ್ಟ್ರಪ್ರಜ್ಞೆಯ ಪಸೆಯನ್ನು ಕಾಣುವ ಹಂಬಲವಿದೆ. ಹಾಗೆಂದು ಇದು ಸಮಾಜ-ರಾಜಕೀಯ-ಧರ್ಮಗಳ ಗಡಸು ಮುದ್ದೆಯಲ್ಲ; ಸಂಸ್ಕೃತಿಯ ಸಂವೇದನೆಯಲ್ಲಿ, ಸಾರ್ವತ್ರಿಕವಾದ ಜೀವನತತ್ತ್ವ-ಕಲಾತತ್ತ್ವಗಳ ನೆಲಗಟ್ಟು-ಸೂರುಗಳ ನಡುವೆ ಬೆಳೆದ ಕಾದಂಬರೀವಧುವಿನ ಯಾತ್ರೆ.
ಶತಾವಧಾನಿ ಡಾ. ಗಣೇಶ್‌ ಬರೆದ “ಮಣ್ಣಿನ ಕನಸು” ಕಾದಂಬರಿಯ ಕುರಿತು ನೀಲಕಂಠ ಕುಲಕರ್ಣಿ ಲೇಖನ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ