ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯರ ರಂಗಾಂತರಂಗ…
“ಕಥನದ ಉತ್ತರಾರ್ಧದಲ್ಲಿ ಲಕ್ಷ್ಮೀಶರು ತನ್ನ ರಂಗಾನುಭವಾಧಾರಿತ ರಂಗ ಚಿಂತನೆಗಳನ್ನು ಸರಳವಾದ ಭಾಷೆಯಲ್ಲಿ ಮಂಡಿಸಿದ್ದು, ಚರ್ಚಿಸಬೇಕಾದ, ಚಿಂತನೀಯವಾದ ಅನೇಕ ವಿಚಾರಗಳು ಅಲ್ಲಿ ಬಂದಿವೆ. ಇಡಿಯ ಆಟಕ್ಕೆ ಆಧಾರವಾಗಿ ನಿರ್ವಹಣೆ, ಹಾಡು, ಕುಣಿತಗಳನ್ನು ನಡೆಸುವ ಮೆರೆಸುವ ಹಿಮ್ಮೇಳದ ಮಹತ್ವ ಸಾಮಾನ್ಯ ಪ್ರೇಕ್ಷಕನಿಗೆ ಅರಿವಿಗೆ ಬರದಿರುವ ಸಂಗತಿ, ಹಲವು ವಾದಕರ ವಾಣಿಯಾಗಿ ಇಲ್ಲಿ ಪ್ರಸ್ತಾವಿತವಾಗಿದೆ. ಅದು ನಿಜ ಕೂಡ.”
ಲಕ್ಷ್ಮಿ ಮಚ್ಚಿನ ಬರೆದ ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯರ ರಂಗಾಂತರಂಗಕ್ಕೆ ಡಾ. ಎಂ.ಪ್ರಭಾಕರ ಜೋಷಿ ಬರೆದ ಮುನ್ನುಡಿ