Advertisement

Category: ದಿನದ ಪುಸ್ತಕ

ಧನಪಾಲ ನಾಗರಾಜಪ್ಪ ಅನುವಾದಿಸಿದ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ

“ಸೃಜನಶೀಲ ಸಾಹಿತ್ಯದ ಭಾಗವಾಗಿ ಪರಿಗಣಿಸಲ್ಪಡುವ ಅಬಾಬಿಗಳು ಅಂತಃಕರಣ, ಶಾಂತಿ ಮತ್ತು ಸೌಹಾರ್ದತೆಯ ಮೈಲಿಗಲ್ಲುಗಳಾಗಿವೆ. ಆತ್ಮನೀರಿಕ್ಷಣೆ ಮಾದರಿಯ ಆತ್ಮಾವಲೋಕನ ಮತ್ತು ಆತ್ಮಾನುಸಂಧಾನದ ಮಾದರಿಗಳಾದ ಅಬಾಬಿಗಳು ಹೊಸ ಚೈತನ್ಯಶೀಲ ಬದುಕಿಗೆ ದಾರಿದೀಪಗಳಾಗಿವೆ. ಆತ್ಮೋನ್ನತಿಗೆ ಮತ್ತು ಆತ್ಮಗೌರವದ ಉತ್ಕರ್ಷಕ್ಕೆ ಹುರಿಗೊಳಿಸುವ ಮಾನವೀಯ ಜಿಜ್ಞಾಸೆಗಳಿಂದ ಆವೃತ್ತವಾದ ಅಬಾಬಿಗಳು ಸಾರ್ವಕಾಲಿಕ ಮೌಲ್ಯಗಳನ್ನು ಗರ್ಭಿಕರಿಸಿಕೊಂಡಿವೆ.”
ತೆಲುಗಿನ ಕವಿ ಷೇಕ್ ಕರೀಮುಲ್ಲಾ ಬರೆದ ಅಬಾಬಿಗಳನ್ನು ಧನಪಾಲ ನಾಗರಾಜಪ್ಪ ‘ಬದರ್ʼ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದಾರೆ. ಈ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ ನಿಮ್ಮ ಓದಿಗೆ.

Read More

ಭಾಗ್ಯರೇಖಾ ದೇಶಪಾಂಡೆ ಕಥಾಸಂಕಲನಕ್ಕೆ ಡಾ. ವಸುಂಧರಾ ಭೂಪತಿ ಬರೆದ ಮುನ್ನುಡಿ

“ಕನ್ನಡದಲ್ಲಿ ಇಪ್ಪತ್ತನೆಯ ಶತಮಾನದ ಮೊದಲ ದಶಕದಲ್ಲಿ ಪಂಜೆ ಮಂಗೇಶರಾಯರು ತಮ್ಮ ಸಣ್ಣಕಥೆಗಳನ್ನು ಸುವಾಸಿನಿ ಪತ್ರಿಕೆಯಲ್ಲಿ ಪ್ರಕಟಿಸುವ ಮೂಲಕ ಕಥಾಸಾಹಿತ್ಯ ಪರಂಪರೆಗೆ ನಾಂದಿ ಹಾಡಿದರು. ಪಂಜೆಯವರ ಸಮಕಾಲೀನರಾಗಿ ಸಣ್ಣಕಥೆ ಮತ್ತು ಕಾದಂಬರಿಗಳನ್ನು ರಚಿಸಿದವರು ನಂಜನಗೂಡು ತಿರುಮಲಾಂಬಾ ಮತ್ತು ಆರ್. ಕಮಲಮ್ಮನವರು, ತಿರುಮಲಾಂಬ ಅವರ ಸಚ್ಚರಿತ ಸುಧಾರ್ಣವ ಪೌರಾಣಿಕ ಕಥಾಸಂಕಲನದಿಂದ ಪ್ರಾರಂಭವಾಗುವ ಕನ್ವರೆ ಮಹಿಳಾ ಕಥಾಸಂಕಲನಕ್ಕೆ ಶತಮಾನ ಪೂರೈಸಿರುವುದು ಸ್ಮರಣೀಯ.”
ಭಾಗ್ಯರೇಖಾ ದೇಶಪಾಂಡೆ ಬರೆದ ‘ಪಾನಿಪೂರಿʼ ಹೊಸ ಕಥಾ ಸಂಕಲನಕ್ಕೆ ಡಾ. ವಸುಂಧರಾ ಭೂಪತಿ ಬರೆದ ಮುನ್ನುಡಿ

Read More

ಸುಧಾ ಆಡುಕಳ ಕಥಾಸಂಕಲನಕ್ಕೆ ಡಾ. ಎಲ್.ಸಿ. ಸುಮಿತ್ರಾ ಮಾತುಗಳು

“‘ಹೊಳೆ’ ಕಥೆಯಲ್ಲಿ ಕಾಡುನಾಶದಿಂದ ಹೊಳೆ ಬತ್ತಿಹೋಗುವ ಪರಿಸರದ ಚಿಂತನೆಯಿದೆ. ‘ಸತ್ಯದ ಬದುಕು’ ವ್ಯಕ್ತಿ ಸ್ವಾತಂತ್ರ್ಯವನ್ನು ಕೌಟುಂಬಿಕ ಸಂಬಂಧಗಳು ಮೊಟಕು ಮಾಡುವ, ನಿಯಂತ್ರಿಸುವ ರೀತಿಯನ್ನು ಹೇಳುತ್ತಲೇ ಅಲಕಾ ಎಂಬ ಹುಡುಗಿ ಮನೆಯಲ್ಲೂ, ಕೆಲಸ ಮಾಡುವ ಜಾಗೆಯಲ್ಲೂ ಹೇಗೆ ಒಂದು ಪರಿಕರವಾಗಿ ಬಳಸಲ್ಪಡುತ್ತಾಳೆ… ಕೊನೆಗೆ ಹೇಗೆ ಅವಳು ಭಾವನಾತ್ಮಕ ಬಂಧಗಳಿಂದ ಹೊರಬರುವ ಬಗೆಯನ್ನು ಚಿತ್ರಿಸುತ್ತದೆ. ‘ಕಥೆಯನ್ನರಸುತ್ತಾ’ ಎಂಬ ಕಥೆ ಹೊಸಬಗೆಯ ನಿರೂಪಣೆಯನ್ನು ಹೊಂದಿದೆ.”
ಸುಧಾ ಆಡುಕಳ ಅವರ ಚೊಚ್ಚಲ ಕಥಾಸಂಕಲನ ‘ಒಂದು ಇಡಿಯ ಬಳಪʼದ ಕುರಿತು ಡಾ. ಎಲ್.ಸಿ. ಸುಮಿತ್ರಾ ಅಭಿಪ್ರಾಯ

Read More

ವೈ.ಎಸ್. ಹರಗಿ ಕಾದಂಬರಿಗೆ ಕೇಶವ ಮಳಗಿ ಬರೆದ ಮುನ್ನುಡಿ

“ಕಾದಂಬರಿಯ ಬಹುಮುಖ್ಯ ಗುರಿಯಿರುವುದು ದೇವದಾಸಿ ಪದ್ಧತಿಯ ಅನಿಷ್ಟವನ್ನು ಚರ್ಚೆಯ ಮುನ್ನೆಲೆಗೆ ತರುವುದು. ಕೆಳಜಾತಿಗಳ ದೇವಳ ಪ್ರವೇಶ ಹಾಗೂ ಕೆರೆ ನೀರ ಬಳಕೆಯಂತಹ ಮೂಲಭೂತ ಹಕ್ಕುಗಳ ವಿಷಯವನ್ನು ಪ್ರಸ್ತಾಪಿಸುವುದು. ಇಂತಹ ಜಟಿಲ ವಿಷಯಗಳ ಪ್ರಸ್ತಾಪನೆ ಮಾತ್ರ ಸಾಕಾಗುವುದಿಲ್ಲವೆಂಬ ಅರಿವಿನ ಕಾದಂಬರಿಕಾರ ಪರಿವರ್ತನೆಯ ಮುನ್ನೆಲೆ ನಾಯಕರನ್ನೂ ಅದನ್ನು ಬಯಸುವ ಸಮಾಜದಿಂದಲೇ ಸೃಷ್ಟಿಸಿದ್ದಾರೆ.”
ವೈ.ಎಸ್. ಹರಗಿಯವರ ‘ಕೆಂಡದ ನೆರಳು’ ಕಾದಂಬರಿಗೆ ಕೇಶವ ಮಳಗಿ ಬರೆದ ಮುನ್ನುಡಿ

Read More

ಶೋಭಾ ನಾಯಕ ಅನುವಾದಿಸಿದ ಕವನ ಸಂಕಲನಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಬರೆದ ಮಾತುಗಳು

“ವರ್ತಮಾನ ಕಾಲದ ಭಾರತವು ಬಗೆ ಬಗೆಯ ಬಿಕ್ಕಟ್ಟುಗಳಿಂದ ನರಳುತ್ತಿದೆ. ದ್ವೇಷ, ನಿರಾಶೆ, ಸಿನಿಕತನ, ಕೋಮುವಾದ, ಜಾತೀಯತೆ, ಮತಾಂಧತೆ, ಹೋರಾಟ ಮತ್ತಿತರ ಸಮಸ್ಯೆಗಳ ನಡುವೆ ಭಾರತೀಯರು ನಲುಗಿ ಹೋಗುತ್ತಿದ್ದಾರೆ. ಇಂಥ ಸಂಕೀರ್ಣ ಪರಿಸ್ಥಿತಿಯಲ್ಲಿ ಗೋಬಿಂದ ಪ್ರಸಾದರ ಕವಿತೆಗಳು ಆಶಾವಾದ, ನಂಬುಗೆ, ಆಪ್ತತೆ ಮತ್ತು ಪ್ರೀತಿಯನ್ನು ಸೃಷ್ಟಿಸಲು ನೆರವಾಗುತ್ತವೆ. ನಮ್ಮನ್ನು ಆವರಿಸಿಕೊಂಡಿರುವ ಮಡಿ ಮತ್ತು ಮೈಲಿಗೆಗಳೆರಡನ್ನೂ ಕಳೆದು ಹಾಕಲು ಅವರ ಕವಿತೆಗಳು ತವಕಿಸುತ್ತವೆ.”
ಶೋಭಾ ನಾಯಕ ಅನುವಾದಿಸಿದ ಹಿಂದಿ ಕವಿ ಗೋಬಿಂದ ಪ್ರಸಾದರ ಆಯ್ದ ಪದ್ಯಗಳ ‘ವರ್ತಮಾನದ ಧೂಳುʼ ಸಂಕಲನಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಬರೆದ ಮಾತುಗಳು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ