Advertisement

Category: ದಿನದ ಪುಸ್ತಕ

ಬದುಕೆಂಬ “ಕೆಂಡದ ರೊಟ್ಟಿ”ಯ ಕುರಿತು…

ಇಂಗ್ಲೆಂಡಿನಿಂದ ಬೆಂಗಳೂರಿಗೆ ಮಕ್ಕಳೊಂದಿಗೆ ಬಂದಿಳಿದ ರಮ್ಯಾಳ ಮೂಲಕ ಅನಾವರಣಗೊಳ್ಳುವ ಈ ಕಾದಂಬರಿ ಶೀರ್ಷಿಕೆಯನ್ವಯ ರೊಟ್ಟಿಯನ್ನು ಸುಡುವುದರೊಂದಿಗೆ ಮುಕ್ತಾಯವಾಗುತ್ತದೆ. ಕಾದಂಬರಿಯ ಶೀರ್ಷಿಕೆ ಭಿನ್ನವಾಗಿದೆಯಲ್ಲಾ ಎನ್ನುತ್ತಲೇ ಕೈಗೆತ್ತಿಕೊಂಡಾಗ ಕಾದಂಬರಿಯಲ್ಲಿ ಬೇರೆ ಬೇರೆ ವಸ್ತುಗಳಿರಬಹುದೇ? ಅಥವಾ ರಮ್ಯಾಳೊಬ್ಬಳ ಕಥಾನಕವೇ ಅನ್ನಿಸಿ ಕಾದಂಬರಿ ಓದುತ್ತಾ ಹೋದಂತೆ ಏಕಕಾಲಕ್ಕೆ ರಮ್ಯಾ ಜೊತೆಗೆ ಅವರಮ್ಮ ಸತ್ಯಳ ಕತೆಯಾಗಿರುವುದು ವಿಶೇಷ ಅನ್ನಿಸುತ್ತದೆ.
ಉಷಾ ನರಸಿಂಹನ್‌ ಅವರ ಕೆಂಡದ ರೊಟ್ಟಿ ಕಾದಂಬರಿಯ ಕುರಿತು ಸುಮಾವೀಣಾ ಬರಹ

Read More

ಇಲ್ಲಿಯದ್ದೇ ಸೊಗಡನ್ನು ಮುಡಿಗೇರಿಸಿಕೊಂಡ ಕವಿತೆಗಳು

ಈ ಪುಸ್ತಕದಲ್ಲಿರುವ ‘ಒಂದು ಪ್ರೇತ ಕಥೆ’  ಎಂಬ ಕವಿತೆಯಲ್ಲಿ ಕವಿಗಳು ಓದಬೇಕಾದುದನ್ನು ಸೂಚ್ಯವಾಗಿ, ವಿಡಂಬನಾತ್ಮಕವಾಗಿ ಬರೆಯಲಾಗಿದೆ. ಇಲ್ಲಿ ಎಲ್ಲ ಕವಿತೆಗಳು ತಮ್ಮ ತಮ್ಮ ವೈವಿಧ್ಯತೆಯಿಂದ ಮನಸೂರೆಗೊಳ್ಳುತ್ತವೆ ಯೋಚಿಸುವಂತೆ ಮಾಡುತ್ತವೆ ಖುಷಿಯನ್ನೂ ಕೊಡುತ್ತವೆ ಹಾಗೆ ಬರೆಯುತ್ತ ಹೋದರೆ ಎಲ್ಲ ಕವಿತೆಗಳ ಬಗೆಗೂ ಬರೆಯಬೇಕಾಗುತ್ತದೆ, ಯಾವುದನ್ನೂ ಬಿಡುವಂತೇಯೇ ಇಲ್ಲ.
ತೇರಳಿ. ಎನ್. ಶೇಖರ್ ಅವರು ಅನುವಾದಿಸಿದ ಮಲಯಾಳಂ ಕವಿ  ಸಚ್ಚಿದಾನಂದನ್ ಅವರ ‘ಮರೆತಿಟ್ಟ ವಸ್ತುಗಳು’ ಕವನ ಸಂಕಲನದ ಕುರಿತು ಎಚ್.ಎಸ್. ಮುಕ್ತಾಯಕ್ಕ ಬರಹ

Read More

ವಿಶಿಷ್ಟ ಅನುಭವಗಳ ಮೊತ್ತ ‘ಅಂಗೈ ಅಗಲದ ಆಕಾಶ’

ಇಂಥ ಸ್ಮೃತಿಚಿತ್ರಗಳಲ್ಲಿ ಸತ್ಯದ ಪರಿಧಿಯಿಂದ ಹೊರಹೋಗಲು ಸಾಧ್ಯವಿಲ್ಲ, ಅಂದರೆ ಶುದ್ಧ ನೆನಪುಗಳು ಯಾವಾಗಲೂ ವಾಸ್ತವದಲ್ಲಿ ಜೀವಿಸಿರುತ್ತವೆ ಹಾಗಾಗಿ ಬರೆಯುವಾಗ ನಿರೂಪಕಿಯೂ ವಾಸ್ತವದಲ್ಲೇ ಜೀವಿಸಿರಬೇಕಾಗುತ್ತದೆ, ಕಲ್ಪನೆ ಇಲ್ಲಿ ಕೆಲಸ ಮಾಡದು. ಆಗ ಎಲ್ಲ ಕೋನದಿಂದ ನಿಂತು ನೋಡುವ ಆಯಾಮಗಳು ಕಳೆದುಹೋಗುತ್ತವೆ. ಆದರೆ ಸುಮಿತ್ರಾ ಅವರು ಕೆಲವು ಘಟನೆಗಳನ್ನು ಇಂದಿನ ಸಂದರ್ಭದಲ್ಲಿಟ್ಟು ತೂಗಿ ನೋಡುತ್ತಾರೆ. ಹಾಗಾಗಿ ಸನ್ನಿವೇಶಗಳಿಗೊಂದು ಬೇರೆಯದೇ ಆದ ತೂಕ ಪ್ರಾಪ್ತವಾಗುತ್ತದೆ.
ಡಾ. ಎಲ್. ಸಿ. ಸುಮಿತ್ರಾ ಅವರ ಸ್ಮೃತಿ ಚಿತ್ರಗಳ ಸಂಕಲನ “ಅಂಗೈ ಅಗಲದ ಆಕಾಶ”ದ ಕುರಿತು ಲೇಖಕಿ ಸುನಂದಾ ಕಡಮೆ ಬರಹ

Read More

ಅಬ್ದುಲ್ ರಶೀದ್ ಕೃತಿಗೆ ಭಾರತಿ ಬಿ.ವಿ. ಬರೆದ ಮುನ್ನುಡಿ

“ರಶೀದ್ ಬರಹಗಳನ್ನು ಮೊದಲಲ್ಲಿ ಓದುವಾಗ ಒಂದು ಪ್ರಶ್ನೆ ಸದಾ ಕಾಡುತ್ತಿತ್ತು ‘ಅದು ಹೇಗೆ ಇವರ ಬದುಕಿನಲ್ಲಿ ನನಗೆ ಅಸಾಧ್ಯವಾದ ಏನೆಲ್ಲ ಆಗುತ್ತದಲ್ಲ’ ಎಂದು. ಅದು ಕೇವಲ ನನ್ನ ಪ್ರಶ್ನೆಯಲ್ಲದೇ ಬೆರಗು ಕೂಡಾ ಆಗಿತ್ತು! ಬದುಕನ್ನು ತುಂಬ ಕಠೋರವಾಗಿ… ಅಂದರೆ ಅಗತ್ಯಕ್ಕಿಂತ ಹೆಚ್ಚು ಕಠೋರವಾಗಿ ಬದುಕುವ ಅಗತ್ಯವಿಲ್ಲ ಮತ್ತು ಸಣ್ಣದೊಂದು ಕಾರುಣ್ಯದ ಹನಿ ಜಗತ್ತಿಗೆ ಚುಮುಕಿಸಲು ಹೆಚ್ಚೇನೂ ಶ್ರಮ ವಹಿಸಬೇಕಿಲ್ಲ ಎಂದು ಅರ್ಥವಾದ ನಂತರ, ಅವರ ಕಷ್ಟಸುಖ ಕೇಳುತ್ತಲೇ ಎದೆಯಲ್ಲಿ ಕಾರುಣ್ಯ ಮೂಡಿ, ತುಸು ‘ಹೆಚ್ಚು ಮನುಷ್ಯಳಾಗುತ್ತಾ’ ಹೋದೆ ಅನ್ನಬಹುದು”
ಕತೆಗಾರ ಅಬ್ದುಲ್ ರಶೀದ್ ಅವರ ‘ಮೈಸೂರು ಪೋಸ್ಟ್’ ಕೃತಿಗೆ  ಭಾರತಿ ಬಿ.ವಿ. ಬರೆದ ಮುನ್ನುಡಿ

Read More

ಬೊಳುವಾರು ಆತ್ಮಕತೆ ‘ಮೋನು ಸ್ಮೃತಿ’ಯ ಪುಟಗಳು

ಆ ದಿನಗಳಲ್ಲಿ ನನ್ನೂರ ನನ್ನ ಓದುಗರಲ್ಲಿ ನೂರಕ್ಕೆ ತೊಂಬತ್ತೊಂಬತ್ತು ಮಂದಿ ಮುಸ್ಲಿಮೇತರರು. ದುಡ್ಡು ಕೊಟ್ಟು ದಿನಪತ್ರಿಕೆಗಳನ್ನೂ, ವಾರ ಅಥವಾ ಮಾಸ ಪತ್ರಿಕೆ ಗಳನ್ನೂ ತರಿಸಿಕೊಂಡು ಟೀಪಾಯಿಗಳನ್ನು ಚಂದಗಾಣಿಸುತ್ತಿದ್ದವರು ಅವರು ಮಾತ್ರ. ಓದುಗರಲ್ಲಿ ಹೆಚ್ಚಿನವರು ಅಡಿಕೆಭಟ್ಟರುಗಳು. ಹಾಗಾದರೆ, ಅವರೆಲ್ಲರಿಂದ ನನಗೆ ಸಿಗುತ್ತಿದ್ದ ಮೆಚ್ಚುಗೆಗಳೆಲ್ಲವೂ ಮುಸ್ಲಿಮರ ಕಂದಾಚಾರಗಳನ್ನು ಪ್ರಶ್ನಿಸುತ್ತಿರುವುದಕ್ಕೆ ಮಾತ್ರವೆ? ಹಿಂದೂಗಳ ಕಂದಾಚಾರಗಳನ್ನು ಪ್ರಶ್ನಿಸಿದರೆ, ಅವರಿಗೂ ನಾನೊಬ್ಬ ‘ಹರಾಮಿ’ಯಾಗಿ ಕಾಣಿಸಲಾರಂಭಿಸುತ್ತೇನೆಯೆ? ಯಾರಲ್ಲಿ ಕೇಳುವುದು?
ಬೊಳುವಾರು ಮಹಮದ್ ಕುಂಞಿ ಅವರ ಆತ್ಮಕತೆ ‘ಮೋನು ಸ್ಮೃತಿ’ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ