Advertisement

Category: ದಿನದ ಪುಸ್ತಕ

ಅನ್ವೇಷಣೆ ನಿರತ ಅನವರತ ಚಿತ್ತಪಥದ ಕವಿತೆಗಳತ್ತ…

ನಿಜಾರ್ಥದ ಕವಿ ಗೊತ್ತಿರುವುದನ್ನು ವಿವರಿಸುವುದಿಲ್ಲ, ಅರ್ಥಮಾಡಿಕೊಂಡಿದ್ದನ್ನು ಅರ್ಥಮಾಡಿಸುತ್ತಾನೆ. ಅಸ್ತಿತ್ವದ ಹುಡುಕಾಟ ವ್ಯಸನವಾಗುತ್ತ ಪ್ರೇಮ ಕಾಮ ಕೊನೆಗೆ ಸ್ವಾರ್ಥದೊಂದಿಗೂ ತಾದ್ಯಾತ್ಮ ಸ್ಥಾಪಿತವಾಗದ ಸ್ಥಿತಿಯಲ್ಲಿ ಪದರು ಪದರಾಗಿ ವಿಕಸನಗೊಂಡ ಪ್ರಜ್ಞೆ ಕಣ್ಣಾಮುಚ್ಚಾಲೆಯ ದೈನಿಕಗಳಲ್ಲಿ ಲೀನವಾಗುವ ಕ್ರಮವನ್ನು ಕಾಣಿಸುವ ವಿಶಿಷ್ಟ ಕವನಗಳಿವು. ನಾವೇ ಸೃಷ್ಟಿಸಿಕೊಂಡ ನರಕದಲ್ಲಿ ದೂರುಗಳು ತಪ್ಪೊಪ್ಪಿಗೆಯನ್ನು ಧ್ವನಿಸುತ್ತವೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ಇಂದ್ರಕುಮಾರ್ ಎಚ್.ಬಿ. ಅವರ “ಬಾವಿಗ್ಯಾನವ ಮರೆತು” ಕವನ ಸಂಕಲನಕ್ಕೆ ಮಮತಾ ಆರ್. ಬರೆದ ಮುನ್ನುಡಿ

Read More

ಬೆಳದಿಂಗಳಂತೆ ತಾಗುವ ಕಥೆಗಳು

ಇಲ್ಲಿ, ಮಧ್ಯಮ ವರ್ಗದ ಕುಟುಂಬಗಳಲ್ಲಿನ ಹೆಣ್ಣು ಮಕ್ಕಳನ್ನು ಪ್ರತಿನಿಧಿಸುವ ಮತ್ತು ಬದುಕಿನ ಬಗ್ಗೆ ಭವ್ಯ ಕನಸುಗಳನ್ನು ಕಟ್ಟಿಕೊಂಡಿರುವ ‘ಪೂರ್ವಿ’ ಎಂಬ ಮಗುವಿನ ತಾಯಿಯಾದ ನಳಿನಿಯು, ತನ್ನ ಗಂಡ ಅರವಿಂದನ ದೇಹ ಬಯಕೆಯನ್ನು ಈಡೇರಿಸಲು ಪ್ರತಿ ರಾತ್ರಿಯೂ ಹಿಂದೇಟು ಹಾಕುವುದಕ್ಕೆ ಅವರ ಬದುಕನ್ನು ಮುತ್ತಿಕೊಂಡಿರುವ ಆರ್ಥಿಕ ಸಮಸ್ಯೆಗಳೇ ಕಾರಣವಾಗಿರುವುದು ಪರಿಸ್ಥಿತಿಯ ವ್ಯಂಗ್ಯದಂತಿದೆ. ಆದರೆ ಕಡೆಗೂ ನಳಿನಿಯು ಆತನ ದೇಹ ಬಯಕೆಯನ್ನು ಈಡೇರಿಸಲು ಮುಂದಾಗುವ ಸಂದರ್ಭದಲ್ಲಿ ಎದುರಿಸುವ ಸಂದಿಗ್ಧಗಳೇ ಆಕೆ ಗುಲ್ ಮೊಹರ್ ಹುಡುಗನ ಕರಾಳ ಬದುಕಿನೊಂದಿಗೆ ಮುಖಾಮುಖಿಯಾಗುವುದಕ್ಕೆ ಕಾರಣವಾಗುತ್ತದೆ!
ಕಥೆಗಾರ ಅನಿಲ್‌ ಗುನ್ನಾಪೂರ ಬರೆದ “ಕಲ್ಲು ಹೂವಿನ ನೆರಳು” ಕಥಾ ಸಂಕಲನದ ಕುರಿತು ಕಲ್ಲೇಶ್ ಕುಂಬಾರ್ ಬರಹ

Read More

ನಮ್ಮದೇ ಮನೆಯ ಕಥನವೆಂಬಂತೆ ಕಾಡುವ ಕಾದಂಬರಿ

‘ಜೀವಕೊಡಲೇ ಚಹಾ ಕುಡಿಯಲೇ..’ ಎಂಬ ಕಾದಂಬರಿಯು ಮೇಲ್ನೋಟಕ್ಕೆ  ತ್ರಿಕೋನ ಪ್ರೇಮ ಕತೆ  ಅನಿಸಿದರೂ ಇಲ್ಲಿ ಹಲವು ಆಯಾಮಗಳಿವೆ. ಕೊನೆಯವರೆಗೂ, ತನ್ನದೂ ಪ್ರೀತಿಯೇ ಎಂದು ಅರಿಯರಲಾರದೇ ತಲ್ಲಣಗೊಳ್ಳುವ ಹುಡುಗನ ಪಾಡು ಇಲ್ಲಿದೆ.  ಗಾಲಿಬ್ ಕವಿತೆ ಮೂಲಕ ತನ್ನದೇ ಭಾವ ಬೆರೆಸಿ ಶಾಯರಿ ರಚಿಸಿ ಪ್ರೀತಿ ವ್ಯಕ್ತಪಡಿಸುವ ಫಾತಿಮಾ, ಸಲಿಂಗಕಾಮ ಆಯ್ಕೆ ಮಾಡಿಕೊಳ್ಳುವ ದಿಟ್ಟೆ ಚಿತ್ರಾ, ಕೊನೆಗೂ ದಕ್ಕಿದ ಪ್ರೀತಿಯ ಸಾಕ್ಷಾತ್ಕಾರದ ಸನ್ನಿವೇಶಗಳಿವೆ. ಈ ಹಂತದಲ್ಲಿ ಕಾದಂಬರಿಯು  ವಿಭಿನ್ನ ತಿರುವು ಪಡೆದುಕೊಳ್ಳುವುದು.  ಆ ತಿರುವೇನು ಎಂಬುದನ್ನು ಓದುಗರೇ ಕಂಡುಕೊಳ್ಳಬೇಕು. ಕೊಂಕಣಿಯಿಂದ ಕನ್ನಡಕ್ಕೆ ಅನುವಾದಗೊಂಡ ಕಾದಂಬರಿಯ ಕುರಿತು ತಮ್ಮ ಅನಿಸಿಕೆ ಬರೆದಿದ್ದಾರೆ ಜ್ಯೋತಿ ಭಟ್. 

Read More

ಸುಪ್ರೀತ್ ಕೆ.ಎನ್. ಅವರ ‘ಉತ್ತರ’ ಕಾದಂಬರಿಯ ಪುಟಗಳು

ಈ ಬಾರಿಯ ಸಾಕ್ಷಾತ್ಕಾರ ಕಾರ್ಯಕ್ರಮಕ್ಕೆ ಈಗಾಗಲೇ ಅಭ್ಯರ್ಥಿಗಳು ಬಂದಾಗಿದೆ, ಹೊಸದಾಗಿ ಇನ್ಯಾರು ಬರುವುದಿದೆ ಎಂದು ಯೋಚಿಸಿದಾಗ, ಗುರುದೇವರು ಇನ್ನಿಬ್ಬರು ಬರುತ್ತಾರೆ ಎಂದು ಹೇಳಿದ್ದು ನೆನಪಾಯಿತು. ಜಯಕ್ಕನ ಸಮಾಧಿಯಿಂದ ಗುರುದೇವರ ನಿವಾಸಕ್ಕೆ ಮಾತಾಜೀಯವರು ಹೋಗಿ ತಮ್ಮ ಮನಸ್ಸಿನಲ್ಲಿದದ್ದನ್ನು ಹೇಳುವ ಮೊದಲೇ, ‘ದಕ್ಷಿಣ ಕಡೆಯಿಂದ ಒಬ್ಬ ಬರ್ತಾನೆ. ಅವನಿಗೆ ಸಾಧನೆಗಳನ್ನ ಮಾಡಿಸಿ, ಮೌನ ಕಾರ್ಯಕ್ರಮಕ್ಕೆ ತಯಾರು ಮಾಡಬೇಕು. ಅವನ ಬಗ್ಗೆ ನೀವು ವಿಶೇಷವಾಗಿ ಗಮನವಿಡಿ’ ಎಂದು ಹೇಳಿದರು.
ಸುಪ್ರೀತ್ ಕೆ.ಎನ್. ಅವರ ಹೊಸ ಕಾದಂಬರಿ ‘ಉತ್ತರ’ ಬಿಡುಗಡೆಗೆ ಸಿದ್ಧಗೊಳ್ಳುತ್ತಿದ್ದು ಅದರ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಹೋರಾಟದ ಬದುಕಿನ ಹೆಜ್ಜೆ ಗುರುತುಗಳು…

ಗೌಡನ ಮಗ ಮನೆಗೆ ಬಂದು ‘ಬೆಲ್ಲ ಮಾಡಿದ್ದ ದುಡ್ಡು ಕೊಡ್ರಿ, ಇಲ್ಲಂದ್ರ ಅದರ ಬದಲಿಗಿ ಈ ಆಕಳ ಮತ್ತು ಕರಾ ಎಳಕೊಂಡು ಹೋಗ್ತಿನಿ’. ಎಂದೇಳುವ ಮಾತುಗಳಲ್ಲಿ ಜಮೀನ್ದಾರಿಕೆಯ ದರ್ಪದದೊಟ್ಟಿಗೆ ಜಾತಿ ಪ್ರತಿಷ್ಠೆ ಅಹಂಕಾರ ವ್ಯಕ್ತಗೊಂಡಿರುವುದನ್ನು ನೋಡಬಹುದು. ಬಲಿಷ್ಟರಲ್ಲದ ದಲಿತರು ಅನಿವಾರ್ಯವಾಗಿ ಶೋಷಣೆಗೆ ಒಳಗಾಗುತ್ತಾರೆ. ತಮ್ಮ ದುಡಿಮೆಯ ಫಲವನ್ನು ಕೂಡ ದಕ್ಕಿಸಿಕೊಳ್ಳದ ಸ್ಥಿತಿಯಲ್ಲಿ ಅಸ್ಪೃಶ್ಯ ಸಮುದಾಯ ಇದೆ. ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಅಮಾನವೀಯ ಸಂಗತಿಗಳನ್ನು ಕಾಲಾನುಕಾಲಕ್ಕೆ ಪೋಷಿಸುವ ಸಾಂಪ್ರದಾಯಿಕ ಮನಸ್ಥಿತಿಯ ಬಗೆಗೆ ಈ ಕೃತಿಯಲ್ಲಿ ಅನೇಕ ನಿದರ್ಶನಗಳಿವೆ.
ಎಚ್‌.ಟಿ. ಪೋತೆ ಬರೆದ “ಬಯಲೆಂಬೊ ಬಯಲು” ಬಯೋಪಿಕ್‌ ಕಾದಂಬರಿಯ ಕುರಿತು ಪಿ. ನಂದಕುಮಾರ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ