Advertisement

Category: ದಿನದ ಪುಸ್ತಕ

ಗಾಢ ವಿಷಾದದ ನೆರಳಿನಂತಿರುವ ‘…. ಮಳೆಹನಿ’

ಪ್ರಕೃತಿ ಬದುಕು ಮತ್ತು ಕಾವ್ಯದ ನಡುವಿನ ಸಾವಯವ ಸಂಬಂಧದ ತಾತ್ವಿಕ ಜಿಜ್ಞಾಸೆ ಸಂಕಲನದುದ್ದಕ್ಕೂ ಕಾಣುತ್ತದೆ. ಕೆಲವೆಡೆ ಸರಳವೆನಿಸುವ ವಸ್ತು ಮತ್ತು ತಂತ್ರಗಳಿಂದ ಹುಟ್ಟುವ ಪ್ರತಿಮೆಗಳಲ್ಲಿ ಸಂಕೀರ್ಣವಾದ ವಿಷಯಗಳನ್ನು ದಾಟಿಸುವ ಶಕ್ತಿ ಇಲ್ಲಿಯ ಕವನಗಳಲ್ಲಿದೆ ಎನಿಸುತ್ತದೆ. ಭಾಷೆಯೆಂಬುದು ಪ್ರಾಣಘಾತುಕವೆಂಬ ಎಚ್ಚರ ಇಲ್ಲಿಯ ಕವಿತೆಗಳಲ್ಲಿ ಎದ್ದುಕಾಣುತ್ತದೆ. ಇದು ಭಾಷೆಗೆ ಒಂದು ಬಿಗುವು ತಂದಿದೆ.
ಕವಿ ಕಾಜೂರು ಸತೀಶ್ ರವರ “ಕಣ್ಣಲ್ಲಿಳಿದ ಮಳೆಹನಿ” ಕವನ ಸಂಕಲನದ ಕುರಿತು ಡಾ. ಸಿ. ಬಿ. ಐನಳ್ಳಿ ಬರಹ

Read More

ನೆಲವ ಬಿಟ್ಟು ನೀರ ಮೇಲೆ ಇಪ್ಪತ್ತು ದಿನಗಳು

ಬೇಗುವಳ್ಳಿ ಮನೆಯಿಂದ ಹೊರಡುವ ಮೊದಲ ದಿನ ರಾತ್ರಿ ನಾವು ಮನೆಯ ಹೊರಗಿನ ವೆರಾಂಡದಲ್ಲಿಯೇ ಮಲಗಿದ್ದೆವು. ಮನೆ ಬಿಡಲು ಬೆಳಿಗ್ಗೆ ಬೇಗನೆ ಮುಹೂರ್ತವಿತ್ತು, ಅದಕ್ಕಾಗಿ ರಾತ್ರಿಯೇ ಮನೆಯಿಂದ ಹೊರಗೆ ಇರುವಂತೆ ವ್ಯವಸ್ಥೆ ಮಾಡಿದ್ದರೆಂದು ನನಗೆ ನೆನಪು. ಇಂಥ ಸಂದರ್ಭದಲ್ಲಿ ಮನೆಯವರಿಗೆ ಬೇಸರ ಮಾಡುವುದು ಬೇಡವೆಂದು ಅನಂತಮೂರ್ತಿ ಇದನ್ನು ಮೌನವಾಗಿ ಒಪ್ಪಿದ್ದರು.
ಡಾ. ಪೃಥ್ವೀರಾಜ ಕವತ್ತಾರು ನಿರೂಪಣೆಯ ಎಸ್ತರ್ ಅನಂತಮೂರ್ತಿಯವರ ಆತ್ಮಕತೆ ‘ನೆನಪು ಅನಂತ’ ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

Read More

ದಿಟ್ಟ ಮಹಿಳೆಯರ ಹೋರಾಟದ ಪ್ರತಿಮೆ

ಮಹಿಳೆಯರ ಜೀವನದಲ್ಲಿ ಎರಡು ವಿಷಯಗಳು ಸತ್ಯ. ಅದೆಂದರೆ, ಹರಿವ ನದಿಯಂತೆ ಬದುಕುವುದು ಹಾಗೂ ಪುರುಷನಿಗಿಂತ ಹೆಚ್ಚು ಧೈರ್ಯವಾಗಿ ಬದುಕನ್ನು ಎದುರಿಸುವುದು. ಹುಟ್ಟಿದ ಮನೆಯನ್ನೇ ಬಿಟ್ಟು ಬರುವ ಮಹಿಳೆಯರಿಗೆ ಮತ್ತೊಂದು ಊರನ್ನು ಬಿಡುವುದು, ಬೇರೊಂದು ಊರಿನಲ್ಲಿ ನೆಲೆ ನಿಲ್ಲುವುದು ಹೆಚ್ಚು ಕಷ್ಟವಾಗುವುದಿಲ್ಲವೇನೋ. ಹೀಗಾಗಿಯೇ ಅವರು ಅಕ್ಷರಶಃ ಹರಿವ ನದಿಯಾಗುತ್ತಾರೆ. ‘ಹರಿವ ನದಿ’ ಕೃತಿಯು ಮೇಲ್ನೋಟಕ್ಕೆ ಮೀನಾಕ್ಷಿ ಭಟ್ಟರ ಕಥನ ಎನಿಸಿದರೂ, ಇದು ದಿಟ್ಟ ಮಹಿಳೆಯರ ಹೋರಾಟದ ಪ್ರತಿಮೆಯಂತೆ ನಿಲ್ಲುತ್ತದೆ. ತಾವು ಓದಿದ ಕೃತಿಯ ಕುರಿತು ಸುಮನಾ ಲಕ್ಷ್ಮೀಶ್ ಬರೆದ ಬರಹ  ಇಲ್ಲಿದೆ. 

Read More

’ಇಂಗ್ಲಿಷ್ ಸರ್ ಎಷ್ಟು ಹ್ಯಾಂಡ್‌ಸಮ್ ಆಗಿದಾರೆ ನೋಡೆ!’

ಎಸ್ತರ್ ಅನಂತಮೂರ್ತಿಯವರ ಆತ್ಮಕತೆ ‘ನೆನಪು ಅನಂತ’ ಕೃತಿಯಲ್ಲಿ ಎಸ್ತರ್ ಅವರು ತಮ್ಮ ಬದುಕಿನ  ಏಳುಬೀಳುಗಳನ್ನು ಬಹಳ ನಿರ್ಲಿಪ್ತವಾಗಿ ಬರೆದಿದ್ದಾರೆ. ಡಾ. ಪೃಥ್ವೀರಾಜ ಕವತ್ತಾರು ನಿರೂಪಣೆಯ ಪುಸ್ತಕದಲ್ಲಿ ‘ತಾವು ಕೂಡ  ಎಲ್ಲರಂತೆ ಒಬ್ಬ ಗೃಹಿಣಿ’ ಎಂದು ಹೇಳಿಕಂಡರೂ, ಅವರು ಸಾಮಾಜಿಕವಾಗಿಯೂ ಅನೇಕ ಸವಾಲುಗಳನ್ನು ಎದುರಿಸಿದವರು. ಸಾಂಸಾರಿಕವಾಗಿಯೂ ಸಂದಿಗ್ಧ ಸನ್ನಿವೇಶಗಳನ್ನು ದಾಟಿ ಬಂದವರು. ನವಿರು ನಿರೂಪಣೆಯಲ್ಲಿ ಮೂಡಿ ಬಂದ ಈ ಕೃತಿಯ ಕೆಲವು ಪುಟಗಳು ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿವೆ. ಮೊದಲ ಅಧ್ಯಾಯ ಇಲ್ಲಿದೆ. 

Read More

ಮಲ್ಲಪ್ಪ ಫ ಕರೇಣ್ಣನವರ ಪುಸ್ತಕದ ಕುರಿತು ಪ.ನಾ.ಹಳ್ಳಿ. ಹರೀಶ್ ಕುಮಾರ್ ಬರಹ

ಸದಾಕಾಲ ಹೆತ್ತಮ್ಮನ ಸೆರಗಿಡಿದು ಓಡಾಡುತ್ತಿದ್ದ ಲೇಖಕನಿಗೆ ತನ್ನ ಆತ್ಮವಿಶ್ವಾಸ ಹೆಚ್ಚಿಸಿ ಧೈರ್ಯ ತುಂಬಿದ ಮೊದಲ ಕಿರುಪ್ರವಾಸದ ನೆನಪಿನಿಂದ ಪ್ರಾರಂಭವಾಗಿ, ಕ್ರಿಕೆಟ್ ಹುಚ್ಚನ್ನು ಹತ್ತಿಸಿಕೊಂಡು ಸುಲಭಕ್ಕೆ ಸಿಗುವ ತೆಂಗಿನ ಮಟ್ಟಿಯನ್ನೇ ಸಚಿನ್ನನ ಎಂ ಆರ್ ಎಫ್ ಬ್ಯಾಟಾಗಿಸಿಕೊಂಡದ್ದು, ಕ್ರೀಡಾಕೂಟವನ್ನು ಆಯೋಜಿಸಿ ಸಂಗ್ರಹಿಸಿದ್ದ ಬಹುಮಾನದ ಹಣದೊಂದಿಗೆ ಗೆಳೆಯರು ಪರಾರಿಯಾದಾಗ ಬಹುಮಾನಿತ ತಂಡಕ್ಕೆ ಕೂಡಿಟ್ಟಿದ್ದ ಸಗಣಿಯನ್ನೇ ಹರಾಜು ಹಾಕಿ ಹಣ ಹೊಂದಿಸಿ ಊರಿನ ಮರ್ಯಾದೆ ಕಾಪಾಡಿಕೊಂಡಿದ್ದು… ಸೈಕಲ್ ತುಳಿಯುವ ಆಸೆಯಿಂದ ತುಳಿಯಲು ಸೈಕಲ್ ಕೊಡಲು ನಿರಾಕರಿಸಿದ ಸ್ನೇಹಿತನ ಸೈಕಲ್ಲನ್ನು ಕಿಡ್ನಾಪ್ ಮಾಡಿದ ಪ್ರಸಂಗಗಳು ಓದುಗರಲ್ಲಿ ಮಂದಹಾಸವನ್ನು ಮೂಡಿಸುತ್ತವೆ.
ಮಲ್ಲಪ್ಪ ಫ ಕರೇಣ್ಣನವರ “ನಮ್ಮೂರ ಅಗಸ್ಯಾಗ” ಕೃತಿಯ ಕುರಿತು ಪ.ನಾ.ಹಳ್ಳಿ. ಹರೀಶ್ ಕುಮಾರ್ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ