Advertisement

Category: ದಿನದ ಪುಸ್ತಕ

ಆಶಾ ರಘು ಬರೆದ ‘ಮಾಯೆ’ ಕಾದಂಬರಿಯ ತುಣುಕು

ವಿಶಾಲವಾದ ಕೋಣೆ. ಕೆತ್ತನೆಯ ಕುಸುರಿ ಮಾಡಲಾದ ದೊಡ್ಡ ಮಂಚ. ಮೆತ್ತೆ.. ಎರಡು ದೊಡ್ಡ ದೊಡ್ಡ ಗವಾಕ್ಷಿಗಳು. ಅವಕ್ಕೆ ತೆಳುಪರದೆ. ಇನ್ನುಳಿದ ಗೋಡೆಯ ಭಾಗಗಳಲ್ಲಿ ನಾಲ್ಕಾರು ನೃತ್ಯ ಭಂಗಿಗಳ ಚಿತ್ರಪಟಗಳು. ಮೆತ್ತೆಯ ಮೇಲೆ ನನ್ನ ಪಕ್ಕದಲ್ಲಿ ಕುಳಿತು, ನನ್ನ ಕೈಗಳನ್ನು ಅವಳ ಕೈಗಳಲ್ಲಿ ಹಿಡಿದು ಮುಗುಳುನಕ್ಕಳು. ನನಗೆ ಅವಳ ಜಾಗದಲ್ಲಿ ವೈಶಾಲಿಯನ್ನು ಕಲ್ಪಿಸಿಕೊಂಡು ಕಣ್ಣುಗಳಲ್ಲಿ ನೀರು ತುಂಬಿಕೊಂಡುಬಿಟ್ಟಿತು. ಆಶಾ ರಘು ಬರೆದ  ‘ಮಾಯೆ’ ಕಾದಂಬರಿಯ ಒಂದು ಅಧ್ಯಾಯ ಕೆಂಡಸಂಪಿಗೆಯ ಓದುಗರಿಗಾಗಿ ಇಲ್ಲಿದೆ.

Read More

ಸು.ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿಯ ಕೆಲವು ಪುಟಗಳು

ಮಹಾದೇವಿ ಅಡಿಗೆ ಮನೆಯ ಬಾಗಿಲ ಮರೆಯಿಂದಲೇ ಇಣುಕಿ ನೋಡುತ್ತಿದ್ದಳು. ನಿನ್ನೆ ಕೌಶಿಕ ತನ್ನನ್ನು ನುಂಗುವಂತೆ ನೋಡುತ್ತಿದ್ದುದಕ್ಕೂ, ಈಗ ಮಂತ್ರಿ ಮನೆಗೆ ಬಂದಿರುವುದಕ್ಕೂ ಏನೋ ಸಂಬಂಧವಿರಬೇಕೆಂದು ಅವಳಿಗೆ ಸಂದೇಹ ಬಂತು.  ಹೇಗೆ ಮಾತು ಆರಂಭಿಸಬೇಕೆಂದು ತೋಚದೆ ಮಹಾಬಲಯ್ಯ ಚಡಪಡಿಸಿದ. ಆದರೆ ಬಂದಾಗಿದೆ, ಮಾತಾಡಲೇಬೇಕಾಗಿತ್ತು. ರಾಜಾಜ್ಞೆಯನ್ನು ಮಂತ್ರಿಯಾಗಿ ಪಾಲಿಸಲೇ ಬೇಕಾಗಿತ್ತು. -ಸು.ರುದ್ರಮೂರ್ತಿ ಶಾಸ್ತ್ರಿಗಳು  ಬರೆದ ‘ಅಕ್ಕಮಹಾದೇವಿ’ ಹೊಸ ಕಾದಂಬರಿಯ ಒಂದು ಅಧ್ಯಾಯ ಇಲ್ಲಿದೆ. 

Read More

ವಾಸುದೇವ ನಾಡಿಗ್ ಕವನ ಸಂಕಲನದ ಕುರಿತು ಕವಿತಾ ಹೆಗಡೆ ಬರಹ

ನಾಡಿಗರ ಕಾವ್ಯಪ್ರೇಮಕ್ಕೆ ಯಾವ ಸಾಕ್ಷಿಯೂ ಬೇಕಿಲ್ಲ. ಅವರನ್ನು ಓದಿದ ಪ್ರತಿಯೊಬ್ಬನಿಗೂ ಗೊತ್ತು, ಬದುಕನ್ನು ಬಂಧಿಸಿರುವ ಎಲ್ಲ ಭಾವಗಳನ್ನೂ ಧಾರಾಳವಾಗಿ ಸುರಿಸುವ ಈ ಭಾವುಕ ನಿಗೂಢ ಮೌನಕ್ಕೆ ಶರಣಾದರೆ ಮರೆಯಲಾಗದ ಕವನವೊಂದು ಮೈತಳೆಯುವುದು ಖಚಿತ. ಒಂದು ಅನೂಹ್ಯ ವಿಷಾದದಲ್ಲಿ ಮುಳುಗಿದರೆಂದರೆ ಬದುಕಿನ ಪರಮ ಸತ್ಯದ ಮಗ್ಗುಲೊಂದನ್ನು ನಮ್ಮತ್ತ ಹೊರಳಿಸಿಬಿಡುವ ಮಾಯಕಾರ. ಒಲವು ಎದೆಯನ್ನು ಹೊಕ್ಕರೆ ಅದನ್ನು ಮೊಗೆ ಮೊಗೆದು ಇತರರಿಗೆ ಸುರಿವ ಪ್ರೇಮಮಯಿ.
ವಾಸುದೇವ ನಾಡಿಗ್‌ ಬರೆದ ‘ಬಂದರಿಗೆ ಬಂದ ಹಡಗು’ ಕವನ ಸಂಕಲನದ ಕುರಿತು ಕವಿತಾ ಹೆಗಡೆ ಬರಹ

Read More

ಪ್ರೊಫೆಸರ್ ಶಂಭು ಮಹಾಜನ್ ರವರ ಮಂಗಳೂರು ಉಪನ್ಯಾಸವು

ಕಂಪ್ಯೂಟರ್ ಗೆ ಕನ್ನಡ ಕಲಿಸಿದವರೆಂದೇ ಪ್ರಖ್ಯಾತರಾದ ಹಿರಿಯ ವಿದ್ವಾಂಸ ಕೆ.ಪಿ.ರಾವ್ ಅವರು ‘ವರ್ಣಕ’ ಎಂಬ ಹೊಸ ಕಾದಂಬರಿಯೊಂದನ್ನು ಬರೆದಿದ್ದಾರೆ. ಇದರ ಕಥಾ ನಾಯಕ ಪ್ರೊ.ಶಂಭು ಮಹಾಜನ್ ಅವರು ನಡೆಸುವ ಭಾಷಾಜ್ಞಾನದ ಅನ್ವೇಷಣೆಯೇ ಕಾದಂಬರಿಯ ಹೂರಣ. ಅವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಭಾಷಾವಿಜ್ಞಾನದ ಕುರಿತು ನೀಡುವ ಉಪನ್ಯಾಸವು ಕಾದಂಬರಿಯ ಆತ್ಮವೆಂದೇ ಹೇಳಬಹುದು.ಆ ಉಪನ್ಯಾಸದ ಪೂರ್ಣಪಾಠ ನಿಮ್ಮ ಓದಿಗಾಗಿ.

Read More

ಸಂಧ್ಯಾರಾಣಿ ಸಿನಿ ಪುಸ್ತಕಕ್ಕೆ ಅಬ್ದುಲ್‌ ರಶೀದ್‌ ಬರೆದ ಮುನ್ನುಡಿ

ಕಣ್ಣು ಮುಚ್ಚಿಕೊಂಡು ಓದುವ ಹಾಗಿದ್ದರೆ ಸಿನೆಮಾ ನೋಡಬೇಕಾಗಿಲ್ಲ ಅನ್ನುವಷ್ಟು ಕಣ್ಣಿಗೆ ಕಟ್ಟುವ ಬರವಣಿಗೆಗಳು ಅವು. ಬರೀ ಕಣ್ಣಿಗೆ ಮಾತ್ರವಲ್ಲ. ಸಿನೆಮಾದ ಸದ್ದುಗಳನ್ನು ಕಿವಿಗೆ, ಭಾವಗಳನ್ನು ಮನಸ್ಸಿಗೆ, ಕ್ಯಾಮರಾದ ಕೋನಗಳನ್ನು ಮಿದುಳಿಗೆ ಮತ್ತು ಸಿನೆಮಾ ಕೊನೆಗೆ ಉಂಟುಮಾಡುವ ತರ್ಕಗಳನ್ನು ವೈಚಾರಿಕತೆಗೆ ಅಕ್ಷರಗಳಲ್ಲೇ ದಾಟಿಸಿಬಿಡುತ್ತಿದ್ದರು. ಎಲ್ಲೂ ತರ್ಕಗಳಿಲ್ಲ, ತಪ್ಪುವ ಎಳೆಗಳಿಲ್ಲ. ಸಿನೆಮಾ ಹೇಳುವುದನ್ನು ಪರದೆ ಎಳೆದ ಹಾಗೆ ಕ್ವಚಿತ್ತಾಗಿ ಹೇಳಿ ಮುಗಿಸಿ ಮುಂದಿನ ಹದಿನೈದು ದಿನಗಳಿಗಾಗಿ ಕಾಯುವಂತೆ ಮಾಡುತ್ತಿದ್ದರು. ಸಂಪಾದಕನೂ, ಓದುಗರೂ ಏಕಪ್ರಕಾರವಾಗಿ ಕಾಯುತ್ತಿದ್ದ ಕೆಲವೇ ಬರವಣಿಗೆಗಳಲ್ಲಿ ಸಂಧ್ಯಾರಾಣಿ ಅವರದ್ದೂ ಒಂದಾಗಿತ್ತು.
ಎನ್. ಸಂಧ್ಯಾರಾಣಿ ಬರೆದ ‘ಸಿನಿ ಮಾಯಾಲೋಕ’ ಪುಸ್ತಕಕ್ಕೆ ಅಬ್ದುಲ್‌ ರಶೀದ್‌ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ