Advertisement

Category: ದಿನದ ಪುಸ್ತಕ

ಆರ್.ದಿಲೀಪ್ ಕುಮಾರ್ ಹೊಸ ಪುಸ್ತಕದ ಕುರಿತು ರವೀಂದ್ರನಾಯಕ್‌ ಬರಹ

ಹಳೆಗನ್ನಡದ ಪಠ್ಯಗಳನ್ನು ಓದಬೇಕು ಎಂಬ ಆಸೆಗೆ ಪೂರಕವಾಗಿ ದೊರೆತುದು ಎಚ್.ಎಸ್. ವೆಂಕಟೇಶ ಮೂರ್ತಿಯವರ ‘ಕುಮಾರವ್ಯಾಸ ಕಥಾಂತರ’. ಇದು ಕುಮಾರವ್ಯಾಸನ ಕಾವ್ಯಕ್ಕೆ ಹೊಸಬರಿಗೆ ಪ್ರವೇಶ ಮಾಡಲಿಕ್ಕೊಂದು ಸುಲಭದ ದಾರಿ ಅಂತ ಅನ್ನಿಸಿ ಆ ಕೃತಿಯನ್ನು ಓದಿದೆ.  ಓದಿನ ನಂತರ ನಿಜಕ್ಕೂ ನನಗೆ  ಕುಮಾರವ್ಯಾಸ ಹತ್ತಿರನಾದ. ತನ್ನ ಕಾವ್ಯದ ಗುಟ್ಟುಗಳನ್ನು ಅರ್ಥಗಳನ್ನು ನನಗೆ ಈಗ ಬಿಟ್ಟುಕೊಟ್ಟು ನನ್ನ ದಿನನಿತ್ಯದ ಗೆಳೆಯನೇ ಆಗಿದ್ದಾನೆ.
ಆರ್.ದಿಲೀಪ್ ಕುಮಾರ್ ಹೊಸ ಪುಸ್ತಕ ಪಚ್ಚೆಯ ಜಗುಲಿ ಕುರಿತು  ಬರೆದಿದ್ದಾರೆ ರವೀಂದ್ರನಾಯಕ್‌ ಸಣ್ಣಕ್ಕಿಬೆಟ್ಟು 

Read More

ಸ್ಮಿತಾ ಅಮೃತರಾಜ್‌ ಪುಸ್ತಕಕ್ಕೆ ಜಯಶ್ರೀ ಬಿ  ಕದ್ರಿ ಬರೆದ ಮುನ್ನುಡಿ

ಸ್ಮಿತಾರ ಬರಹಗಳು ಕೆಲವೊಮ್ಮೆ ಅಸಹಾಯಕ ಚಿಟ್ಟೆಯೊಂದರ ಫಡಫಡಿಕೆಯಂತೆ, ಕೆಲವೊಮೆ ನದಿಯ ಜುಳುಹುಳು ನಾದದಂತೆ, ಅಂಗಳದಲ್ಲಿ ಬೇರುಬಿಟ್ಟ ಗಿಡವೊಂದು ಸುಗಂಧ ರೂಪದಲ್ಲಾದರೂ ತನ್ನ ಅಂತಃ ಸತ್ವ ಗಾಳಿಯಲ್ಲಿ ತೇಲಿ ಹೋಗಬೇಕೆಂದು ಹಂಬಲಿಸುವಂತೆ, ಸುಡುಕೆಂಡದಲ್ಲಿ ಅಂತರ್ಗತವಾದ ಕಿಚ್ಚಿನಂತೆ, ಕಿರು ತೊರೆಯೊಂದು ನದಿ ರೂಪದಲ್ಲಿ ಹರಿದು ಸಾಗರ ಸೇರುವೆನೆಂದು ಅಚಲ ವಿಶ್ವಾಸದಲ್ಲಿ ಹರಿಯುವಂತೆ ಒಟ್ಟಂದದಲ್ಲಿ ಹೆಣ್ಣಿನ ಧೀ ಶಕ್ತಿಯ ಸಾಮ್ಯ ರೂಪದಲ್ಲಿ ಇವೆ.
ಸ್ಮಿತಾ ಅಮೃತರಾಜ್‌ ಸಂಪಾಜೆ ಬರೆದ ಲಲಿತ ಪ್ರಬಂಧಗಳ ಸಂಕಲನ ‘ನೆಲದಾಯ ಪರಿಮಳ’ಕ್ಕೆ ಜಯಶ್ರೀ ಬಿ ಕದ್ರಿ ಬರೆದ ಮುನ್ನುಡಿ

Read More

ಆಶಾ ರಘು ಬರೆದ ‘ಮಾಯೆ’ ಕಾದಂಬರಿಯ ತುಣುಕು

ವಿಶಾಲವಾದ ಕೋಣೆ. ಕೆತ್ತನೆಯ ಕುಸುರಿ ಮಾಡಲಾದ ದೊಡ್ಡ ಮಂಚ. ಮೆತ್ತೆ.. ಎರಡು ದೊಡ್ಡ ದೊಡ್ಡ ಗವಾಕ್ಷಿಗಳು. ಅವಕ್ಕೆ ತೆಳುಪರದೆ. ಇನ್ನುಳಿದ ಗೋಡೆಯ ಭಾಗಗಳಲ್ಲಿ ನಾಲ್ಕಾರು ನೃತ್ಯ ಭಂಗಿಗಳ ಚಿತ್ರಪಟಗಳು. ಮೆತ್ತೆಯ ಮೇಲೆ ನನ್ನ ಪಕ್ಕದಲ್ಲಿ ಕುಳಿತು, ನನ್ನ ಕೈಗಳನ್ನು ಅವಳ ಕೈಗಳಲ್ಲಿ ಹಿಡಿದು ಮುಗುಳುನಕ್ಕಳು. ನನಗೆ ಅವಳ ಜಾಗದಲ್ಲಿ ವೈಶಾಲಿಯನ್ನು ಕಲ್ಪಿಸಿಕೊಂಡು ಕಣ್ಣುಗಳಲ್ಲಿ ನೀರು ತುಂಬಿಕೊಂಡುಬಿಟ್ಟಿತು. ಆಶಾ ರಘು ಬರೆದ  ‘ಮಾಯೆ’ ಕಾದಂಬರಿಯ ಒಂದು ಅಧ್ಯಾಯ ಕೆಂಡಸಂಪಿಗೆಯ ಓದುಗರಿಗಾಗಿ ಇಲ್ಲಿದೆ.

Read More

ಸು.ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿಯ ಕೆಲವು ಪುಟಗಳು

ಮಹಾದೇವಿ ಅಡಿಗೆ ಮನೆಯ ಬಾಗಿಲ ಮರೆಯಿಂದಲೇ ಇಣುಕಿ ನೋಡುತ್ತಿದ್ದಳು. ನಿನ್ನೆ ಕೌಶಿಕ ತನ್ನನ್ನು ನುಂಗುವಂತೆ ನೋಡುತ್ತಿದ್ದುದಕ್ಕೂ, ಈಗ ಮಂತ್ರಿ ಮನೆಗೆ ಬಂದಿರುವುದಕ್ಕೂ ಏನೋ ಸಂಬಂಧವಿರಬೇಕೆಂದು ಅವಳಿಗೆ ಸಂದೇಹ ಬಂತು.  ಹೇಗೆ ಮಾತು ಆರಂಭಿಸಬೇಕೆಂದು ತೋಚದೆ ಮಹಾಬಲಯ್ಯ ಚಡಪಡಿಸಿದ. ಆದರೆ ಬಂದಾಗಿದೆ, ಮಾತಾಡಲೇಬೇಕಾಗಿತ್ತು. ರಾಜಾಜ್ಞೆಯನ್ನು ಮಂತ್ರಿಯಾಗಿ ಪಾಲಿಸಲೇ ಬೇಕಾಗಿತ್ತು. -ಸು.ರುದ್ರಮೂರ್ತಿ ಶಾಸ್ತ್ರಿಗಳು  ಬರೆದ ‘ಅಕ್ಕಮಹಾದೇವಿ’ ಹೊಸ ಕಾದಂಬರಿಯ ಒಂದು ಅಧ್ಯಾಯ ಇಲ್ಲಿದೆ. 

Read More

ವಾಸುದೇವ ನಾಡಿಗ್ ಕವನ ಸಂಕಲನದ ಕುರಿತು ಕವಿತಾ ಹೆಗಡೆ ಬರಹ

ನಾಡಿಗರ ಕಾವ್ಯಪ್ರೇಮಕ್ಕೆ ಯಾವ ಸಾಕ್ಷಿಯೂ ಬೇಕಿಲ್ಲ. ಅವರನ್ನು ಓದಿದ ಪ್ರತಿಯೊಬ್ಬನಿಗೂ ಗೊತ್ತು, ಬದುಕನ್ನು ಬಂಧಿಸಿರುವ ಎಲ್ಲ ಭಾವಗಳನ್ನೂ ಧಾರಾಳವಾಗಿ ಸುರಿಸುವ ಈ ಭಾವುಕ ನಿಗೂಢ ಮೌನಕ್ಕೆ ಶರಣಾದರೆ ಮರೆಯಲಾಗದ ಕವನವೊಂದು ಮೈತಳೆಯುವುದು ಖಚಿತ. ಒಂದು ಅನೂಹ್ಯ ವಿಷಾದದಲ್ಲಿ ಮುಳುಗಿದರೆಂದರೆ ಬದುಕಿನ ಪರಮ ಸತ್ಯದ ಮಗ್ಗುಲೊಂದನ್ನು ನಮ್ಮತ್ತ ಹೊರಳಿಸಿಬಿಡುವ ಮಾಯಕಾರ. ಒಲವು ಎದೆಯನ್ನು ಹೊಕ್ಕರೆ ಅದನ್ನು ಮೊಗೆ ಮೊಗೆದು ಇತರರಿಗೆ ಸುರಿವ ಪ್ರೇಮಮಯಿ.
ವಾಸುದೇವ ನಾಡಿಗ್‌ ಬರೆದ ‘ಬಂದರಿಗೆ ಬಂದ ಹಡಗು’ ಕವನ ಸಂಕಲನದ ಕುರಿತು ಕವಿತಾ ಹೆಗಡೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ