Advertisement

Category: ದಿನದ ಪುಸ್ತಕ

ಶರೀಫರ ಅನುಭವ ಲೋಕಕ್ಕೊಂದು ಕೈಪಿಡಿ

ಹತ್ತೊಂಬತ್ತನೇ ಶತಮಾನದಲ್ಲಿ ಮುಸ್ಲಿಂ ದಂಪತಿಯ ಮಗನಾಗಿ ಜನಿಸಿದ ವರಕವಿ ಮಹಾ ಮಾನವತಾವಾದಿ ಸಂತಶ್ರೇಷ್ಠ ಪರಿಪೂರ್ಣ ಶಿವಯೋಗಿ ಶರೀಫರು ರಾಮಾಯಣ ಮಹಾಭಾರತ, ದೇವಿಪುರಾಣ, ಪ್ರಭುಲಿಂಗಲೀಲೆ, ಬಸವ, ಅಲ್ಲಮ ಅಕ್ಕರನ್ನು ಮೈಗೂಡಿಸಿಕೊಂಡಿದ್ದವರು. ಮಾಸ್ತರರಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳ ರೂವಾರಿಯಾಗಿದ್ದವರು. ಕಳಸದ ಗೋವಿಂದ ಭಟ್ಟರನ್ನು ಸಂಧಿಸಿದಾಗ, ಗೋವಿಂದಭಟ್ಟರು ತಮ್ಮ ಅನುಭಾವದ ಆಧ್ಯಾತ್ಮ ಸಾಮ್ರಾಜ್ಯಕ್ಕೆ ಶರೀಫರನ್ನೇ ಉತ್ತರಾಧಿಕಾರಿಯಾಗಿಸುತ್ತಾರೆ.  ಚಂದ್ರಪ್ರಭಾ ಬರೆದ  ‘ತಗಿ ನಿನ್ನ ತಂಬೂರಿ, ಷರೀಫರ ತತ್ವ ಭಾಷ್ಯ’ ಪುಸ್ತಕದ ಕುರಿತು ಕೆ.ಆರ್.ಉಮಾದೇವಿ ಉರಾಳ ಬರಹ

Read More

ರಚನಾಕೌಶಲ ಬಿಂಬಿಸುವ ಬುದ್ಧಚರಣ

ಇಲ್ಲಿ ಅಪೂರ್ವವಾದ ರಚನಾ ಸೌಂದರ್ಯವನ್ನು ಗಮನಿಸಬಹುದು. ಭಗವಂತ ಸುಗತನ ಕರುಣೆಯೆಂಬ ಮನದ ಹುತ್ತಗಟ್ಟುವಿಕೆ ನಾಲ್ಕು ಪಾದಗಳ ಪದ್ಯಗಳಿಂದ ತೊಡಗಿ, ಎಂಟು ಮತ್ತು ಹದಿನಾಲ್ಕಕ್ಕೆ ಏರಿ; ಮತ್ತೆ ಎಂಟಕ್ಕಿಳಿದು ನಾಲ್ಕು ಪಾದಗಳಿಗೆ ಕೊನೆಯಾಗಿ ಒಂದು ಪಾದದ “ಓಂ ಶಾಂತಿಃ ಶಾಂತಿಃ ಶಾಂತಿಃ” ಎಂಬ ಉಕ್ತಿಯಲ್ಲಿ ಕೊನೆಯಾಗುವುದು ಧ್ವನಿಪೂರ್ಣವಾಗಿದೆ. ಕರುಣ ರಸದ ಆತ್ಯಂತಿಕ ನೆಲೆ ಶಾಂತರಸದಲ್ಲೇ ಎಂಬುದು ಇಡೀ ಕಾವ್ಯ ಧ್ವನಿಸುತ್ತದೆ. ಇದನ್ನು ಕವಿಯು ಕೇವಲ ಕಾವ್ಯದಲ್ಲಿ ಮಾತ್ರ ಬಿಂಬಿಸದೆ ತನ್ನ ರಚನಾ ಕೌಶಲದಲ್ಲೂ ಔಚಿತ್ಯಪೂರ್ಣವಾಗಿ ಕಾಣಿಸಿರುವುದು ಮನಮುಟ್ಟುವಂಥದ್ದು..
ಹೆಚ್.ಎಸ್.ವೆಂಕಟೇಶಮೂರ್ತಿ ಬರೆದ ಬುದ್ಧ ಚರಣ ಕವನ ಸಂಕಲನದ ಕುರಿತು ಕೃಷ್ಣಪ್ರಕಾಶ್ ಉಳಿತ್ತಾಯ ಬರಹ

Read More

‘ವೀರಕೇಸರಿ ಅಮಟೂರು ಬಾಳಪ್ಪ’ ದೇಶಭಕ್ತನೊಬ್ಬನ ರೋಚಕ ಅಧ್ಯಾಯ

ಅಮಟೂರು ಬಾಳಪ್ಪನ ವ್ಯಕ್ತಿತ್ವಕ್ಕೆ ಸಂಬಂಧಿಸಿದ ಮಾಹಿತಿಗಳು ಇತಿಹಾಸದ ಪುಟಗಳಲ್ಲಿ ಹೆಚ್ಚೇನೂ ಸಿಗುವುದಿಲ್ಲ. ಸಂಗೊಳ್ಳಿ ರಾಯಣ್ಣನ ಜೊತೆ ಜೊತೆಯಾಗಿ ಹೆಗಲೆಣೆಯಾಗಿ ನಿಂತು ಕಿತ್ತೂರಿನ ರಕ್ಷಣೆಗೆ ನಿಂತ ಶೂರ ಆತ. ಜೀವನ ಮೌಲ್ಯಗಳಿಗೆ ಕುಂದಾಗದಂತೆ, ದೇಶದ ರಕ್ಷಣೆಗೆ ತೊಡಕಾದಂತೆ ಜೀವನ ನಡೆಸಿದ ವ್ಯಕ್ತಿತ್ವ ಬಾಳಪ್ಪನದು. ಆತನಿಗೆ ಸಂಬಂಧಿಸಿದಂತೆ ಲಭ್ಯವಾಗುವ ಕೆಲವೇ ಮಾಹಿತಿಗಳ ಜಾಡು ಹಿಡಿದು, ಸಂಶೋಧನೆಗಳ ಆಕರಗಳನ್ನು ಬಳಸಿಕೊಮಡು 
ಬಾಳಾಸಾಹೇಬ ಲೋಕಾಪುರ ಅವರು ಬರೆದಿರುವ ಕೃತಿ’ವೀರಕೇಸರಿ ಅಮಟೂರು ಬಾಳಪ್ಪ’ . ಈ ಕಾದಂಬರಿ ಕುರಿತು ತೇಜಾವತಿ ಎಚ್‌ ಡಿ ಬರಹ

Read More

ಗಾಳಿಗೆ ಜೋಗುಳವಾಗುವ ಕವಿತೆಗಳು

ಇಡಿಯಾಗಿ ಕವಿತೆ ನಮ್ಮೊಳಗಿನ ಅರಿವಿನ ಅನುಪಸ್ಥಿತಿಯ ಕಾರಣವಾಗಿ ಮನುಕುಲಕ್ಕೆ ಮಾರಕವಾಗಿರುವ, ಸ್ವಯಂ ನಾವೇ ಸೃಷ್ಟಿಸಿಕೊಂಡಿರುವ ಜಾತಿ, ಮತ, ಪಂಥಗಳೆಂಬ ರುಗ್ಣಗಳಿಂದ ಬಾಧೆಗೊಳಗಾಗಿರುವ ವ್ಯವಸ್ಥೆಯನ್ನು ಚಿಕಿತ್ಸಕ ದೃಷ್ಟಿಯಿಂದ ನೋಡಲು ಪ್ರಯತ್ನಿಸುತ್ತದೆ. ಇಡಿಯಾಗಿ ಕವಿತೆ ರೂಪಕಗಳ ಮೂಲಕವೇ ಓದುಗನೊಂದಿಗೆ ಮುಖಾಮುಖಿಯಾಗುತ್ತ, ನಾವೆಲ್ಲ ಕಂಡೂ ಕಾಣದಂತಿರುವ ಲೋಕದ ಅಸಹ್ಯಗಳನ್ನು ಕಾಣಿಸುತ್ತ ಹೋಗುತ್ತದೆ! ಹಾಗೆ ನೋಡಿದರೆ ಈ ಕವಿತೆಯಲ್ಲಿ ಬರುವ ‘ಫಕೀರ’ ಬೇರಾರೂ ಆಗಿರದೆ ಸಮಾಜವನ್ನು ನೈತಿಕತೆಯ ಪಾತಳಿಯ ಮೇಲೆ ಮುನ್ನಡೆಸಲು ಬೇಕಾಗಿರುವ ‘ಅರಿವು’ ಎಂಬ ಪ್ರಖರವಾದ ಬೆಳಕೇ ಆಗಿದೆ.
ದೇವು ಮಾಕೊಂಡ ಕವನ ಸಂಕಲನ ‘ಗಾಳಿಗೆ ತೊಟ್ಟಿಲು ಕಟ್ಟಿ’ ಪುಸ್ತಕದ ಕುರಿತು ಕಲ್ಲೇಶ್ ಕುಂಬಾರ್, ಹಾರೂಗೇರಿ ಬರಹ

Read More

ಅವ`ಲಕ್ಕಿ’ ಎಂಬ ಅದೃಷ್ಟಶಾಲಿ ತಿನಿಸು!

ತೌಳವನಾಡಿನಲ್ಲಿ ಅವಲಕ್ಕಿಗೆ ಬಜಿಲು ಎಂದು ಹೇಳುತ್ತಾರೆ. ಬೆಳಗ್ಗೆ ಅಥವಾ ಸಂಜೆಯ ತಿಂಡಿಗೆ ಸಜ್ಜಿಗೆ-ಬಜಿಲು ಕರಾವಳಿಯಲ್ಲಿ ಬಹಳ ಪ್ರಸಿದ್ಧ. ಸಜ್ಜಿಗೆ ಎಂದರೆ ಉಪ್ಪಿಟ್ಟು. ಇದು ಕರಾವಳಿಯ ಹೊರಗಿನವರಿಗೆ ತಿಳಿದಿರಲಿಕ್ಕಿಲ್ಲ. ಇನ್ನೊಂದು ಅಷ್ಟೇ ಪ್ರಸಿದ್ಧ ತಿಂಡಿಯೆಂದರೆ ಕಡ್ಳೆ-ಬಜಿಲು. ಇವು ಇಲ್ಲಿನ ಹೊಟೇಲುಗಳಲ್ಲೂ ಸಿಗುತ್ತವೆ. ಸಮಾರಂಭಗಳಲ್ಲಿ ಉಳಿದ ತಿಂಡಿಗಳಿಗಿಂತ ಅವಲಕ್ಕಿ-ಸಜ್ಜಿಗೆ ಮಾಡುವುದೇ ಹೆಚ್ಚು. ಏಕೆಂದರೆ, ಇದನ್ನು ತಯಾರಿಸಲು ಕಡಿಮೆ ಶ್ರಮ-ಸಮಯ-ಪರಿಕರ ಸಾಕು. ಮಧ್ಯಾಹ್ನವಾದರೂ ಹಸಿವೆಯಾಗುವುದಿಲ್ಲ. ಹೊಟ್ಟೆಯಲ್ಲಿ ಕಾಂಕ್ರೀಟ್ ಹಾಕಿದಂತೆ ಗಟ್ಟಿ!
ಸಹನಾ ಕಾಂತಬೈಲು ಬರೆದ ಲಲಿತ ಪ್ರಬಂಧಗಳ ಸಂಕಲನ ‘ಇದು ಬರಿ ಮಣ್ಣಲ್ಲ’ ಪುಸ್ತಕದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ