Advertisement

Category: ದಿನದ ಪುಸ್ತಕ

ಸರ್ ಎಂ. ವಿಶ್ವೇಶ್ವರಯ್ಯ ಕುರಿತ ಪುಸ್ತಕದ ಬಗ್ಗೆ ಕೆ.ಆರ್.ಉಮಾದೇವಿ ಉರಾಳ ಬರಹ

“ದಿವಾನರಾದ ಅವಧಿಯಲ್ಲಿ ಮಹಾರಾಜರೊಂದಿಗೆ ಒಮ್ಮೆ ಕೆಮ್ಮಣ್ಣುಗುಂಡಿಗೆ ಹೋಗಿದ್ದಾಗ ಸೂರ್ಯೋದಯಕ್ಕೂ ಮೊದಲೇ ಎದ್ದು ವಾಯುವಿಹಾರ ಕೈಗೊಂಡಿದ್ದ ಸರ್ ಎಂ.ವಿ.ಯವರಿಗೆ ಮಣ್ಣಿನ ರಾಶಿಯಲ್ಲಿನ ಬೆಣಚುಕಲ್ಲುಗಳು ಕಣ್ಣಿಗೆ ಬೀಳುತ್ತವೆ. ಅವನ್ನು ಸೂರ್ಯನ ಬೆಳಕಲ್ಲಿ ಹಿಡಿದು ನೋಡಿದ ಅವರು ಉದ್ಗರಿಸುತ್ತಾರೆ. “ನಾವು ಕಲ್ಲಿದ್ದಲಿಗಾಗಿ ಇನ್ನು ಬರ್ಮಿಂಗ್ ಹ್ಯಾಂ ನತ್ತ ನೋಡಬೇಕಿಲ್ಲ!” ಮುಂದೆ ಅದಿರಿನ ನಿಕ್ಷೇಪಗಳನ್ನು ಗಮನಿಸುತ್ತಾರೆ.”
ಜಿ.ವಿ.ಸಂಗಮೇಶ್ವರ ಬರೆದ ‘ಕಬ್ಬಿಣದ ಕಥೆ ವ್ಯಥೆ’ ಪುಸ್ತಕದ ಬಗ್ಗೆ ಕೆ.ಆರ್.ಉಮಾದೇವಿ ಉರಾಳ ಬರಹ

Read More

ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯರ ರಂಗಾಂತರಂಗ…

“ಕಥನದ ಉತ್ತರಾರ್ಧದಲ್ಲಿ ಲಕ್ಷ್ಮೀಶರು ತನ್ನ ರಂಗಾನುಭವಾಧಾರಿತ ರಂಗ ಚಿಂತನೆಗಳನ್ನು ಸರಳವಾದ ಭಾಷೆಯಲ್ಲಿ ಮಂಡಿಸಿದ್ದು, ಚರ್ಚಿಸಬೇಕಾದ, ಚಿಂತನೀಯವಾದ ಅನೇಕ ವಿಚಾರಗಳು ಅಲ್ಲಿ ಬಂದಿವೆ. ಇಡಿಯ ಆಟಕ್ಕೆ ಆಧಾರವಾಗಿ ನಿರ್ವಹಣೆ, ಹಾಡು, ಕುಣಿತಗಳನ್ನು ನಡೆಸುವ ಮೆರೆಸುವ ಹಿಮ್ಮೇಳದ ಮಹತ್ವ ಸಾಮಾನ್ಯ ಪ್ರೇಕ್ಷಕನಿಗೆ ಅರಿವಿಗೆ ಬರದಿರುವ ಸಂಗತಿ, ಹಲವು ವಾದಕರ ವಾಣಿಯಾಗಿ ಇಲ್ಲಿ ಪ್ರಸ್ತಾವಿತವಾಗಿದೆ. ಅದು ನಿಜ ಕೂಡ.”
ಲಕ್ಷ್ಮಿ ಮಚ್ಚಿನ ಬರೆದ ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯರ ರಂಗಾಂತರಂಗಕ್ಕೆ ಡಾ. ಎಂ.ಪ್ರಭಾಕರ ಜೋಷಿ ಬರೆದ ಮುನ್ನುಡಿ

Read More

ಜಯಂತ ಕಾಯ್ಕಿಣಿ ಕಥಾಸಂಕಲನದ ಕುರಿತು ಸ್ಮಿತಾ ರಾಘವೇಂದ್ರ ಬರಹ

“ಅದೆಷ್ಟು ಮಾತಿನ ಮಲ್ಲ ! ಮಾತೇ ಮರೆತು ಮುಂಬೈ ಗಲ್ಲಿ ಗಲ್ಲಿ ಸುತ್ತುತ್ತಾನೆ. ಪಿಟ್ಸ್‌ ಬಂದ ವ್ಯಕ್ತಿಯ ಮುಷ್ಟಿಯೊಳಗಿನ ಮುದ್ದೆಯಾದ ಹಾಳೆಯಲ್ಲಿ ಪುಟ್ಟ ಮಗುವಿನ ಪಾದದ ಗುರುತನ್ನು ಪತ್ತೆ ಹಚ್ಚಿ ಆಗುವ ಅನಾಹುತ ತಪ್ಪಿಸುತ್ತಿದ್ದರೆ, ಸುಮ್ಮನೇ ಕಣ್ಣಾಲಿಗಳನ್ನು ತೇವವಾಗುತ್ತದೆ. ಹಾಗೆ ಮುಂಬೈ ಸುತ್ತಿಸಿ ಮತ್ತೆ ಸೀದಾ ನಮ್ಮ ಮಲೆನಾಡಿನ ಸೀಮೆಗೆ ಹಾಜರಾದ ಕಾಯ್ಕಿಣಿಯವರು ಇಡೀ ಕುಮಟಾ, ಅಂಕೋಲಾ, ಕಾರವಾರ, ಯಲ್ಲಾಪುರ, ಶಿರಸಿಗಳನ್ನು ಸುತ್ತಿಸುತ್ತ ಕಥೆ ಹೇಳುತ್ತ ಹೋಗುತ್ತಾರೆ.”
ಜಯಂತ ಕಾಯ್ಕಿಣಿ ಕಥಾ ಸಂಕನಲ “ಬಣ್ಣದ ಕಾಲು” ಕುರಿತು ಸ್ಮಿತಾ ರಾಘವೇಂದ್ರ ಬರಹ

Read More

ಕಲ್ಲೇಶ್ ಕುಂಬಾರ್ ಕಥಾಸಂಕಲನದ ಕುರಿತು ವೇದಾಂತ ಏಳಂಜಿ ಬರಹ

“ಗ್ರಾಮೀಣ ಭಾಗದ ಜನಜೀವನವನ್ನು ಆರಂಭದ ಎರಡು ಕಥೆಗಳಲ್ಲಿ ತೋರ್ಪಡಿಸುತ್ತಲೇ ಜಾಗತೀಕರಣದ ಸಮಸ್ಯೆಗಳಿಗೆ ಹಾರೊಗೇರಿ ತೆರೆದುಕೊಳ್ಳುವ ಕಥನಗಾರಿಕೆ ವಿಶಿಷ್ಟವಾದದ್ದು. ಆಧುನಿಕ ಕಾಲದಲ್ಲೂ ಊಳಿಗಮಾನ್ಯ ಪದ್ಧತಿಯನ್ನು ಅನುಸರಿಸುವ ‘ನಿಂದ ನಿಲುವಿನ ಘನ’ ಕಥೆಯ ಮಾನಿಂಗಯ್ಯನಂತವರು ದಲಿತ ಮಹಿಳೆಯರ ಮೇಲೆ ನೀರೆರೆಚುವ ಪದ್ಧತಿಯು ಆತನ ರಾಕ್ಷಸ ಸ್ವಭಾವ ತೋರುತ್ತದೆ. ಮೇಲ್ವರ್ಗದ ಈ ಸಂಪ್ರದಾಯವನ್ನು ರಮೇಶನ ಪ್ರಭಾವದಿಂದ ಕೆಂಚವ್ವಳು ನೀರೋಕುಳಿ ಆಚರಣೆಗೆ ವಿರೋಧಿಸುತ್ತಾಳೆ.”
ಕಲ್ಲೇಶ್ ಕುಂಬಾರ್ ಬರೆದ‌ ‘ನಿಂದ ನಿಲುವಿನ ಘನʼ ಕಥಾಸಂಕಲನದ ಕುರಿತು ಡಾ.ಎಂ.ವೇದಾಂತ ಏಳಂಜಿ ಬರಹ

Read More

‘ಚೆನ್ನಭೈರಾದೇವಿ’ಯೆಂಬ ಧೀರೋದಾತ್ತ ಕಥಾನಕ

“ಒಂದು ಕತೆಗೆ ಚರಿತ್ರೆಯ ಹಿನ್ನಲೆಯಿದ್ದಾಗ ನೆಲದ ಮಹಿಮೆಯಿದ್ದಾಗ ಹೀಗೆ ಅದು ಮನಸ್ಸನ್ನು ತಟ್ಟುತ್ತದೆ ಎಂಬುದು ಮೇಲ್ನೋಟಕ್ಕೆ ಅನ್ನಿಸಿದರೂ ಬರಹಗಾರ ತನ್ನ ಸರಳ ಸಭ್ಯ ಹಾಗೂ ಆಕರ್ಷಕ ಶೈಲಿಯಿಂದ ಓದುಗರ ಹೃದಯಕ್ಕೆ ಇಳಿಯುವಂತೆ ಮಾಡುತ್ತಾನೆ ಅನ್ನುವುದು ನನಗಂತೂ ನಿಜ. ಹಾಗಿಲ್ಲದಿದ್ದರೆ ಚರಿತ್ರೆಯ ಪುಸ್ತಕಗಳೆಲ್ಲವೂ ಹೀಗೇ ಪ್ರಿಯವೆನಿಸಬೇಕಿತ್ತು. ಆದರೆ ಮತ್ತೆ ಮತ್ತೆ ಚರಿತ್ರೆಯನ್ನು ಎಲ್ಲರೂ ಕತೆಯ ರೂಪದಲ್ಲಿ ಹೇಳಲು ಸಮರ್ಥರಲ್ಲ ಅನ್ನಿಸುವುದು ಅತ್ಯಪರೂಪವಾಗಿ ಬರುವ ಇಂತಹ ಪುಸ್ತಕಗಳಿಂದ.”
ಡಾ. ಗಜಾನನ ಶರ್ಮ ಬರೆದ ಚೆನ್ನಭೈರಾದೇವಿ ಕಾದಂಬರಿ ಕುರಿತು ಪ್ರಿಯಾ ಭಟ್‌ ಕಲ್ಲಬ್ಬೆ ವಿಶ್ಲೇಷಣೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ