Advertisement

Category: ದಿನದ ಪುಸ್ತಕ

ಗುರುಪ್ರಸಾದ್ ಕಾಗಿನೆಲೆ ಬರೆದ ಹೊಸ ಕಾದಂಬರಿಯ ತುಣುಕು

ಮಲೀಕ ಮಾತಾಡಲಿಲ್ಲ. ಆಕೆಯನ್ನು ಸೆಳೆದುಕೊಂಡ. ತುಟಿಗೆ ತುಟಿ ಸೇರಿಸಿದ. ಇವನ ತುಟಿಗಳ ಕೊಂಕೋ, ಆಕೆಯ ಕೃತಕ ತುಟಿ ಕಳೆದುಕೊಂಡಿದ್ದ ತೇವವೋ, ಮುತ್ತಿಗೊಂದು ಸತ್ವವಿರಲಿಲ್ಲ, ಸೆಳೆತವಿರಲಿಲ್ಲ. ಸ್ಥಿತಿಸ್ಥಾಪಕತ್ವ ಕಳೆದುಕೊಂಡ ರಬ್ಬರಿನ ಬೊಂಬೆಯ ತುಟಿಯನ್ನು ಚುಂಬಿಸಿದಂತಾಯಿತು, ಮಲೀಕನಿಗೆ.  ಆಕೆ ಮುತ್ತಿನಿಂದಲೇ ಮಲೀಕನನ್ನು ದೂರಸರಿಸುವುದಕ್ಕೆ ಪ್ರಯತ್ನಿಸಿದಳು. -ದೇಹ ಸೌಂದರ್ಯದ ಜಿಜ್ಞಾಸೆಯನ್ನು ಕುರಿತು ಕಾದಂಬರಿಕಾರ ಗುರುಪ್ರಸಾದ್ ಕಾಗಿನೆಲೆ ಬರೆದ ಹೊಸ ಕಾದಂಬರಿ ‘ಕಾಯಾ’ ದಿಂದ ಆಯ್ದ ಒಂದು ಅಧ್ಯಾಯ ನಿಮ್ಮ ಓದಿಗಾಗಿ. 

Read More

ಶರೀಫರ ಅನುಭವ ಲೋಕಕ್ಕೊಂದು ಕೈಪಿಡಿ

ಹತ್ತೊಂಬತ್ತನೇ ಶತಮಾನದಲ್ಲಿ ಮುಸ್ಲಿಂ ದಂಪತಿಯ ಮಗನಾಗಿ ಜನಿಸಿದ ವರಕವಿ ಮಹಾ ಮಾನವತಾವಾದಿ ಸಂತಶ್ರೇಷ್ಠ ಪರಿಪೂರ್ಣ ಶಿವಯೋಗಿ ಶರೀಫರು ರಾಮಾಯಣ ಮಹಾಭಾರತ, ದೇವಿಪುರಾಣ, ಪ್ರಭುಲಿಂಗಲೀಲೆ, ಬಸವ, ಅಲ್ಲಮ ಅಕ್ಕರನ್ನು ಮೈಗೂಡಿಸಿಕೊಂಡಿದ್ದವರು. ಮಾಸ್ತರರಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳ ರೂವಾರಿಯಾಗಿದ್ದವರು. ಕಳಸದ ಗೋವಿಂದ ಭಟ್ಟರನ್ನು ಸಂಧಿಸಿದಾಗ, ಗೋವಿಂದಭಟ್ಟರು ತಮ್ಮ ಅನುಭಾವದ ಆಧ್ಯಾತ್ಮ ಸಾಮ್ರಾಜ್ಯಕ್ಕೆ ಶರೀಫರನ್ನೇ ಉತ್ತರಾಧಿಕಾರಿಯಾಗಿಸುತ್ತಾರೆ.  ಚಂದ್ರಪ್ರಭಾ ಬರೆದ  ‘ತಗಿ ನಿನ್ನ ತಂಬೂರಿ, ಷರೀಫರ ತತ್ವ ಭಾಷ್ಯ’ ಪುಸ್ತಕದ ಕುರಿತು ಕೆ.ಆರ್.ಉಮಾದೇವಿ ಉರಾಳ ಬರಹ

Read More

ರಚನಾಕೌಶಲ ಬಿಂಬಿಸುವ ಬುದ್ಧಚರಣ

ಇಲ್ಲಿ ಅಪೂರ್ವವಾದ ರಚನಾ ಸೌಂದರ್ಯವನ್ನು ಗಮನಿಸಬಹುದು. ಭಗವಂತ ಸುಗತನ ಕರುಣೆಯೆಂಬ ಮನದ ಹುತ್ತಗಟ್ಟುವಿಕೆ ನಾಲ್ಕು ಪಾದಗಳ ಪದ್ಯಗಳಿಂದ ತೊಡಗಿ, ಎಂಟು ಮತ್ತು ಹದಿನಾಲ್ಕಕ್ಕೆ ಏರಿ; ಮತ್ತೆ ಎಂಟಕ್ಕಿಳಿದು ನಾಲ್ಕು ಪಾದಗಳಿಗೆ ಕೊನೆಯಾಗಿ ಒಂದು ಪಾದದ “ಓಂ ಶಾಂತಿಃ ಶಾಂತಿಃ ಶಾಂತಿಃ” ಎಂಬ ಉಕ್ತಿಯಲ್ಲಿ ಕೊನೆಯಾಗುವುದು ಧ್ವನಿಪೂರ್ಣವಾಗಿದೆ. ಕರುಣ ರಸದ ಆತ್ಯಂತಿಕ ನೆಲೆ ಶಾಂತರಸದಲ್ಲೇ ಎಂಬುದು ಇಡೀ ಕಾವ್ಯ ಧ್ವನಿಸುತ್ತದೆ. ಇದನ್ನು ಕವಿಯು ಕೇವಲ ಕಾವ್ಯದಲ್ಲಿ ಮಾತ್ರ ಬಿಂಬಿಸದೆ ತನ್ನ ರಚನಾ ಕೌಶಲದಲ್ಲೂ ಔಚಿತ್ಯಪೂರ್ಣವಾಗಿ ಕಾಣಿಸಿರುವುದು ಮನಮುಟ್ಟುವಂಥದ್ದು..
ಹೆಚ್.ಎಸ್.ವೆಂಕಟೇಶಮೂರ್ತಿ ಬರೆದ ಬುದ್ಧ ಚರಣ ಕವನ ಸಂಕಲನದ ಕುರಿತು ಕೃಷ್ಣಪ್ರಕಾಶ್ ಉಳಿತ್ತಾಯ ಬರಹ

Read More

‘ವೀರಕೇಸರಿ ಅಮಟೂರು ಬಾಳಪ್ಪ’ ದೇಶಭಕ್ತನೊಬ್ಬನ ರೋಚಕ ಅಧ್ಯಾಯ

ಅಮಟೂರು ಬಾಳಪ್ಪನ ವ್ಯಕ್ತಿತ್ವಕ್ಕೆ ಸಂಬಂಧಿಸಿದ ಮಾಹಿತಿಗಳು ಇತಿಹಾಸದ ಪುಟಗಳಲ್ಲಿ ಹೆಚ್ಚೇನೂ ಸಿಗುವುದಿಲ್ಲ. ಸಂಗೊಳ್ಳಿ ರಾಯಣ್ಣನ ಜೊತೆ ಜೊತೆಯಾಗಿ ಹೆಗಲೆಣೆಯಾಗಿ ನಿಂತು ಕಿತ್ತೂರಿನ ರಕ್ಷಣೆಗೆ ನಿಂತ ಶೂರ ಆತ. ಜೀವನ ಮೌಲ್ಯಗಳಿಗೆ ಕುಂದಾಗದಂತೆ, ದೇಶದ ರಕ್ಷಣೆಗೆ ತೊಡಕಾದಂತೆ ಜೀವನ ನಡೆಸಿದ ವ್ಯಕ್ತಿತ್ವ ಬಾಳಪ್ಪನದು. ಆತನಿಗೆ ಸಂಬಂಧಿಸಿದಂತೆ ಲಭ್ಯವಾಗುವ ಕೆಲವೇ ಮಾಹಿತಿಗಳ ಜಾಡು ಹಿಡಿದು, ಸಂಶೋಧನೆಗಳ ಆಕರಗಳನ್ನು ಬಳಸಿಕೊಮಡು 
ಬಾಳಾಸಾಹೇಬ ಲೋಕಾಪುರ ಅವರು ಬರೆದಿರುವ ಕೃತಿ’ವೀರಕೇಸರಿ ಅಮಟೂರು ಬಾಳಪ್ಪ’ . ಈ ಕಾದಂಬರಿ ಕುರಿತು ತೇಜಾವತಿ ಎಚ್‌ ಡಿ ಬರಹ

Read More

ಗಾಳಿಗೆ ಜೋಗುಳವಾಗುವ ಕವಿತೆಗಳು

ಇಡಿಯಾಗಿ ಕವಿತೆ ನಮ್ಮೊಳಗಿನ ಅರಿವಿನ ಅನುಪಸ್ಥಿತಿಯ ಕಾರಣವಾಗಿ ಮನುಕುಲಕ್ಕೆ ಮಾರಕವಾಗಿರುವ, ಸ್ವಯಂ ನಾವೇ ಸೃಷ್ಟಿಸಿಕೊಂಡಿರುವ ಜಾತಿ, ಮತ, ಪಂಥಗಳೆಂಬ ರುಗ್ಣಗಳಿಂದ ಬಾಧೆಗೊಳಗಾಗಿರುವ ವ್ಯವಸ್ಥೆಯನ್ನು ಚಿಕಿತ್ಸಕ ದೃಷ್ಟಿಯಿಂದ ನೋಡಲು ಪ್ರಯತ್ನಿಸುತ್ತದೆ. ಇಡಿಯಾಗಿ ಕವಿತೆ ರೂಪಕಗಳ ಮೂಲಕವೇ ಓದುಗನೊಂದಿಗೆ ಮುಖಾಮುಖಿಯಾಗುತ್ತ, ನಾವೆಲ್ಲ ಕಂಡೂ ಕಾಣದಂತಿರುವ ಲೋಕದ ಅಸಹ್ಯಗಳನ್ನು ಕಾಣಿಸುತ್ತ ಹೋಗುತ್ತದೆ! ಹಾಗೆ ನೋಡಿದರೆ ಈ ಕವಿತೆಯಲ್ಲಿ ಬರುವ ‘ಫಕೀರ’ ಬೇರಾರೂ ಆಗಿರದೆ ಸಮಾಜವನ್ನು ನೈತಿಕತೆಯ ಪಾತಳಿಯ ಮೇಲೆ ಮುನ್ನಡೆಸಲು ಬೇಕಾಗಿರುವ ‘ಅರಿವು’ ಎಂಬ ಪ್ರಖರವಾದ ಬೆಳಕೇ ಆಗಿದೆ.
ದೇವು ಮಾಕೊಂಡ ಕವನ ಸಂಕಲನ ‘ಗಾಳಿಗೆ ತೊಟ್ಟಿಲು ಕಟ್ಟಿ’ ಪುಸ್ತಕದ ಕುರಿತು ಕಲ್ಲೇಶ್ ಕುಂಬಾರ್, ಹಾರೂಗೇರಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ