Advertisement

Category: ದಿನದ ಪುಸ್ತಕ

ನಿರಾಡಂಬರ ಕಥನ ಕ್ರಮದಲ್ಲಿ ಸಾಗುವ ‘ಸೂತ್ರಧಾರ..’

“ಫಣೀಂದ್ರನ ಗಲಿಬಿಲಿ ಸಂಸಾರ, ಕಾಣದ ಕೈ, ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ, ಹೃದಯಾಂತರಾಳದಲಿ, ತ್ಯಾಗ, ದೊಡ್ಡವರೆಲ್ಲ ಜಾಣರಲ್ಲ, ಕಂದಾ ನೀ ನಗುತಿರು ಮತ್ತು ಸೂತ್ರಧಾರ ಮತ್ತು ಇತರ ಕಥೆಗಳು ಇಲ್ಲಿ ತಮ್ಮ ವಸ್ತು ವಿಷಯಗಳಿಂದ ಗಮನ ಸೆಳೆಯುತ್ತವೆ. ಹೃದಯಾಂತರಾಳದಲ್ಲಿ ಮತ್ತು ಕಂದ ನೀನು ನಗುತಿರು ಕತೆಗಳು ಮಾನವೀಯತೆಯ ಆರ್ದ್ರವಾದ ದನಿಯನ್ನು ಬಿಂಬಿಸಿದರೆ, ದೂರದ ಬೆಟ್ಟ ಮತ್ತು ಕಾಣದ ಕೈಗಳು ಆ ಬಾಳಿನ ಸಹಜವಾದ ಚಿತ್ರವನ್ನು ನೆಚ್ಚಿಕೊಂಡಿವೆ.”
ಶೈಲಜಾ ಸುರೇಶ್‌ ರಾವ್‌ ನಾಯಕ್ ಕಥಾ ಸಂಕಲನಕ್ಕೆ ವಾಸುದೇವ ನಾಡಿಗ್‌ ಬರೆದ ಮುನ್ನುಡಿ

Read More

ಮರಾಠವಾಡಾದ ದಲಿತನ ಆತ್ಮಕಥನ ಕುರಿತು ಸುಧಾ ಆಡುಕಳ ಬರಹ

“ಪರಲಾದನಿಗೆ ಇನ್ನೊಂದು ಅಕ್ಕ ಇದ್ದಳಾದರೂ ಅವಳ ಗಂಡ ಸಾಕ್ಷಾತ್ ಯಮಸ್ವರೂಪಿ! ಅವನಿಗಂಜಿ ಅವಳ ಊರಿಗೆ ಹೋದರೂ ಈ ಹುಡುಗ ಮನೆಯವರೆಗೆ ಹೋಗಲಾರ. ಊರ ಮುಂದಿನ ಗುಡಿಯಲ್ಲಿಯೇ ಕುಳಿತು, ಮಲಗಿ ಕಾಲ ಕಳೆಯುವ ಇವನನ್ನು ಕಂಡು ಮಂದಿ ಅಕ್ಕನಿಗೆ ಸುದ್ದಿ ಮುಟ್ಟಿಸಬೇಕು. ಅವಳು ಬಂದು ಸಮಯ ನೋಡಿ ಮನೆಗೆ ಕರಕೊಂಡು ಹೋಗಿ ಬಡಿಸಬೇಕು.”
ಚಂದ್ರಕಾಂತ ಪೋಕಳೆ ಅನುವಾದಿಸಿದ ಮರಾಠಿ ಲೇಖಕ ಪ್ರ. ಈ. ಸೋನಕಾಂಬಳೆ ಅವರ ಆತ್ಮಕಥನ ‘ನೆನಪಿನ ಹಕ್ಕಿ’ಯ ಕುರಿತು ಸುಧಾ ಆಡುಕಳ ಬರಹ

Read More

ಸ್ಮಿತಾ ಅಮೃತರಾಜ್‌ ಪುಸ್ತಕದ ಕುರಿತು ವಸುಂಧರಾ ಕದಲೂರು ಬರಹ

“ಇಲ್ಲಿನ ಬಹುತೇಕ ಲಲಿತ ಪ್ರಬಂಧಗಳು ನಿರೂಪಣೆಯ ಮಾದರಿಯಲ್ಲಿವೆ. ಅವು ವಾಚಾಳಿಯಾಗಿವೆ, ಸರಳವಾಗಿವೆ. ಸಹಜ ನಿಯತ್ತಿನಿಂದ ಕೂಡಿವೆ. ಮುಚ್ಚುಮರೆಯಿಲ್ಲದೆ ಲೇಖಕರ ಹಳವಂಡಗಳನ್ನು ಪೆದ್ದುತನ, ಮುಗ್ಧತೆಯ ಭಾವನೆಯ ಹರವನ್ನು ಇವು ಒಳಗೊಂಡಿವೆ. ಇಲ್ಲಿನ ಪ್ರಬಂಧಗಳಲ್ಲಿನ ಕೆಲವಾರು ವಸ್ತು ವಿಚಾರಗಳನ್ನು ದೈನಂದಿನ ಚಕ್ರದಲ್ಲಿ ನಾವು ಕಂಡಿದ್ದರೂ ವಿಶೇಷ ಗಮನ ಹರಿಸದೆ ಕಡೆಗಣಿಸಿರುತ್ತೇವೆ.”
ಸ್ಮಿತಾ ಅಮೃತರಾಜ್‌ ಸಂಪಾಜೆ ಬರೆದ ‘ಒಂದು ವಿಳಾಸದ ಹಿಂದೆ’ ಪ್ರಬಂಧ ಸಂಕಲನ ಕುರಿತು ವಸುಂಧರಾ ಕದಲೂರು ಬರೆದ ಲೇಖನ

Read More

ಬಿ.ಆರ್.‌ಎಲ್ ಕವನ ಸಂಕಲನದ ಕುರಿತು ಕಾತ್ಯಾಯಿನಿ ಕುಂಜಿಬೆಟ್ಟು ಬರಹ

“ಹರೆಯದಲ್ಲಿ ಹೃದಯ ಕದ್ದ ಈ ಹುಡುಗಿ ಕವಿಯ ಬಾಳಿನುದ್ದಕ್ಕೂ ವ್ಯಾಪಿಸಿಕೊಳ್ಳುತ್ತಾಳೆ. ನಿನ್ನೆಯಿಂದ ಹಿಂಬಾಲಿಸುತ್ತ ಕವಿಯ ಪ್ರತಿ ಇಂದಿಗೂ ಕನಸಾಗುತ್ತ ಕಲ್ಪನೆಯಾಗುತ್ತ ಅಗಣಿತ ನಾಳೆಗಳ ಹಾಳೆಗಳಲ್ಲಿ ಮತ್ತೆ ಮತ್ತೆ ಹೊಸತು ಹೊಸತಾಗಿ ಅರಳುತ್ತ ಕಲಾಕೃತಿಯಾಗುತ್ತ ಓದುಗರ ಚಿತ್ತದಲ್ಲಿ ಉಳಿಯುವ ಮದುವೆಯಾಗದ ಲಾಲಿತ್ಯದ ಶಾಲೀನ ಚಿರಯವ್ವನದ ಕವನಕನ್ನಿಕೆ. ಕಾವ್ಯ ವಿಮಶೆ೯ಯ ಭಾಷೆಯಲ್ಲಿ ‘ನವನವೋನ್ಮೇಷ ಶಾಲಿನಿ’.”
ಬಿ.ಆರ್. ಲಕ್ಷ್ಮಣರಾವ್‌ ಬರೆದ ‘ನವೋನ್ಮೇಷ’ ಕವನ ಸಂಕಲನದ ಕುರಿತು ಕಾತ್ಯಾಯಿನಿ ಕುಂಜಿಬೆಟ್ಟು ಬರಹ

Read More

ಧನಪಾಲ ನಾಗರಾಜಪ್ಪ ಅನುವಾದಿಸಿದ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ

“ಸೃಜನಶೀಲ ಸಾಹಿತ್ಯದ ಭಾಗವಾಗಿ ಪರಿಗಣಿಸಲ್ಪಡುವ ಅಬಾಬಿಗಳು ಅಂತಃಕರಣ, ಶಾಂತಿ ಮತ್ತು ಸೌಹಾರ್ದತೆಯ ಮೈಲಿಗಲ್ಲುಗಳಾಗಿವೆ. ಆತ್ಮನೀರಿಕ್ಷಣೆ ಮಾದರಿಯ ಆತ್ಮಾವಲೋಕನ ಮತ್ತು ಆತ್ಮಾನುಸಂಧಾನದ ಮಾದರಿಗಳಾದ ಅಬಾಬಿಗಳು ಹೊಸ ಚೈತನ್ಯಶೀಲ ಬದುಕಿಗೆ ದಾರಿದೀಪಗಳಾಗಿವೆ. ಆತ್ಮೋನ್ನತಿಗೆ ಮತ್ತು ಆತ್ಮಗೌರವದ ಉತ್ಕರ್ಷಕ್ಕೆ ಹುರಿಗೊಳಿಸುವ ಮಾನವೀಯ ಜಿಜ್ಞಾಸೆಗಳಿಂದ ಆವೃತ್ತವಾದ ಅಬಾಬಿಗಳು ಸಾರ್ವಕಾಲಿಕ ಮೌಲ್ಯಗಳನ್ನು ಗರ್ಭಿಕರಿಸಿಕೊಂಡಿವೆ.”
ತೆಲುಗಿನ ಕವಿ ಷೇಕ್ ಕರೀಮುಲ್ಲಾ ಬರೆದ ಅಬಾಬಿಗಳನ್ನು ಧನಪಾಲ ನಾಗರಾಜಪ್ಪ ‘ಬದರ್ʼ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದಾರೆ. ಈ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ ನಿಮ್ಮ ಓದಿಗೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ