Advertisement

Category: ದಿನದ ಪುಸ್ತಕ

ಪ್ರಪಂಚದಷ್ಟೇ ಪುರಾತನವಾದ ಪ್ರಶ್ನೆಗಳಿಗೆ ಉತ್ತರದ ಹುಡುಕಾಟ: ಸುಧಾ ಆಡುಕಳ ಮಾತುಗಳು

ಅನೇಕ ದಶಕಗಳ ಹಿಂದೆ ಹೀಗೆ ಬಿಸಿಲಲ್ಲಿ ಕುಳಿತು ಮಾತನಾಡಿದ ಬಸುರಿಯರ ಮಕ್ಕಳೀಗ ಸಮಾಜವೆಂಬ ಇರುವೆ ಸಾಲಿನ ಭಾಗವಾಗಿಯೂ, ತಮ್ಮದೇ ಸ್ವಾತಂತ್ರ್ಯದ ಹಾದಿಯನ್ನು ಹುಡುಕಿಕೊಂಡು, ತಾವಿರುವೆಡೆಯಲ್ಲೆಲ್ಲಾ ಪ್ರೀತಿಯ ಧಾರೆಯನ್ನೇ ಹಂಚುತ್ತಾ ಸಾಗಿದ್ದಾರೆ. ಒಡಲೊಳಗೆ ಮಗುವನ್ನು ಹೊತ್ತ ತಾಯಂದಿರ ಬೇಗೆ ಮಾತ್ರ ಎಷ್ಟೇ ಕಾಲ ಸರಿದರೂ ಹೀಗೆಯೇ ಮುಂದುವರೆಯುವುದೇನೋ ಎಂದು ಅನಿಸುತ್ತಲೇ ಇರುತ್ತದೆ. ಹಾಗೆ ನನ್ನ ಮಗುವಿಗೆ ನಾನೇನಾದರೂ ಕಥೆಯನ್ನು ಹೇಳುವಂತಿದ್ದರೆ ಮೇಲೆ ಬರೆದ ಕಥೆಯನ್ನು ಹೇಳುತ್ತಿದ್ದೆ ಮತ್ತು ಕೊನೆಯಲ್ಲಿ ಅವಳಂತೆಯೇ ಒಂದು ವಾಕ್ಯವನ್ನು ಸೇರಿಸುತ್ತಿದ್ದೆ, ಆ ಇಬ್ಬರಲ್ಲಿ ನಾನೂ ಒಬ್ಬಳಾಗಿದ್ದೆ ಎಂದು.
ಸುಧಾ ಆಡುಕಳ ಅನುವಾದಿಸಿದ ಒರಿಯಾನ ಫಲಾಚಿ ಕಾದಂಬರಿ “ಎಂದೂ ಹುಟ್ಟದ ಮಗುವಿಗೆ ಪತ್ರ”ಕ್ಕೆ ಬರೆದ ಅವರ ಮಾತುಗಳು ಇಲ್ಲಿವೆ

Read More

ಹಳ್ಳಿಗಾಡಿನ ಹೊಸ ಕತೆಗಳು: ಸಂಗೀತ ರವಿರಾಜ್ ಬರಹ

ಇಲ್ಲಿರುವ ನಾಲ್ಕು ಕಥೆಗಳು ಕಟ್ಟುಕಥೆಗಳೆಂದು ನಮಗನಿಸುವುದೇ ಇಲ್ಲ. ಗ್ರಾಮ ಜೀವನವೇ ಹೀಗೆ…. ನೀರಿಗೆಂದು ಮೈಲುದೂರ ಕೊಡಪಾನ ಹಿಡಿದು ಸಾಗಿ ಮನೆಗೆ ನೀರು ತುಂಬಬೇಕು. ಮತ್ತೆ ಮನೆಯಿಂದ ಚೆಂಬು ಹಿಡಿದುಕೊಂಡು ಇನ್ನೆಲ್ಲಿಗೋ ನಡೆದು ಹೋಗುವಂತಹ ವಿಪರ್ಯಾಸಗಳು ಹಳ್ಳಿಯಲ್ಲಿ ಮಾತ್ರವೇ ನಡೆಯುತ್ತಿತ್ತು. ಇದು ಹಳ್ಳಿ ಬದುಕಿನ ನೋವಿನ ಚಿತ್ರಣ. ಕಥೆಗಾರರ ಬಾಲ್ಯವೇ ಇಲ್ಲಿನ ಕಥೆಗಳಿಗೆ ಸ್ಪೂರ್ತಿ, ಪ್ರೇರಣೆ ಕೊಟ್ಟಿರಲೂಬಹುದು. ಏಕೆಂದರೆ ಹಳ್ಳಿಯ ಬಾಲ್ಯವೆಂಬುದು ಅನುಭವಗಳನ್ನು ಮೊಗೆ ಮೊಗೆದು ಕೊಡುವ ತಾಣ.
ಮಲ್ಲಿಕಾರ್ಜುನ ತೂಲಹಳ್ಳಿ ಕಥಾ ಸಂಕಲನ “ಅಗಸ್ತ್ಯ ನಕ್ಷತ್ರ” ಕುರಿತು ಸಂಗೀತಾ ರವಿರಾಜ್‌ ಚೆಂಬು ಬರಹ

Read More

ಎದೆಗೆ ಬಿದ್ದ ಕಲ್ಲು!: ಮಧು ವೈ.ಎನ್.‌ ಹೊಸ ಕಾದಂಬರಿಯ ಪುಟಗಳು

ಅವತ್ತು ಎಗ್ಸಿಬಿಶನ್ ಇತ್ತು. ನಾವೆಲ್ಲ ಕ್ಲಾಸ್ ರೂಮಲ್ಲಿ ಮಾಡೆಲ್ ಜೋಡಿಸ್ಕೊಂಡು ನಿಂತಿದ್ವಿ. ನನ್ ಪಕ್ಕ ಹಾಸನದೋನು ಇದ್ದ. ಯೂಕಲಿಪ್ಟಸ್ ಆಯಿಲ್‌ನಿಂದ ಸೊಳ್ಳೆ ಓಡಿಸ್ತೀನಿ ಅನ್ನೊ ಪ್ರಾಜೆಕ್ಟ್ ಮಾಡ್ಕಂಡ್ ಬಂದಿದ್ದ. ಹೆದರಬೇಡಿ ಅಂಗಂದ್ರೆ ನೀಲಗಿರಿ ಎಣ್ಣೆ ಆಟೆಯಾ. ನಾನು ಇಂಗ್ಲೀಷಲ್ಲಿ ಏನೇನು ಒದರಬೇಕು ಅಂತ ಮನ್ಸಲ್ಲೆ ಮಗ್ ಹೊಡಿತಿದ್ದೆ. ಬರಂಗಿಲ್ವಲ್ಲ. ಆ ಕ್ಷಣಕ್ಕೆ ಒಳ್ಳೆ ಸಿನಿಮಾ ಸೀನ್ ತರಹ ಈ ಹುಡುಗಿ ಬಂದ್ ಬಿಡ್ತು. ಎಗ್ಸಿಬಿಶನ್ ಇದ್ದಾಗ ಸ್ಪೋರ್ಟ್ಸ್ ಇರಲ್ಲ. ಹಂಗಾಗಿ ನಾನು ಯುನಿಫಾರ್ಮಲ್ಲಿದ್ರೆ ಅದು ಟ್ರ್ಯಾಕ್ ಸೂಟಲ್ಲಿ ಮಿಂಚ್ತಾ ಇತ್ತು.
ಮಧು ವೈ.ಎನ್.‌ ಬರೆದ ಹೊಸ ಕಾದಂಬರಿ “ಕನಸೇ ಕಾಡುಮಲ್ಲಿಗೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಆರ್ಯಕನೆಂಬ ನಾಯಕ: ಸತೀಶ್‌ ತಿಪಟೂರು ಬರಹ

ನಾವು ಮಾಡುವ ರಂಗಕೃಷಿಯು ಪ್ರಾಮಾಣಿಕವಾಗಿದ್ದರೆ ಪ್ರತಿಕ್ಷಣವೂ ಹುಟ್ಟುವ ಅಹಂಕಾರವನ್ನು ವಿಸರ್ಜಿಸುತ್ತಲೇ ಇರುತ್ತದೆ ಎಂದು ಹೇಳಿದೆ. ಯಾರ ಸ್ಮೃತಿಗಳು ಸಮಾಜದ ನೋವಿನಿಂದ ಅದ್ದುಕೊಂಡಿರುತ್ತದೋ, ಸಮುದಾಯದ ಕಾಳಜಿಗಳಲ್ಲಿ ಬೆಸೆದುಕೊಂಡಿರುತ್ತದೋ, ಅಂತಹ ಪ್ರಕೃತಿಗಳು ಹಣ, ಅಧಿಕಾರ, ಪ್ರಭಾವಳಿಗಳಿಂದ ಒದಗಿಬರಬಹುದಾದ ಅಹಂಕಾರದಿಂದ ಮುಕ್ತವಾಗಿರುತ್ತದೆ. ಇಲ್ಲಿ ಯಾರ ಬೇರುಗಳು ಸಡಿಲವಾಗಿರುತ್ತದೋ ಅಂತಹವರ ಪ್ರಕೃತಿ ಪಲ್ಲಟವಾಗುತ್ತದೆ; ಮತ್ತು ಹಾಗೆ ಆದುದಕ್ಕೆ ಇರುವ ಕಾರಣಗಳನ್ನು ದೊಡ್ಡದು ಮಾಡುತ್ತಾ ತಮ್ಮ ಇರುವಿಕೆಗೆ ಸಮರ್ಥನೆಯನ್ನು ನೀಡುತ್ತದೆ ಎಂದು ಹೇಳಿದೆ. ಹಣ, ಅಧಿಕಾರ, ಪ್ರಭಾವಳಿಗಳನ್ನು ಧಾರಣೆ ಮಾಡಿಕೊಂಡು ಜೀರ್ಣಿಸಿಕೊಳ್ಳುವ ಶಕ್ತಿಬೇಕು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

Read More

‘ಕೊನೆಗೆ ಉಳಿಯುವುದು ಕಾವ್ಯವೇ’: ಸಂಗೀತ ರವಿರಾಜ್ ಬರಹ

ಕಾವ್ಯ ಸೃಷ್ಠಿಯಲ್ಲಿ ಮಾಗುತ್ತ ಸಾಗುವುದೇ ಕವಿತೆ ಉತ್ತಮವಾಗುತ್ತ ಹೋಗುವುದರ ಲಕ್ಷಣ. ಅದು ಸಿದ್ಧಿಸಿದ್ದು ಇಲ್ಲಿಯೇ ನಮಗೆ ಸಂಕಲನದುದ್ದಕ್ಕೂ ತೋಚಿದಂತಾಗುತ್ತದೆ. ಬರೆದ ಕಾವ್ಯವೆಂಬ ಹೊರೆಯನ್ನು ಮೆಲ್ಲನೆ ಇಳಿಬಿಟ್ಟು ಹಗುರಾಗಿ, ಮತ್ತೆ ಹೊಚ್ಚ ಹೊಸ ಬಹುದೊಡ್ಡ ಹೊರೆ ಹೊತ್ತು ಮತ್ತೆ ಹಗುರಾಗುತ್ತಾರೆ ಎಂಬಂತೆ ನಮಗಿಲ್ಲಿ ಭಾಸವಾಗುತ್ತದೆ. ಪ್ರೇಮವೆನುದರ ಕುರಿತು ಹಲವು ರೀತಿಯ ಭಿನ್ನ ಭಿನ್ನ ವ್ಯಾಖ್ಯಾನಗಳು ನಮ್ಮನ್ನು ದಂಗುಬಡಿಸುತ್ತವೆ.
ನಂದಿನಿ ಹೆದ್ದುರ್ಗ ಕವನ ಸಂಕಲನ “ಒಂದು ಆದಿಮ ಪ್ರೇಮ” ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ