Advertisement

Category: ಪುಸ್ತಕ ಸಂಪಿಗೆ

ಜಯಲಕ್ಷ್ಮೀ ಪಾಟೀಲ್‌ ಆತ್ಮಕಥನ “ತಿಟ್ಹತ್ತಿ ತಿರುಗಿ”ಯ ಆಯ್ದ ಭಾಗ

ಒಂದೆರಡು ದಿನಗಳ ನಂತರ ಅಪ್ಪಾ ದಾಡಿ ಮಾಡಿಟ್ಟುಕೊಂಡ ಟೋಪಾಜ್ ಬ್ಲೇಡನ್ನು ತೆಗೆದುಕೊಂಡು, ಬಲಗಡೆಯ ಮುಂದೆಲೆಯಲ್ಲಿನ ಕಿರುಬೆರಳು ಗಾತ್ರದ ಕೂದಲನ್ನು ಕಣ್ಣೆದುರು ಎಳೆದು ತಂದು ಕರ್ರ್ ಕರ್ರ್ ಎಂದು ಕತ್ತರಿಸಿಕೊಂಡು, ಶಾಂತಾ ಹೇಳಿದಂತೆ, ಅದಕ್ಕೆ ನೀರು ಸೋಕಿಸಿ ಬೆರಳಲ್ಲಿ ಸುರಳಿ ಸುತ್ತಿಹಿಡಿದು ಬಿಟ್ಟೆ. ಅವಳಂತೆ ಗುಂಗುರಾಗದೆ ಕತ್ತರಿಸಿದ ಕೂದಲು ಹಾಗೆಲ್ಲ ಸುಲಭದಲ್ಲಿ ಮಣಿಯಲಾರೆವು ಎಂದು ಸೆಟೆದು ನಿಂತಿದ್ದವು. ಮತ್ತೆ ಮತ್ತೆ ಪ್ರಯತ್ನಿಸುವ ನನ್ನ ಸರ್ಕಸ್ ಅಪ್ಪಾರ ಕಣ್ಣಿಗೆ ಬಿತ್ತು. ಏನದು? ಅಂದರು. ಯಾವುದೇ ಅಳುಕಿಲ್ಲದೇ ನಾನು, ಶಾಂತಾ ಮಾಡಿಕೊಂಡಿದ್ದನ್ನು ನೋಡಿ ನನಗೂ ಆಸೆಯಾಗಿ ಹೀಗೆ ಮಾಡಿಕೊಂಡಿದ್ದೇನೆ ಎಂದೆ.
ಜಯಲಕ್ಷ್ಮೀ ಪಾಟೀಲ್‌ ಆತ್ಮಕಥನ “ತಿಟ್ಹತ್ತಿ ತಿರುಗಿ”ಯ ಆಯ್ದ ಭಾಗ ನಿಮ್ಮ ಓದಿಗೆ

Read More

ನೆಲದ ಕಾವು ಮುಗಿಲ ತಾಕಿ: ರಾಜಕುಮಾರ ಮಡಿವಾಳರ ಕವನ ಸಂಕಲನಕ್ಕೆ ಸತೀಶ ಕುಲಕರ್ಣಿ ಮುನ್ನುಡಿ

ಈ ಕವಿತೆಗಳನ್ನು ಓದಿದಾಗ ಕೆ.ಎಸ್.ಎನ್ ರ ದಾಂಪತ್ಯ ಪ್ರೀತಿ, ಬೇಂದ್ರೆ ಅವರ ಭಾಷಾ ಗತ್ತು, ಕಂಬಾರರ ಜನಪದಿಯ ಕಥಾನಕಗಳು ನೆನಪಾಗದೇ ಇರುವುದಿಲ್ಲ. ಆದರೆ ಇವರನ್ನೆಲ್ಲ ಅದುಮಿ, ತಮ್ಮತನದ ಈಜುಗಾರಿಕೆಯನ್ನು ಮಡಿವಾಳರ ಕಲಿತಿದ್ದಾರೆ. ಕಾವ್ಯ ಪರಂಪರೆ ಪ್ರತಿ ಕವಿಯನ್ನು ಬೆನ್ನಟ್ಟುತ್ತದೆ. ದತ್ತಿ ದೇಣಿಗೆಯನ್ನು ನೀಡುತ್ತಲೇ ಇರುತ್ತದೆ. ಕೊನೆಗೂ ನಮ್ಮ ಹೆಜ್ಜೆ ಗುರುತುಗಳು ಬೇರೆಯವೇ ಆಗಿರಬೇಕು. ಈ ಮಾತಿನಂತೆ ರಾಜಕುಮಾರ ಗೆದ್ದಿದ್ದಾರೆ. ತುಸು ತೆಳು ಛಾಯೆ ಬಿಟ್ಟರೆ ಯಾರ ಹಂಗಿನ ನೆರಳಲ್ಲಿಲ್ಲ. ಬಾನ ಸ್ವತಂತ್ರ ಹಕ್ಕಿಯಂತೆ ಈ ನೆಲದ ಗಾಳಿ ಬೆಳಕು ಸಂವೇದನೆಗಳಲ್ಲಿ ಈಜು ಹೊಡೆದಿದ್ದಾರೆ.
ರಾಜಕುಮಾರ ಮಡಿವಾಳರ “ನೆಲದ ಕಾವು ಮುಗಿಲ ತಾಕಿ” ಕವನ ಸಂಕಲನಕ್ಕೆ ಸತೀಶ ಕುಲಕರ್ಣಿ ಬರೆದ ಮುನ್ನುಡಿ

Read More

ಶಬ್ದ ಸಂವೇದನೆಯ ಒಳ ವಿನ್ಯಾಸ “ಘಾಚರ್ ಘೋಚರ್”: ದೇವಿಕಾ ನಾಗೇಶ್‌ ಬರಹ

“ಘಾಚರ್ ಘೋಚರ್” ಒಂದು ‘ನೀಳ್ಗತೆ ಎಂದು ಕೃತಿಯ ಲೇಖಕ ವಿವೇಕ ಶಾನಭಾಗ ಕರೆದರೂ ಇದು ಎರಡು ತಲೆಮಾರಿನ ಜೀವನಪಯಣದ ಓಟದಲ್ಲಿನ ಏಳುಬೀಳುಗಳನ್ನು ಪಲ್ಲಟವನ್ನೂ ಅಮೂಲಾಗ್ರವಾಗಿ ದಾಖಲಿಸುತ್ತದೆ. ‘ಘಾಚರ್ ಘೋಚರ್ʼ ಈ ಯುಗಳ ಪದ ನಮ್ಮ ಇಡೀ ಬದುಕೆ ಗೋಜಲಾಗಿರುವ ಕ್ರಮಕ್ಕೆ ಭಾವ ಪ್ರತಿನಿಧಿಯಂತೆ ಅನುರಣನಗೊಳ್ಳುತ್ತದೆ’ ಎಸ್. ಆರ್. ವಿಜಯಶಂಕರ್ ಮಾತಿದು. ಆದರೆ ಎಪ್ಪತ್ತು ಪುಟಗಳ ಕಿರು ಕಾದಂಬರಿ ಗಾತ್ರದ ಈ ಕಥೆಯ ಪಾತ್ರಗಳು ಒಂದು ಕುಟುಂಬದ ಭೂಮಿಕೆಯಿಂದ ಹೊರ ಜಗತ್ತಿಗೆ ವಿಸ್ತರಿಸಿಕೊಳ್ಳುತ್ತ ಸಾಗುವ ಚಲನೆ ಮೂಡಿಸುವ ತಲ್ಲಣ ದಂಗು ಬಡಿಸುವಂತಿದೆ.
ವಿವೇಕ ಶಾನಭಾಗ ಕಥಾಸಂಕಲನ “ಘಾಚರ್‌ ಘೋಚರ್”‌ ಕುರಿತು ದೇವಿಕಾ ನಾಗೇಶ್‌ ಬರಹ

Read More

ಸಹಜಪ್ರಕೃತಿ ದರ್ಶನದ ಕವಿತೆಗಳು: ಡಾ. ಬಿ. ಜನಾರ್ದನ ಭಟ್ ಬರಹ

ನಮ್ಮ ಕಾಲದ ದೊಡ್ಡ ದೊಡ್ಡ ಕವಿಗಳೆಲ್ಲ ಹೀಗೆ ನೇರವಾಗಿ ಧರ್ಮಬೋಧನೆ ಅಲ್ಲದಿದ್ದರೂ ಒಂದಲ್ಲ ಒಂದು ಜೀವನ ದರ್ಶನವನ್ನು – ಜೀವನ ಧರ್ಮವನ್ನು – ತಮ್ಮ ಕಾವ್ಯದ ಮೂಲಕ ಜನರಿಗೆ ನೀಡಿದವರೇ ಆಗಿದ್ದಾರೆ. ಮೊಗಸಾಲೆಯವರ ಕಾವ್ಯ ಯಾನವನ್ನೇ ಗಮನಿಸಿದರೆ ಅವರು ಪ್ರಾರಂಭದಲ್ಲಿ ನವ್ಯ ಸಾಹಿತ್ಯದ ಪ್ರೇರಣೆಯಿಂದ ಬರೆಯುತ್ತಿದ್ದರು. ನವ್ಯ ಸಾಹಿತ್ಯಕ್ಕೆ ಅಸ್ತಿತ್ವವಾದದ ಹಿನ್ನೆಲೆ ಇತ್ತು. ಆಮೇಲೆ ಮೊಗಸಾಲೆಯವರನ್ನು ಅಲ್ಲಮಪ್ರಭು ಪ್ರಭಾವಿಸಿದ. ಅಲ್ಲಮನ ಹೊಸ ರೂಪಕಗಳು, ಹೊಸತನವುಳ್ಳ ವಿಚಾರಗಳು ಅವರನ್ನು ಸೆಳೆದವು.
ಡಾ. ನಾ ಮೊಗಸಾಲೆಯವರ ಹೊಸ ಕವನ ಸಂಕಲನ “ಹೇ ರಾಮ್”‌ ಕುರಿತು ಡಾ. ಜನಾರ್ಧನ ಭಟ್‌ ಬರಹ ನಿಮ್ಮ ಓದಿಗೆ

Read More

“ಅಳವು ಅರಿಯದ ಭಾಷೆ” ಎಂಬ ಸಾವಿನ ಗಂಟೆ: ಕೆ. ಪಿ. ಸುರೇಶ ಬರಹ

ಈ ಮಾತು ಎಷ್ಟು? ಬೆಳಗಿನವರೆಗೆ ಪ್ರಸಂಗವನ್ನು ಕಟ್ಟಬೇಕಾದ ಕಾರಣ ಕ್ವಚಿತ್ತಾದ ಚೌಕಟ್ಟಿನ ಮಾತು ಪಾತ್ರಧಾರಿಗೆ ಸಾಲುವುದಿಲ್ಲ. ಆತ ಅಕ್ಷಯಾಂಬರದ ತರ ಮಾತಿನ ಎಳೆಗಳನ್ನು ಪೋಣಿಸುತ್ತಾ ಹೋಗಬೇಕು. ಈ ಸ್ವಾತಂತ್ರ್ಯವೇ ಯಕ್ಷಗಾನದ ವೃತ್ತಿ ಪ್ರದರ್ಶನಗಳ ಜೀವಾಳ ಮತ್ತು ಶಾಪ. ಇದು ಕಲಾವಿದರದ್ದೂ ಕೂಡ. ಹೀಗಾದಾಗ ಮಾತು ಸಡಿಲವಾಗುತ್ತಾ ಸ್ವೇಚ್ಛೆಯಾಗುತ್ತಾ ಹೋಗುವ ವಿಧಿ ಈ ಪ್ರಕಾರದೊಳಗೇ ಅಂತರ್ಗತವಾಗಿದೆ. ಈಗ ಹರಡಿರುವ ಹತ್ತಾರು ಮೇಳಗಳ ಕಲಾವಿದರ ಸಂಖ್ಯೆ ಮತ್ತು ಅವರ ಪ್ರತಿಭಾ ಶ್ರೇಣಿಯನ್ನು ಗಮನಿಸಿದರೆ ವಿದ್ವತ್ತು ಮತ್ತು ಮಾತಿನ ಪ್ರೌಢಿಮೆಗಳೆರಡೂ ಸಮಪಾಕಗೊಂಡ ಕಲಾವಿದರ ಪ್ರಮಾಣ ತೀರ ಕಡಿಮೆ ಸಂಖ್ಯೆಯದ್ದು.
ನಿತ್ಯಾನಂದ ಬಿ. ಶೆಟ್ಟಿ ಬರೆದ “ಅಳವು ಅರಿಯದ ಭಾಷೆ” ಕೃತಿಯ ಕುರಿತು ಕೆ.ಪಿ. ಸುರೇಶ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ