Advertisement

Category: ಪುಸ್ತಕ ಸಂಪಿಗೆ

ತಾಂತ್ರಿಕ ಕವಿಯ ಮಾಂತ್ರಿಕ ಕವಿತೆಗಳು….: ದೇವರಾಜ್‌ ಹುಣಸಿಕಟ್ಟಿ ಬರಹ

ಪ್ರೇಮ, ಪ್ರೇಮ ವೈಫಲ್ಯದ ಕುರಿತು ಕವಿತೆಗಳು ನಿಮಗೆ ಈ ಸಂಕಲದಲ್ಲಿ ಢಾಳವಾಗಿಯೇ ಸಿಗುತ್ತವೆ. ಉದಾಹರಣೆಗೆ “ಕಾಳಜಿ”, ಕಟ್ಟಳೆಯೊಳಗೆ “ಗೋರಿ ಅಲ್ಲ ರೆಂಜಿ ಗಿಡ” ಹೀಗೆ ಅನೇಕ ಕವಿತೆಗಳು ನಿಮ್ಮ ವೈಯುಕ್ತಿಕ ಪ್ರೇಮ, ವೈಫಲ್ಯದ ನೋವು ಸುಖ ಎರಡಕ್ಕೂ ಜೊತೆಯಾಗಿ ರಮಿಸುತ್ತವೆ. ಹೀಗೆ ಕವಿಯೊಬ್ಬ ಆಪ್ತವಾಗುತ್ತಲೇ ಹೋಗುತ್ತಾನೆ. ಇಲ್ಲಿ ವೈನು, ವೇಶ್ಯೆ, ಮೆಟ್ಟು, ಪದ, ಕವಿ, ಕವಿತೆ ಹೀಗೆ ಅನೇಕ ವಿಷಯಗಳ ಕವಿತೆಗಳು ನಿಮ್ಮನ್ನ ಮಾಂತ್ರಿಕ ಸ್ಪರ್ಶದಿಂದ ಎದೆ ನೆಲವ ತೇವಗೊಳಿಸದೇ ಇರುವುದಿಲ್ಲ.
ಸದಾಶಿವ ಸೊರಟೂರು ಅವರ “ಗಾಯಗೊಂಡ ಸಾಲುಗಳು” ಕವನ ಸಂಕಲನದ ಕುರಿತು ದೇವರಾಜ್‌ ಹುಣಸಿಕಟ್ಟಿ ಬರಹ, ನಿಮ್ಮ ಓದಿಗೆ

Read More

ಅಮ್ಮಮ್ಮನಾದ ಹೊತ್ತು…: ಡಾ. ಎಚ್.ಎಸ್.‌ ಅನುಪಮಾ ಮಾತುಗಳು

ಅಲ್ಲಿಂದ ಇಲ್ಲಿಯವರೆಗೆ ಅನುದಿನ ಪುಟ್ಟನ ಸುದ್ದಿ, ನೆನಪುಗಳಿಂದಲೇ ಬೆಳಕು ಹರಿಯುತ್ತದೆ, ಕತ್ತಲಾಗುತ್ತದೆ. ಅವ ಮಗುಚಿದ, ಕೂತ, ತೊದಲು ಮಾತನಾಡಿದ, ಎದ್ದ, ನಿಂತ ಎನ್ನುವುದೆಲ್ಲ ನಮ್ಮದೇ ಸಾಧನೆ ಎಂಬಂತಾಗಿದೆ. ಹಲ್ಲು ಕಡಿದು ಮುದ್ದು ಮಾಡುತ್ತ ಮಾಡುತ್ತ ಮುಂದಿನ ಹಲ್ಲು ಸವೆದೇ ಹೋದಂತಿದೆ! ಸಣ್ಣ ಅವಕಾಶ, ಪುರುಸೊತ್ತು ಸಿಕ್ಕರೂ ಬೆಂಗಳೂರಿಗೆ ಹೋಗಿ ಪುಟ್ಟನ ಕಂಡುಬರುವಾ ಅನಿಸುತ್ತದೆ. ಈ ಅಮ್ಮ ತಮ್ಮನ್ನಿಷ್ಟು ಪ್ರೀತಿಸಿದ್ದಳೋ ಇಲ್ಲವೋ ಎಂದು ನಮ್ಮ ಮಕ್ಕಳು ಶಂಕಿಸಬಹುದಾದಷ್ಟು ಬದುಕು ಸೂರ್ಯಮಯವಾಗಿದೆ!
ಡಾ. ಎಚ್.ಎಸ್.‌ ಅನುಪಮಾ ಕವನ ಸಂಕಲನ “ಅಮ್ಮಮ್ಮನ ಕವಿತೆಗಳು” ಕೃತಿಯ ಕುರಿತು ಅವರ ಬರಹ ನಿಮ್ಮ ಓದಿಗೆ

Read More

ಕಾಣದ್ದು ಕಾಣಿಸಿದ್ದು…!: ಸುಭಾಷ್‌ ರಾಜಮಾನೆ ವಿಮರ್ಶಾ ಕೃತಿಯ ಕುರಿತು ಕಲ್ಲೇಶ್ ಕುಂಬಾರ್ ಬರಹ

ಜಗತ್ತಿನ ಬಹುಮುಖ್ಯ ಕೃತಿಗಳನ್ನು ಗುರುತಿಸುವ, ಪರಿಚಯಿಸುವ, ಆ ಮೂಲಕ ಓದುಗರಿಗೆ ದಾಟಿಸುವಂಥ ಪ್ರಾಮಾಣಿಕ ಕೆಲಸವನ್ನು ಸುಭಾಷ್ ರಾಜಮಾನೆ ಅವರು ಮಾಡುತ್ತಿದ್ದಾರೆ. ಅವರ ಈ ಬರಹಗಳನ್ನು ಓದುವುದರ ಮೂಲಕ ಓದುಗನು ಸ್ವಯಂ ಮರಳಿ ಮೂಲ ಕೃತಿಗಳನ್ನು ಓದುವುದಕ್ಕೆ ಉತ್ಸುಕನಾಗುತ್ತಾನೆ ಎಂಬುದರಲ್ಲಿ ಸಂಶಯವೇ ಇಲ್ಲ! ಇನ್ನೂ ಹೇಳಬೇಕೆಂದರೆ, ಕೃತಿಕಾರ ಮರೆಯಾಗಿ ಕೃತಿಯೇ ಮುಖ್ಯವಾಗುವುದು, ಹಾಗೂ ಆ ಕೃತಿಯ ಮೂಲಕವೇ ಕೃತಿಕಾರ ಗುರುತಿಸಿಕೊಳ್ಳುವಂತಾಗುವುದು ಒಂದು ಕ್ರಿಯೆ. ಅಂಥ ಲೇಖಕ ಮತ್ತು ಆ ಲೇಖಕನ ಕೃತಿಗಳು ಶಾಶ್ವತವಾಗಿ ನಿಲ್ಲುತ್ತವೆ! ಹಾಗೆ ನಿಲ್ಲಬಹುದಾದ ಲೇಖಕರ ಕೃತಿಗಳನ್ನು ಓದುಗರಿಗೆ ಸುಭಾಷ್ ರಾಜಮಾನೆ ಅವರು ಪರಿಚಯಿಸಿದ್ದಾರೆ.
ಸುಭಾಷ್‌ ರಾಜಮಾನೆ ವಿಮರ್ಶಾ ಕೃತಿ “ಕಂಡದ್ದು ಕಾಣದ್ದು” ಕುರಿತು ಕಲ್ಲೇಶ್‌ ಕುಂಬಾರ್‌ ಬರಹ

Read More

 ರೂಪಿಸಿದ ಮುಂಬೈ, ರೂಪುಗೊಂಡ ಮುಂಬೈ: ಕೆ. ಸತ್ಯನಾರಾಯಣ ಕೃತಿಯ ಪುಟಗಳು

ನವರೋಜಿ ಶಾಲೆಗೆ ಸೇರಿದ ಕಾಲಾವಧಿ ಎಂತಹುದೆಂದರೆ, ಮುಂಬೈ, ನಗರವಾಗಿ, ಪ್ರಾಂತ್ಯವಾಗಿ, ಶಿಕ್ಷಣ ಕ್ಷೇತ್ರದಲ್ಲಿ ನಾನಾ ರೀತಿಯ ಪ್ರಯೋಗ, ಪರಿವರ್ತನೆಗಳನ್ನು ಕಾಣುತ್ತಿದ್ದ ದಿನಗಳವು. ನೂರಾರು ಕನಸಿಗರು, ಪ್ರಯೋಗಶೀಲರು, ವಿಶಾಲ ಹೃದಯದ ಪಾಶ್ಚಿಮಾತ್ಯರು, ಎಲ್ಲರಿಗೂ ಶಿಕ್ಷಣದ ಬಗ್ಗೆ ಆಸಕ್ತಿ. ಭಾರತೀಯರನ್ನು ಹೊಸ ವಿಚಾರಗಳಿಗೆ, ಕಲಿಯುವ ಪದ್ಧತಿಗಳಿಗೆ ತೆರೆಯುವ ಹುಮ್ಮಸ್ಸು. ನವರೋಜಿ ಈ ಎಲ್ಲ ಕನಸು, ಪ್ರಯೋಗಗಳ ಫಲಾನುಭವಿ. ಮೊದಲನೆಯ ತಲೆಮಾರಿನ ಫಲಾನುಭವಿ.
ಕೆ. ಸತ್ಯನಾರಾಯಣ ಹೊಸ ಕೃತಿ “ದಾದಾಭಾಯಿ ನವರೋಜಿ” ಕೆಲವು ದಿನಗಳಲ್ಲಿ ಬಿಡುಗಡೆಯಾಗಲಿದ್ದು, ಇಂದು ನವರೋಜಿ ಅವರ ೨೦೦ನೇ ಹುಟ್ಟುಹಬ್ಬ, ಅದರ ಪ್ರಯುಕ್ತ ಈ ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಮಹಾದೇವಿಯಕ್ಕನೆಂಬ ಬೆಳಕು…: ಸುಭದ್ರಾ ಹೆಗಡೆ ಬರಹ

ಅಕ್ಕನ ವಚನಗಳನ್ನು ಉದಾರಿಸುತ್ತ, ಆ ಘಟನೆಗಳಿಗೆ ಪೂರಕವಾಗುವಂತೆ ಕತೆಗಳನ್ನು ಹೇಳುವುದು ಈ ಕೃತಿಯ ಮತ್ತೊಂದು ವಿಶೇಷತೆ. ರಾಜ ಮನೆತನದ ರೀತಿ-ರಿವಾಜುಗಳನ್ನು ಸ್ವತಂತ್ರ ಮನೋಭಾವದ ಅಕ್ಕನಿಗೆ ಸಹಿಸುವುದು ಸಹಜವಾಗಿಯೇ ಕಷ್ಟವಾಗಿ, ಆ ರಾಜ ವೈಭೋಗವನ್ನೆಲ್ಲ ಧಿಕ್ಕರಿಸಿ ಹೊರ ನಡೆಯುತ್ತಾಳೆ. ಅಲ್ಲಿಂದ ಅಕ್ಕನ ಅಪರಿಮಿತ ಹುಡುಕಾಟ ನಿರಂತರವಾಗಿ ಸಾಗುತ್ತದೆ. ಒಂಟಿ ಹೆಣ್ಣು ಅರೆವಸ್ತ್ರ ಧರಿಸಿ ನಡೆವ ದಾರಿಯಲ್ಲಿ ಬರುವ ಅನೇಕ ಸಂಕಷ್ಟಗಳನ್ನು ಮೆಟ್ಟಿ ನಿಲ್ಲುವ ಧೀರೋದ್ಧಾತ ಮನಸ್ಸುಳ್ಳ ಛಲಗಾತಿ ಅಕ್ಕನ ಮೇರು ವ್ಯಕ್ತಿತ್ವವನ್ನು ಅದ್ಭುತವಾಗಿ ಕೆತ್ತಿದ್ದಾರೆ ಲೇಖಕಿಯವರು. ಅಕ್ಕನ ವ್ಯಕ್ತಿತ್ವದ ಅನಾವರಣವಾದ ರೀತಿ ಅಸದೃಶ್ಯವಾಗಿದೆ.
ಡಾ. ಎಚ್.ಎಸ್. ಅನುಪಮಾ ಅವರ “ಬೆಳಗಿನೊಳಗು ಮಹಾದೇವಿಯಕ್ಕ” ಕಾದಂಬರಿಯ ಕುರಿತು ಸುಭದ್ರಾ ಹೆಗಡೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ