Advertisement

Category: ಪುಸ್ತಕ ಸಂಪಿಗೆ

ಮಾನಸಿಕ ಹಿಂಸೆಯೂ ಕ್ರೌರ್ಯವೇ: ಗಿರೀಶ್‌ ಕಾಸರವಳ್ಳಿ ಕೃತಿಯ ಆಯ್ದ ಭಾಗ

ಕಾರಂತರದ್ದು ಸದಾ ಕ್ರಿಯಾಶೀಲವಾಗಿರುವ ಮನಸ್ಸು. ಅವರಿಗೇ ‘ತಾನು ಖಾಲಿಯಾದೆ’ ಅಂತನ್ನಿಸಬೇಕಾದರೆ ಆ ಭೂಪಾಲ್ ಘಟನೆ ಎಂತಹ ಆಘಾತ ತಂದಿರಬೇಕು. ಅವರ ಮನಸ್ಸು ಮುದುಡುವಂತೆ ಮಾಡಿ, ತಮ್ಮಿಂದ ಇನ್ನು ಸೃಜನಾತ್ಮಕವಾಗಿ ಏನನ್ನೂ ಮಾಡಲು ಸಾಧ್ಯವಿಲ್ಲ ಅನ್ನಿಸುವಂತೆ ಮಾಡಿದರಲ್ಲಾ, ಅದುವೇ ಕ್ರೌರ್ಯ. ಭೂಪಾಲ್‌ನ ಆ ಘಟನೆ ನಿಜವಾಗಿಯೂ ನಡೆದದ್ದೋ ಅಲ್ಲವೋ ನನಗೆ ತಿಳಿಯದು. ಅಲ್ಲಿನ ರಾಜಕೀಯ ರಂಗಮಂಡಲದ ಮುಖ್ಯಸ್ಥರಾಗಿದ್ದ ಕಾರಂತರನ್ನು ಬಲಿಪಶು ಮಾಡಿದರು ಎಂದು ಅವರ ಕೆಲವು ಸ್ನೇಹಿತರು ಹೇಳಿದ್ದನ್ನು ನಾನು ಕೇಳಿದ್ದೇನೆ.
ಖ್ಯಾತ ಸಿನಿಮಾ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಅವರ ಚಲನಚಿತ್ರಗಳ ಸಂಕಥನ “ಬಿಂಬ ಬಿಂಬನ” ದಿಂದ “ಕ್ರೌರ್ಯ” ಚಿತ್ರದ ಕುರಿತ ಮಾತುಕತೆ ನಿಮ್ಮ ಓದಿಗೆ

Read More

ಎದೆ ಸೀಳಿತು ಕೆಂಪುಲಾವದ್ಹಕ್ಕಿ…: ಗೋಳೂರ ನಾರಾಯಣಸ್ವಾಮಿ ಬರಹ

“ಪ್ರೀತಿಸುವುದಕ್ಕಿಂತ ಕ್ರಾಂತಿಯಾವುದಾದರೂ ಇದಿಯಾ; ನನ್ನ ಕವಿತೆ ಇದನ್ನಷ್ಟೇ ಬಯಸುತ್ತದೆ” ಎನ್ನುವಾಗ, ಜಂಬೂದ್ವೀಪದ ಅಪ್ಪ ಅವ್ವ ಅನ್ನ ಉತ್ಪಾದಿಸುವ ಘನಕಾರ್ಯಕ್ಕೆ ಕಣ್ಣು ಬಂದು, ಅದೆಲ್ಲೋ ಬಲೂನು ಮಾರುತ್ತಿರುವ ಬಡಜನರ ಮೇಲೆ ದೃಷ್ಟಿ ಹಾಯಿಸುತ್ತಾ ಇರುತ್ತದೆ. ಒಂದೇ ಮನೆಯಲ್ಲಿದ್ದು, ಒಂದೇ ತಟ್ಟೆಯಲ್ಲಿ ಅನ್ನ ತಿಂದ ಜನರೇ ಹಣ, ಆಸ್ತಿ ಆಸೆಗಾಗಿ ಸಾವನ್ನೇ ಕತ್ತು ಹಿಸುಕಿ ಕೊಲ್ಲುತ್ತಿರುವಾಗ, ಬಡಜನರ ಬಗ್ಗೆ ದನಿಯಾಗಬೇಕೆಂಬ ಇವರ ಹುಂಬುತನಕ್ಕೆಷ್ಟೊಂದು ಧೈರ್ಯವಿರಬೇಕು ಎಂದುಕೊಳ್ಳುವಾಗಲೆ, ಅದಕ್ಕವರು ಉತ್ತರವಾಗಿ ‘ನದಿಗೆ ತಡೆಯೊಡ್ಡಬಹುದು, ಬತ್ತಿಸಲಾಗುವುದೇ ಒಳಗಿನ ಒರತೆ” ಎಂದುಬಿಡುತ್ತಾರೆ.
ಎಸ್.ಕೆ. ಮಂಜುನಾಥ್‌ ಕವನ ಸಂಕಲನ “ಗಾಳಿಯ ಎದೆಸೀಳಿ ಹೊರಟ ಹಕ್ಕಿ” ಕುರಿತು ಗೋಳೂರ ನಾರಾಯಣಸ್ವಾಮಿ ಬರಹ

Read More

‘ಅವಳ ಪಥ’ದ ಹಲವು ಪದರಗಳು: ಡಾ. ಎಲ್.ಜಿ. ಮೀರಾ ವಿಮರ್ಶೆ

ಚೇತನಾ ಹೆಗಡೆಯಂತಹ ಹೊಸ ವಿಮರ್ಶಕಿಯರು ಇವತ್ತು `ಹಿಂದಣ ಹಜ್ಜೆಯ’ ಚೈತನ್ಯವನ್ನು ಮೈಗೂಡಿಸಿಕೊಂಡು, ಆದರೆ, ಅಲ್ಲಿ ವಿರಮಿಸದೆ `ಮುಂದಣ ಹೆಜ್ಜೆ’ಯನ್ನು ಇಡಬೇಕಿದೆ, ಸ್ತ್ರೀ ಅಸ್ಮಿತೆಯ ಹೊಸ ದಿಕ್ಕುಗಳನ್ನು ಶೋಧಿಸಬೇಕಿದೆ. ನಮಗೆ ಹೊರನೋಟಕ್ಕೆ ತೋರುವ ಸ್ತ್ರೀಮಾದರಿಗಳು ಹೊಸಹೊಸದಾಗಿವೆ ಮಾತ್ರವಲ್ಲ, ಇಂದು `ಸ್ತ್ರೀ’ಎಂಬ ವ್ಯಕ್ತಿಯ ಅಸ್ಮಿತೆಯೇ ಬದಲಾಗುತ್ತಿದೆ. ಈಗ ಸ್ತ್ರೀ ಹಾಗೂ ಪುರುಷ ಎಂಬುದು ಅಚ್ಚುಕಟ್ಟಾಗಿ ಗೆರೆ ಕೊರೆದಂತೆ ಪ್ರತ್ಯೇಕಿಸಬಹುದಾದ ಎರಡು ಧ್ರುವಗಳಾಗಿ ಉಳಿದಿಲ್ಲ, ಅದೊಂದು ವರ್ಣಪಟಲ(ಸ್ಪೆಕ್ಟ್ರಮ್), ಅನೇಕ ಆಯ್ಕೆ ಮತ್ತು ಸಂಯೋಜನೆಗಳ ಒಂದು ವಿಸ್ತಾರ.
ಚೇತನಾ ಹೆಗಡೆ `ಅವಳ ಪಥ’ ಕೃತಿಯ ಕುರಿತು ಡಾ. ಎಲ್.ಜಿ. ಮೀರಾ ಬರಹ ನಿಮ್ಮ ಓದಿಗೆ

Read More

ಕಲ್ಪನೆಯಿಂದ ವಾಸ್ತವಕ್ಕೆ…: ಗಿರೀಶ್‌ ಕಾಸರವಳ್ಳಿ ಕೃತಿಯ ಆಯ್ದ ಭಾಗ

ಪುಣೆಯ ಫಿಲ್ಮ್ ಇನ್‌ಸ್ಟಿಟ್ಯೂಟ್‌ನಲ್ಲಿ ನನ್ನ ಸಹಪಾಠಿಯಾಗಿದ್ದ ನಾಸೀರುದ್ದೀನ್ ಶಾ ಭಾರತ ಸಿನಿ ಉದ್ಯಮದಲ್ಲಿ ನಾನು ಮೆಚ್ಚುವ ನಟರಲ್ಲಿ ಒಬ್ಬರು. ಯಾವ ಪಾತ್ರವನ್ನು ಕೊಟ್ಟರೂ ಆ ಪಾತ್ರಕ್ಕೆ ವಿಶಿಷ್ಟತೆ ತರಬಲ್ಲ ಶಕ್ತಿ ಇರುವ ಅಪರೂಪದ ನಟ. ಆದರೆ ಈ ಸಿನಿಮಾದಲ್ಲಿ ನನ್ನ ಅನುಭವ ಅಷ್ಟು ಹಿತಕರವಾಗಿರಲಿಲ್ಲ. ಕನ್ನಡದ ಸಂಭಾಷಣೆ ನೆನಪಿಟ್ಟುಕೊಳ್ಳಲು ಅಸಾಧ್ಯವಾಗಿ ಅವರಿಗೆ ಇರುಸುಮುರುಸಾಗುತ್ತಿತ್ತು. ಅದರಿಂದ ಹುಟ್ಟಿದ ಅಸಹನೆ ಚಿತ್ರೀಕರಣದ ವೇಳೆಯಲ್ಲೂ ಪ್ರತಿಧ್ವನಿಸುತ್ತಿತ್ತು.
ಖ್ಯಾತ ಸಿನಿಮಾ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಅವರ ಚಲನಚಿತ್ರಗಳ ಸಂಕಥನ “ಬಿಂಬ ಬಿಂಬನ” ದಿಂದ “ಮನೆ” ಚಿತ್ರದ ಕುರಿತ ಮಾತುಕತೆ ನಿಮ್ಮ ಓದಿಗೆ

Read More

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು, ಮಹಿಳೆಯು ಸಮಾಜದ ಒಂದು ಅಂಗ ಎಂಬುದು ಅಂಬೇಡ್ಕರ್ ಶಕೆ ಆರಂಭಗೊಂಡಾಗಿನಿಂದ ಅನೇಕರ ಕಣ್ಣು ತೆರೆಸಲು ಯತ್ನಿಸುತ್ತಲೇ ಬಂದಿದೆ. ಅದಕ್ಕೆ ಪೂರಕವಾಗಿ ಹಬ್ಬು ಸರ್, ಇಲ್ಲಿ ಆಚಾರ್ಯ ಕೃಪಲಾನಿ ಹೇಳಿದ ಹೀಗೊಂದು ಮಾತನ್ನು ನೆನೆಯುತ್ತಾರೆ, ‘ಹಕ್ಕಿಗೆ ಒಂದೇ ರೆಕ್ಕೆಯಿಂದ ಹೇಗೆ ಹಾರಲು ಸಾಧ್ಯವಿಲ್ಲವೋ ಹಾಗೆಯೇ ಮಹಿಳೆಯ ಅಭಿವೃದ್ಧಿಯಾಗದೇ ಇದ್ದಂತಹ ಸಮಾಜ ಕೂಡ ಅಂಥದೊಂದು ಅಂಗವಿಕಲತೆಯಿಂದ ಬಳಲುತ್ತದೆ’ ಈ ಮಾತು ಮಹಿಳೆಯರ ಸಮಾನ ಹಕ್ಕುಗಳನ್ನು ಪ್ರತಿಪಾದಿಸುತ್ತದೆ.
ಅರುಣಕುಮಾರ ಹಬ್ಬು ಅವರು ಬರೆದ “ಮಹಿಳೆ ಮತ್ತು ಮಾಧ್ಯಮ – ಒಂದು ಅವಲೋಕನ” ಕೃತಿಯ ಕುರಿತು ಸುನಂದಾ ಪ್ರಕಾಶ ಕಡಮೆ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ