Advertisement

Category: ಪುಸ್ತಕ ಸಂಪಿಗೆ

ಆ ಹೂವಿನಿಂದಲೆ ಇಷ್ಟೆಲ್ಲ ಆಯಿತು ಅನ್ನಬಹುದೆ. ಗೊತ್ತಿಲ್ಲ!

ಕೆಂಪುಹುಡಿಮಣ್ಣಿನ ಮೂರು ಸುತ್ತು ಎಡಕ್ಕೆ ಹೊರಳುವ ನಾಲ್ಕು ಸುತ್ತು ಬಲಕ್ಕೆ ಹೊರಳುವ ದಾರಿ ಮುಗಿಯಿತು. ಈಗ ಕಪ್ಪುಮಣ್ಣಿನ ಬೇರೆ ತರಹದ ಮರಗಳ ದಟ್ಟಕಾಡುದಾರಿ. ಕಾಲಿಗೋ ಪುಳಕ! ದಾರಿ ಹೊರಳಿದಂತೆ ಹೊರಳುತ್ತಾ ನಡೆದೆ. ಸಣ್ಣ ಸಣ್ಣ ತಿರುವುಗಳು. ಎಡಬಲ ಎದೆಮಟ್ಟದ ಪೊದೆಗಳು. ಸಣ್ಣಸಣ್ಣ ಕಾಡುಹೂಗಳು, ಸಣ್ಣಸಣ್ಣ ಕಾಡುಹಣ್ಣುಗಳು. ಹಾವಿನಂತೆ ಸುರುಳಿಸುರುಳಿ ಸುತ್ತಿಕೊಂಡು ಮರವನ್ನೇ ಬಗ್ಗಿಸಿದಂತೆ ಮೇಲಿಂದ ತೇಲಾಡುವ ಬಳ್ಳಿಗಳು. ದಪ್ಪನೆಯ ಕಾಂಡದ ಮರಗಳ ಮೇಲೆ ಬೇರೆ ತರಹದ ಸಣ್ಣಸಣ್ಣ ಎಲೆಯ ಸಸ್ಯಗಳು. ಜೀವವೈವಿಧ್ಯದ ಸ್ಪಷ್ಟ ಮಾದರಿ.
ಇಂದ್ರಕುಮಾರ್ ಎಚ್.ಬಿ. ಹೊಸ ಕಾದಂಬರಿ “ಎತ್ತರ”ದ ಕೆಲ ಪುಟಗಳು ನಿಮ್ಮ ಓದಿಗೆ

Read More

ವಾಸ್ತವದ ಹಂದರವನ್ನು ತೆರೆದಿಡುವ ‘ನೋಟ್ ಬುಕ್’

ಶಿವಲಿಂಗಪ್ಪ ಹಂದಿಹಾಳು ಅವರು ಮಕ್ಕಳಿಗೆ ಅಗತ್ಯವಾದ ನೈತಿಕ ಮೌಲ್ಯಗಳನ್ನು ನೇರವಾಗಿ ಹೇಳುವ ಗೋಜಿಗೆ ಹೋಗದೆ ಮಕ್ಕಳ ಮೂಲಕವೇ ನಿರೂಪಿಸುವ ಹೊಸತನವನ್ನು ಮಾಡಿರುತ್ತಾರೆ. ಇಲ್ಲಿನ ‘ಐಸ್ ಕ್ರೀಮ್’ ಕಥೆಯು ಬಡ ವಿದ್ಯಾರ್ಥಿಯೊಬ್ಬನ ಐಸ್ ಕ್ರೀಮ್ ಬಗೆಗಿನ ಚಪಲ ಅವನನ್ನು ತನ್ನ ಮನೆಯ ಬಡತನವನ್ನು ಮೀರಿ ಖಾಸಗಿ ಶಾಲೆಯೊಂದಕ್ಕೆ ದಾಖಲಾಗಿ ಕೊನೆಗೆ ಅಲ್ಲಿನ ಆರ್ಥಿಕ ಒತ್ತಡ ಸಹಿಸಲಾರದೆ ಪುನಃ ತನ್ನೂರಿನ ಸರ್ಕಾರಿ ಶಾಲೆಗೆ ಸೇರುವ ಕಥಾ ಹಂದರವನ್ನು ಹೊಂದಿದ್ದು, ಅಗತ್ಯವಿದ್ದಷ್ಟೇ ಆಸೆಪಡು ಎಂಬುದನ್ನು ಸೂಚ್ಯವಾಗಿ ಹೇಳುತ್ತದೆ.
ಡಾ.ಶಿವಲಿಂಗಪ್ಪ ಹಂದಿಹಾಳು ಅವರ ಮಕ್ಕಳ ಕಥಾ ಸಂಕಲನ “ನೋಟ್‌ಬುಕ್‌” ಕುರಿತು ಪ.ನಾ. ಹಳ್ಳಿ ಹರೀಶ್‌ ಕುಮಾರ್‌ ಬರಹ

Read More

ಹಿಂದಣ ಕಾಲಕ್ಕೆ ಎಳೆದೊಯ್ಯುವ ‘ಕಥಾಗತ’

ಕಥಾಗತವನ್ನು ಓದುತ್ತಾ ಹೋದಂತೆ ಇಂದಿನ ಕಾಲಮಾನದಿಂದ ಕೊಂಡೊಯ್ಯುವ ಕಲೆ ಡಾ. ನವೀನ್ ಅವರು ಸಿದ್ಧಿಸಿಕೊಂಡದ್ದು ವೇದ್ಯವಾ ಆಶ್ಚರ್ಯವಾಗುತ್ತದೆ. ಜೊತೆಗೆ ತಮಿಳಿನ ಕುರಿತಾದ ಭಾವನೆ ಸ್ಪುಟವಾಗುವುದು ಮಧ್ಯದಲ್ಲಿ, ಮಹಾಬಲಿಪುರವನ್ನು ಚಾಳುಕ್ಯರ ಶಿಲ್ಪಕ್ಕೆ ತಂದು ನಿಲ್ಲಿಸುವ ತುಲನೆಯ ಜೊತೆಗೆ ಒಂದು ವಿಷಾದ ಹೊರಹೊಮ್ಮುತ್ತದೆ. ಸುನಾಮಿಯ ಹೊಡೆತಕ್ಕೆ ಮುಲು ಇದು ಸಿಗಲಾರದೇನೋ ಎನ್ನುವ ಭಾವನೆ ಕೆದಕುತ್ತದೆ. ಮಗಧ ಮಹಾಜನಪದ ಇರಬಹುದು ನಾಲಂದಾ ಇರಬಹುದು, ಇವರ ಬರಹದಲ್ಲಿ ಕಾಡಿ ಕೆದಕುತ್ತದೆ.
ನವೀನ ಗಂಗೋತ್ರಿ ಕಥಾಸಂಕಲನ “ಕಥಾಗತ”ಕ್ಕೆ ಸದ್ಯೋಜಾತ ಭಟ್ಟ ಬರೆದ ಮುನ್ನುಡಿ

Read More

ಹೆಣ್ಣು ಮಾಡುವುದೆಲ್ಲ ಕಾಯಕವೇ

ಹೆಣ್ಣು ಮಾಡುವುದೆಲ್ಲ ಕಾಯಕವೇ ಎಂದು ತಮ್ಮ ಬಾಲ್ಯದಿಂದ ತಾವು ಇಂದಿನವರೆಗೆ ಕಂಡ ಹೆಂಗಸರನ್ನೆಲ್ಲ ಪುರುಷರು ನೆನೆದರು. ಯಾವ ಸ್ವಾರ್ಥವೂ ಇಲ್ಲದೆ, ಕಾಯಕ ಎಂಬ ಹೆಸರಿಲ್ಲದೆ, ಗುರುತಿಲ್ಲದೆ, ಸಂಭಾವನೆಯಿಲ್ಲದೆ, ರಜೆಯಿಲ್ಲದೆ, ವಿರಾಮವಿಲ್ಲದೆ ಸಾಯುವ ತನಕ ಒಂದಲ್ಲ ಒಂದು ಕೆಲಸ ಮೈಮೇಲೆಳೆದುಕೊಂಡು ಮಾಡುವ ಹೆಂಗಸರಿಲ್ಲದಿದ್ದರೆ ಲೋಕ ನಡೆಯುವುದೇ ಇಲ್ಲ ಎಂದ ಮಾರಯ್ಯ. ತನ್ನ ತಾಯಿಯು ಏನಾದರೂ ಮಾತಾಡುವಾಗ, ಕತೆ ಹೇಳುವಾಗ ಕೈಗೊಂದು ಕೆಲಸ ಅಂಟಿಸಿಕೊಂಡುಬಂದು ಕೂರುತ್ತಿದ್ದಳೆಂದೂ, ಕೆಲಸವಿಲ್ಲದಿದ್ದರೆ ಅವಳ ಬಾಯಿಂದ ಮಾತೇ ಬರುತ್ತಿರಲಿಲ್ಲವೆಂದೂ ಉಗ್ಘಡಿಸುವ ಗುಬ್ಬಿದೇವಯ್ಯ ನೆನಪಿಸಿಕೊಂಡು ಹೇಳಿದ.
ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಡಾ. ಎಚ್.ಎಸ್. ಅನುಪಮಾ ಅವರ “ಬೆಳಗಿನೊಳಗು ಮಹಾದೇವಿಯಕ್ಕ” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಹಾರುವ ತಟ್ಟೆ…

ನೀರಿಗೆಂದು ಅಗೆದಾಗ ದ್ರವರೂಪದ ಚಿನ್ನ ಎನ್ನಿಸಿದ ಪೆಟ್ರೋಲ್ ಸಿಕ್ಕರೆ? ಕರ್ನಾಟಕದಲ್ಲಿ ಕಂಡಕಂಡೆಡೆ ಬೋರ್‍ವೆಲ್ ತೋಡುತ್ತಿರುವ ನೀರ್ ಸಾಬರು ಎನ್ನಿಸಿರುವ ನಜೀರ್ ಸಾಬರೂ ಕಡಿಮೆ ಆಗುತ್ತಿರುವ ನೀರಿನ ಮಟ್ಟವನ್ನು ಗಣಿಸದೆ ಬೋರ್‍ವೆಲ್ ತೋಡುವ ಕೆಲಸವನ್ನು ಇನ್ನೂ ಚುರುಕುಗೊಳಿಸಿದರೆ ನೀರಿಗೆ ಬದಲು ನಮಗೂ ಪೆಟ್ರೋಲ್ ಸಿಕ್ಕರೆ ನೀರ್‍ಸಾಬರು ಪೆಟ್ರೋಲ್ ಸಾಬ್ ಆಗಬಹುದು. ಕಾವೇರಿ ಬೇಸಿನ್‍ನಲ್ಲಿ ತೈಲ ಸಿಕ್ಕ ಸುದ್ದಿ ಆಗಾಗ್ಗೆ ಬರುತ್ತಿರುವಾಗ ಕರ್ನಾಟಕಕ್ಕೇಕೆ ಈ ದ್ರವರೂಪದ ಚಿನ್ನ ಬೇಡ? `ಬೋರ್‍ವೆಲ್’ ತೋಡುವುದು ಹೆಚ್ಚಾಗಬಹುದು.
ಜೋಗಿ ಸಂಪಾದಿಸಿದ “ವೈಯೆನ್ಕೆ UNLIMITED ವಾಚಿಕೆ” ಕೃತಿಯ ಆಯ್ದ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ