Advertisement

Category: ಪುಸ್ತಕ ಸಂಪಿಗೆ

ಆಧುನಿಕ ಮನೋಧರ್ಮದ ಭರತನ ಚರಿತ್ರೆ: ಚಂದ್ರಮತಿ ಸೋಂದಾ ಬರಹ

ಪಿತೃಪ್ರಧಾನ ವ್ಯವಸ್ಥೆಯ ದೌರ್ಬಲ್ಯಗಳನ್ನು ಸೂಕ್ಷ್ಮವಾಗಿ ಎತ್ತಿ ತೋರಿಸುತ್ತಲೇ ಅದಕ್ಕೆ ವಿಭಿನ್ನವಾದ ಇನ್ನೊಂದು ಮುಖವೂ ಸಾಧ್ಯವಿದೆ ಎನ್ನುವ ಪಿಸುನುಡಿಯೊಂದಿಗೆ ಹೊರಡುವ ಕೃತಿ ನಿಧಾನವಾಗಿ ಅದರ ಸಾಧ್ಯತೆಯನ್ನು ಅನಾವರಣಗೊಳಿಸುತ್ತ, ಸರಿಯಾದ ದಾರಿ ಹೀಗಿರಬೇಕು ಎನ್ನುವಂತೆ ಮುಂದುವರಿಯುತ್ತದೆ. ರಾಜಸತ್ತೆಯಲ್ಲಿ ಹಿರಿಮಗನಿಗೆ ಪಟ್ಟಗಟ್ಟಿದ ಮೇಲೆ ಉಳಿದ ಅಣ್ಣತಮ್ಮಂದಿರು, ಪರಿವಾರದವರು ರಾಜನನ್ನು ಅವಲಂಬಿಸಿಯೇ ಇರಬೇಕೆನ್ನುವ ತಥಾಗತ ನಂಬಿಕೆಯಲ್ಲಿ ಉಳಿದವರ ಮನಃಸ್ಥಿತಿ ಏನಿದ್ದೀತು? ಹೇಗಿದ್ದೀತು?
ಡಾ. ಆರ್ ಸುನಂದಮ್ಮ ಬರೆದ “ಭರತಕಲ್ಪ” ಕೃತಿಯ ಕುರಿತು ಡಾ. ಚಂದ್ರಮತಿ ಸೋಂದಾ ಬರಹ ನಿಮ್ಮ ಓದಿಗೆ

Read More

ಒಂದು ಆಕಾಶ, ಹಲವು ಏಣಿಗಳು: ಯೋಗೀಂದ್ರ ಮರವಂತೆ ಬರಹ

ವಿಮಾನಗಳ ಚರಿತ್ರೆಯನ್ನು ಬರೆದವರು ಬೇರೆಬೇರೆ ಕಾಲಘಟ್ಟದಿಂದ ಸ್ಥಳದಿಂದ ಘಟನೆಗಳಿಂದ ತಮ್ಮ ಅಧ್ಯಯನ, ಪುರಾವೆ ಹಾಗು ಅಂದಾಜುಗಳನ್ನು ವಿಶದೀಕರಿಸುವುದಿದೆ. ಆಕಾಶಕ್ಕೆ ನೆಗೆಯಬೇಕು ಎನ್ನುವ ಉತ್ಕಟ ಆಸೆ ಮನುಷ್ಯರಿಗೆ ಎಂದು ಬಂತೋ ಕರಾರುವಕ್ಕಾಗಿ ಹೇಳಿದವರಿಲ್ಲವಾದರೂ ಬಾನಿನಲ್ಲಿ ಸ್ವಚ್ಛಂದವಾಗಿ ಹಾರಿ ಇಳಿಯುವ ಹಕ್ಕಿಗಳನ್ನು ನೋಡಿ ನಮಗೂ ಹಾರುವ ಕನಸು ಹುಟ್ಟಿತು. ಮತ್ತೆ ಆ ನಿಟ್ಟಿನಲ್ಲಿ ಪ್ರಯತ್ನಗಳು ನಿರಂತರವಾಗಿ ಸಾಗಿದವು ಎನ್ನುವ ಉಲ್ಲೇಖಗಳು ಓದಿನಲ್ಲಿ ಸಿಗುತ್ತವೆ.
ಯೋಗೀಂದ್ರ ಮರವಂತೆ ಬರೆದ ವಿಮಾನ ಲೋಕದ ಅಚ್ಚರಿ, ಅನುಭವಗಳ ಕುರಿತ ಹೊಸ ಕೃತಿ “ಏರೋ ಪುರಾಣ”ದ ಒಂದು ಬರಹ ನಿಮ್ಮ ಓದಿಗೆ

Read More

ಮೊಟ್ಟೆಕೋಳಿಯೇ ಬೇಕೆಂದ ಅಳಿಯರು!: ಸೂರ್ಯಕೀರ್ತಿ ಪ್ರಬಂಧ

‘ಏನೇ ನಿಮ್ಮವ್ವ ಅಳಿಯಂದ್ರ ನೋಡೋ ಹುಟ್ಟೇನೆ ಇದು, ಇದೊಂದು ಬಾಳಾಟ ಅಂತ ನಾನು ಅಂದುಕೊಂಡಿರಲಿಲ್ಲ, ಅಕ್ಕಪಕ್ಕದವರೆಲ್ಲ ಎಷ್ಟು ಚೆಂದವಾಗಿ ಅಳಿಯರನ್ನು ಕರ್ದು ಕಳಿಸ್ತಾರೆ ಅನ್ನೋದ್ನ ನೋಡಿ ಕಲಿಬೇಕು’ ಎಂದೆಲ್ಲ ಅಂದಿದ್ದನ್ನು ನೋಡಿ. ಮೇಯಲು ಹೋದ ಕೋಳಿಗಳ ಬಿಡದೆ ಅಟ್ಟಾಡಿಸಿಕೊಂಡು ಹಿಡಿದು ಕೂಯ್ದು ತಿಂದು ತಮ್ಮ ಹೆಂಡತಿಯರ ಜೊತೆ ಹೊರಟು ನಿಂತರು. ಅಜ್ಜಿ ಮಕ್ಕಳ ಖುಷಿಯ ನೋಡಿ ತನ್ನೆರಡು ಕೈಗಳ ಎತ್ತಿ ಆಶೀರ್ವಾದದ ಜೊತೆ ಒಂದಿಷ್ಟು ಕಣ್ಣೀರು ಹಾಕಿದಳು. ಎಲ್ಲರಿಗೂ ತಿಂಡಿ ತಿನಸುಗಳ ಕಟ್ಟಿ ‘ಜೋಪಾನ’ ಎಂದು ಹೇಳಿದಳು.
ಇತ್ತೀಚೆಗೆ ಬಿಡುಗಡೆಯಾದ ಸೂರ್ಯಕೀರ್ತಿ ಅವರ ಪ್ರಬಂಧಗಳ ಸಂಕಲನ “ಮಳೆ”ಯ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಲಂಡನ್‌ ಮತ್ತು ಟಿಪ್ಪೂ ಸುಲ್ತಾನ್: ಜೆ. ಬಾಲಕೃಷ್ಣ ಬರಹ

ಬ್ರಿಟಿಷರಿಗೆ ಆ `ವ್ಯಾಘ್ರಸ್ವಪ್ನ’ ಎಷ್ಟು ನಿದ್ರೆ ಕೆಡಿಸಿತ್ತೆಂದರೆ ಅವರು ಆ ಸಿಟ್ಟನ್ನು ಕಾಡಿನಲ್ಲಿನ ನಿಜವಾದ ಹುಲಿಗಳನ್ನು ಕೊಂದು ಅವುಗಳ ಮೇಲೆ ಕಾಲನ್ನಿಟ್ಟು ಫೋಟೊ ತೆಗೆಸಿಕೊಂಡು ಗರ್ವದಿಂದ ಬೀಗುತ್ತಿದ್ದರು. ಟಿಪ್ಪು ಹುಲಿಯೊಂದಿಗೆ ಸೆಣಸುತ್ತಿರುವ ಹಲವಾರು ಚಿತ್ರಗಳು ಟಿಪ್ಪೂನ ಕಾಲದ ನಂತರ ರಚಿತವಾಗಿವೆ. ಟಿಪ್ಪೂ ನಿಜವಾಗಿ ಹುಲಿಯೊಂದಿಗೆ ಸೆಣಸಿದ ದಾಖಲೆಗಳಿಲ್ಲವೆನ್ನುತ್ತಾರೆ ಚರಿತ್ರಕಾರರು. ಆದರೆ, ಟಿಪ್ಪೂನ ಕಾಲದ್ದೇ ಆದ ದಂತ ಕತೆಯೊಂದರಲ್ಲಿ ಹೈದರಾಲಿ ಟಿಪ್ಪೂನನ್ನು ಹೈದರಾಬಾದ್‌ಗೆ ಒಪ್ಪಂದವೊಂದರೆ ವಿಚಾರಕ್ಕೆ ಕಳುಹಿಸಿದ್ದಾಗ ಅಲ್ಲಿನ ಕಾಡೊಂದರಲ್ಲಿ ಹುಲಿಯೊಂದನ್ನು ಎದುರಿಸಿದ್ದನಂತೆ.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಬರಹ ನಿಮ್ಮ ಓದಿಗೆ

Read More

ಐವತ್ತು ಪದ್ಯ, ಮೂವತ್ತಮೂರು ವರ್ಷ…: ದೀಪಾ ಗೋನಾಳ ಬರಹ

ಹೀಗೆ ತೇಲಿ ಹೋದ ಮತ್ತು ಕವಿತೆಯಾಗಿ ಉಳಿದು ಹೋದ ಜೀವ ಕೆತ್ತಿದ ಮೆತ್ತನೆ ಪದಗಳು ಬದುಕನ್ನ ಅವನು ಪಳಗಿಸ ಹೊರಟ ದಾರಿ ನಡುವೆ ನಿಂತು ನಕ್ಕ ದಾರಿಗಲ್ಲು. ಆ ಕಲ್ಲಿಗೂ ಕರುಳುಂಟು ಎನ್ನುವ ಅವನೊಳಗಿನ ಜೀವನಪ್ರೀತಿ. ಕವಿ ತಾನು ಇಲ್ಲದಾಗ ನಾವು ಅವನ ಮನೆಗೆ ಹೋದ್ರೆ ಏನು ಮಾಡಬೇಕು ಅಂತ ಹೇಳಿದ್ದಾನೆ, ಹೇಳಿ ಹೋಗಿದ್ದಾನೆ. ಅವನು ಇದನ್ನೆಲ್ಲ ಯಾಕೆ ಮೊದಲೇ ಇಷ್ಟು ನಿಖರವಾಗಿ ಹೇಳಿದ ಅನ್ನೊ ಪ್ರಶ್ನೆ ನನ್ನದು, ಆದರೆ ಅವನು ಹೇಳಿದ ಮಾತಿಗೆ ಬೆರಗೂ ಹಿಂಬಾಲಿಸೋದು ಕಂಡು ಆಶ್ಚರ್ಯವೂ..
ಎರಡು ವರ್ಷಗಳ ಹಿಂದೆ ತೀರಿಕೊಂಡ ಯುವಕವಿ ಅನಿಲ ಹುಲಮನಿ ಅವರ ಕವನ ಸಂಕಲನ “ಹೊಸ ಅಧ್ಯಾಯ”ವನ್ನು ಧಾರವಾಡದ ಕ್ರಾಂತಿ ಪ್ರಕಾಶನ ಪ್ರಕಟಿಸಿದ್ದು, ಈ ಸಂಕಲನದ ಕುರಿತು ದೀಪಾ ಗೋನಾಳ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ