Advertisement

Category: ಪುಸ್ತಕ ಸಂಪಿಗೆ

ಹೆಣ್ಣು ಮಾಡುವುದೆಲ್ಲ ಕಾಯಕವೇ

ಹೆಣ್ಣು ಮಾಡುವುದೆಲ್ಲ ಕಾಯಕವೇ ಎಂದು ತಮ್ಮ ಬಾಲ್ಯದಿಂದ ತಾವು ಇಂದಿನವರೆಗೆ ಕಂಡ ಹೆಂಗಸರನ್ನೆಲ್ಲ ಪುರುಷರು ನೆನೆದರು. ಯಾವ ಸ್ವಾರ್ಥವೂ ಇಲ್ಲದೆ, ಕಾಯಕ ಎಂಬ ಹೆಸರಿಲ್ಲದೆ, ಗುರುತಿಲ್ಲದೆ, ಸಂಭಾವನೆಯಿಲ್ಲದೆ, ರಜೆಯಿಲ್ಲದೆ, ವಿರಾಮವಿಲ್ಲದೆ ಸಾಯುವ ತನಕ ಒಂದಲ್ಲ ಒಂದು ಕೆಲಸ ಮೈಮೇಲೆಳೆದುಕೊಂಡು ಮಾಡುವ ಹೆಂಗಸರಿಲ್ಲದಿದ್ದರೆ ಲೋಕ ನಡೆಯುವುದೇ ಇಲ್ಲ ಎಂದ ಮಾರಯ್ಯ. ತನ್ನ ತಾಯಿಯು ಏನಾದರೂ ಮಾತಾಡುವಾಗ, ಕತೆ ಹೇಳುವಾಗ ಕೈಗೊಂದು ಕೆಲಸ ಅಂಟಿಸಿಕೊಂಡುಬಂದು ಕೂರುತ್ತಿದ್ದಳೆಂದೂ, ಕೆಲಸವಿಲ್ಲದಿದ್ದರೆ ಅವಳ ಬಾಯಿಂದ ಮಾತೇ ಬರುತ್ತಿರಲಿಲ್ಲವೆಂದೂ ಉಗ್ಘಡಿಸುವ ಗುಬ್ಬಿದೇವಯ್ಯ ನೆನಪಿಸಿಕೊಂಡು ಹೇಳಿದ.
ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಡಾ. ಎಚ್.ಎಸ್. ಅನುಪಮಾ ಅವರ “ಬೆಳಗಿನೊಳಗು ಮಹಾದೇವಿಯಕ್ಕ” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಹಾರುವ ತಟ್ಟೆ…

ನೀರಿಗೆಂದು ಅಗೆದಾಗ ದ್ರವರೂಪದ ಚಿನ್ನ ಎನ್ನಿಸಿದ ಪೆಟ್ರೋಲ್ ಸಿಕ್ಕರೆ? ಕರ್ನಾಟಕದಲ್ಲಿ ಕಂಡಕಂಡೆಡೆ ಬೋರ್‍ವೆಲ್ ತೋಡುತ್ತಿರುವ ನೀರ್ ಸಾಬರು ಎನ್ನಿಸಿರುವ ನಜೀರ್ ಸಾಬರೂ ಕಡಿಮೆ ಆಗುತ್ತಿರುವ ನೀರಿನ ಮಟ್ಟವನ್ನು ಗಣಿಸದೆ ಬೋರ್‍ವೆಲ್ ತೋಡುವ ಕೆಲಸವನ್ನು ಇನ್ನೂ ಚುರುಕುಗೊಳಿಸಿದರೆ ನೀರಿಗೆ ಬದಲು ನಮಗೂ ಪೆಟ್ರೋಲ್ ಸಿಕ್ಕರೆ ನೀರ್‍ಸಾಬರು ಪೆಟ್ರೋಲ್ ಸಾಬ್ ಆಗಬಹುದು. ಕಾವೇರಿ ಬೇಸಿನ್‍ನಲ್ಲಿ ತೈಲ ಸಿಕ್ಕ ಸುದ್ದಿ ಆಗಾಗ್ಗೆ ಬರುತ್ತಿರುವಾಗ ಕರ್ನಾಟಕಕ್ಕೇಕೆ ಈ ದ್ರವರೂಪದ ಚಿನ್ನ ಬೇಡ? `ಬೋರ್‍ವೆಲ್’ ತೋಡುವುದು ಹೆಚ್ಚಾಗಬಹುದು.
ಜೋಗಿ ಸಂಪಾದಿಸಿದ “ವೈಯೆನ್ಕೆ UNLIMITED ವಾಚಿಕೆ” ಕೃತಿಯ ಆಯ್ದ ಬರಹ ನಿಮ್ಮ ಓದಿಗೆ

Read More

ನೀಲಾಕಾಶದ ನಿಹಾರಿಕೆಗಳ ನೋವು ತಿಳಿದಿರಲಿ…

ಚಾಂದ್ ಪಾಷಾರಿಗೆ ಇರುವ ಸವಾಲೆಂದರೆ ಒಂದು mood ಅಥವಾ ಒಂದು ಹೊಳಹನ್ನು ಎಷ್ಟು ಸಶಕ್ತವಾಗಿ ಹೇಳಬಲ್ಲರೋ ಅದೇ ಸಾಮರ್ಥ್ಯವನ್ನು ಸಂಕೀರ್ಣ ವಸ್ತುವಿನ ನಿರ್ವಹಣೆಯಲ್ಲಿಯೂ ಸಾಧಿಸಬೇಕಾಗುತ್ತದೆ. ಹೇಳಿದ್ದನ್ನು ಚುರುಕಾಗಿ, ಪ್ರಭಾವಿಯಾಗಿ ಹೇಳುವುದು ಎಷ್ಟು ಮುಖ್ಯವೋ ಕಾವ್ಯದಲ್ಲಿ ಒಂದು ಅನುಭವವನ್ನು ಸಾಂದ್ರವಾಗಿ ಗಂಭೀರ ಚಿಂತನೆಯೊಂದಿಗೆ ಅಭಿವ್ಯಕ್ತಿಸುವುದು ಅಷ್ಟೇ ಮುಖ್ಯ. ಈ ಹಿಂದಿನ ಸಂಕಲನಗಳಲ್ಲಿ ಮತ್ತು ಪ್ರಸ್ತುತ ಕೃತಿಯಲ್ಲಿ ಈ ಸಾಮರ್ಥ್ಯದ ಝಲಕುಗಳನ್ನು ಚಾಂದ್‌ ಪಾಷಾ ತೋರಿದ್ದಾರೆ.
ಚಾಂದ್‌ ಪಾಷ ಎನ್.ಎಸ್. ಕವನ ಸಂಕಲನ “ಒದ್ದೆಗಣ್ಣಿನ ದೀಪ”ಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

ಸದಾ ಉಳಿಯುವ ಚಡಪಡಿಕೆಯ ಕಥೆಗಳು…

ಕೊನೆಯಾಗದ ಕಷ್ಟಗಳು, ಮರೆಯಲಾಗದ ನೋವು, ಸದಾ ಉಳಿಯುವ ಚಡಪಡಿಕೆ, ಹೆದರಿಸುವ ಒಂಟಿತನ- ಈ ಸಂಕಲನದ ಎಲ್ಲಾ ಕಥೆಗಳಲ್ಲೂ ಕಾಣುತ್ತವೆ. ಎದೆಯೊಳಗಿನ ನೋವನ್ನು ಅಂಗೈಲಿ ಹಿಡಿದುಕೊಂಡೇ ವಿನಾಯಕ ಇಲ್ಲಿನ ಕಥೆಗಳಿಗೆ ಅಕ್ಷರ ರೂಪ ನೀಡಿರಬಹುದೇನೋ ಎಂದು ಪದೇ ಪದೇ ಅನಿಸುವಷ್ಟರಮಟ್ಟಿಗೆ ಇಲ್ಲಿನ ಕಥೆಗಳು ಸಂಕಟವನ್ನು ಉಸಿರಾಡಿದೆ. ಒಬ್ಬೊಬ್ಬರ ಬದುಕೂ ಸಂಕಟದ ಸಾಗರವೇ ಆಗಿರುತ್ತದೆ ಎಂಬುದನ್ನು ಎದೆ ಬಗೆದು ತೋರುವಂಥ ಹುಮ್ಮಸ್ಸಿನಲ್ಲಿ ವಿನಾಯಕ ಕಥೆ ಹೇಳಿದ್ದಾರೆ. ತಮ್ಮ ಪ್ರಯತ್ನದಲ್ಲಿ ತಕ್ಕಮಟ್ಟಿನ ಗೆಲುವನ್ನು ಕಂಡಿದ್ದಾರೆ.
ವಿನಾಯಕ ಅರಳಸುರಳಿ ಕಥಾಸಂಕಲನ “ಮರ ಹತ್ತದ ಮೀನು”ಕ್ಕೆ ಎ.ಆರ್‌. ಮಣಿಕಾಂತ್ ಬರೆದ ಮುನ್ನುಡಿ

Read More

ತಳಮಳಗಳ `ಮೌನದೊಡಲ ಮಾತು’

ಗಜಲ್ ಮೂಲತಃ ಮನುಷ್ಯ ಸಹಜ ಪ್ರೀತಿ, ಪ್ರೇಮ, ಪ್ರಣಯ, ವಿರಹ, ವೇದನೆ, ಏಕಾಂಗಿತನ, ನೋವು, ಹತಾಶೆ, ವಿಪ್ರಲಂಭನ, ಬೇಗುದಿ, ತಳಮಳಗಳನ್ನು ಅಭಿವ್ಯಕ್ತಿಗೊಳಿಸುವ ಕಾವ್ಯವಾದರೂ, ಅದರಾಚೆಯ ವರ್ತಮಾನದ ಸಂಗತಿಗಳನ್ನೂ ಅದು ಪ್ರತಿಧ್ವನಿಸುತ್ತದೆ. ಇಂತಹ ಹಲವು ದೃಷ್ಟಿಕೋನಗಳನ್ನಿಟ್ಟುಕೊಂಡು ಇಲ್ಲಿ ಕೆಲ ಗಜಲ್‌ಗಳು ಮೈದಾಳಿವೆ. ಅಂಬಮ್ಮ ಅವರ ಗಜಲ್‌ಗಳಲ್ಲಿ ಪ್ರೇಮ ನಿವೇದನೆ ಇದೆ, ನೋವುಂಡ ಹೃದಯಾಂತರಾಳದ ಯಾತನೆ ಇದೆ. ಜೊತೆಗೆ ಕೆಲವೆಡೆ ಚಡಪಡಿಕೆ, ಕಾತರತೆ, ಆರ್ದ್ರತೆ, ಮನದ ತಾಕಲಾಟಗಳ ತಳಮಳವೂ ಇದೆ.
ಅಂಬಮ್ಮ ಪ್ರತಾಪ್‌ ಸಿಂಗ್‌ ಗಜಲ್‌ ಸಂಕಲನ “ಮೌನದೊಡಲ ಮಾತು” ಕುರಿತು ಮಂಡಲಗಿರಿ ಪ್ರಸನ್ನ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ