Advertisement

Category: ಪುಸ್ತಕ ಸಂಪಿಗೆ

ಸ್ತ್ರೀ ಸ್ವಾತಂತ್ರ್ಯದ ಮಗ್ಗಲುಗಳು…

ಸ್ತ್ರೀಯರ ಸ್ವಾತಂತ್ರ್ಯದ ಕುರಿತೇ ಇಲ್ಲಿ ಮಾತನಾಡಿರುವ ಲೇಖಕ, ಯಾಕೆ ಸ್ತ್ರೀಯರಿಗಿನ್ನೂ ಸ್ವಾತಂತ್ರ್ಯ ದಕ್ಕಿಲ್ಲ ಎಂಬ ಪ್ರಶ್ನೆ ಕಾಡಿ ಅದಕ್ಕೆ ಉತ್ತರ ಹುಡುಕುವಾಗ ಕಂಡ ಸಂಗತಿಗಳನ್ನು ಇಲ್ಲಿ ಕತೆಯಾಗಿಸಿದ್ದಾರೆ. “ದೇಹಕ್ಕಾಗಿ ಮೋಹಿಸುವ ಹವ್ಯಾಸವನ್ನೇ ಯುವಜನತೆ ಪ್ರೀತಿಯೆಂದು ಭಾವಿಸಿರುವುದು ವಿಷಾದನೀಯ” ಎಂಬ ಅವರ ಮಾತು ಮನು ಮನಸ್ಸು ಎಷ್ಟು ಸೂಕ್ಷ್ಮಗ್ರಾಹಿ ಎಂಬುದನ್ನು ಸೂಚಿಸುತ್ತದೆ. ಒಬ್ಬ ಗ್ರಾಮೀಣ ಹುಡುಗಿ ತನ್ನ ಜೀವನವನ್ನು ಕಟ್ಟಿಕೊಳ್ಳಲು ಪ್ರಯತ್ನಿಸುವ ಕತೆಯನ್ನು ಓದುಗರ ಮುಂದೆ ತೆರೆದಿಟ್ಟಿರುವುದಾಗಿ ಹೇಳುತ್ತಾರೆ ಮನು. ಇಂದಿಗೂ ಗ್ರಾಮೀಣ ಭಾಗದ ಮಕ್ಕಳು ಉನ್ನತ ಶಿಕ್ಷಣ ಪಡೆಯುವಲ್ಲಿ ಇನ್ನೂ ಎಷ್ಟು ಅಡೆತಡೆಗಳನ್ನು ದಾಟಬೇಕಾಗಿದೆ.
ಮನು ಗುರುಸ್ವಾಮಿ ಬರೆದ “ಅವಳೂ ಕತೆಯಾದಳು” ಕೃತಿಗೆ ಡಾ. ವಿಜಯಕುಮಾರಿ ಎಸ್ ಕರಿಕಲ್ ಬರೆದ ಮುನ್ನುಡಿ

Read More

ಫಾರೆಸ್ಟರ್‌ ಪೊನ್ನಪ್ಪ ಮತ್ತು ಕಾಡಿನ ಕೌತುಕಗಳು

ಗಡದ್ದಾಗಿ ತಿಂದು, ಕಾಲು ನೀಡಿ ಲೋಕದ ಪರಿವೇ ಇಲ್ಲದೆ ಗೊರಕೆ ಹೊಡೆಯುತ್ತಿದ್ದ ಸಿದ್ದಣ್ಣನಿಗೆ, ಪೊನ್ನಪ್ಪ ಕಾಲಲ್ಲಿ ಎರಡು ಬಾರಿ ತಿವಿದು ಎಚ್ಚರಿಸಿದ. ಚಕ್ಕನೆ ಎಚ್ಚರಗೊಂಡ ಸಿದ್ದಣ್ಣ, ಮರಗಳ್ಳರು ಬಂದಿದ್ದರಿಂದ ಫಾರೆಸ್ಟರ್ ನನ್ನನ್ನು ಎಬ್ಬಿಸಿರಬಹುದು ಎಂದು ಕಣ್ಣು ಬಿಟ್ಟವನೇ ಗಾಬರಿಯಿಂದ ಸುತ್ತಲೂ ನೋಡತೊಡಗಿದ. ಪೊನ್ನಪ್ಪ ಮೆಲ್ಲನೆ ಅವನ ಕೈಯನ್ನು ಅದುಮಿ, “ಏನೂ ಇಲ್ಲ, ಆತಂಕ ಪಡಬೇಡ, ನಾನು ಸ್ವಲ್ಪಹೊತ್ತು ಮಲಗುತ್ತೇನೆ. ಯಾರಾದರೂ ಬಂದ ಶಬ್ದ ಕೇಳಿಸಿದರೆ ನನ್ನನ್ನು ಎಬ್ಬಿಸು” ಎಂದು ಅವನ ಕಿವಿಯಲ್ಲಿ ಪಿಸುಗುಟ್ಟಿದ.
ನೌಶಾದ್‌ ಜನ್ನತ್ತ್‌ ಹೊಸ ಕಾದಂಬರಿ “ಫಾರೆಸ್ಟರ್‌ ಪೊನ್ನಪ್ಪ” ಇಂದ ಆಯ್ದ ಭಾಗ ನಿಮ್ಮ ಓದಿಗೆ

Read More

ಪರಿಸರದ ಪಾಠಕ್ಕೆ ಇದೇ ಸೂಕ್ತ ತಾಣ!

ಪ್ರಕೃತಿಯ ಮೊದಲ ಪಾಠಗಳನ್ನು ನಾನು ಕಲಿತದ್ದು ಆ ಹಕ್ಕಲಿನಲ್ಲಿ ಎಂದು ಹೇಳಿದರೆ ತಪ್ಪಾಗದು. ಹಾಗೆ ನೋಡಿದರೆ, ನಮ್ಮ ಹಳ್ಳಿಯ ಮನೆಯ ಪರಿಸರವೇ ಒಂದು ಒಳ್ಳೆಯ ಪಾಠಶಾಲೆ. ಮನೆ ಎದುರು ಗದ್ದೆ, ಮನೆ ಸುತ್ತಲೂ ಮರಗಳು, ಮನೆಯ ಛಾವಣಿಯ ಮೇಲೆ ಚಾಚಿಕೊಂಡ ಭಾರೀ ಗಾತ್ರದ ಹಲಸಿನ ಮರ, ಇಪ್ಪತ್ತು ಅಡಿ ದೂರದಲ್ಲಿರುವ ಬೃಹತ್ ಗಾತ್ರದ ಎರಡು ತಾಳೆ ಮರಗಳ ಒಣಗಿದ ಎಲೆಗಳು ಮಾಡುವ ಬರಬರ ಸದ್ದು, ಅಂಗಳದ ಅಂಚಿನ ಹೂಗಿಡಗಳು, ಬಳ್ಳಿಗಳು, ದಾಸವಾಳ, ಬೆಟ್ಟ ತಾವರೆ – ಪಟ್ಟಿ ಮಾಡುತ್ತಾ ಹೋದರೆ ಬೇಗನೆ ಮುಗಿಯದು. ಜತೆಗೆ ನಾವು ಶಾಲೆಗೆ ಹೋಗುತ್ತಿದ್ದ ದಾರಿಯೂ ಇನ್ನೊಂದು ಪಾಠಶಾಲೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ಶಶಿಧರ ಹಾಲಾಡಿಯವರ “ನಾ ಸೆರೆಹಿಡಿದ ಕನ್ಯಾಸ್ತ್ರೀ” ಪ್ರಬಂಧ ಸಂಕಲನದ ಒಂದು ಬರಹ ನಿಮ್ಮ ಓದಿಗೆ

Read More

ಹಳ್ಳಿಯ ಅಂತರಾತ್ಮದ ಆರ್ದ್ರ ಕಥನ

ಇಡೀ ಕಥೆಗಳ ಅಂತರಾಳದಲ್ಲಿ ವಿಷಾದದ ದನಿಯೊಂದು ಲಘು ಹಾಸ್ಯದ ಲೇಪನದೊಂದಿಗೆ ಅನಾವರಣಗೊಂಡಿದೆ. ಯಾವುದೇ ʻಇಸಂʼನಿಂದ ಮುಕ್ತಗೊಂಡಂತೆ ಕಾಣುವ ಇಲ್ಲಿನ ಲೋಕದಲ್ಲಿ ಮನಕುಲದ ಒಳಿತು ಹಾಗೂ ಜೀವಪರ ತುಡಿತವೇ ಮೇಲುಗೈಯ್ಯಾಗಿದೆ. ಈ ಸಂಕಲನದ ಬಹು ಮುಖ್ಯ ಸಂಗತಿ ಅಂದರೆ, ಇದುಅಪ್ಪಟ ಪ್ರಾದೇಶಿಕ ಸೊಗಡಿನಿಂದ ಲಕಲಕಿಸುತ್ತದೆ. ಅಂತೆಯೇ ಯಾವುದೇ ಮಡಿವಂತಿಕೆಯ ಸೋಗಿಲ್ಲದೆ ಪ್ರಾಮಾಣಿಕವಾಗಿ ಅನಿಸಿದ್ದನ್ನು ನೇರವಾಗಿ ಹೇಳುತ್ತದೆ.
ಮಂಜಯ್ಯ ದೇವರಮನಿ ಕಥಾ ಸಂಕಲನ “ದೇವರ ಹೊಲ”ಕ್ಕೆ ಎಸ್. ಗಂಗಾಧರಯ್ಯ ಬರೆದ ಮುನ್ನುಡಿ

Read More

ದೈನಿಕತೆಯಲ್ಲೆ ದೈವಿಕತೆ..

ಕಾಯ್ಕಿಣಿಯವರ ಕಾವ್ಯಗಳಲ್ಲಿ ದಂತಗೋಪುರದ ವಾಸಿ, ವಿಲಾಸಿ, ಪ್ರವಾಸಿಗರು ಕಾಣಸಿಗಲಾರರು; ಏಕೆಂದರೆ, ನಮ್ಮ-ನಿಮ್ಮ ನಡುವೆ, ಆಚೆ-ಈಚೆ, ಕಣ್ಣಿಗೆ ಬಿದ್ದರೂ ಬೀಳದಂತಿರುವ, ಅಥವಾ ನಾವು ನೋಡಿದರೂ ನೋಡದಂತೆ ಮುಂದೆ ಸಾಗುವುದಕ್ಕೆ ಯಾವ ಆಕ್ಷೇಪಣೆಯನ್ನೂ ಮಾಡದ- ಕಷ್ಟವೋ-ಕಾರ‍್ಪಣ್ಯವೋ ಎಲ್ಲಕ್ಕೂ ಎದೆಗೊಡುತ್ತ ಕಾಲ್ಪನಿಕ ರೇಖೆಗಳನ್ನು ಧಿಕ್ಕರಿಸುತ್ತ, ಅಲ್ಲಗಳೆಯುತ್ತ, ತಮ್ಮದೇ ಜೀವನಚಿತ್ರವ ಮೂಡಿಸುವ ಜೀವಭಂಡಾರಿಗಳು- ಕಾಯ್ಕಿಣಿಯವರ ಕಾವ್ಯಪ್ರಪಂಚವನ್ನು ನಿರಾಯಾಸ, ನಿರಪೇಕ್ಷ್ಯವಾಗಿ ಧರಿಸುತ್ತಾರೆ; ಭರಿಸುತ್ತಾರೆ.
ಜಯಂತ ಕಾಯ್ಕಿಣಿಯವರ “ವಿಚಿತ್ರಸೇನನ ವೈಖರಿ” ಕವನ ಸಂಕಲನದ ಕುರಿತು ಗೀತಾ ಹೆಗಡೆ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ