Advertisement

Category: ಪುಸ್ತಕ ಸಂಪಿಗೆ

ಹೂದೋಟದ ಹೂಗಳಂಥಾ “ಸಂಗಮ”

‘ಸಂಗಮ’ ಕಥಾ ಸಂಕಲನದಲ್ಲಿ ನನಗೆ ಬಹಳ ಇಷ್ಟವಾಗಿದ್ದು ಕತೆಗಳಿಗೆ ಆಯ್ದುಕೊಂಡಿರುವ ಶೀರ್ಷಿಕೆಗಳು. ಓದಿದ ತಕ್ಷಣ ಕತೆಯ ಬಗ್ಗೆ ಯಾವ ತರಹದ ಸುಳಿವನ್ನೂ ಬಿಟ್ಟು ಕೊಡುವುದಿಲ್ಲ ಅವು. ಆ ಶೀರ್ಷಿಕೆ ಯಾಕೆ ಎಂದು ತಿಳಿಯಬೇಕಿದ್ದರೆ ನೀವು ಇಡೀ ಕತೆಯನ್ನು ಓದಬೇಕು. ಉದಾಹರಣೆಗೆ ಎರಡನೇಯ ಕತೆ ‘ಮೈ ದಾಸ್’ ಅನ್ನೇ ತೆಗೆದುಕೊಳ್ಳಿ. ಊಹುಂ.. ನೀವು ಗೆಸ್ ಮಾಡಲಿಕ್ಕೆ ಸಾಧ್ಯವೇ ಇಲ್ಲ. ಮುಟ್ಟಿದೆಲ್ಲವೂ ಚಿನ್ನ ಎಂಬ ಗಾದೆ ಮಾತಿದೆಯಲ್ವ.. ಅದನ್ನು ನಿಜವಾಗಿಯೂ ಸಾಧ್ಯವಾಗಿಸಲು ಯತ್ನಿಸುವ ವೈಜ್ಞಾನಿಕ ಸಂಶೋಧಕನ ಕತೆ.
ರಾಜಲಕ್ಷ್ಮಿ ಎನ್.‌ ರಾವ್‌ ಅವರ “ಸಂಗಮ” ಕಥಾಸಂಕಲನದ ಕುರಿತು ಸಂಜೋತಾ ಪುರೋಹಿತ್‌ ಬರಹ

Read More

ಹೊಸ ಸ್ವರೂಪಕ್ಕೆ ಕಾಯುತ್ತಿರುವ ಪ್ರವಾಸ ಕಥನ

ಎರಡು ಮೂರು ದಶಕಗಳ ಹಿಂದೆ ವಿದೇಶಗಳ ಬಗ್ಗೆ ಇದ್ದಷ್ಟು ಕುತೂಹಲ ಈಗ ಭಾರತದಲ್ಲಾಗಲಿ, ಮೂರನೆ ಜಗತ್ತಿನ ದೇಶಗಳಲ್ಲಾಗಲಿ ಇಲ್ಲ. ಜಾಗತೀಕರಣವೂ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ, ಉದ್ಯೋಗ, ವ್ಯಾಪಾರ, ಪ್ರವಾಸಗಳಿಗೆ ಬೇರೆ ದೇಶಗಳಿಗೆ ಹೋಗಿ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚು ಅವಕಾಶಗಳು ಕೂಡ ತೆರೆದಿವೆ. ಉದಾಹರಣೆಗೆ ಕರ್ನಾಟಕದ ಪ್ರತಿ ಜಿಲ್ಲೆಯಿಂದ ಕನಿಷ್ಠ ಹತ್ತು ಕುಟುಂಬಗಳ ಸದಸ್ಯರಾದರೂ, ಬಂಧುಗಳಾದರೂ ಈಗ ಹೊರದೇಶಗಳೊಡನೆ ಬೇರೆ ಬೇರೆ ರೀತಿಯಲ್ಲಿ ಸಂಪರ್ಕ, ಒಡನಾಟ ಇಟ್ಟುಕೊಂಡಿರುತ್ತಾರೆ.
ಕೆ. ಸತ್ಯನಾರಾಯಣ ಪ್ರವಾಸ ಕಥನ “ಅಮೆರಿಕದಲ್ಲಿ ಬಸವನಗುಡಿ”ಯ ಒಂದು ಬರಹ ನಿಮ್ಮ ಓದಿಗೆ

Read More

‘ಹೂಧೂಳಿ’ ಮುಹೂರ್ತ…..

ಚಾಂದಿನಿಯವರ ಈ ಕವಿತೆಗಳ ಮುಖ್ಯ ಧಾಟಿ ಬಿಗುಮಾನವಿಲ್ಲದ ನಿವೇದನೆಯದು, ಅವರ ಅನುಭವಜನ್ಯ ಕವಿತೆಗಳಾದ “ಕ್ಲಾಸ್ ರೂಂ”, “ಅವನಾರು”, “ನನ್ನ ಬಾಲ್ಯ”, “ಅಣ್ಣ ಬರಲಿಲ್ಲ”-ಗಳ ಜೀವಂತಿಕೆ ಅನುಭವ ಮೂಲದಿಂದಲೇ ಬರುತ್ತದೆ. ಮುಂದಿನ ಸಾಲಿನ ಮತ್ತು ಹಿಂದಿನ ಸಾಲಿನ ಖಾಲಿ ಬೆಂಚುಗಳ ಲಕ್ಷಣಗಳು “ಕ್ಲಾಸ್ ರೂಂ” ಕವಿತೆಯನ್ನು ರೂಪಿಸಿದ ರೀತಿ, ಬಾಲ್ಯದ ಅನುಭವಗಳು ಹೊಳೆಯಲ್ಲಿ ಹಿಡಿದು ಅಲ್ಲೇ ಸುಟ್ಟು ತಿಂದ ಏಡಿಯಷ್ಟೆ ತಾಜಾ ಆಗಿ ಬರುವ ರೀತಿ ಆಪ್ತವಾಗಿದೆ. “ಅಣ್ಣ ಬರಲಿಲ್ಲ” ಕವಿತೆಗೆ ತಂತಾನೆ ಬಂದಂತಿರುವ ಜನಪದೀಯ ಗುಣ ಅದರ ವಿಷಾದಕ್ಕೆ, ಆತ್ಮಮರುಕವನ್ನು ಮೀರುವ ಸ್ಪರ್ಶವನ್ನು ಕೊಟ್ಟಿದೆ.
ಚಾಂದಿನಿ ಖಲೀದ್‌ ಕವನ ಸಂಕಲನ “ಸೂಜಿಮೊಗದ ಸುಂದರಿ”ಕ್ಕೆ ಜಯಂತ ಕಾಯ್ಕಿಣಿ ಬರೆದ ಮುನ್ನುಡಿ

Read More

ನಮ್ಮದೇ ಎನ್ನಿಸುವ ಕತೆಗಳು…

ವಿಹಾರ’ಕ್ಕಿಂತ ‘ಹದ್ದು ಹಾರುವ ಹೊತ್ತು’ ಇನ್ನೂ ವಿಸ್ತಾರವಾದ ಕ್ಯಾನ್ವಾಸ್ ಹೊಂದಿರುವ ಕತೆ. ಊರಿಗೆ ಹೊಸತಾಗಿ ಬಂದು ಹೊರವಲಯದಲ್ಲಿ ಬಾಡಿಗೆ ಮನೆ ಮಾಡಿರುವ ಈ ಕತೆಯ ನಿರೂಪಕನು ಬಡಾವಣೆಯ ಪರಿಸರವನ್ನು ತಿಳಿದುಕೊಳ್ಳುವ ಹವಣಿಕೆಯಲ್ಲಿ ಕೇಳಿಸಿಕೊಂಡಿದ್ದೆಲ್ಲ ಕತೆಯ ಪ್ರಥಮಾರ್ಧವಾದರೆ ಉತ್ತರಾರ್ಧದ ಘಟನೆಗಳಿಗೆ ಆತ ಸಾಕ್ಷಿಯಾಗುತ್ತಾನೆ. ಹೀಗೆ ಹೊರಗಿನವನಾದ, ಆದರೆ ಒಂದು ಮಟ್ಟದಲ್ಲಿ ಭಾಗಿಯೂ ಆಗಿರುವ ನಿರೂಪಕನಿಗೆ ಎಲ್ಲಾ ಪಾತ್ರ ಮತ್ತು ಘಟನೆಗಳನ್ನು ಸನಿಹದಿಂದ, ಆದರೆ ವಸ್ತುನಿಷ್ಠವಾಗಿ, ನಿರೀಕ್ಷಿಸುವ ಅನುಕೂಲತೆ ಇದೆ.
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ”ಕ್ಕೆ ಎಂ. ಜಿ. ಹೆಗಡೆ ಬರೆದ ಮುನ್ನುಡಿ

Read More

ವಿಜ್ಞಾನದೊಂದಿಗೆ ಅಧ್ಯಾತ್ಮವೂ ಮಿಳಿತವಾಗುವ ಹೊತ್ತು…

ಕ್ಯಾನ್ಸರ್ ಸುʼನ ದೇಹವನ್ನು ತಿಂದುಹಾಕುವಾಗ ಬಹಳಷ್ಟು ಕೃಶನಾಗುವುದಲ್ಲದೇ ಅಂತಹ ತೀವ್ರ ಗಂಭೀರ ಸ್ಥಿತಿಯಲ್ಲೂ ಸಹಾ “ತಾನು ಯಾರು? ಇಲ್ಲಿ ಯಾಕಿದ್ದೇನೆ?” ಎಂಬ ಆತ್ಮವಿಮರ್ಶೆಗೆ ತೊಡಗಿಕೊಂಡು ಕೊನೆಗೆ ತಾನು ಇಡೀ ವಿಶ್ವಕ್ಕೆ ಸೇರಿದವ, ಬ್ರಹ್ಮಾಂಡದ ಅವಿಭಾಜ್ಯ ಅಂಗ. ಬ್ರಹ್ಮಾಂಡವನ್ನು ನಿಯಂತ್ರಿಸುವ ಶಕ್ತಿಯೇ ನನ್ನನ್ನೂ ನಿಯಂತ್ರಿಸುತ್ತಿದೆ ಎಂಬಂತಹ ಆಲೋಚನೆಗಳು ಉಪನಿಷತ್ತಿನಲ್ಲಿ ಬರುವ “ಯಾವ ಒಂದೇ ದಾರದ ಎಳೆಗಳಿಂದ ಬಟ್ಟೆಗಳು ತಯಾರಾಗುತ್ತದೋ ಅದೇ ತರಹ ಒಂದೇ ಶಕ್ತಿ ಇಡೀ ಸೃಷ್ಟಿಯ ಚರಾಚರದಲ್ಲೂ ಇದೆ” ಎಂಬಂತಹ ಬೌದ್ಧಿಕ ಸ್ತರದಲ್ಲಿ ತನ್ನಾತ್ಮವನ್ನು ವಿಶ್ವಾತ್ಮದೊಂದಿಗೆ ಬೆಸೆದುಕೊಳ್ಳುವ ಚಿಂತನೆಗಳು ಅವನನ್ನು ದಾರ್ಶನಿಕನೆನಿಸುತ್ತದೆ.
ಡಾ. ಪ್ರಸನ್ನ ಸಂತೇಕಡೂರು ಕಾದಂಬರಿ “ಸು” ಕುರಿತು ಕೆ.ಎನ್. ಲಾವಣ್ಯ ಪ್ರಭಾ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ