Advertisement

Category: ಪುಸ್ತಕ ಸಂಪಿಗೆ

ಸದಾ ಉಳಿಯುವ ಚಡಪಡಿಕೆಯ ಕಥೆಗಳು…

ಕೊನೆಯಾಗದ ಕಷ್ಟಗಳು, ಮರೆಯಲಾಗದ ನೋವು, ಸದಾ ಉಳಿಯುವ ಚಡಪಡಿಕೆ, ಹೆದರಿಸುವ ಒಂಟಿತನ- ಈ ಸಂಕಲನದ ಎಲ್ಲಾ ಕಥೆಗಳಲ್ಲೂ ಕಾಣುತ್ತವೆ. ಎದೆಯೊಳಗಿನ ನೋವನ್ನು ಅಂಗೈಲಿ ಹಿಡಿದುಕೊಂಡೇ ವಿನಾಯಕ ಇಲ್ಲಿನ ಕಥೆಗಳಿಗೆ ಅಕ್ಷರ ರೂಪ ನೀಡಿರಬಹುದೇನೋ ಎಂದು ಪದೇ ಪದೇ ಅನಿಸುವಷ್ಟರಮಟ್ಟಿಗೆ ಇಲ್ಲಿನ ಕಥೆಗಳು ಸಂಕಟವನ್ನು ಉಸಿರಾಡಿದೆ. ಒಬ್ಬೊಬ್ಬರ ಬದುಕೂ ಸಂಕಟದ ಸಾಗರವೇ ಆಗಿರುತ್ತದೆ ಎಂಬುದನ್ನು ಎದೆ ಬಗೆದು ತೋರುವಂಥ ಹುಮ್ಮಸ್ಸಿನಲ್ಲಿ ವಿನಾಯಕ ಕಥೆ ಹೇಳಿದ್ದಾರೆ. ತಮ್ಮ ಪ್ರಯತ್ನದಲ್ಲಿ ತಕ್ಕಮಟ್ಟಿನ ಗೆಲುವನ್ನು ಕಂಡಿದ್ದಾರೆ.
ವಿನಾಯಕ ಅರಳಸುರಳಿ ಕಥಾಸಂಕಲನ “ಮರ ಹತ್ತದ ಮೀನು”ಕ್ಕೆ ಎ.ಆರ್‌. ಮಣಿಕಾಂತ್ ಬರೆದ ಮುನ್ನುಡಿ

Read More

ತಳಮಳಗಳ `ಮೌನದೊಡಲ ಮಾತು’

ಗಜಲ್ ಮೂಲತಃ ಮನುಷ್ಯ ಸಹಜ ಪ್ರೀತಿ, ಪ್ರೇಮ, ಪ್ರಣಯ, ವಿರಹ, ವೇದನೆ, ಏಕಾಂಗಿತನ, ನೋವು, ಹತಾಶೆ, ವಿಪ್ರಲಂಭನ, ಬೇಗುದಿ, ತಳಮಳಗಳನ್ನು ಅಭಿವ್ಯಕ್ತಿಗೊಳಿಸುವ ಕಾವ್ಯವಾದರೂ, ಅದರಾಚೆಯ ವರ್ತಮಾನದ ಸಂಗತಿಗಳನ್ನೂ ಅದು ಪ್ರತಿಧ್ವನಿಸುತ್ತದೆ. ಇಂತಹ ಹಲವು ದೃಷ್ಟಿಕೋನಗಳನ್ನಿಟ್ಟುಕೊಂಡು ಇಲ್ಲಿ ಕೆಲ ಗಜಲ್‌ಗಳು ಮೈದಾಳಿವೆ. ಅಂಬಮ್ಮ ಅವರ ಗಜಲ್‌ಗಳಲ್ಲಿ ಪ್ರೇಮ ನಿವೇದನೆ ಇದೆ, ನೋವುಂಡ ಹೃದಯಾಂತರಾಳದ ಯಾತನೆ ಇದೆ. ಜೊತೆಗೆ ಕೆಲವೆಡೆ ಚಡಪಡಿಕೆ, ಕಾತರತೆ, ಆರ್ದ್ರತೆ, ಮನದ ತಾಕಲಾಟಗಳ ತಳಮಳವೂ ಇದೆ.
ಅಂಬಮ್ಮ ಪ್ರತಾಪ್‌ ಸಿಂಗ್‌ ಗಜಲ್‌ ಸಂಕಲನ “ಮೌನದೊಡಲ ಮಾತು” ಕುರಿತು ಮಂಡಲಗಿರಿ ಪ್ರಸನ್ನ ಬರಹ

Read More

ಅಪೂರ್ಣವಲ್ಲ… ಪೂರ್ಣತೆಯೆಡೆಗೆ ಸಾಗುವ ದಾರಿ

ಕೊನೆಗೌಡ ಮತ್ತು ಪ್ರೀತಿ ಎಂಬ ಕಥೆ ವಿಶಿಷ್ಟವಾದದ್ದು. ಪ್ರೀತಿ ಎನ್ನುವುದು ಕೇವಲ ಮೇಲ್ವರ್ಗದ ಸೊತ್ತಲ್ಲ, ಪ್ರೀತಿಯ ನಿಜವಾದ ರೂಪ ಕಾಣಿಸುವುದು ಸಂಸಾರ ಆರಂಭವಾದ ಮೇಲೆ ಎಂಬುದನ್ನು ಸುಂದರವಾಗಿ ತಿಳಿಸಿಕೊಡುವ ಕಥೆ. ಅನಾಥನಾಗಿದ್ದ ಕಥಾನಾಯಕ ಹೆಂಡತಿಯನ್ನೇ ಸರ್ವಸ್ವವೆಂದು ಬಗೆದು ಅವಳಿಗೆ ಪ್ರೀತಿಯನ್ನು ಧಾರೆಯೆರೆಯುವ ಪರಿ ಮನೋಜ್ಞವಾಗಿ ಚಿತ್ರಿತವಾಗಿದೆ. ವೃದ್ಧಾಪ್ಯದಲ್ಲೂ ಪ್ರೀತಿ ಬಾಡದೆ ಮಾಗುತ್ತದೆ ಎಂಬುದನ್ನು ಲೇಖಕಿ ಸಮರ್ಥವಾಗಿ ನಿರೂಪಿಸಿದ್ದಾರೆ. ಕಾಲವು ಬರುವುದು ಒಂದು ದಿನ ಎಂಬ ಕೊನೆಯ ಕಥೆ ಸಾಮಾಜಿಕ ಸುಧಾರಣೆಯನ್ನು ಮಾಡಹೋಗಿ ಬಹಿಷ್ಕಾರಕ್ಕೆ ಒಳಗಾದವನ ಕಥೆ.
ಸುಧಾ ಎಂ. ಚೊಚ್ಚಲ ಕಥಾ ಸಂಕಲನ “ಅಪೂರ್ಣವಲ್ಲ” ಕುರಿತು ಮಹಾಬಲ ಭಟ್‌ ಅವರ ಬರಹ

Read More

ಉತ್ತಮ ಪೂರ್ವಜರಾಗುವುದು ಹೇಗೆ?

ನಮ್ಮಲ್ಲಿ ಅರಣ್ಯ ವಿಸ್ತೀರ್ಣ ಹೆಚ್ಚಾಗಿದೆ ಎಂದು ಉಪಗ್ರಹ ಚಿತ್ರಗಳ ಆಧರಿಸಿ ಸರಕಾರಿ ಅಂಕಿ ಅಂಶಗಳ ಘೋಷಣೆಯಾಗುತ್ತದೆ. ಅಂಥ ಅರಣ್ಯದಲ್ಲಿ ಜೀವಾವಾಸ ನಿಜಕ್ಕೂ ಹೆಚ್ಚಾಗಿದೆಯೆ, ಪಶುಪಕ್ಷಿಗಳ ಸಂಖ್ಯೆ, ದುಂಬಿ-ಜೇನ್ನೊಣಗಳ ಸಾಂದ್ರತೆ ಹೆಚ್ಚಿದೆಯೆ, ನದಿ ಕೊಳ್ಳಗಳಲ್ಲಿ ಜಲಚರಗಳ ಸಂಖ್ಯೆ ಹೆಚ್ಚಾಗಿದೆಯೆ, ಅದು ಗೊತ್ತಿರುವುದಿಲ್ಲ. ಮಳೆ ಚೆನ್ನಾಗಿ ಸುರಿದಾಗ ಎಲ್ಲ ಕೆರೆಕಟ್ಟೆಗಳಲ್ಲೂ ನೀರು ತುಂಬಿ ಹೊರಕ್ಕೆ ಹರಿಯುತ್ತದೆ; ಆದರೆ ಅಂಥ ಕೆರೆಗಳಲ್ಲಿ ಹೂಳು ಎಷ್ಟು ತುಂಬಿದೆ ಎಂಬುದು ಲೆಕ್ಕಕ್ಕೆ ಬರುವುದೇ ಇಲ್ಲ.
ಪರಿಸರವಾದಿ ನಾಗೇಶ ಹೆಗಡೆಯವರ ಹೊಸ ಕೃತಿ “ಅಪಾಯ ಬಂದಿದೆ: ಅಡಗಲು ಸ್ಥಳವೆಲ್ಲಿ?”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ದಿನ ದಿನದ ಕಥನ

ಅವರ ಕತೆಗಳಲ್ಲಿ ಸಂಭಾಷಣೆಗಿಂತ ನಿರೂಪಣೆಯೇ ಮುನ್ನೆಲೆಗೆ ಬರುತ್ತದೆ. ಹೀಗಾಗಿ ಕತೆಯ ಪೂರ್ಣ ಹೆಣಿಗೆ ಆಡುಮಾತಿನಲ್ಲೇ ಇರುತ್ತದೆ. ಆಡುವ ನುಡಿಯಂತೆಯೇ ಬರವಣಿಗೆಯೂ ಇರುತ್ತಾ, ನಿರೂಪಣೆಯಲ್ಲೇ ‘ಹ’ಕಾರ ‘ಅ’ಕಾರಗಳ ಅದಲು ಬದಲುಗಳೂ ಸೇರಿಕೊಂಡು ಇತರ ಸ್ಥಳೀಯ ಪದಗಳ ಬಳಕೆಯೂ ಹಾಗೇ ದಾಖಲಾಗುತ್ತದೆ. ಇದು ಕೆಲವೊಮ್ಮೆ ಭಾಷೆಯ ಬಳಕೆಯ ಬಗೆಗೆ ‘ಮಡಿವಂತಿಕೆ’ ಹೊಂದಿದ್ದು, ತಮ್ಮದೇ ಸರಿ ಕನ್ನಡ, ಇದೆಲ್ಲ ‘ಅಶುದ್ಧ’ ಕನ್ನಡ ಎಂದುಕೊಳ್ಳುವವರಿಗೆ ಇರಿಸು ಮುರಿಸು ಮಾಡಬಹುದು. ಆದರೆ ಇವು ಆಡುಕನ್ನಡದ ಒಂದು ಟಿಸಿಲು ಎಂದು ಅರಿತರೆ ಸಮಸ್ಯೆ ಅನ್ನಿಸದು.
ವಿಜಯಾ ಮೋಹನ್‌ ಕಥಾ ಸಂಕಲನ “ಮೇವು”ಗೆ ಡಾ. ಸಬಿತಾ ಬನ್ನಾಡಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ