Advertisement

Category: ಪುಸ್ತಕ ಸಂಪಿಗೆ

ಮರುಭೂಮಿಯ ಹೂ ರಕ್ಷಿಸಿದ “ಸಫಾ” ಎಂಬ ಮತ್ತೊಂದು ಹೂ

ವಾರಿಸ್ ಜಿಬೂತಿಗೆ ಬಂದಾಗ ಸಫಾಳಿಗೆ ಅವಳ ಸಾಂಗತ್ಯ ಸ್ವರ್ಗವನ್ನೇ ಸಿಕ್ಕಿದ ಹಾಗೆ ಮಾಡುತ್ತದೆ. ಹೋಟೆಲಿನಲ್ಲಿ ಸಿಗುವ ಬರ್ಗರ್ ಮತ್ತು ಇತರೇ ಮಾಂಸದ ಅಡುಗೆಗಳು ಅವಳಿಗೆ ತೀರಾ ಕೈಗೆಟುಕದ ವಸ್ತುಗಳಾಗಿದ್ದ ಕಾರಣ ಅತ್ಯಂತ ಖುಷಿಯಿಂದ ಆಸ್ವಾದಿಸುತ್ತಾಳೆ. ಆದರೆ ಅವಳು ಹೋಟೆಲಿನ ಈಜುಕೊಳದಲ್ಲಿ ಈಜುಡುಗೆ ಧರಿಸಿ ಈಜುವುದನ್ನು ನೋಡಿದಾಗ ಅಚಾನಕ್ಕಾಗಿ ಬಂದ ಅವಳ ತಂದೆ ಕ್ರುದ್ಧನಾಗುತ್ತಾನೆ. ಆದರೆ ಹಣ ಅವನ ಬಾಯನ್ನು ಸುಲಭವಾಗಿ‌ ಮುಚ್ಚಿಸುತ್ತದೆ. ನಿಧಾನಕ್ಕೆ ಸಫಾಳ ಕುಟುಂಬದ ಮನವೊಲಿಸುವಲ್ಲಿ ಯಶಸ್ವಿಯಾದ ವಾರಿಸ್ ಸಫಾಳನ್ನು ಕರೆದೊಯ್ಯುವ ಪ್ರಯತ್ನ ಮುಂದುವರೆಸುತ್ತಾರೆ.
ಗಿರಿಧರ್‌ ಗುಂಜಗೋಡು ಬರೆಯುವ “ಓದುವ ಸುಖ” ಅಂಕಣ

Read More

ಚಲಂ ಆತ್ಮಕತೆಯ ಒಂದಿಷ್ಟು ಪುಟಗಳು

ಬಂದಾಗಿನಿಂದ ಸತ್ಯವತಿ, ರತ್ನಮ್ಮ ನನ್ನನ್ನು ಹಿಡಿದುಕೊಂಡು ನೇತಾಡುತ್ತಿದ್ದಾರೆ. ಮದ್ರಾಸ್‍ನಲ್ಲಿರುವ ವೊಯ್ಯಿಯನ್ನು ನೆನಪಿಸಿಕೊಂಡ ಮಾತ್ರಕ್ಕೆ ನನ್ನ ಮನಸು ಪರವಶ ವಾಗುತ್ತಿತ್ತು. ನಾನು ದೈವವನ್ನು ಕಾಂಕ್ಷೆ ಮಾಡಿದಷ್ಟೂ ಕಾಲ, ಎಲ್ಲದಕ್ಕಿಂತ ಆತನೇ ವಾಂಚನಿಯ ನನಗೆ ಆತನೇ ಶರಣ್ಯ. ಆ ಈಶ್ವರನ ಕುರಿತು ಯಾವಾಗ ಅನುಮಾನಗಳು ಮೂಡಿದವೊ, ಅಂದಿನಿಂದ ಸ್ತ್ರೀಯೇ ನನ್ನ ದೈವವಾಯಿತು. ಆಕೆಯಲ್ಲಿಯೆ ನನ್ನ ಜೀವನಕ್ಕೆ ಸಾಫಲ್ಯ. ಅದಕ್ಕಿಂತ ಈ ಲೋಕದಲ್ಲಿ ಬಯಸುವಂತಹದು ಏನೂ ಇಲ್ಲ. ಇದಕ್ಕಿಂತ ಯಾವುದೂ ತೃಪ್ತಿ ಕೊಡುವುದಿಲ್ಲ.
ತೆಲುಗು ಬರಹಗಾರ “ಚಲಂ” ಅವರ ಆತ್ಮಕತೆಯನ್ನು ಕನ್ನಡದ ಕವಿ ಲಕ್ಕೂರು ಆನಂದ್‌ ಕನ್ನಡಕ್ಕೆ ತಂದಿದ್ದು ಅದರ ಕೆಲವು ಪುಟಗಳು ನಿಮ್ಮ ಓದಿಗೆ ಇಲ್ಲಿವೆ. 

Read More

ಓ ಲಕ್ಷ್ಮಣಾ… ಓ ಲಕ್ಷ್ಮಣಾ…

ಇದು ಮಾಯೆ, ಇದಕ್ಕೆ ಬಲಿಬೀಳಬಾರದು ಅನ್ನುವ ಎಚ್ಚರದಲ್ಲಿ ಲಕ್ಷ್ಮಣ ಇದ್ದ. ಹೇಳಿಯೂ ಹೇಳಿದ. ಆದರೆ ಸೀತೆಯನ್ನು ಆಗಲೇ ಮಾಯೆ ಮುಸುಕಿತ್ತು. ಸತ್ಯಾಸತ್ಯದ ವಿವೇಕ ಮರೆಯಾಗಿತ್ತು. ರಾಮನನ್ನು ಕಳುಹಿಸಿದಳು. ಇಬ್ಬರು ಮಾಯೆಯ ಪ್ರಭಾವಕ್ಕೆ ಒಳಗಾದ ವ್ಯಕ್ತಿಗಳ ನಡುವೆ ಅದರಿಂದ ಹೊರತಾಗಿ ಉಳಿದ ಲಕ್ಷ್ಮಣ ಅಸಹಾಯಕತೆ, ಆರ್ತತೆ, ಬಳಲಿಕೆಯನ್ನು ತೋರ್ಪಡಿಸುವ ಒಂದು ಪ್ರತಿಮೆಯಾಗಿ ಅದ್ಭುತ ಪದವಾಗಿ, ಓ ಲಕ್ಷ್ಮಣಾ ಓ ಲಕ್ಷ್ಮಣಾ ಅನ್ನುವ ಒಂದು ಕೂಗು ಈ ಇಡೀ ಪ್ರಸಂಗದಲ್ಲಿ ಮತ್ತೆ ಮತ್ತೆ ಅನುರಣಿಸುತ್ತದೆ. ಕಾಡುತ್ತದೆ.
ಕುವೆಂಪುರವರ ಶ್ರೀ ರಾಮಾಯಣ ದರ್ಶನಂ ಕೃತಿಯ ಒಂದು ಭಾಗದ ಕುರಿತು ಬರೆದಿದ್ದಾರೆ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

Read More

ಮೌನಸಾಕ್ಷಿಗೊಂದು ಮಾತು

ಕನಸಿನ ರೆಕ್ಕೆಗಳನ್ನು ಹಚ್ಚಿಕೊಂಡು ಅಮೆರಿಕಕ್ಕೆ ಹಾರುವ ಭಾರತೀಯರು ಅಲ್ಲಿನ ಅಪರಿಚಿತ ಸಮಾಜವನ್ನು ಬೆರಗುಗಣ್ಣಿನಿಂದ ನೋಡುತ್ತಲೇ ತಾವು ಹೊಸ ಬದುಕನ್ನು ಕಟ್ಟಿಕೊಳ್ಳುವುದರ ಜೊತೆಗೆ ಅನಿವಾರ್ಯವಾಗಿ ರೂಢಿಸಿಕೊಂಡಿರುವ ಆಡಂಬರ, ಒಣಪ್ರತಿಷ್ಠೆಗಳ ಜೀವನಶೈಲಿ ಹಾಗೂ ಅವರ ಮಾನಸಿಕ ತುಮುಲಗಳನ್ನುಕಥೆಗಾರರು   ಸೆರೆಹಿಡಿದಿದ್ದಾರೆ. ಇತ್ತ ಭಾರತದ ತೆಲಂಗಾಣದಲ್ಲಿ ಕಂಡ ಸಾಮಾಜಿಕ ಬದುಕಿನ ಅನುಭವಗಳನ್ನು ಕಟ್ಟಿಕೊಟ್ಟಿದ್ದಾರೆ. ಅವುಗಳನ್ನು ನಮ್ಮ ನಾಡಿನ ಜನರ ಕಥೆಗಳೆಂಬಂತೆ ಶುಭಮಂಗಳ ಅವರು ಕನ್ನಡೀಕರಿಸಿದ್ದಾರೆ.
ತೆಲುಗಿನ ಕಥೆಗಾರ ನಕ್ಷತ್ರಂ ವೇಣುಗೋಪಾಲ್‌ ಬರೆದ “ಮೌನಸಾಕ್ಷಿ” ಕಥಾಸಂಕಲನದ ಹನ್ನೊಂದು ಕತೆಗಳನ್ನು ಎಂ.ಜಿ. ಶುಭಮಂಗಳ ಕನ್ನಡಕ್ಕೆ ತಂದಿದ್ದು, ಈ ಸಂಕಲನಕ್ಕೆ ರೂಪದರ್ಶಿ ಜಿ. ವೆಂಕಟೇಶ್‌ ಬರೆದ ಮುನ್ನುಡಿ ಇಲ್ಲಿದೆ

Read More

ʼನೀರಿನೊಳಗಿನ ಮಂಜುʼ ಕಾದಂಬರಿಯ ಕೆಲವು ಪುಟಗಳು

ಮದುವೆಯಾಗುವಾಗ ಜಯಂತಿ ಕುಲಕರ್ಣಿ ರಾಂಪುರದ ಒಂದು ಹೈಸ್ಕೂಲಿನಲ್ಲಿ ಕನ್ನಡ ಟೀಚರಾಗಿದ್ದಳು. ಅದು ಖಾಸಗಿ ಹೈಸ್ಕೂಲಾಗಿದ್ದುದರಿಂದ ಸಂಬಳವೆನ್ನುವುದು ‘ನಾಮ್ಕಾವಸ್ಥೆ’ಯದಾಗಿತ್ತು. ಎಂ.ಎ ಓದಿ ಮನೆಯಲ್ಲಿ ಸುಮ್ಮನೇ ಕುಳಿತುಕೊಳ್ಳುವುದಕ್ಕಿಂತ ಹವ್ಯಾಸದ ಥರ ಪಾಠವನ್ನಾದರೂ ಮಾಡಿ ‘ಟೈಂಪಾಸ್’ ಮಾಡಬಹುದು ಎಂಬಂತೆ ಆಕೆ ಹೈಸ್ಕೂಲಲ್ಲಿ ದುಡಿಯುತ್ತಿದ್ದಳು. ಬಸವೇಶ್ವರ ಕಾಲೇಜಿನಲ್ಲಿರುವ ಸತೀಶ್ ಕುಲಕರ್ಣಿ ಇಂಗ್ಲೀಷ್ ಲೆಕ್ಚರರ್ ಆಗಿದ್ದಾರೆ ಎಂಬುದರಿಂದ ಮದುವೆಯ ಪೂರ್ವದಲ್ಲೇ ಆಕೆ ತಾನೂ ಆ ಕಾಲೇಜಿನಲ್ಲಿ ಸೇರಬೇಕೆಂಬ ಕನಸು ಕಂಡಿದ್ದಳು.
ಡಾ. ನಾ. ಮೊಗಸಾಲೆಯವರ “ನೀರಿನೊಳಗಿನ ಮಂಜು” ಹೊಸ ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ