Advertisement

Category: ಪುಸ್ತಕ ಸಂಪಿಗೆ

ಕಥಾ ಬೇಸಾಯವನ್ನು ಬದುವಿನಲ್ಲಿ ನಿಂತು ನೋಡಿ

ಉಳುಮೆ ಅನುಭವದ್ದು. ಒಂದು ಸಾಲಿನ ಉಳುಮೆ ಸಾಕೋ, ಎರಡುಸಾಲು ಹೊಡೆಯಬೇಕೋ, ಮೂರುಸಾಲು ಆಗಬೇಕೋ ಎಂಬುದು ಉಳುಮೆಗಾರನ ವಿವೇಚನೆಯದು. ಹಾಗೆಯೇ ಬಲಸುತ್ತು, ಎಡಸುತ್ತು ಉಳುಮೆಯ ವಿಚಾರವೂ ಸಹ. ಬದುವಿನ ಉಬ್ಬಂಚು ತಗ್ಗಬೇಕಾದರೆ ಎಡಸುತ್ತಿನ ಉಳುಮೆಗೆ ನೇಗಿಲು ಹಿಡಿಯಬೇಕು. ಎದೆಯ ಹೊಲದಲ್ಲಿ ಹುಟ್ಟುವ ಕಥೆ ಬೆಳೆದು ಬೆಳೆಯಾಗವುದು ಇಂತಹ ಹದಗಳಲ್ಲಿಯೇ. ಹೊಲದ ವಿಸ್ತಾರವಿದ್ದಂತೆ ಕಥೆಯ ವಿಸ್ತಾರವೂ ಇರುತ್ತದೆ. ವಿಸ್ತಾರ ದೊಡ್ಡದಿದ್ದರೂ ಉಳುಮೆಯಾದಷ್ಟು ನೆಲದಲ್ಲಷ್ಟೇ ಬೆಳೆ. ಸದಾಶಿವ ಸೊರಟೂರು ಕಥಾಸಂಕಲನ “ಅರ್ಧ ಬಿಸಿಲು ಅರ್ಧ ಮಳೆ”ಗೆ ಸ. ರಘುನಾಥ ಬರೆದ ಮುನ್ನುಡಿ

Read More

ತುಂಟ ಪೊಕ್ಕಣ್ಣ & ಕಡುಮಡಿಯ ಅಜ್ಜಿ

ಈ ಪೊಕ್ಕಣ್ಣ ಶತ ತುಂಟ, ಕಣ್ಣಲ್ಲೇ ಅವನ ತುಂಟತನ ಇಣಕುತ್ತಿತ್ತು. ಒಂದು ಕಿವಿ ನೆಟ್ಟಗೆ ಮಾಡಿ, ಮತ್ತೊಂದನ್ನು ಮಡಿಸಿದ ಅಂದರೆ ಅವನೇನೋ ತರಲೆ ಮಾಡುತ್ತಾನೆಂದು ನಮಗೆ ಖಾತ್ರಿಯಾಗಿತ್ತು. ಮಟ ಮಟ ಮಧ್ಯಾಹ್ನ ಎಣ್ಣೆ ಪಳಚಿಕೊಂಡು ಹಂಡೆತುಂಬಾ ಬೀಸಿನೀರನ್ನು ಸ್ನಾನ ಮಾಡಿ, ಒದ್ದೆ ಸೀರೆಯನ್ನುಟ್ಟು ಬರುವ ಅಜ್ಜಿಗೆ ಅಡ್ಡಲಾಗಿಯೇ ಮಲಗುತ್ತಿದ್ದ ಪೊಕ್ಕಣ್ಣ. ಅವನು ಮಲಗಬಾರದೆಂದು ಕೊಡಪಾನಗಟ್ಟಲೆ ನೀರು ಹೊಯ್ದಿಟ್ಟು ಸ್ನಾನಕ್ಕೆ ಹೋಗುತ್ತಿದ್ದರು. ಆದರೂ ಕಾಲು ಒರೆಸುವ ಗೋಣಿಚೀಲವನ್ನೆಳೆದುಕೊಂಡು ಬೇಕಂತಲೇ ಬಚ್ಚಲಮನೆ ಬುಡದಿ ಮಲಗಿ ಸತಾಯಿಸುತ್ತಿದ್ದ ಅಂವ.
ಶುಭಶ್ರೀ ಭಟ್ಟ ಲಲಿತ ಪ್ರಬಂಧಗಳ ಸಂಕಲನ “ಹಿಂದಿನ ನಿಲ್ದಾಣ” ದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ತಿಪಟೂರು ಸೀಮೆಯ ಘಮಲು

ಕೇವಲ ನಿರೂಪಕಿ ಆಗದೆ ಕತೆಗಳ ಒಳಗಿನಿಂದ ಬಂದು ಮಾತನಾಡುವ ಕತೆಗಾರ್ತಿಗೆ ಆ ಕಾರಣಕ್ಕೆ ಒಂದು ರೀತಿಯ ಸಹಜ ಯಜಮಾನಿಕೆ ಪ್ರಾಪ್ತವಾಗಿದೆ. ಭಾರತದ ಮಹಾವ್ಯಾಖ್ಯಾನಗಳನ್ನು ನೀಡಿದ ವಾಲ್ಮೀಕಿ ವ್ಯಾಸರು ಕತೆಯ ಒಳಗಿನವರು. ತಾವೂ ತಮ್ಮ ಕತೆಯಲ್ಲಿ ಪಾತ್ರಧಾರಿಗಳು ಅಥವಾ ತಮ್ಮಿಂದಲೇ ಕತೆಗಳನ್ನು ಆರಂಭಿಸಿದವರು. ಕತೆಗಾರಿಕೆಗೆ ಇದೊಂದು ಅತ್ಯುತ್ತಮ ಮಾದರಿ. ತಾನೇ ಊರಾಡಿ ಎತ್ತಿಕೊಂಡು ಬಂದ ಕತೆಗಳಂತಿರುವ ಸಮೂಹ ಪ್ರಜ್ಞೆ ಈ ಕತೆಗಳ ಸತ್ವ. ಕತೆಗಳು ಸಮೂಹದ ಸ್ವತ್ತು. ಸಮೂಹ ಕೊಡುತ್ತಿರುವ ಸಮಸ್ತ ಬೈಗುಳಗಳಾದಿಯಾಗಿ ಯಾವುದನ್ನೂ ಸೋಸದೆ ಇಡಿಯಾಗಿ ನಮಗೆ ತಲುಪಿಸಲಾಗಿದೆ.
ದಯಾ ಗಂಗನಘಟ್ಟ ಕಥಾ ಸಂಕಲನ “ಉಪ್ಪುಚ್ಚಿ ಮುಳ್ಳು”ಗೆ ನಟರಾಜ್‌ ಬೂದಾಳು ಬರೆದ ಮುನ್ನುಡಿ

Read More

ವಾಸ್ತವವಾದಿ ನೆಲೆಯಲ್ಲಿ ಮೈತಳೆದ ಕತೆಗಳು

ಸಿನಿಕತನದಲ್ಲಾಗಲೀ, ಅಸಹಾಯಕತೆಯಲ್ಲಾಗಲೀ ಇವರು ಅಳುತ್ತಾ, ಹಣೆಬರೆಹವನ್ನು ಹಳಿಯುತ್ತಾ ಕೂಡುವುದಿಲ್ಲ. ಹೀಗಿದ್ದಾಗಲೂ ಬಿಗಿಹುಬ್ಬಿನ ಕಾರ್ಪಣ್ಯದ, ಶಠತ್ವದ ಬದುಕನ್ನೂ ಇವರು ನಡೆಸುವುದಿಲ್ಲ. ಬದಲಿಗೆ ಅದೇ ಜೀವನೋತ್ಸಾಹದ, ಲವಲವಿಕೆಯ ವ್ಯಕ್ತಿತ್ವವನ್ನು ಕೊನೆಯವರೆಗೂ ಉಳಿಸಿಕೊಳ್ಳುತ್ತಾರೆ. ತಿಳಿಗೇಡಿಯನ್ನು ಕಟ್ಟಿಕೊಂಡೇ ಬದುಕನ್ನು ಗೆಲ್ಲುತ್ತಾ ಹೋಗುವ ಈ ಹೆಣ್ಣು ಮಕ್ಕಳು ಇವರಿಬ್ಬರೂ ಮನೆಯಲ್ಲಿಲ್ಲದ ಹೊತ್ತಿನಲ್ಲಿ ಆತ ಮಿತಿಮೀರಿ ತಿಂದ ಜಾಮೂನಿನ ಕಾರಣಕ್ಕೆ ಕಳೆದುಕೊಳ್ಳುವುದು ವಿಕಟ ವ್ಯಂಗ್ಯದಂತೆ ನಮಗೆ ಕಾಣಿಸುತ್ತದೆ.
ಶೋಭಾ ಗುನ್ನಾಪೂರ ಕಥಾ ಸಂಕಲನ “ಭೂಮಿಯ ಋಣ”ಕ್ಕೆ ಎಂ.ಎಸ್. ಆಶಾದೇವಿ ಬರೆದ ಮುನ್ನುಡಿ

Read More

‘ಬೇಕಿತ್ತು ನಿಮ್ಮದೊಂದೆರೆಡು ಕವಿತೆಗಳು ಸಾಲವಾಗಿ…ʼ

ಮೂಲ ಲೇಖಕರ ಒಪ್ಪಿಗೆಯಿರಲಿ, ಅವರ ಗಮನಕ್ಕೂ ತಾರದೇ ನೇರವಾಗಿ ಕವಿತೆಯ ಸಾಲುಗಳನ್ನು ನಕಲು ಮಾಡಿ ಅಲ್ಪ ಸ್ವಲ್ಪ ಬದಲಾವಣೆಯೊಂದಿಗೆ ತಾವೇ ರಚಿಸಿದ್ದೆಂದು ಪ್ರಚಾರ ಪಡೆಯುವ ಕಪಟ ಸಾಹಿತಿಗಳನ್ನು ಕೆಣಕಿದ್ದಾರೆ. ‘ಇರಬೇಕು, ಇದ್ದೇ ಇರುತ್ತಾರೆ, ಒಬ್ಬಿಬ್ಬರಲ್ಲ ಒಂದಷ್ಟು ಜನ, ಇರುವಿಕೆಯ ಅರಿವನ್ನಷ್ಟೇ ಉಳಿಸಿ, ಎಲ್ಲರೊಳಗೂ ಸಾಲವಾಗಿಯೇ ಉಳಿಯುವವರು..’ ಎಂದೆನ್ನುತ್ತಾ ಪ್ರತಿಯೊಂದರಲ್ಲೂ ಮೂಗು ತೋರಿಸುವವರ ಸಂಖ್ಯೆ ಈಗ ಅಧಿಕ. ಅದರ ಬಗ್ಗೆ ಪರಿಜ್ಞಾನ ಇದೆಯೋ ಇಲ್ಲವೋ ಗೊತ್ತಿಲ್ಲ ಆದರೆ ತನ್ನದೂ ಒಂದು ಅಭಿಪ್ರಾಯವಿರಲಿ ಎನ್ನುವವರೇ ಹೆಚ್ಚಾಗಿದ್ದಾರೆ.
ಸೌಜನ್ಯ ದತ್ತರಾಜ ಕವನ ಸಂಕಲನ “ಭಾವನೌಕೆಯನೇರಿ” ಕುರಿತು ಪ ನಾ ಹಳ್ಳಿ ಹರೀಶ್ ಕುಮಾರ್ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ