ಬದುಕಿನ ವಿನ್ಯಾಸಗಳ ಬಗ್ಗೆ ಓದುಗರನ್ನು ಒಪ್ಪಿಸುವ ಕತೆಗಳು
ಹೊಸ ತಲೆಮಾರಿನವರೇ ಇನ್ನೂ ಗೊಂದಲದಲ್ಲಿರುವಾಗ ಹಿಂದಿನ ತಲೆಮಾರಿನವರೇ ಈ ರೀತಿಯ ಮನೋಧರ್ಮ ತೋರುವುದು, ಹಾಗೆ ತೋರುವ ಮುನ್ನ ಮನುಷ್ಯ ಸಹಜವಾದ ಎಲ್ಲ ಗೊಂದಲ, ಹಿಂಜರಿಕೆಗಳನ್ನು ಅನುಭವಿಸುವುದನ್ನು ಕೂಡ ಕತೆ ತೆರೆದು ತೋರಿಸುತ್ತದೆ. ಈ ಗೊಂದಲ, ಹಿಂಜರಿಕೆಗಳನ್ನು ಹೇಳದೆ ಹೋಗಿದ್ದರೆ ಕತೆ ಕೇವಲ ಆಶಯಪ್ರಧಾನವಾಗಿರುತಿತ್ತು. ಯಾರದೋ, ಯಾವುದೋ ಕತೆಯೆಂದು ಪ್ರಾರಂಭವಾಗಿ, ಇನ್ಯಾವುದೋ, ಯಾರದೋ ಕತೆಯಾಗುವುದು. ಕೊನೆಗೆ ಎಲ್ಲರ ಕತೆಯೂ ಒಂದೇ ಆಗಿರುವುದು- ಈ ಮಾದರಿಯನ್ನು ಮತ್ತೆ ಮತ್ತೆ ಆನಂದ್ ಎಲ್ಲ ಕತೆಗಳಲ್ಲೂ ಬಳಸುತ್ತಾರೆ.
ಆನಂದ್ ಗೋಪಾಲ್ ಹೊಸ ಕಥಾಸಂಕಲನ “ಆಟಗಾಯಿ”ಗೆ ಕೆ. ಸತ್ಯನಾರಾಯಣ ಬರೆದ ಮುನ್ನುಡಿ
