Advertisement

Category: ಪುಸ್ತಕ ಸಂಪಿಗೆ

ಕರಣಂ ಪವನ್‌ ಪ್ರಸಾದ್‌ ಹೊಸ ಕಾದಂಬರಿಯ ಪುಟಗಳು

ನಾನು ಇಲ್ಲಿ ಕುಳಿತು ಮಾತಾಡುತ್ತಿರುವ ನನ್ನ ‘ಈಗ’, ನೀವು ಕೇಳುತ್ತಿರುವ ನಿಮ್ಮ ‘ಈಗ’ ಒಂದೇ ಅಲ್ಲ. ಇಡೀ ಬ್ರಹ್ಮಾಂಡದ ಹೋಲಿಕೆಯಲ್ಲಿ ನಾವು ಸಣ್ಣವರಾದ್ದರಿಂದ ಈ ವಿಪರ್ಯಾಸ ಗೋಚರ ಆಗುತ್ತಿಲ್ಲ. ಹಾಟ್ ಬಲೂನಿನ ಮೇಲೆ ಇರುವ ಇರುವೆಗೆ ತನ್ನ ಜಾಗ ಮಟ್ಟಸ ಎಂದೇ ತೋರುತ್ತದೆ. ಮನುಷ್ಯನಿಗೆ ನಿಂತ ಜಾಗ ಮಟ್ಟಸ ಅನ್ನಿಸುವುದೂ ಹೀಗೆಯೇ. ನಾವು ಭೂಮಿಯ ಗಾತ್ರಕ್ಕೆ ಹೋಲಿಸಿ, ತುಂಬಾ ಗಾತ್ರ ಇದ್ದಿದ್ದರೆ ಅದು ದುಂಡು ಎಂದು ಕಣ್ಣಿಗೇ ಕಾಣಿಸುತ್ತಿತ್ತು. ಕರಣಂ ಪವನ್‌ ಪ್ರಸಾದ್‌ ಬರೆದ ‘ಸತ್ತು’  ಎಂಬ ಹೊಸ  ಕಾದಂಬರಿಯಿಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಆನೆಗಳಿಗಾಗಿ ಕಾಡಿನಲ್ಲಿ ಮೇವು ಬೆಳೆದರೇ..

ವಲಯ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ಹೇಳಿದೆ. `ಬೀಜ ರೆಡಿಯಾಗಿದೆ. ಯಾವಾಗ ಬರುತ್ತೀರಿ?’ ಅವರೂ ಉತ್ಸುಕತೆಯಲ್ಲಿದ್ದರು. `ನಾಳೆಯೇ ಬರುತ್ತೇವೆ’ ಎಂದರು. ಹೇಳಿದ ಮಾತಿನಂತೆ ಅವರು ಮರುದಿನ ಹತ್ತು ಗಂಟೆಗೆ ಸರಿಯಾಗಿ ಉಪವಲಯ ಅರಣ್ಯಾಧಿಕಾರಿ ಅಲ್ಲದೆ ಇತರ ಆರು ಮಂದಿ ಸಿಬ್ಬಂದಿಯವರೊಂದಿಗೆ ಮನೆಗೆ ಬಂದರು. ನಾನು ಎಲ್ಲರಿಗೂ ಟೀ ಮತ್ತು ಬಿಸಿಬಿಸಿ ಗೆಣಸಿನ ಪೋಡಿ ಮಾಡಿ ಕೊಟ್ಟೆ. ಕಾಡಿನಲ್ಲಿ ಬಾಯಾರಿಕೆಯಾದರೆ ಎಂದು 5 ಲೀಟರ್ ಕ್ಯಾನ್‌ನಲ್ಲಿ ಮಜ್ಜಿಗೆ ತುಂಬಿಸಿಕೊಂಡೆ. ನಂತರ ನಾವೆಲ್ಲರೂ ನಮ್ಮ ಮನೆಯಿಂದ ಮೇಲೆ ಇರುವ ರಕ್ಷಿತಾರಣ್ಯಕ್ಕೆ ಕತ್ತಿ, ಕೋಲು, ಬೀಜ ಹಿಡಿದು ಪ್ರವೇಶಿಸಿದೆವು.
ಸಹನಾ ಕಾಂತಬೈಲು ಅವರ ‘ಆನೆ ಸಾಕಲು ಹೊರಟವಳು’ ಪುಸ್ತಕದ ಮತ್ತೊಂದು ಬರಹ ಇಲ್ಲಿದೆ.

Read More

ಬದುಕಿನ ವಿನ್ಯಾಸಗಳ ಬಗ್ಗೆ ಓದುಗರನ್ನು ಒಪ್ಪಿಸುವ ಕತೆಗಳು

ಹೊಸ ತಲೆಮಾರಿನವರೇ ಇನ್ನೂ ಗೊಂದಲದಲ್ಲಿರುವಾಗ ಹಿಂದಿನ ತಲೆಮಾರಿನವರೇ ಈ ರೀತಿಯ ಮನೋಧರ್ಮ ತೋರುವುದು, ಹಾಗೆ ತೋರುವ ಮುನ್ನ ಮನುಷ್ಯ ಸಹಜವಾದ ಎಲ್ಲ ಗೊಂದಲ, ಹಿಂಜರಿಕೆಗಳನ್ನು ಅನುಭವಿಸುವುದನ್ನು ಕೂಡ ಕತೆ ತೆರೆದು ತೋರಿಸುತ್ತದೆ. ಈ ಗೊಂದಲ, ಹಿಂಜರಿಕೆಗಳನ್ನು ಹೇಳದೆ ಹೋಗಿದ್ದರೆ ಕತೆ ಕೇವಲ ಆಶಯಪ್ರಧಾನವಾಗಿರುತಿತ್ತು. ಯಾರದೋ, ಯಾವುದೋ ಕತೆಯೆಂದು ಪ್ರಾರಂಭವಾಗಿ, ಇನ್ಯಾವುದೋ, ಯಾರದೋ ಕತೆಯಾಗುವುದು. ಕೊನೆಗೆ ಎಲ್ಲರ ಕತೆಯೂ ಒಂದೇ ಆಗಿರುವುದು- ಈ ಮಾದರಿಯನ್ನು ಮತ್ತೆ ಮತ್ತೆ ಆನಂದ್ ಎಲ್ಲ ಕತೆಗಳಲ್ಲೂ ಬಳಸುತ್ತಾರೆ.
ಆನಂದ್‌ ಗೋಪಾಲ್‌ ಹೊಸ ಕಥಾಸಂಕಲನ “ಆಟಗಾಯಿ”ಗೆ ಕೆ. ಸತ್ಯನಾರಾಯಣ ಬರೆದ ಮುನ್ನುಡಿ

Read More

ಕೊಳ್ಳೆಗಾಲ್ ಮೆಮೋರಿಯಲ್

ಅಮೆರಿಕದ ಜನ ಈಗಲೂ ತಲೆ ತಗ್ಗಿಸಿ ಕತೆ ಹೇಳುವ ತಗ್ಗಿನ ಸ್ಮಾರಕ ‘ವಿಯೆಟ್ನಾಂ ಮೆಮೋರಿಯಲ್’. ವಿಯೆಟ್ನಾಂನಲ್ಲಿ 1955ರಿಂದ 75ರವರೆಗೆ ಸತತ ಇಪ್ಪತ್ತು ವರ್ಷಗಳ ಕಾಲ ಹೋರಾಟ ನಡೆಸಿ ಅಮೆರಿಕ ಕೊನೆಗೂ ಯಶ ಗಳಿಸಲಾಗದೇ ಸೋತು ಹಿಮ್ಮೆಟ್ಟಿದ್ದು ಈ ಮಹಾನ್ ದೇಶಕ್ಕೆ ಎಂದೂ ಮರೆಯಲಾಗದ ಮುಖಭಂಗ. ಆ ಯುದ್ಧದಲ್ಲಿ ಮಡಿದವರಿಗಾಗಿ ಅಮೆರಿಕದಲ್ಲಿ ನಿರ್ಮಿಸಿದ ಸ್ಮಾರಕಗಳಿಗೆ ಕೊಳ್ಳೇಗಾಲದ ‘ವೆರಿಸ್ಪೆಷಲ್’  ಕಲ್ಲುಚಪ್ಪಡಿಗಳನ್ನು ಅಂದರೆ ಗ್ರಾನೈಟನ್ನು ಬಳಸಲಾಗಿದೆ. ಈ ಕಲ್ಲುಚಪ್ಪಡಿಗಳನ್ನು ರೂಪಿಸಲು ಜೀವತೆತ್ತವರಿಗೆ ಸ್ಮಾರಕ ಬೇಡವೇ…
ನಾಗೇಶ್ ಹೆಗಡೆ ಅವರು ಬರೆದ ಗಗನ ಸಖಿಯರ ಸೆರಗ ಹಿಡಿದು ಕೃತಿಯ ಒಂದು ಅಧ್ಯಾಯ ಇಂದಿನ ಓದಿಗೆ. 

Read More

ಮತ್ತೆಂದೂ ಅವಳು ಬರೆಯುವ ಸಾಹಸಕ್ಕೆ ಇಳಿಯಲಿಲ್ಲ

ನನ್ನ ಮದುವೆಯಾಗಿ ಕೆಲವು ವರ್ಷಗಳ ನಂತರ ದೊಡ್ಡ ಜಮೀನ್ದಾರನೊಂದಿಗೆ ಅವಳ ಮದುವೆಯಾಯ್ತು. ಅವಳ ಗಂಡನಿಗೆ ಅವಳು ಹೊರಗೆ ಹೋಗಿ ಹಾಡುವುದು ಇಷ್ಟವಿರಲಿಲ್ಲ. `ನೀನು ನಮ್ಮ ಮಕ್ಕಳಿಗೆ ಹಾಡು ಕಲಿಸಿದರೆ ಬೇಕಾದಷ್ಟಾಯಿತು. ಸಾರ್ವಜನಿಕ ಪ್ರದರ್ಶನ ಬೇಡ. ಹೊರಗೆ ಹೋದರೆ ತೋಟದ ಉಸ್ತುವಾರಿ, ಮನೆ ವಾರ್ತೆ ನೋಡಿಕೊಳ್ಳುವವರು ಯಾರು? ಊರ ಜನರಿಗೆ ಸಂಗೀತ ಹೇಳಲಿಕ್ಕೆ ಅಲ್ಲ ನಾನು ನಿನ್ನನ್ನು ಮದುವೆಯಾದದ್ದು’ ಎಂದಿದ್ದ. ಹಾಡುಹಕ್ಕಿಯ ರೆಕ್ಕೆ ಅಲ್ಲಿಗೆ ಮುರಿಯಿತು ಎಂದು ಬೇರೆ ಹೇಳಬೇಕಾಗಿಲ್ಲ ತಾನೆ?
ಸಹನಾ ಕಾಂತಬೈಲು ಅವರ ‘ಆನೆ ಸಾಕಲು ಹೊರಟವಳು’ ಪುಸ್ತಕದ ಇನ್ನೊಂದು ಪ್ರಬಂಧ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ