ಕೋಟೆ ಕೊತ್ತಲಗಳ ನಡುವೆ…: ಶ್ರೀಧರ್ ಎಸ್. ಸಿದ್ದಾಪುರ ಪ್ರವಾಸ ಸರಣಿ
ಎಂದೂ ನಿದ್ರಿಸದ ಕೋಟೆ ಏಳು ಮಹಾದ್ವಾರಗಳಿಂದ ಇಂದಿಗೂ ಅಬೇಧ್ಯವಾಗಿದೆ. ತನ್ನ ತಲೆ ಬಿದ್ದಲ್ಲಿ ದೇವಾಲಯವನ್ನು ನಿರ್ಮಿಸಿ ಹಾಗೂ ದೇಹವಿದ್ದಲ್ಲಿ ಕೋಟೆ ಗೋಡೆಯ ನಿರ್ಮಿಸಿ ಎಂದು ತನ್ನನ್ನೆ ತಾ ಬಲಿಕೊಟ್ಟ! ತನ್ನ ತಲೆ ಕತ್ತರಿಸಿದ ಮೇಲೂ ಆತ ನಿಧಾನಕ್ಕೆ ಕೋಟೆಯ ಗೋಡೆ ಎಡೆಗೆ ನಡೆದು ಧರೆಗುರುಳಿದ. ಅಲ್ಲೇ ಕೋಟೆಯನ್ನು ನಿರ್ಮಿಸಲಾಯಿತು. ಎಷ್ಟೇ ಬಾರಿ ನಿರ್ಮಿಸಿದರೂ ನಿಲ್ಲದ ಕೋಟೆ ಬೀಳದೆ ನೇರ ನಿಂತಿತು. ಅಂತೂ ರಾಣಾಕುಂಭನ ಆಸೆ ನೆರವೇರಿತು. ಕಿಲಿವಾಡದಲ್ಲಿ ಬೃಹತ್ ಕೋಟೆಯೊಂದು ಎದ್ದು ನಿಂತಿತು!
ಶ್ರೀಧರ್ ಎಸ್. ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ರಾಜಸ್ಥಾನದಲ್ಲಿ ಓಡಾಡಿದ ಅನುಭವಗಳ ಕುರಿತ ಬರಹ
