Advertisement

Category: ಪ್ರವಾಸ

ಇನ್ಸ್ಬ್ರುಕ್ ಎಂಬ ಮಾಯಾಲೋಕ

ನಾರ್ಡ್ ಕೆಟ್ಟೆಯಲ್ಲಿ ಪ್ರವಾಸಿಗರಿಗೋಸ್ಕರ “ಇಗ್ಲೂ” ಕೂಡ ಮಾಡಿ ಇಡಲಾಗಿತ್ತು. ಗಟ್ಟಿಯಾದ ಹಿಮದ ಇಟ್ಟಿಗೆಗಳಿಂದ ಕಟ್ಟಿದ ಪುಟ್ಟ ಮನೆಯೇ ಇಗ್ಲೂ. ತಾಪಮಾನ ಹೆಚ್ಚಿದ ಹಾಗೆ ಕರಗಿ ಹೋಗುವ ಈ ಮನೆ, ಬೇಸಿಗೆಯಲ್ಲಿ ಮಾಯವಾಗಿಬಿಡುತ್ತದೆ. ಮತ್ತೆ ಚಳಿಗಾಲದಲ್ಲಿ ಹೊಸದಾಳಿ ಹಿಮ ಬಿದ್ದು, ಗಟ್ಟಿಯಾದಮೇಲೆ ಪುನಃ ಕಟ್ಟಿಕೊಳ್ಳಬೇಕು. ಅಲ್ಲಿಗೆ ಹಿಂದಿನವರ ಕಾಲದಲ್ಲಿ ಪ್ರತಿವರ್ಷ ಹೊಸ ಮನೆ ಕಟ್ಟಿ, ಗೃಹಪ್ರವೇಶ ನಡೆಯುತ್ತಿತ್ತು ಅನ್ನಿಸುತ್ತದೆ!
“ದೂರದ ಹಸಿರು” ಸರಣಿಯಲ್ಲಿ ಇನ್ಸ್ಬ್ರುಕ್ ನಗರದಲ್ಲಿ ಓಡಾಡಿದ ಅನುಭವಗಳ ಬರೆದಿದ್ದಾರೆ ಗುರುದತ್ ಅಮೃತಾಪುರ

Read More

ಕ್ರಿಸ್ಮಸ್ ರಾಜಧಾನಿಯಲ್ಲಿ ಸುತ್ತಾಡಿದ ಕ್ಷಣಗಳು

ಚೆಸ್ಟ್ ನಟ್ ಎಂದರೆ ಒಂದು ರೀತಿಯ ಹಲಸಿನ ಬೀಜದ ಹಾಗಿರುತ್ತದೆ. ಕೆಂಡದಲ್ಲಿ ಆಗ ತಾನೇ ಸುಟ್ಟು ಒಂದು ಪೊಟ್ಟಣದಲ್ಲಿ ತುಂಬಿಸಿ ಕೊಡುತ್ತಾರೆ. ಈ ಪೊಟ್ಟಣದ ವಿಶೇಷ ಎಂದರೆ, ಇದರಲ್ಲಿ ಎರಡು ಭಾಗವಿರುತ್ತದೆ. ಒಂದರಲ್ಲಿ ಬಿಸಿ ಬಿಸಿ ಚೆಸ್ಟ್ ನಟ್ ಹಾಕಿದ್ದರೆ, ಮತ್ತೊಂದು ಭಾಗ ಖಾಲಿ ಇರುತ್ತದೆ. ಬಿಡಿಸಿದ ಸಿಪ್ಪೆ ಹಾಕಲು ಖಾಲಿ ಭಾಗವನ್ನು ಬಳಸಬೇಕು!
“ದೂರದ ಹಸಿರು” ಸರಣಿಯಲ್ಲಿ ಯೂರೋಪಿನ ಕ್ರಿಸ್ಮಸ್ ರಾಜಧಾನಿ ಸ್ಟ್ರಾಸ್‌ಬುರ್ಗ್‌ನಲ್ಲಿ ಓಡಾಡಿದ ಅನುಭವದ ಕುರಿತು ಬರೆದಿದ್ದಾರೆ ಗುರುದತ್ ಅಮೃತಾಪುರ

Read More

ಡಚ್ ಜನರ ಸೈಕಲ್ ಪ್ರೀತಿ!

ಗಿತೋರ್ನ್ ಪಟ್ಟಣದ ಐತಿಹಾಸಿಕ ಭಾಗಗಳಿಗೆ ರಸ್ತೆ ಮಾರ್ಗವಿಲ್ಲ. ದೋಣಿಯ ಸಹಾಯದಿಂದ ಮಾತ್ರ ತಲುಪಬಹುದು. ಇಲ್ಲಿನ ಬಹುತೇಕ ಮನೆಗಳು ಇಂದು “ಹೋಂ ಸ್ಟೇ” ಆಗಿ ಮಾರ್ಪಟ್ಟಿವೆ. ಪ್ರವಾಸಿಗರಿಗೆ ಇದೊಂದು ಅನನ್ಯ ಅನುಭವ. ನಮ್ಮಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಬಸ್ ವ್ಯವಸ್ಥೆ ಇದ್ದಂತೆ, ಇಲ್ಲಿ ಬೋಟಿನ ವ್ಯವಸ್ಥೆ ಇದೆ. ಕಾಲುವೆಗಳ ಪಕ್ಕದಲ್ಲಿ ನಡೆದು ಹೋಗಲು ಪಾದಚಾರಿ ಮಾರ್ಗವಿದೆ. ಅಲ್ಲಲ್ಲಿ ಪಾದಚಾರಿಗಳಿಗೆ ಸಣ್ಣ ಸೇತುವೆಗಳಿವೆ.
ಗುರುದತ್ ಅಮೃತಾಪುರ ಬರೆಯುವ “ದೂರದ ಹಸಿರು” ಸರಣಿ

Read More

ಅರೋರಾ ಬೋರಿಯಾಲಿಸ್: ನರ್ತಿಸುವ ಬೆಳಕಿನ ನೂರೆಂಟು ಮೋಹಕ ರೂಪ

ಹಿಂದಿನ ಸಾಲಿನಲ್ಲಿ ಮಲಗಿದ್ದ ಶ್ವೇತಾ ಜೋರಾಗಿ ಭುಜ ಅಲುಗಿಸಿ ನನ್ನನೆಬ್ಬಿಸುತ್ತಿದ್ದಾಳೆ. ಅವಳಿಗೆ ಗಂಟಲುಬ್ಬಿ ಮಾತೇ ಹೊರಡುತ್ತಿಲ್ಲ. ಕೈಸನ್ನೆ ಮಾಡಿ ಕಿಟಕಿಯ ಪರದೆ ಎತ್ತು ಎನ್ನುತ್ತಿದ್ದಾಳೆ. ಪೈಲಟ್ ಕಡೆ ಬೆರಳು ತೋರಿಸುತ್ತಿದ್ದಾಳೆ. ನನಗೋ ಎದೆ ಧಸಕ್ ಎಂದಿತು. ಅವಳ ಮುಖದ ತುಂಬಾ ಇದ್ದ ನಗು ನೋಡಿ ವಿಮಾನ ಅಪಾಯದಲ್ಲಿಲ್ಲ ಎಂದು ಖಾತ್ರಿಯಾಯಿತು. ಅಂದರೆ.. ಅಂದರೆ.. ನಿಜಕ್ಕೂ ನಾರ್ಥರ್ನ್ ಲೈಟ್ಸ್ ಕಾಣಿಸುತ್ತಿದೆಯಾ? ಇವೆಲ್ಲ ನಡೆದಿದ್ದು ಕೆಲವೇ ಸೆಕೆಂಡುಗಳಲ್ಲಿ ಎನ್ನಬಹುದು.
ʻಜಗದ ಜಗಲಿಯಲಿ ನಿಂತುʼ ಪ್ರವಾಸ ಬರಹಗಳ ಸಾಲಿನಲ್ಲಿ ವೈಶಾಲಿಹೆಗಡೆ ಬರಹ

Read More

ನಮ್ಮಲ್ಲೆ ಅದೆಷ್ಟು ನಂದನದ ತುಣುಕುಗಳು!

ಹಿಮಾಲಯದ ಒಳ ಸುಳಿಗಳಲ್ಲಿ ಇರುವ ದೇವಸರೋವರಗಳದ್ದೇ ಒಂದು ಲೋಕ. ಕೈಲಾಸದ ಮಾನಸಸರೋವರ, ಲೇ ಲಡಾಕ್‌ನ ಪಾಂಗಾಂಗ್‌, ಚಂದ್ರತಾಲ್‌, ನಾಕೋ, ಟ್ರೆಕ್ಕಿಂಗ್‌ ಮಾಡಿ ಮಾತ್ರ ತಲುಪಬಹುದಾದ ಹೆಸರೇ ಇಲ್ಲದ ಇನ್ನೂ ಅನೇಕ ಸರೋವರಗಳಿವೆ. ಮನುಷ್ಯ ಜಗತ್ತು ಕೊನೆಗೊಳ್ಳುತ್ತಾ ಅದು ದೇವಜಗತ್ತಾಗುತ್ತದೆ. ಅದೆಲ್ಲಾ ದೇವಸಂಚಾರಕ್ಕೆ ಮಾಡಿದ ಜಾಗಗಳೇನೋ ಅನಿಸುತ್ತದೆ. ಈ ಸುಂದರ ಸರೋವರಗಳನ್ನು ಆಸ್ವಾದಿಸಲು ಸೂರ್ಯನ ಸಹಕಾರ ಬೇಕು.
‘ದೇವಸನ್ನಿಧಿ’ ಅಂಕಣದಲ್ಲಿ ತಾವು ಕಂಡ ಸರೋವರಗಳ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ