Advertisement

Category: ಪ್ರವಾಸ

ಸ್ವಿಟ್ಜರ್ಲೆಂಡ್ ಮತ್ತು ಜಗತ್ತಿನ ಕಪ್ಪು ಹಣ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ದೀರ್ಘ ಕಾಲದಿಂದಲೂ ಸ್ವಿಟ್ಜರ್ಲೆಂಡ್ ತಟಸ್ಥತೆ ಮತ್ತು ರಾಷ್ಟ್ರೀಯ ಸಾರ್ವಭೌಮತ್ವತೆಯನ್ನು ಕಾಪಾಡಿಕೊಂಡು ಬಂದಿರುವುದರಿಂದ ಜಗತ್ತಿನ ಎಲ್ಲಾ ದೊಡ್ಡ ಬ್ಯಾಂಕ್‌ಗಳ ಮುಖ್ಯಕೇಂದ್ರಗಳು ಇಲ್ಲಿ ನೆಲೆಗೊಂಡಿದ್ದು ಸ್ವಿಸ್ ಬ್ಯಾಂಕಿಂಗ್ ಕ್ಷೇತ್ರವು ಸ್ಥಿರ ಅಭಿವೃದ್ಧಿಯನ್ನು ಹೊಂದಿದೆ.
ಸ್ವಿಟ್ಜರ್ಲೆಂಡ್ ದೇಶದ ಪ್ರವಾಸ ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹದ ಎರಡನೆಯ ಭಾಗ ಇಲ್ಲಿದೆ

Read More

ಶಿಕ್ಷಣದ ರೀತಿ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಮಗುವಿನ ಸಾಮರ್ಥ್ಯ, ಒಲವು, ಮನೋಧರ್ಮಗಳನ್ನು ತಿಳಿಯುವ ಭಾಷೆ, ಗಣಿತಕ್ಕೆ ನಂತರದ ಸ್ಥಾನ, ಮೊದಲು ಮಗು ಭಾವನಾತ್ಮಕವಾಗಿ ಹೇಗಿದೆಯೆಂದು ತಿಳಿದು, ಅಂದಾಜು ಮಾಡಿ ಪೋಷಕರಿಗೆ ತಿಳಿಸುತ್ತಾರೆ. ತನ್ನ ವಯಸ್ಸಿನವರೊಡನೆ ಹೇಗೆ ಸಂವಹನ ಮಾಡುತ್ತದೆ, ಒಂದು ತಂಡದ ಸದಸ್ಯನಾಗಿ ಹೇಗೆ ಕೆಲಸ ಮಾಡುತ್ತದೆ, ನೆರವು ನೀಡಬಲ್ಲದೆ, ನೆರವು ಪಡೆಯಬಲ್ಲದೆ, ಇತರರ ಸಾಮರ್ಥ್ಯವನ್ನು ಗೌರವಿಸಬಲ್ಲದೆ, ತನ್ನ ನಿಲುವನ್ನು ಇತರರ ಮೇಲೆ ಹೇರದೆ ತರ್ಕಬದ್ಧವಾಗಿ ವಿವರಿಸಬಲ್ಲದೆ, ತಪ್ಪನ್ನು ತಿದ್ದಿಕೊಳ್ಳಬಲ್ಲದೆ, ನಿರಾಶೆ, ವೈಫಲ್ಯಗಳಿಗೆ ಯಾವ ರೀತಿ ಪ್ರತಿಕ್ರಿಯಿಸುತ್ತದೆ, ಅನ್ಯ ಸಂಸ್ಕೃತಿ, ಹಿನ್ನೆಲೆಯಿಂದ ಬಂದ ಮಕ್ಕಳನ್ನು ಹೇಗೆ ಕಾಣುತ್ತದೆ…
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ”

Read More

ಭೂಮಿಯ ಮೇಲಿನ ಸುಂದರ ಸಮೃದ್ಧ ದೇಶ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಈಗ ನಾನೊಬ್ಬನೆ ಹೊರಗಿದ್ದು ನಮ್ಮ ಗುಂಪಿನ ಎಲ್ಲರೂ ಒಳಗಿದ್ದರು. ನಮ್ಮ ಗೈಡ್ ಎಲ್ಲರೂ ಹೋಗುವುದನ್ನು ದೃಢಪಡಿಸಿಕೊಂಡು ಹಿಂದೆಬರುತ್ತಿದ್ದನು. ನನ್ನ ಸಮಸ್ಯೆಯನ್ನು ನೋಡಿದ ಗೈಡ್, `ಕೆಳಗಡೆ ಬಗ್ಗಿಕೊಂಡು ಬಂದುಬಿಡಿ ಸರ್’ ಎಂದ. ಒಂದೆರಡು ಕ್ಷಣ ಸುತ್ತಲೂ ನೋಡಿ ಕೊನೆಗೆ ನೆಲದಲ್ಲಿ ಕುಳಿತುಕೊಂಡು ಮಗುವಿನಂತೆ ಕಾಲುಗಳನ್ನು ಬಿಟ್ಟು ದೇಖಿಕೊಂಡು ಒಳಕ್ಕೆ ಹೋಗಿಬಿಟ್ಟೆ. ಹಿಂದೆ ಇದ್ದ ಇಬ್ಬರು ಯುರೋಪಿಯನ್ ಮಹಿಳೆಯರು ಕಣ್ಣುಗಳನ್ನು ಸಣ್ಣದಾಗಿಸಿಕೊಂಡು ವಿಚಿತ್ರ ಪ್ರಾಣಿಯನ್ನು ನೋಡುವಂತೆ ನನ್ನ ಕಡೆಗೆ ನೋಡಿದರು. ಅಲ್ಲೆಲ್ಲ ಕ್ಯಾಮರಾಗಳಿದ್ದರೂ ಅವು ನನ್ನನ್ನು ಕ್ಷಮಿಸಿಬಿಟ್ಟಿದ್ದವು ಎನಿಸುತ್ತದೆ.
ಸ್ವಿಟ್ಜರ್ಲೆಂಡ್ ದೇಶದ ಪ್ರವಾಸ ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

Read More

ಇಂಗ್ಲಿಷ್ ಮತ್ತು ನೆದರ್‌ಲ್ಯಾಂಡ್ಸ್: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನೆದರ್‌ಲ್ಯಾಂಡ್ಸ್ ಯುರೋಪಿನ ಭಾಗ. ಇಂಗ್ಲೆಂಡಿಗೆ ಹತ್ತಿರ. ರೈಲಿನಲ್ಲಿ ಕೂಡ ಕೇವಲ ನಾಲ್ಕು ಘಂಟೆಗಳ ಪ್ರಯಾಣ. ಯುರೋಪಿನಲ್ಲಿ ಬಹು ಭಾಷಾ ಸಂಸ್ಕೃತಿ ಇದೆ. ಬಹುಪಾಲು ಯುರೋಪಿಯನ್ನರು ಒಂದು ಭಾಷೆಗಿಂತ ಹೆಚ್ಚು ಭಾಷೆಗಳನ್ನು ತಮ್ಮ ನಿತ್ಯ ಜೀವನದಲ್ಲಿ ಬಳಸುತ್ತಾರೆ, ಅಥವಾ ಬಳಸಲು ಬಲ್ಲರು. ಆದರೂ ಕೆಲ ದೇಶಗಳಲ್ಲಿ ಪ್ರವಾಸಿಗಳ ಜೊತೆ, ಅದರಲ್ಲೂ ಶ್ವೇತವರ್ಣೀಯರಲ್ಲದವರ ಜೊತೆ ತಮ್ಮ ಮಾತೃ ಭಾಷೆಯಲ್ಲೇ ಮಾತನಾಡುವ ಹಠ ಹಿಡಿಯುತ್ತಾರೆ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ನಾಲ್ಕನೆಯ ಬರಹ

Read More

ಐಫೆಲ್‌ ಟವರ್‌ಗಿಂತ ತಿರುಪತಿಯೇ ವಾಸಿ!: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

1887 ಜನವರಿ, 28ರಂದು ಅಡಿಪಾಯ ಅಗೆಯಲು ಪ್ರಾರಂಭಿಸಿ 1889 ಮಾರ್ಚ್ 31ರಂದು ಗೋಪುರವನ್ನು ಕಟ್ಟಿ ಮುಗಿಸಲಾಯಿತು. ಇಪ್ಪತ್ತು ವರ್ಷಗಳಲ್ಲಿ ಗೋಪುರವನ್ನು ಕೆಡವಲು ಮೊದಲಿಗೆ ತೀರ್ಮಾನಿಸಲಾಗಿತ್ತು. ಜನರು ಮೊದಲಿಗೆ ಗೋಪುರ ತುಂಬಾ ಕೆಟ್ಟದಾಗಿ ಕಾಣಿಸುತ್ತಿದೆ, ಪ್ಯಾರಿಸ್ ನಗರದ ಅಂದವನ್ನು ಕೆಡಿಸಿಬಿಟ್ಟಿದೆ ಎಂದು ದೂರಿದರು. ಆದರೆ ಅದು ಮುಂದಿನ ದಿನಗಳಲ್ಲಿ ಪ್ಯಾರಿಸ್‌ಗೆ ದೊಡ್ಡ ಆಸ್ತಿಯಾಗಿ ಮಾರ್ಪಟ್ಟಿತು. ಮುಂದಿನ ದಿನಗಳಲ್ಲಿ ಗೋಪುರದ ಮೇಲೆ ಸಂವಹನ, ಗುರುತ್ವಾಕರ್ಷಣೆ, ವಿದ್ಯುಚ್ಛಕ್ತಿ ಮತ್ತು ಪವನಶಾಸ್ತ್ರ ಪ್ರಯೋಗಾಲಯವನ್ನು ಅದರ ಮೇಲೆ ಸ್ಥಾಪನೆ ಮಾಡಲಾಯಿತು.
ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ