Advertisement

Category: ಪ್ರವಾಸ

ಕಾಮಾಕ್ಯದಲ್ಲಿ ದೊರೆತ ಅನಿರೀಕ್ಷಿತ ಆಶೀರ್ವಾದ

ಪುರಾಣಗಳಲ್ಲಿ ಉಲ್ಲೇಖಗೊಂಡಿರುವ 51 ಶಕ್ತಿಪೀಠಗಳ ಪೈಕಿ ಕಾಮಾಕ್ಯ ದೇವಿಯ ಈ ದೇವಸ್ಥಾನವೂ ಒಂದು ಎಂದು ಹೇಳಲಾಗುತ್ತದೆ. ಭುವನೇಶ್ವರಿ, ಬಾಗಲಮುಖಿ, ಚಿನ್ನಮಸ್ತ, ತಾರಾ, ಕಾಳಿ, ಭೈರವಿ, ಧೂಮಮತಿ ಎನ್ನುವ ಹೆಸರುಗಳಲ್ಲಿ ಇಲ್ಲಿ ದೇವಿಯನ್ನು ಆರಾಧಿಸುತ್ತಾರೆ. ಮುಖ್ಯ ಗೋಪುರದಲ್ಲಿ ಅವಳನ್ನು ಮಾತಂಗಿ, ತ್ರಿಪುರ ಸುಂದರಿ ಮತ್ತು ಕಮಲ ಎನ್ನುವ ಹೆಸರುಗಳಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ತಾಂತ್ರಿಕ ಶೈಲಿಯಲ್ಲಿ ಆರಾಧಿಸಲಾಗುತ್ತದೆ. ಎಲ್ಲಾ ದೇವಿಯರ ಗರ್ಭಗುಡಿಯಲ್ಲಿಯೂ ಹತ್ತು ಇಂಚು ಆಳದ ಯೋನಿಯಾಕಾರದ ಕಪ್ಪುಶಿಲೆಯೊಳಗಿನಿಂದ ಸದಾಕಾಲವೂ ನೀರಿನ ಬುಗ್ಗೆ ಉಕ್ಕುತ್ತಿರುತ್ತದೆ. ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಲೇಖನ

Read More

ಸದ್ದಿಲ್ಲದೆ ಕಾಣೆಯಾಗುವ ನಾಡಿನ ಶಿಲ್ಪ ಸಂಪತ್ತು

 ಹಾಸನದ ಚನ್ನರಾಯಪಟ್ಟಣದ ಬಳಿ ಹರಿಹರಪುರ ಅಂತ ಒಂದು ಸ್ಥಳವಿದೆ.  ಅಲ್ಲೊಂದು ಹರಿಹರೇಶ್ವರನ ದೇವಾಲಯವಿದ್ದರೂ ಒಳಗೆ ದೇವರಿಲ್ಲ.  ತ್ರಿಕೂಟೇಶ್ವರ ಅಂದರೆ ಮೂರು ಗರ್ಭಗುಡಿಗಳು ಒಂದು ನವರಂಗವನ್ನು ಹೊಂದಿರುತ್ತದೆ. ಅದರ ಪ್ರಕಾರ ಅಲ್ಲಿ ಮೂರು ಮೂರ್ತಿಗಳಿರಬೇಕಿತ್ತು. ಮುಖ್ಯ ದೇವರು ಹರಿಹರೇಶ್ವರ. ಇನ್ನೆರಡು ರಂಗನಾಥ ಮತ್ತು ಸರಸ್ವತಿಗೆ ಸೇರಿದ್ದು. ಆದರೆ ಇವತ್ತು ಮೂರೂ ಖಾಲಿ. ಎಲ್ಲಿ ಹೋದವು ಆ ಮೂರ್ತಿಗಳು ? ಅವು ಹರಿಹರಪುರದಿಂದ ೬೫೦೦ ಕಿ.ಮೀ ದೂರದಲ್ಲಿರುವ ಡೆನ್ಮಾರ್ಕಿನ ಕೋಪನ್ ಹೇಗನ್   ಮ್ಯೂಸಿಯಂನ ಏರ್ ಕಂಡೀಷನ್ ರೂಮಿನಲ್ಲಿ ತಣ್ಣಗೆ ಕುಳಿತಿವೆ. ಇಲ್ಲಿಂದ ಅಲ್ಲಿಗೆ ಹೋಗಿದ್ದಾದರೂ ಹೇಗೆ? ಗಿರಿಜಾ ರೈಕ್ವ ಬರೆಯುವ ಅಂಕಣ. 

Read More

ದೇಮಾಜಿ ಎಂಬ ಸುಂದರ ತಾಣದಲ್ಲೊಂದು ತಂಗುದಾಣ

ಅಸ್ಸಾಮಿನ ಹಳ್ಳಿಗಳು, ತಾಲೂಕುಗಳು ಅರುಣಾಚಲ ಪ್ರದೇಶದಂತೆ ಅಲ್ಲ. ಟಾರು ಮೆತ್ತಿಸಿಕೊಂಡ ವಿಶಾಲ ರಸ್ತೆಗಳು ಪ್ರಯಾಣಿಗರಿಗೆ ಹಿತವಾಗಿವೆ. ಒಂದೊಂದೇ ಮರಗಿಡಗಳು ಕಿಟಿಕಿಯಿಂದಾಚೆಗೆ ನನ್ನಿಂದ ದೂರದೂರವಾಗುತ್ತಿರುವುದನ್ನು ನೋಡುತ್ತಲೇ ಮುಂದೆ ಹೋಗುತ್ತಿದ್ದೆ. ಅಸ್ಸಾಂ ಪೂರ್ತೀ ತುಂಬಾ ಖುಷಿ ನೀಡುವ ನೋಟವೆಂದರೆ ಅಲ್ಲಿನ ಹೆಣ್ಣು ಮಕ್ಕಳು ವಯೋಬೇಧವಿಲದೆ ಸೀರೆಗಳನ್ನುಟ್ಟು ಸೈಕಲ್‌ಗಳಲ್ಲಿ ಓಡಾಡುತ್ತಾರೆ. ರಸ್ತೆಯ, ಅಲ್ಲಿನ ಜನರ, ವಾಹನಗಳ, ಇಕ್ಕೆಲಗಳ ಹಸುರಿನ ಉಸಿರಿನಂಥಾ ಹೆಣ್ಣುಗಳು.
ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ

Read More

ಸಿಸಿಲಿಯ ಬೀಳ್ಕೊಡುಗೆ ಸಿಕ್ಕ ಅನಿರೀಕ್ಷಿತ ಉಡುಗೊರೆ!

ಇತಿಹಾಸದ ಅನರ್ಘ್ಯ ರತ್ನಗಳ ಸುತ್ತ ಅಲೆದಾಟ. ಆರ್ಕಿಮಿಡಿಸ್ ತವರೂರಿನಿಂದ ಹಿಡಿದು ದೇವಾಲಯಗಳ ಕಣಿವೆಯವರೆಗೆ ಇತಿಹಾಸದ ರಸದೌತಣ ಬೇಕೆಂದರೆ ಸಿಸಿಲಿಗೆ ಬರಬೇಕು. ಇತಿಹಾಸದ ಕಥೆಗಳಲ್ಲಿ ಕಳೆದುಹೋಗುವ ಹವ್ಯಾಸವಿರುವವರಿಗೆ ಸಿಸಿಲಿ ಲೆಕ್ಕವಿಲ್ಲದಷ್ಟು ಅವಕಾಶಗಳನ್ನು ತೆರೆದಿಡುತ್ತದೆ. ಕ್ರಿ.ಪೂ. ಆರನೇ ಶತಮಾನದ ದೇವಾಲಯಗಳ ಭೇಟಿ, ನನ್ನ ಈವರೆಗಿನ ಯೂರೋಪಿನ ಪ್ರವಾಸಗಳಲ್ಲೇ ಅನನ್ಯ! ಪ್ರಪಂಚದಾದ್ಯಂತ ಇರುವ ಗ್ರೀಕ್ ದೇವಾಲಯಗಳಲ್ಲಿ ಅತ್ಯಂತ ಸುಸ್ಥಿತಿಯಲ್ಲಿರುವ “Temple of Concordia”ದ ಆಕಾರ, ರಚನೆ – ನೋಡಿ ನಿಬ್ಬೆರಗಾಗಿಬಿಟ್ಟೆ.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

ಆಪರೇಷನ್ ವಿಜಯ್ ನ ಜೀವಂತ ನೆನಪುಗಳು

ಹಾಲ್ ಆಫ್ ಫೇಂನಲ್ಲಿ ಆಪರೇಷನ್ ವಿಜಯ್ ಹೆಸರಿನಲ್ಲೇ ಒಂದು ಗ್ಯಾಲೆರಿ ತೆರೆದಿದ್ದಾರೆ. ಅಲ್ಲಿ ಕಾರ್ಗಿಲ್ ಯುದ್ಧಕ್ಕೆ ಬಳಸಲಾದ ಗನ್ನುಗಳನ್ನು ಇಡಲಾಗಿದೆ. ಮಾರ್ಗದರ್ಶನ ಮಾಡುತ್ತಿದ್ದ ಆ ಯೋಧ “ಈ ಗನ್ನ್ ಅನ್ನು ಕೈಯಲ್ಲಿ ಹಿಡಿದು ಫೋಟೋ ತೆಗೆಸಿಕೊಳ್ಳಿ” ಎಂದ. ನನ್ನ ಆನಂದಕ್ಕೆ ಮಿತಿಯೇಯಿರಲಿಲ್ಲ. ನಿಜಕ್ಕೂ ನಾನು ಆ ಘಳಿಗೆಯಲ್ಲಿ ವೈರಿಪಡೆಯನ್ನು ಸೆದೆಬಡಿದು ಬಿಡುತ್ತೇನೆ ಎನ್ನುವ ಭಾವದಿಂದ ಗನ್ನೊಂದನ್ನು ಕೈಗೆತ್ತಿಕೊಳ್ಳಲು ಹೋದೆ. ಉಹುಂ, ಆಗಲೇ ಇಲ್ಲ! ಎಷ್ಟೊಂದು ಭಾರವಿತ್ತು. ನಗರ ಜೀವನ ಶೈಲಿಗೆ ಹೊಂದಿಕೊಂಡ ನನ್ನ ತಾಕತ್ತು ಸೈನಿಕನ ಉಂಗುಷ್ಠವನ್ನೂ ಹೋಲಲು ಸೋತಿತು. ಕೊನೆಗೆ ಅಲ್ಲಿದ್ದ ಆ ಯೋಧ, ಗನ್ ಎತ್ತಿ ನನ್ನ ಕೈಯಲ್ಲಿ ತೂರಿಸಿದ, ಫೋಟೊ ಸೆರೆಹಿಡಿದ. ‘ಕಂಡಷ್ಟೂ ಪ್ರಪಂಚ’ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಲೇಖನ ಇಲ್ಲಿದೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ