ಅಂದುಕೊಂಡಿದ್ದು ಆಗೇಹೋಯಿತು!: ಜುಲೇಖಾ ಬೇಗಂ ಜೀವನ ವೃತ್ತಾಂತ
ಜುಬೇದಾಬಾಯಿ ಅವರನ್ನು ಮಾಕನೂರು ಭರಮಣ್ಣ ಅವರು ಅಪಹರಿಸಲು ಸಾಧ್ಯವಿರಲಿಲ್ಲ. ಅವರು ಪಾತ್ರಕ್ಕಾಗಿ ಹುಡುಕಾಡುತ್ತಿದ್ದರು; ನಾನೂ ಕಾಯುತ್ತಿದ್ದೆ. ರೋಗಿ ಬಯಸುವುದಕ್ಕೂ ವೈದ್ಯ ಹೇಳುವುದಕ್ಕೂ ಸರಿ ಹೋದರೆ ಇನ್ನೇನು? ಖುಷಿಯಿಂದ ಕುಪ್ಪಳಿಸಿದೆ. ಎರಡು ನಿಮಿಷ ಭೂಮಿಕೆಯಲ್ಲಿ ಇರುತ್ತಿದ್ದೆನೊ ಇಲ್ಲವೊ, ಆದರೆ ಆನಂದಿಸಿದೆ. ಮಾತಿಲ್ಲದ ಮುಖ್ಯ ಪಾತ್ರ ನನಗೆ ಸಿಕ್ಕಿತಲ್ಲಾ ಎಂಬ ಸಂಭ್ರಮ. ಉಳಿದವರೆಲ್ಲ, ‘ನಿಂಗೆ ಕೊಂಬು ಬರಬಾರದವ್ವಾ’ ಎಂದು ಛೇಡಿಸುತ್ತಾ, ನಗಿಸುತ್ತಿದ್ದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಹನ್ನೆರಡನೆಯ ಕಂತು
