Advertisement

Category: ವ್ಯಕ್ತಿ ವಿಶೇಷ

ಕಥಾಲೋಕದ ಆಯಾಮಗಳನ್ನು ಬದಲಿಸಿದ ತಿರುಮಲೇಶರು

ನವ್ಯ ಮತ್ತು ಈ ಪೀಳಿಗೆಯ ತರುಣ ಕತೆಗಾರರನ್ನು ಆಳವಾಗಿ ಪ್ರಭಾವಿಸಿದ ಕೆ. ವಿ. ತಿರುಮಲೇಶರು ಅನೇಕ ದೃಷ್ಟಿಯಿಂದ ಕನ್ನಡದ ಸಣ್ಣಕತೆಯ ಕಲಾತ್ಮಕ- ವೈಚಾರಿಕ ಆಯಾಮಗಳನ್ನು ಬದಲಿಸಿದರು. ಸಿದ್ಧ ಮಾನದಂಡಗಳಿಲ್ಲದೆ ನೇರವಾಗಿ ಆರಂಭಗೊಳ್ಳುವ ಇವರ ಕತೆಗಳು ಆಪ್ತವೆನಿಸುವ ನಿರೂಪಣ ವಿಧಾನವನ್ನು ಹೊಂದಿವೆ. ನಿರೂಪಣೆಗೆ ಸೂಕ್ತವಾದ ವಿಕಸನಶೀಲ ಭಾಷೆಯಿದೆ. ಸವಕಲು ಹಾದಿಯಿಂದ ಹೊಸ ಹಾದಿಯೊಳಗೆ ತವಕದಿಂದ ಮುನ್ನುಗ್ಗುವ ವೇಗವಿದೆ. ಹಲವಾರು ವರ್ಷಗಳಿಂದ ಬರೆಯುತ್ತಲೇ ಇರುವ ತಿರುಮಲೇಶರು ಸದಾ ಹೊಸತನ್ನೇ ಕಾಣಿಕೆಯಾಗಿ ನೀಡುತ್ತಿದ್ದಾರೆ. ಇಂದು ಕೆ.ವಿ. ತಿರುಮಲೇಶ್‌ ಅವರ ಹುಟ್ಟುಹಬ್ಬ. ಅವರು ಬರೆದ 
ʻಕೆಲವು ಕಥಾನಕಗಳುʼ  ಕಥಾಸಂಕಲನದ ಕುರಿತು ಡಾ. ಸುಭಾಷ್ ಪಟ್ಟಾಜೆ ಬರಹ ಈ ಸಂದರ್ಭದ ಓದಿಗಾಗಿ

Read More

ಬದಲಾದ ಜಗದಲ್ಲಿ ಕದಲದೆ ನಿಂತಿದ್ದ ರಾಣಿ

ಜಗತ್ತಿನ ಅತಿದೊಡ್ಡ ನಗರ ಲಂಡನ್. ಆದರೆ ಸಂತಸ ನೆಮ್ಮದಿಗಳು ನೆಲೆಸಿರುವ ಊರಲ್ಲ. ಕಾರ್ಮಿಕರ ಸಂಕಟ, ಕ್ರಾಂತಿಯ ಭಯ, ಇಡೀ ಪಟ್ಟಣವನ್ನು ಸ್ತಬ್ದವಾಗಿಸಬಲ್ಲ ಮುಷ್ಕರಗಳು ವಿಜೃಂಭಿಸುತ್ತಿದ್ದ, ಎರಡನೆಯ ಮಹಾಯುದ್ಧದ ಭೀಕರ ಆಘಾತಗಳಿಂದ ಕಕ್ಕಾಬಿಕ್ಕಿಯಾದ ಜಾಗ. ಅಂತಹ ಪ್ರಕ್ಷುಬ್ದ ಕಾಲದಲ್ಲಿ ಎಲಿಜೆಬೆತ್ ಹುಟ್ಟಿದ್ದು.ಆ ಪ್ರಕ್ಷುಬ್ಧತೆಯ ಸಹವಾಸದಿಂದ ಅವರಿಗೆ ಎಂದೂ ಬಿಡುಗಡೆ ಸಿಗಲೇ ಇಲ್ಲ. ಬ್ರಿಟನ್ನಿನ ಜನಸಾಮಾನ್ಯರ, ಕಾಮನ್ ವೆಲ್ತ್ ದೇಶಗಳ ಜನರ ಅಷ್ಟೇ ಏಕೆ ಸಂಪರ್ಕಕ್ಕೆ ಬಂದ ಜಗತ್ತಿನ ಎಲ್ಲ ಪ್ರಧಾನಿಗಳ, ಅಧ್ಯಕ್ಷರ, ಮಹಾನಾಯಕರ ಅಪಾರ ಪ್ರೀತಿ ಅಭಿಮಾನವನ್ನು ಸಂಪಾದಿಸಿದ ಮಹಾರಾಣಿ ಒಂದು ಶತಮಾನದ ರಾಜಕೀಯ ಸಾಮಾಜಿಕ ಆರ್ಥಿಕ ವೈಜ್ಞಾನಿಕ ಆರೋಗ್ಯ ಕ್ಷೇತ್ರಗಳ ಪ್ರಗತಿ ಮತ್ತು ದುರಂತಗಳಿಗೆ ಸಾಕ್ಷಿಯಾದವರು ನಿನ್ನೆಯಷ್ಟೇ ಅಗಲಿದ್ದಾರೆ.  ಅವರ ಕುರಿತು ಯೋಗೀಂದ್ರ ಮರವಂತೆ ಬರೆದ ಲೇಖವೊಂದು ಇಲ್ಲಿದೆ. 

Read More

ಭಾಷಾವಿಜ್ಞಾನದ ಕಡಲಿನಿಂದ ಹೊರತೆಗೆದ ನುಡಿಮುತ್ತು

ಸಂಶೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡವರು ಸೃಜನಶೀಲ ಬರವಣಿಗೆಯನ್ನು ನಿರ್ಲಕ್ಷಿಸಬಾರದು ಎಂದು ಕಿವಿ ಮಾತು ಹೇಳುತ್ತಿದ್ದ ಬಹುಭಾಷಾ ವಿದ್ವಾಂಸ ಪ್ರೊ. ಕೋಡಿ ಕುಶಾಲಪ್ಪ ಗೌಡರು ಸ್ವತಃ ಸೃಜನಶೀಲ ಲೇಖಕರು. ಅವರ ಬೋಧನಾ ಶೈಲಿಯೂ ಅನೇಕ ಸಂಶೋಧಕರು, ಸೃಜನಶೀಲ ಬರಹಗಾರರಿಗೆ ಮಾರ್ಗದರ್ಶಿಯಂತಿತ್ತು. ಶಬ್ದಮಣಿದರ್ಪಣವನ್ನು ಹೇಗೆ ರಸವತ್ತಾಗಿ ಸಾಹಿತ್ಯಕೃತಿಯಂತೆಯೇ ಪಾಠ ಹೇಳಬಹುದೆಂಬುದನ್ನೂ ಅವರು ತೋರಿಸಿಕೊಡುತ್ತಿದ್ದರು. ಬಹುದೊಡ್ಡ ಶಿಷ್ಯ ಪರಂಪರೆಯನ್ನು ಹೊಂದಿದ್ದ ಹಿರಿಯ ಜೀವಿ ಪ್ರೊ. ಗೌಡರು ಶುಕ್ರವಾರ ಸಂಜೆ ನಿಧನರಾದರು. ಅವರ ಕುರಿತು ಡಾ. ಹರಿಕೃಷ್ಣ ಭರಣ್ಯ ಬರೆದ ಲೇಖನವೊಂದು ಕೆಂಡಸಂಪಿಗೆಯ ಓದುಗರಿಗಾಗಿ.

Read More

ಜಂಕ್ಷನ್ ಪಾಯಿಂಟಿನ ಕಥೆಗಾರನಿಗೆ ಕೆಂಡಸಂಪಿಗೆಯ ಅಭಿನಂದನೆಗಳು

ಕನ್ನಡದ ತರುಣ ಕತೆಗಾರ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ತಮ್ಮನ್ನು ಕಲಾಭ್ಯಾಸಿ ಎಂದೇ ಗುರುತಿಸಿಕೊಳ್ಳಲು ಇಷ್ಟಪಡುತ್ತಾರೆ. ಅವರ ಮೊದಲ ಕಥಾಸಂಕಲನ ‘ನೀಲಕುರಿಂಜಿ’ ಕೇಂದ್ರ ಸಾಹಿತ್ಯ ಅಕಾಡೆಮಿಯ 2022ರ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಗಳು ಪ್ರಕಟವಾದಾಗ ಎದುರಾಗುವ ಸಂಭ್ರಮಗಳು, ಜೊತೆಗೇ ಬರುವ ಟೀಕೆಗಳು ಇತ್ಯಾದಿ  ಸಾಹಿತ್ಯ ಕೃತಿಗಳು ಎದುರಿಸಬೇಕಾದ ʻಮಂಥನʼ ಎಂದು ಹೇಳುತ್ತ ಈ ಕ್ಷಣವನ್ನು ಸ್ವೀಕರಿಸಿದ್ದೇನೆ ಎನ್ನುತ್ತಾರೆ ದಾದಾಪೀರ್ . ಕೆಂಡಸಂಪಿಗೆಯಲ್ಲಿ ‘ಜಂಕ್ಷನ್ ಪಾಯಿಂಟ್’ ಅಂಕಣ ಬರೆಯುತ್ತಿರುವ ದಾದಾಪೀರ್ ಪ್ರಶಸ್ತಿ ಪಡೆದ ಸಂಭ್ರಮವನ್ನು ಸಂಕೋಚದಿಂದಲೇ ಇಲ್ಲಿ ಹಂಚಿಕೊಂಡಿದ್ದಾರೆ.

Read More

ʻನವ್ಯದ ನಂತರ ಕನ್ನಡ ಸಾಹಿತ್ಯ ಮರುಭೂಮಿ ಎನಿಸಿದೆʼ

ಜಿ. ರಾಜಶೇಖರ ಅವರು ಸೇವಾ ನಿವೃತ್ತರಾಗುವ ತನಕವೂ ನಾನು ಊರಿಗೆ ಹೋದಾಗಲೆಲ್ಲ ಉಡುಪಿಯ ಅಜ್ಜರಕಾಡುವಿನಲ್ಲಿರುವ ಎಲ್ ಐ ಸಿ ಕಛೇರಿಗೆ ಹೋಗಿ ಅವರನ್ನು ಭೇಟಿ ಮಾಡಿ ಬರುತ್ತಿದ್ದೆ. ಅವರಲ್ಲಿ ಒಂದಷ್ಟು ಮಾತುಕತೆ ನಡೆಸಿದ ನಂತರ ಕ್ಯಾಂಟೀನ್ ನಲ್ಲಿ ಚಹ ಕುಡಿಸದೆ ಅವರೆಂದೂ ಕಳುಹಿಸಿದ್ದಿಲ್ಲ. ಆದರೆ ಅವರ ಮಾತುಗಳು ಸದಾ ಪ್ರೇರಣಾದಾಯಿ ಆಗಿಯೇ ಉಳಿದವೆ ಎನ್ನುವ ಶ್ರೀನಿವಾಸ ಜೋಕಟ್ಟೆ ಅವರು, ಎರಡು ದಶಕಗಳ ಹಿಂದೆ  ಜಿ.ರಾಜಶೇಖರ ಅವರೊಡನೆ ನಡೆಸಿದ  ಸಂದರ್ಶನವನ್ನು ಮತ್ತೆ ನೆನಪಿಸಿಕೊಂಡಿದ್ದಾರೆ. ಆ ಸಂದರ್ಶನದ ಕೆಲವು ಮುಖ್ಯಾಂಶಗಳು ಇಲ್ಲಿವೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ