Advertisement

Category: ವ್ಯಕ್ತಿ ವಿಶೇಷ

ಗಾಂಧೀ ಎಂಬ ಶಾಶ್ವತ ಸತ್ಯ

ಗಾಂಧೀಜಿಗೆ ಅಹಿಂಸೆ ಕೇವಲ ಒಂದು ಪರಿಕಲ್ಪನೆಯಲ್ಲ. ಅದು ಯಾರಿಗೂ ಯಾವುದೇ ನೋವನ್ನುಂಟು ಮಾಡಬಾರದೆಂಬುದನ್ನು ಮನಗಾಣಿಸಬೇಕು; ಕಾರಣ ದುರಾಲೋಚನೆಯೂ ಹಿಂಸೆ, ಅಸಹನೆಯೂ ಹಿಂಸೆ. ಅನ್ಯರಿಗೆ ಕಡೆಗಣಿಸುವುದೂ ಹಿಂಸೆ. ಅಷ್ಟೇ ಏಕೆ ಲೋಕಕ್ಕೆ ಅವಶ್ಯಕವಾದುದನ್ನು ತಾನೊಬ್ಬನೇ ಇಟ್ಟುಕೊಳ್ಳುವದೂ ಹಿಂಸೆಯೆ. ಇದರಿಂದ ಅಹಿಂಸೆಯೆಂದರೆ ಒಂದು ರೀತಿಯ ನಕಾರಾತ್ಮಕ ಧೋರಣೆಯೆಂದು ತಿಳಿಯಬೇಕಿಲ್ಲ. ಹೇಡಿತನವಂತೂ ಖಂಡಿತ ಅಲ್ಲ. ಮನುಬಳಿಗಾರ್‌ ಅವರು ಮಹಾತ್ಮಾ ಗಾಂಧೀಜಿಯ ಕುರಿತು ಬರೆದ ಲೇಖನವೊಂದು ನಿಮಗಾಗಿ

Read More

ಪುರಾಣ ವಾಙ್ಮಯದ ರಸಋಷಿ ದೇರಾಜೆ ಸೀತಾರಾಮಯ್ಯ

ಕಲೆಯು ಕಾಲಕ್ಕೆ, ಕಾಲವು ನಟನಿಗೆ ಅನುಗುಣವಾಗಿ ತಿರುವುಗಳನ್ನು ಪಡೆಯುತ್ತದೆ ಎನ್ನುವುದನ್ನು ಮರೆಯಬಾರದು.  “ಕಾವ್ಯದ ರಚನೆ ಎಂದರೆ ಅದು ಭಾವನೆಗಳಲ್ಲಿ ಮುಳುಗಿಹೋಗುವುದಲ್ಲ, ಆದರೆ ಭಾವನೆಗಳಿಂದ ಮುಕ್ತನಾಗುವುದು, ವ್ಯಕ್ತಿತ್ವವನ್ನು ಪ್ರದರ್ಶಿಸುವುದಲ್ಲ ಬದಲಾಗಿ ತನ್ನ ವ್ಯಕ್ತಿತ್ವದಿಂದ ಬಿಡುಗಡೆ ಹೊಂದುವುದು” ಎಂದು ಎಲಿಯಟ್‌ ಹೇಳುತ್ತಾನೆ. ದೇರಾಜೆಯವರ ಸಂದರ್ಭದಲ್ಲಿ ಇದನ್ನು ನಾವು ಚೆನ್ನಾಗಿ ಅನ್ವಯಿಸಬಹುದು. ನಾರಾಯಣ ಯಾಜಿ ಬರಹ

Read More

ಕಥಾಲೋಕದ ಆಯಾಮಗಳನ್ನು ಬದಲಿಸಿದ ತಿರುಮಲೇಶರು

ನವ್ಯ ಮತ್ತು ಈ ಪೀಳಿಗೆಯ ತರುಣ ಕತೆಗಾರರನ್ನು ಆಳವಾಗಿ ಪ್ರಭಾವಿಸಿದ ಕೆ. ವಿ. ತಿರುಮಲೇಶರು ಅನೇಕ ದೃಷ್ಟಿಯಿಂದ ಕನ್ನಡದ ಸಣ್ಣಕತೆಯ ಕಲಾತ್ಮಕ- ವೈಚಾರಿಕ ಆಯಾಮಗಳನ್ನು ಬದಲಿಸಿದರು. ಸಿದ್ಧ ಮಾನದಂಡಗಳಿಲ್ಲದೆ ನೇರವಾಗಿ ಆರಂಭಗೊಳ್ಳುವ ಇವರ ಕತೆಗಳು ಆಪ್ತವೆನಿಸುವ ನಿರೂಪಣ ವಿಧಾನವನ್ನು ಹೊಂದಿವೆ. ನಿರೂಪಣೆಗೆ ಸೂಕ್ತವಾದ ವಿಕಸನಶೀಲ ಭಾಷೆಯಿದೆ. ಸವಕಲು ಹಾದಿಯಿಂದ ಹೊಸ ಹಾದಿಯೊಳಗೆ ತವಕದಿಂದ ಮುನ್ನುಗ್ಗುವ ವೇಗವಿದೆ. ಹಲವಾರು ವರ್ಷಗಳಿಂದ ಬರೆಯುತ್ತಲೇ ಇರುವ ತಿರುಮಲೇಶರು ಸದಾ ಹೊಸತನ್ನೇ ಕಾಣಿಕೆಯಾಗಿ ನೀಡುತ್ತಿದ್ದಾರೆ. ಇಂದು ಕೆ.ವಿ. ತಿರುಮಲೇಶ್‌ ಅವರ ಹುಟ್ಟುಹಬ್ಬ. ಅವರು ಬರೆದ 
ʻಕೆಲವು ಕಥಾನಕಗಳುʼ  ಕಥಾಸಂಕಲನದ ಕುರಿತು ಡಾ. ಸುಭಾಷ್ ಪಟ್ಟಾಜೆ ಬರಹ ಈ ಸಂದರ್ಭದ ಓದಿಗಾಗಿ

Read More

ಬದಲಾದ ಜಗದಲ್ಲಿ ಕದಲದೆ ನಿಂತಿದ್ದ ರಾಣಿ

ಜಗತ್ತಿನ ಅತಿದೊಡ್ಡ ನಗರ ಲಂಡನ್. ಆದರೆ ಸಂತಸ ನೆಮ್ಮದಿಗಳು ನೆಲೆಸಿರುವ ಊರಲ್ಲ. ಕಾರ್ಮಿಕರ ಸಂಕಟ, ಕ್ರಾಂತಿಯ ಭಯ, ಇಡೀ ಪಟ್ಟಣವನ್ನು ಸ್ತಬ್ದವಾಗಿಸಬಲ್ಲ ಮುಷ್ಕರಗಳು ವಿಜೃಂಭಿಸುತ್ತಿದ್ದ, ಎರಡನೆಯ ಮಹಾಯುದ್ಧದ ಭೀಕರ ಆಘಾತಗಳಿಂದ ಕಕ್ಕಾಬಿಕ್ಕಿಯಾದ ಜಾಗ. ಅಂತಹ ಪ್ರಕ್ಷುಬ್ದ ಕಾಲದಲ್ಲಿ ಎಲಿಜೆಬೆತ್ ಹುಟ್ಟಿದ್ದು.ಆ ಪ್ರಕ್ಷುಬ್ಧತೆಯ ಸಹವಾಸದಿಂದ ಅವರಿಗೆ ಎಂದೂ ಬಿಡುಗಡೆ ಸಿಗಲೇ ಇಲ್ಲ. ಬ್ರಿಟನ್ನಿನ ಜನಸಾಮಾನ್ಯರ, ಕಾಮನ್ ವೆಲ್ತ್ ದೇಶಗಳ ಜನರ ಅಷ್ಟೇ ಏಕೆ ಸಂಪರ್ಕಕ್ಕೆ ಬಂದ ಜಗತ್ತಿನ ಎಲ್ಲ ಪ್ರಧಾನಿಗಳ, ಅಧ್ಯಕ್ಷರ, ಮಹಾನಾಯಕರ ಅಪಾರ ಪ್ರೀತಿ ಅಭಿಮಾನವನ್ನು ಸಂಪಾದಿಸಿದ ಮಹಾರಾಣಿ ಒಂದು ಶತಮಾನದ ರಾಜಕೀಯ ಸಾಮಾಜಿಕ ಆರ್ಥಿಕ ವೈಜ್ಞಾನಿಕ ಆರೋಗ್ಯ ಕ್ಷೇತ್ರಗಳ ಪ್ರಗತಿ ಮತ್ತು ದುರಂತಗಳಿಗೆ ಸಾಕ್ಷಿಯಾದವರು ನಿನ್ನೆಯಷ್ಟೇ ಅಗಲಿದ್ದಾರೆ.  ಅವರ ಕುರಿತು ಯೋಗೀಂದ್ರ ಮರವಂತೆ ಬರೆದ ಲೇಖವೊಂದು ಇಲ್ಲಿದೆ. 

Read More

ಭಾಷಾವಿಜ್ಞಾನದ ಕಡಲಿನಿಂದ ಹೊರತೆಗೆದ ನುಡಿಮುತ್ತು

ಸಂಶೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡವರು ಸೃಜನಶೀಲ ಬರವಣಿಗೆಯನ್ನು ನಿರ್ಲಕ್ಷಿಸಬಾರದು ಎಂದು ಕಿವಿ ಮಾತು ಹೇಳುತ್ತಿದ್ದ ಬಹುಭಾಷಾ ವಿದ್ವಾಂಸ ಪ್ರೊ. ಕೋಡಿ ಕುಶಾಲಪ್ಪ ಗೌಡರು ಸ್ವತಃ ಸೃಜನಶೀಲ ಲೇಖಕರು. ಅವರ ಬೋಧನಾ ಶೈಲಿಯೂ ಅನೇಕ ಸಂಶೋಧಕರು, ಸೃಜನಶೀಲ ಬರಹಗಾರರಿಗೆ ಮಾರ್ಗದರ್ಶಿಯಂತಿತ್ತು. ಶಬ್ದಮಣಿದರ್ಪಣವನ್ನು ಹೇಗೆ ರಸವತ್ತಾಗಿ ಸಾಹಿತ್ಯಕೃತಿಯಂತೆಯೇ ಪಾಠ ಹೇಳಬಹುದೆಂಬುದನ್ನೂ ಅವರು ತೋರಿಸಿಕೊಡುತ್ತಿದ್ದರು. ಬಹುದೊಡ್ಡ ಶಿಷ್ಯ ಪರಂಪರೆಯನ್ನು ಹೊಂದಿದ್ದ ಹಿರಿಯ ಜೀವಿ ಪ್ರೊ. ಗೌಡರು ಶುಕ್ರವಾರ ಸಂಜೆ ನಿಧನರಾದರು. ಅವರ ಕುರಿತು ಡಾ. ಹರಿಕೃಷ್ಣ ಭರಣ್ಯ ಬರೆದ ಲೇಖನವೊಂದು ಕೆಂಡಸಂಪಿಗೆಯ ಓದುಗರಿಗಾಗಿ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ