Advertisement

Category: ವ್ಯಕ್ತಿ ವಿಶೇಷ

ಅಕ್ಷರದ ಮೂಲಕ ಚಿರಂಜೀವಿಯಾಗಿರುವ ಶ್ರೀನಿವಾಸ ವೈದ್ಯ

ನವೋದಯಕಾಲದ ಲೇಖಕರು ಎದುರಿಸುವ ಎಲ್ಲಬಗೆಯ ವಿಪ್ಲವ ಮತ್ತು ಆತಂಕಗಳನ್ನು ಒಂದು ಕುಟುಂಬದ ಕಥೆಯಮೂಲಕ ಹೇಳುವ ಶ್ರೀನಿವಾಸ ವೈದ್ಯರ ಕ್ರಿಯಾಶೀಲತೆಯನ್ನು ಇಲ್ಲಿ ಕಾಣಬಹುದಾಗಿದೆ. ಅನೇಕ ಸಲ ಅನಂತಮೂರ್ತಿಯವರ ಮೌನಿಯಲ್ಲಿ ಈ ಕಾದಂಬರಿಯ ನೆರಳು ಬಿದ್ದಿರಬಹುದೇ ಅನಿವುವಷ್ಟು ಪ್ರಭಾವಶಾಲಿಯಾಗಿದೆ. ಬೇರು ಕಳೆದುಕೊಂಡ ವ್ಯಕ್ತಿ ಹೊಸ ಬೇರಿನೊಂದಿಗೆ ಕಂಡುಕೊಳ್ಳುವ ಆರ್ಥಿಕ ಭದ್ರತೆ ಮತು ಸಾಮಾಜಿಕ ಸ್ಥಾನಮಾನವನ್ನೂ ಪಡೆದುಕೊಳ್ಳುವ ಕ್ರಿಯೆ ಬ್ರಿಟಿಷರಿಂದ ಭಾರತಕ್ಕೆ ಸಿಗುವ ಸ್ವಾಂತಂತ್ರ್ಯದ ಜೊತೆಗೆ ಹಾಸುಹೊಕ್ಕಾಗಿದೆ.
ಇಂದು ತೀರಿಹೋದ ಶ್ರೀನಿವಾಸ ವೈದ್ಯರ ಕೃತಿಗಳ ಕುರಿತು ನಾರಾಯಣ ಯಾಜಿ ಬರಹ

Read More

ಶ್ರೀನಿವಾಸ ವೈದ್ಯರೆಂದರೆ….

ಅವರು ಈಸಿದಷ್ಟೂ, ಓದುಗರಾದ ನಾವು ಇದ್ದು ಜಯಿಸುತ್ತೇವೆ. ಅಂತರಂಗ-ಬಹಿರಂಗ, ವ್ಯಕ್ತಿ-ಸಮಾಜ ಎಂದೆಲ್ಲ ಕಾಲ್ಪನಿಕ ಗಡಿರೇಖೆ ಹಾಕಿಕೊಳ್ಳದೇ ಒಟ್ಟಂದದಲ್ಲಿ ಸಮಾಜವನ್ನು ತುಂಬಾ ಅಚ್ಛೆಯಿಂದ, ಅಷ್ಟೇ ಅಚ್ಚರಿಯಿಂದ ಅನುಭವಿಸಿದ ಈ ಜೀವಿಯ ಬರವಣಿಗೆಯಲ್ಲಿ ಬದುಕು ತನ್ನೆಲ್ಲ ನೆಳಲು ಬೆಳಕುಗಳೊಂದಿಗೆ ಬಸಿಯುತ್ತದೆ. ಇದು ಹೀಗೇಕೆ ಎಂದೆಲ್ಲ ಕೇಳದೇ, ಅರೆ ಇದು ಹೀಗಿದೆಯಲ್ಲ ಎಂದು ಸೋಜಿಗದಿಂದ ಇರವನ್ನು ಅನುಭವಿಸುವ ಅರಿವಿನ ದಾರಿ ಇದು. `ಅರಿವೇ ಗುರು’ ಎಂದರೆ, `ಹೌದ್ರೀ, ಆದರೆ ಅದೂ ಅಲ್ಲಲ್ಲಿ ಸ್ವಲ್ಪ ಹರಿದಿರ್ತದೆ’ ಎಂದು ಗಹಗಹಿಸಿ ನಗುವ ವೈದ್ಯರ ವಿನೋದ ಅಪ್ಪಟ.

Read More

ಉಳಿದದ್ದೀಗ ನೆನಪುಗಳಷ್ಟೇ….

ಅಡಿಗರ ರಾಮನವಮಿಯ ದಿವಸ ಪದ್ಯದ ಬಗ್ಗೆ ಅವರೊಡನೆ ಚರ್ಚಿಸುತ್ತಿದ್ದ ದಿನಗಳು ನನ್ನ ಬದುಕಿನ ಸುವರ್ಣ ಯುಗ. ಅವ್ರಿಗೆ ತಂತ್ರದ ಬಗ್ಗೆ ವಿಶೇಷ ಆಸಕ್ತಿ ಎಂದಾಗ ಒಪ್ಪಿಕೊಂಡಿದ್ದರು. ಅಡಿಗರ ಕುರಿತ ದೂರುಗಳನ್ನೂ, ಮೆಚ್ಚುಗೆಯನ್ನೂ ಮುಕ್ತವಾಗಿ ಹೇಳುತ್ತಿದ್ದರು. ನೀವೇಕೆ ನಿಮ್ಮ ಬರೆಯುವ ರೀತಿಯನ್ನು ಪದೇ ಪದೇ ಬದಲಾಯಿಸಿದಿರಿ.
ತಮ್ಮ ಗ್ರಹಿಕೆಗೆ ಸಿಕ್ಕ ಕೆ.ವಿ. ತಿರುಮಲೇಶರ ಕುರಿತು ಬರೆದಿದ್ದಾರೆ ಮಾಲಿನಿ ಗುರುಪ್ರಸನ್ನ

Read More

ಇಷ್ಟೊಂದು ನಿಬಿಡತೆಯಲ್ಲು ಯಾಕಿಷ್ಟು ಏಕಾಂತ

ಹೊಸಬರನ್ನು ಮೆಚ್ಚುವ ಜೊತೆಗೆ ಹಳಬರನ್ನು ತುಂಬ ಸಭ್ಯವಾಗಿ ಕ್ರಿಟಿಕಲ್ ಆಗಿ ಚುಚ್ಚುತ್ತಲೂ ಇದ್ದರು. ಹಲವು ಖ್ಯಾತ ಹಿರಿಯ ಕವಿಗಳ ಕವಿತೆಗಳ ಬಗ್ಗೆ ಅವರ ಅನಾಸಕ್ತಿ ಸ್ಪಷ್ಟವಾಗಿ ವ್ಯಕ್ತವಾಗುತ್ತಿತ್ತು. ಆದರೆ ಅದು ಯಾವತ್ತೂ ಅನಾದರ ಆಗಿರಲಿಲ್ಲ. ಒಮ್ಮೆ ಮಾತಿನ ಮಧ್ಯೆ, `ಅವರು ಫೋನ್ ಮಾಡಿದ್ದರು. ಅವರದ್ದು ನೋಡಿ ಜರ್ನಲಿಸ್ಟಿಕ್ ಸಾಹಿತ್ಯ. ಹಾಗೆ ಹೇಳಿದರೆ ಅವರಿಗೆ ಸಿಟ್ಟು ಬರುತ್ತೆ. ಆದರೆ ಸತ್ಯ ಸತ್ಯವೇ ತಾನೆ’ ಎಂದರು.
ಕೆ.ವಿ. ತಿರುಮಲೇಶರೊಟ್ಟಿಗಿನ ಒಡನಾಟ ಹಾಗೂ ಅವರ ಬರಹಗಳ ಕುರಿತು ಬರೆದಿದ್ದಾರೆ ಕಥೆಗಾರ ವಿಕ್ರಂ‌ ಹತ್ವಾರ್

Read More

ಇಲ್ಲೇ ಇದ್ದವರು ಇನ್ನಿಲ್ಲವಾದರು…

ಹೈದರಾಬಾದ್‌ನ ಲೋಕಲ್ ಟ್ರೇನ್‌ಗಗಳಲ್ಲಿ ಸುತ್ತಿದ, ರಸ್ತೆಬದಿ ನಿಂತು, ಕೆಂಡದಲ್ಲಿ ಕಾಯಿಸಿದ ಮುಸುಕಿನ ಜೋಳ ತಿನ್ನುವ, ಭಾನುವಾರದ ಫುಟ್‌ಪಾತ್ ಪುಸ್ತಕಗಳ ಅಂಗಡಿಗಳನ್ನು ಆಸಕ್ತಿಗಳಿಂದ ತಿರುಗುತ್ತ ಪುಸ್ತಕ ಕೊಳ್ಳುವ, ಹೈದರಾಬಾದನ್ನು, ಇಲ್ಲಿಯ ಕನ್ನಡ ಸಂಘಗಳನ್ನು, ಕನ್ನಡಿಗರನ್ನು, ಬಹಳ ಆಸ್ಥೆ – ಅಕಾರಾಸ್ಥೆಗಳಿಂದ ಪ್ರೀತಿಸುವ, ಆ‌ ಮಹಾನ್ ಚೇತನಕ್ಕೆ, ಕಣ್ತುಂಬಿದ ವಿದಾಯ ಹೇಳುವುದನ್ನು ಬಿಟ್ಟು, ಬೇರೇನು ಉಳಿದಿದೆ!!
ಕೆ.ವಿ. ತಿರುಮಲೇಶರ ಕುರಿತು ಗೋನವಾರ್ ಕಿಶನ್ ರಾವ್ ಆಪ್ತ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ