Advertisement

Category: ವ್ಯಕ್ತಿ ವಿಶೇಷ

ಇಷ್ಟೊಂದು ನಿಬಿಡತೆಯಲ್ಲು ಯಾಕಿಷ್ಟು ಏಕಾಂತ

ಹೊಸಬರನ್ನು ಮೆಚ್ಚುವ ಜೊತೆಗೆ ಹಳಬರನ್ನು ತುಂಬ ಸಭ್ಯವಾಗಿ ಕ್ರಿಟಿಕಲ್ ಆಗಿ ಚುಚ್ಚುತ್ತಲೂ ಇದ್ದರು. ಹಲವು ಖ್ಯಾತ ಹಿರಿಯ ಕವಿಗಳ ಕವಿತೆಗಳ ಬಗ್ಗೆ ಅವರ ಅನಾಸಕ್ತಿ ಸ್ಪಷ್ಟವಾಗಿ ವ್ಯಕ್ತವಾಗುತ್ತಿತ್ತು. ಆದರೆ ಅದು ಯಾವತ್ತೂ ಅನಾದರ ಆಗಿರಲಿಲ್ಲ. ಒಮ್ಮೆ ಮಾತಿನ ಮಧ್ಯೆ, `ಅವರು ಫೋನ್ ಮಾಡಿದ್ದರು. ಅವರದ್ದು ನೋಡಿ ಜರ್ನಲಿಸ್ಟಿಕ್ ಸಾಹಿತ್ಯ. ಹಾಗೆ ಹೇಳಿದರೆ ಅವರಿಗೆ ಸಿಟ್ಟು ಬರುತ್ತೆ. ಆದರೆ ಸತ್ಯ ಸತ್ಯವೇ ತಾನೆ’ ಎಂದರು.
ಕೆ.ವಿ. ತಿರುಮಲೇಶರೊಟ್ಟಿಗಿನ ಒಡನಾಟ ಹಾಗೂ ಅವರ ಬರಹಗಳ ಕುರಿತು ಬರೆದಿದ್ದಾರೆ ಕಥೆಗಾರ ವಿಕ್ರಂ‌ ಹತ್ವಾರ್

Read More

ಇಲ್ಲೇ ಇದ್ದವರು ಇನ್ನಿಲ್ಲವಾದರು…

ಹೈದರಾಬಾದ್‌ನ ಲೋಕಲ್ ಟ್ರೇನ್‌ಗಗಳಲ್ಲಿ ಸುತ್ತಿದ, ರಸ್ತೆಬದಿ ನಿಂತು, ಕೆಂಡದಲ್ಲಿ ಕಾಯಿಸಿದ ಮುಸುಕಿನ ಜೋಳ ತಿನ್ನುವ, ಭಾನುವಾರದ ಫುಟ್‌ಪಾತ್ ಪುಸ್ತಕಗಳ ಅಂಗಡಿಗಳನ್ನು ಆಸಕ್ತಿಗಳಿಂದ ತಿರುಗುತ್ತ ಪುಸ್ತಕ ಕೊಳ್ಳುವ, ಹೈದರಾಬಾದನ್ನು, ಇಲ್ಲಿಯ ಕನ್ನಡ ಸಂಘಗಳನ್ನು, ಕನ್ನಡಿಗರನ್ನು, ಬಹಳ ಆಸ್ಥೆ – ಅಕಾರಾಸ್ಥೆಗಳಿಂದ ಪ್ರೀತಿಸುವ, ಆ‌ ಮಹಾನ್ ಚೇತನಕ್ಕೆ, ಕಣ್ತುಂಬಿದ ವಿದಾಯ ಹೇಳುವುದನ್ನು ಬಿಟ್ಟು, ಬೇರೇನು ಉಳಿದಿದೆ!!
ಕೆ.ವಿ. ತಿರುಮಲೇಶರ ಕುರಿತು ಗೋನವಾರ್ ಕಿಶನ್ ರಾವ್ ಆಪ್ತ ಬರಹ

Read More

ಸಮೃದ್ಧ ಜೀವನಾನುಭವವೇ ಸಾಹಿತ್ಯದ ಜೀವ: ನಾ. ಮೊಗಸಾಲೆ

ತಲೆಮಾರು ಎನ್ನುವುದು ಮುಂದುವರಿಯುತ್ತಾ ಹೋದ ಹಾಗೆ ಕೌಶಲ್ಯ ಎನ್ನುವುದು ಹಿಂದಿಗಿಂತ ಹೆಚ್ಚು ಶಕ್ತ ಅಥವಾ ಹೆಚ್ಚೋ ಎಂಬಂತೆ ಮುಂದುವರಿಯುವುದು ನಮ್ಮ ಅನುಭವ ಅಥವಾ ಪ್ರಕೃತಿ ನಿಯಮ. ಪ್ರತಿಭೆ, ಕೌಶಲ್ಯ, ಮತ್ತು ಚಿಂತನೆಗಳಲ್ಲಿ ನಾವು ನಮ್ಮ ಹಿರಿಯರಿಗಿಂತ ಮುಂದುವರಿದಿದ್ದೇವೆ ಎನ್ನುವುದನ್ನು ನಾನೂ ನೀವೂ ಒಪ್ಪಿಕೊಳ್ಳುವುದಾದರೆ ನಮ್ಮ ಮುಂದಿನ ಪೀಳಿಗೆಯೂ ಖಂಡಿತ ನಮಗಿಂತ ಮುಂದಿರುತ್ತದೆ ಎನ್ನುವುದನ್ನು ಒಪ್ಪಬೇಕು.
ಡಾ. ನಾ. ಮೊಗಸಾಲೆಯವರೊಟ್ಟಿಗೆ ನಡೆಸಿದ ಮಾತುಕತೆಯನ್ನು ಹಂಚಿಕೊಂಡಿದ್ದಾರೆ ಡಾ. ಸುಭಾಷ್ ಪಟ್ಟಾಜೆ

Read More

ಆಚೆ ಕೇರಿಯ ಭಾಗ್ಯಮ್ಮ ಮತ್ತು ಈಚೆ ಕೇರಿಯ ದೇವಮ್ಮ

ಮಾರ್ಗೋಡನಹಳ್ಳಿಯ ಒಕ್ಕಲುಗೇರಿಯ ಭಾಗ್ಯಮ್ಮ ಬನ್ನೂರು ಬಸ್ಟಾಂಡಿನ ಬಳಿ ಸೊಪ್ಪು ಮಾರುತ್ತಿದ್ದವರು. ಸಮಯ ಸಿಕ್ಕಾಗ ದನದ ದಲ್ಲಾಳಿ ಕೆಲಸ, ಹೆಣ್ಣು ತೋರೋದು, ನಾಟಿ ಕೀಳೋದೂ ಇತ್ಯಾದಿಗಳನ್ನೂ ಮಾಡುತ್ತಿದ್ದರು. ಇವರ ಗೆಳತಿ ದಲಿತರ ಕೇರಿಯ ದೇವಮ್ಮನದು ಕೂಲಿಯ ಕೆಲಸ. ಸಮಯ ಒದಗಿ ಬಂದಾಗ ಭಾಗ್ಯಮ್ಮನ ಜೊತೆ ಸೊಲ್ಲು ಹೇಳಲು ಹೋಗುತ್ತಾರೆ. ಇವರಿಬ್ಬರು ಸೊಲ್ಲೆತ್ತಿ ಹಾಡಲು ತೊಡಗಿದರೆ ಇಬ್ಬರಲ್ಲಿ ಯಾರು ಹಿಂದು ಯಾರು ಮುಂದು, ಯಾರು ಜಾಣೆ ಯಾರು ಮುಗ್ಧೆ ಎಂಬುದು ಗೊತ್ತಾಗುವುದಿಲ್ಲ. ಕಳೆದ ಮಂಗಳವಾರ ಇರುಳು ತೀರಿಹೋದ ಭಾಗ್ಯಮ್ಮನವರ ನೆನಪಿನಲ್ಲಿ ಸೂರ್ಯಪುತ್ರ ಈ ಹಿಂದೆ ಬರೆದಿದ್ದ ಬರಹ

Read More

ಮೂವತ್ತು ವರ್ಷಗಳ ಹಿಂದೆ ಸಾರಾ ಉಮ್ಮಾ ಜೊತೆಗೆ

ನಾಲ್ಕು ದಶಕಗಳ ಹಿಂದೆ ತನ್ನ ನಲವತ್ತೆರಡನೆಯ ವಯಸ್ಸಿನಲ್ಲಿ ಬರೆಯಲು ಶುರು ಮಾಡಿದ ಸಾರಾ ಅಬೂಬಕ್ಕರ್ ಕನ್ನಡಕ್ಕೆ ಸಂಭವಿಸಿದ ಒಂದು ಅಚ್ಚರಿ. ಬಹುಶಃ ಕನ್ನಡಕ್ಕೆ ಸಂಭವಿಸಿದ ಇನ್ನೊಂದು ಅಚ್ಚರಿಯಾದ ಪಿ. ಲಂಕೇಶರು ಇಲ್ಲದಿದ್ದರೆ ಸಾರಾ ಕನ್ನಡದಲ್ಲಿ ಬರೆಯುತ್ತಲೇ ಇರಲಿಲ್ಲವೇನೋ.ಸುಮಾರು ಮೂವತ್ತು  ವರ್ಷಗಳ ಹಿಂದೆ ಆಗ ಇನ್ನೂ ಮೂವತ್ತರ ಹರೆಯದ ತರುಣನಾಗಿದ್ದ ಕನ್ನಡದ ಕಥೆಗಾರ ಅಬ್ದುಲ್ ರಶೀದ್ ಲಂಕೇಶ್ ಪತ್ರಿಕೆಗಾಗಿ ಸಾರಾ ಅವರೊಡನೆ ನಡೆಸಿದ್ದ ಮಾತುಕತೆಯ ಪಠ್ಯ ಇಲ್ಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ