Advertisement

Category: ಸಂಪಿಗೆ ಸ್ಪೆಷಲ್

ಅಮ್ಮ ಮತ್ತು ಹುಣ್ಣಿಮೆ: ಸುಧಾ ಆಡುಕಳ ಬರಹ

ಪ್ರತಿದಿನ ಸ್ನಾನಮಾಡಿ ಬಂದಕೂಡಲೇ ಅಮ್ಮ ಮುಖದ ತುಂಬ ಪಾಂಡ್ಸ್ ಪೌಡರನ್ನು ಢಾಳಾಗಿ ಹಚ್ಚಿಕೊಳ್ಳುತ್ತಿದ್ದಳು. ಅಶ್ವತ್ಥದ ಎಲೆಯಾಕಾರದಲ್ಲಿ ಕಾಡಿಗೆಯನ್ನು ಚಂದಗೆ ಬೊಟ್ಟಾಗಿಸುತ್ತಿದ್ದಳು. ಎಲ್ಲರಂತೆ ಕುಂಕುಮವನ್ನು ಹಣೆಗೆ, ತಾಳಿಗೆ ಹಚ್ಚಿಕೊಳ್ಳದೇ ತುಟಿಗೆ ನವಿರಾಗಿ ಲೇಪಿಸಿಕೊಳ್ಳುತ್ತಿದ್ದಳು. ಎಲ್ಲವೂ ಮುಗಿದು ಕನ್ನಡಿಯಲೊಮ್ಮೆ ಇಣುಕುವಾಗ ಅವಳ ಮುಖದಲ್ಲೊಂದು ಹೂ-ನಗೆಯಿರುತ್ತಿತ್ತು.
ಇಪ್ಪತ್ತೊಂಭತ್ತು ವರ್ಷಗಳ ಹಿಂದೆ ಹುಣ್ಣಿಮೆಯ ರಾತ್ರಿ ತೀರಿಕೊಂಡ ತಮ್ಮ ತಾಯಿಯ ಕುರಿತು ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ತಾಕಲಾಟಗಳ ಮೌನದಲ್ಲಿ ಮೂಡಿದ ವಸಂತ: ನಾರಾಯಣ ಯಾಜಿ ಬರಹ

ಚರ್ಚಿನಲ್ಲಿ ಹಾಡಿದ ಮಗಳು ರೈಲಿನ ಟಿಕೆಟ್ಟಿಗೆ ಹಣ ಕೂಡಿಟ್ಟಿದ್ದನ್ನು ತಿಳಿದಾಗ ಅದನ್ನು ದೆವ್ವವೆನ್ನುವಂತೆ ದೂರ ಎಸೆಯುವ ಅಸಹಾಯಕತೆ ಮತ್ತು ಉಮ್ಮಳಿಸುವ ದುಃಖ, ಕೋಪಬಂದರೂ ಅಜ್ಜನ ಭಾವನೆಯನ್ನು ಅರ್ಥಮಾಡಿಕೊಂಡು ಮೊಮ್ಮಗಳು ಒಳಗೊಳಗೇ ಅನುಭವಿಸುವ ತುಮುಲ ಇವೆಲ್ಲವನ್ನೂ ರಂಗದಲ್ಲಿ ತೆರೆದಿಡುವ ನಾಟಕದ ಕೊನೆಯಲ್ಲಿ ಮೊಮ್ಮಗಳು ಅಜ್ಜನನ್ನು ಒಪ್ಪಿಸಿ ಹೊರಟು ಹೋಗುವಾಗ ಮಗುವಿನ ಪ್ರತಿಭೆ ಕಾಡ ಬೆಳದಿಂಗಳಾಗಲಿಲ್ಲವಲ್ಲ ಎನ್ನುವ ನಿಟ್ಟಿಸಿರು, ಅಜ್ಜನ ಪಾಡು ಎಂಥದೋ ಎನ್ನುವ ನೋವು ಎರಡೂ ಕಾಡುತ್ತದೆ.
ಡಾ. ಶ್ರೀಪಾದ ಭಟ್ ನಿರ್ದೇಶನದ “ಮೌನ ಕಣಿವೆಯ ಹಾಡು” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಮೌಲ್ಯಗಳು ಹಿಂದುಮುಂದಾಗುವ ಸಮಯದಲ್ಲಿ…: ವಿಶ್ವನಾಥ ಎನ್‌ ನೇರಳಕಟ್ಟೆ ಬರಹ

ಬ್ಯಾಗ್ ತೆರೆದಾಗ ಅದರೊಳಗೆ ಕಂಡ ಕಂತೆ ಕಂತೆ ನೋಟುಗಳು ಒಂದು ಕ್ಷಣಕ್ಕೆ ಯೂಸುಫ್‌ನ ಅಂತರಂಗದ ನೈತಿಕತೆಯ ಪರೀಕ್ಷಾರಂಗವಾಗುತ್ತದೆ. ಈ ಹಣವನ್ನಿಟ್ಟುಕೊಂಡು ಮಗಳ ಮದುವೆ ಮಾಡಿಮುಗಿಸಬಹುದು ಎಂಬ ಯೋಚನೆ ಬಂದರೂ ಅದನ್ನು ಹತ್ತಿಕ್ಕಿಕೊಂಡು ಬ್ಯಾಗನ್ನು ಆ ಶ್ರೀಮಂತನಿಗೆ ಹಿಂದಿರುಗಿಸುವ ನಿರ್ಧಾರ ಮಾಡುತ್ತಾನೆ ಯೂಸುಫ್. ಅಂತೆಯೇ ಸಿರಿವಂತನ ಮನೆಯನ್ನು ಹುಡುಕಿಹೋಗಿ ಆ ಬ್ಯಾಗನ್ನು ಕೊಟ್ಟುಬರುತ್ತಾನೆ.
ಬದುಕಿನ ಮೌಲ್ಯಗಳ ಸುತ್ತ ಹೆಣೆದ ಕತೆಗಳ ಕುರಿತು ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ಯುವಸಂಧಾನಕಿ ಅನಲೆ ಮತ್ತು ಯುದ್ಧವಿರೋಧಿ ಆ್ಯನ್: ಸುಮಾವೀಣಾ ಬರಹ

ನಮಗಿಲ್ಲಿ ಅನಲೆ ಯುದ್ಧದ ನೇರ ಭಾಗಿತ್ವದಿಂದ ನೋವನ್ನು ಅನುಭವಿಸಿ ಹೆಣ್ಣಿನ ಸಲುವಾದ ಹೋರಾಟವನ್ನು ಮಾಡಲು ಆಲೋಚಿಸಿ ಯುದ್ಧವನ್ನು ನಿಲ್ಲಿಸುವ ಪ್ರಯತ್ನ ಮಾಡುತ್ತಾಳೆ. ಆ್ಯನ್ ಫ್ರಾಂಕ್ ನೇರವಾಗಿ ಯುದ್ಧಕ್ಕೆ ಮುಖಾಮುಖಿಯಾಗದೆ ಇದ್ದರು ಎರಡನೆ ಮಹಾಯುದ್ಧದ ದುಷ್ಟಪರಿಣಾಮಕ್ಕೆ ಮುಖಾಮುಖಿಯಾಗುತ್ತಾಳೆ. ತನ್ನ ಜನಾಂಗಕ್ಕಾದ ಶೋಷಣೆಯನ್ನು ತನಗಾದ ಯಾತನೆಯನ್ನು ಅಳಿಸಲಾಗುವ ನಾಶಪಡಿಸಬಹುದಾದ ಕಾಗದದ ಮೆಲೆ ಭರವಸೆ ಇಟ್ಟು ಬರೆಯುವುದು ಸಾಧನೆಯೇ ಅನ್ನಿಸುತ್ತದೆ.
ಅನಲೆ ಹಾಗೂ ಆನ್‌ ಫ್ರಾಂಕ್‌ ಎಂಬ ಇಬ್ಬರು ವಿಶಿಷ್ಟ ವ್ಯಕ್ತಿಗಳ ಕುರಿತು ಸುಮಾವೀಣಾ ಬರಹ

Read More

“ಅವಳು….”: ಮಹಾಲಕ್ಷ್ಮೀ. ಕೆ. ಎನ್. ಬರಹ

ಅವಳಿಗೂ ಬುದ್ಧನಾಗುವ ಆಸೆ. ವೃಷ್ಟಿ ಅವಳು ಸಮಷ್ಟಿ, ಸೃಷ್ಟಿ ಉತ್ಪತ್ತಿಯ ಕಾರಣಕರ್ತೆ ಬುದ್ಧನಾದರೆ ಜಗವ ಪೋಷಿಸುವವರ್ಯಾರು? ತ್ಯಜಿಸಿ ಹೊರಟರೆ ಅಮ್ಮನಾಗಿ ಪಾಲಿಸುವವರ್ಯಾರು? ಒತ್ತಾಸೆಯಾಗುವ ಅವಳು ಹೊರಟುಬಿಟ್ಟರೆ ಭೂಮಿ ಬಂಜರಲ್ಲವೇ?
ಮಹಾಲಕ್ಷ್ಮೀ ಕೆ.ಎನ್.‌ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ