Advertisement

Category: ಸಂಪಿಗೆ ಸ್ಪೆಷಲ್

ಅನಾಯಾಸೇನ ಮರಣಂ……: ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

ಹೊರಗೆ ಬಂದು, ರಿಸೆಪ್ಷನಿಸ್ಟ್ ಲೆಕ್ಕ ಹಾಕಿ, “ಇನ್ನು ಎಂಟುನೂರು ಕಟ್ಟಿ ಸಾಕು” ಎಂದು ಔದಾರ್ಯ ತೋರಿ, ಅದರಂತೆ ಮಾಡಿ ಹೊರ ಬಂದಾಗ ನನ್ನ ಹೆಂಡತಿ ತುಂಬಾ ಖುಷಿಯಲ್ಲಿದ್ದಳು. “ಸದ್ಯ ದೇವರು ಕಾಪಾಡಿದ, ನೀವು ಸುಮ್ಮನೆ ಟೆನ್ಶನ್ ಮಾಡಿಕೊಳ್ಳುತ್ತೀರಾ. ಡಾಕ್ಟರ್ ತುಂಬಾ ಒಳ್ಳೆಯವರು, ಬೇರೆಯವರಿಗೂ ರೆಕಮೆಂಡ್ ಮಾಡಬಹುದು. ಇನ್ನು ನೀವು ಸುಮ್ಮನೆ ತಲೆ ಕೆಡಿಸಿಕೊಳ್ಳದೆ ಆರಾಮಾಗಿರಿ.” ಹೀಗೆ ಸತತವಾಗಿ ಹೇಳಿ, ನಾನು ಎಲ್ಲದಕ್ಕೂ ತಲೆಯಾಡಿಸಿ “ಆರು ಸಾವಿರ ಅಂದಿದ್ದರೆ ಸುಮ್ಮನೆ ಕೊಡುತ್ತಿದ್ದೆವು, ಇನ್ನೂರು ಉಳಿದಿದೆಯಲ್ಲ ಅದರಲ್ಲಿ ಸ್ವೀಟ್ ತಗೊಂಡು ಹೋಗೋಣ” ಎಂದಾಗ ಅದಕ್ಕೂ ತಲೆಯಾಡಿಸಿದೆ.
ವಸಂತಕುಮಾರ್‌ ಕಲ್ಯಾಣಿ ಪ್ರಬಂಧ “ಅನಾಯಾಸೇನ ಮರಣಂ…”

Read More

ನಮ್ಮೂರ ಮಳೆಗಾಲದ ರಸದೌತಣ: ಭವ್ಯ ಟಿ.ಎಸ್.‌ ಬರಹ

ವಿದ್ಯುತ್ ಇಲ್ಲದ ರಾತ್ರಿಗಳು, ನೆಟ್ವರ್ಕ್ ಇಲ್ಲದೆ ಲೋಕದ ಸಂಪರ್ಕ ಕಡಿದುಕೊಂಡ ಹಗಲುಗಳು. ಇದ್ದಕ್ಕಿದ್ದಂತೆ ಬೀಸುವ ಬಿರುಗಾಳಿ, ಉರುಳಿ ಬೀಳುವ ಮರಗಳು. ಕುಸಿದು ಬೀಳುವ ಗುಡ್ಡ. ಹೀಗೆ ಮಳೆ ಎಂದರೆ ಸಂತಸ, ಸೌಂದರ್ಯಗಳ ಜೊತೆಗೆ ಭಯಾನಕತೆಗಳ ಸಂಮಿಶ್ರಣ. ಕೆಲವೊಮ್ಮೆ ಈ ಮಳೆ ಜಿಗುಪ್ಸೆ ಬೇಸರವೆನಿಸಿದ್ದೂ ಇದೆ. ಆದರೆ‌‌‌ ಮತ್ತೆ ಮತ್ತೆ ಈ ಮನ ಪ್ರತಿ ವರ್ಷದ ವರ್ಷಧಾರೆಗೆ ಹಪಹಪಿಸುತ್ತದೆ.
ಮಲೆನಾಡಿನ ಮಳೆಯ ದಿನಗಳ ಕುರಿತು ಭವ್ಯ ಟಿ.ಎಸ್‌. ಬರಹ ನಿಮ್ಮ ಓದಿಗೆ

Read More

ಹಿಮಾಲಯದಲ್ಲಿ ಹಕ್ಕಿಗಳ ಚಿಲಿಪಿಲಿ: ಡಾ. ಖಂಡಿಗೆ ಮಹಾಲಿಂಗ ಭಟ್ ಅನುವಾದಿತ ರಸ್ಕಿನ್‌ ಬಾಂಡ್‌ ಬರಹ

ಈ ಹಾಡು ನನ್ನನ್ನು ಯಾವಾಗಲೂ ಮರುಳುಗೊಳಿಸುತ್ತದೆ. ಈ ಪಕ್ಷಿಯು ಅನುಮಾನದಿಂದ ಕೂಗಿ, ಸರಿಯಾದ ರಾಗವನ್ನು ಪ್ರಯತ್ನಿಸುವಂತೆ, ಅನಂತರ ಆತ್ಮವಿಶ್ವಾಸದಿಂದ ಇಂಪಾಗಿ ಪೂರಾ ಹಾಡನ್ನು ಲಯ ಬದ್ಧವಾಗಿ ಬೆಟ್ಟದ ಸುತ್ತಲೂ ಕೇಳುವಂತೆ ಹಾಡಿತು. ಇದ್ದಕ್ಕಿದ್ದಹಾಗೇ ಸಂಗೀತವು ನಿಲ್ಲುವುದು, ಸ್ವರ ಆರೋಹಣದ ಮಧ್ಯೆ; ಮತ್ತು ನಾನು ಆಶ್ಚರ್ಯದಿಂದ ಹಕ್ಕಿ ಹಾಡುವುದನ್ನು ನಿಲ್ಲಿಸುವುದಕ್ಕೆ ಏನಾಗಿರಬಹುದು ಎಂಬುದಾಗಿ ಚಿಂತಿಸಿದೆ.
ಡಾ. ಖಂಡಿಗೆ ಮಹಾಲಿಂಗ ಭಟ್ ಅನುವಾದಿಸಿದ ರಸ್ಕಿನ್‌ ಬಾಂಡ್‌ ಅವರ “ರೇನ್‌ ಇನ್‌ ದ ಮೌಂಟೇನ್ಸ್‌” ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

‘ದಿ ಫೈಯರ್’….: ಡಾ. ಶ್ರೀಪಾದ ಭಟ್‌ ಬರಹ

ವಸಾಹತುಶಾಹಿಯ ದೌರ್ಜನ್ಯಕ್ಕೆ ತೀವ್ರ ಬಲಿಯಾಗಿ ಅದರಿಂದ ಹೊರಬಂದು ಸ್ವತಂತ್ರ ವ್ಯಕ್ತಿತ್ವಕ್ಕಾಗಿ ನಡೆಸಿದ ಪ್ರಯತ್ನದ ಭಾಗವಾಗಿ ಇಂತಹ ಬರಹಗಳನ್ನು ನಾವು ಮುಖಾಮುಖಿಯಾಗುವುದು ಸಾಂಸ್ಕೃತಿಕ ಸ್ವರೂಪದಲ್ಲಿ ವಸಾಹತುಶಾಹಿಗೆ ಎದುರಾಗುವ ಒಂದು ಬಗೆ ಎಂದೇ ಈ ಪ್ರಯತ್ನವನ್ನು ನೋಡಬಹುದಾಗಿದೆ. ನಮ್ಮ ಸಂಸ್ಕೃತಿ, ಜೀವನ ವಿಧಾನಗಳನ್ನು ಸಂರಕ್ಷಿಸಿಕೊಳ್ಳುವ ಹೋರಾಟದ ನೆಲೆ ಭಾರತಕ್ಕೂ, ಲ್ಯಾಟಿನ್ ಅಮೇರಿಕಕ್ಕೂ ಒಂದೇ ಆಗಿದೆ ಎಂಬುದನ್ನು ತಜ್ಞರು ಈಗಾಗಲೇ ತಿಳಿಸಿಯಾಗಿದೆ.
ಸಂತೋಷ ಪಟ್ಲ ನಿರ್ದೇಶನದ ‘ದಿ ಫೈಯರ್’ ರಂಗ ಪ್ರಯೋಗದ ಕುರಿತು ಡಾ. ಶ್ರೀಪಾದ ಭಟ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ